ಗುರುವಾಯನಕೆರೆ: ಸ್ಕೂಟರ್ ಗೆ ಅಪರಿಚಿತ ವಾಹನ ಡಿಕ್ಕಿಯಾಗಿ ಸ್ಕೂಟರ್ ಸವಾರ ಸ್ಥಳ ದಲ್ಲೇ ಮೃತಪಟ್ಟ ಘಟನೆ ಗುರುವಾಯನಕೆರೆ ಎಂಬಲ್ಲಿ ನಡೆದಿದೆ.


ಇಲ್ಲಿನ ಅರಫಾ ಸೇನಿಟರಿ ಮಳಿಗೆಯ ಎದುರು ಇಂದು ಬೆಳಿಗ್ಗೆ ಸ್ಕೂಟರ್ ಗೆ ಯಾವುದೋ ವಾಹನ ಡಿಕ್ಕಿ ಹೊಡೆದ ಪರಿಣಾಮ ಸ್ಕೂಟರ್ ಸವಾರ, ಕುವೆಟ್ಟು ಗ್ರಾಮದ ಪಾಂಡೇಶ್ವರ ನಿವಾಸಿ ಲಿಂಗಪ್ಪ ಮೂಲ್ಯ( 62ವ.) ಅವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ಅಲ್ಲೇ ಪಕ್ಕದ ತೋಡಿನಿಂದ ಗೋಣಿ ಚೀಲದಲ್ಲಿ ಮರಳು ತುಂಬಿಕೊಂಡು ತನ್ನ ಸ್ಕೂಟರ್ ನಲ್ಲಿ ಪ್ರಯಾಣಿಸುತ್ತಿದ್ದ ವೇಳೆ ಯಾವುದೋ ವಾಹನ ಅವರ ವಾಹನಕ್ಕೆ ಡಿಕ್ಕಿ ಹೊಡೆದಿದೆ.
ಲಿಂಗಪ್ಪ ಮೂಲ್ಯ ಅವರು ಗುರುವಾಯನಕೆರೆ ಕರ್ಣಾಟಕ ಬ್ಯಾಂಕ್ ಎಟಿಎಂ ನಲ್ಲಿ ಕಾವಲುಗಾರರಾಗಿದ್ದಾರೆ.
ಡಿಕ್ಕಿ ಹೊಡೆದ ವಾಹನಸವಾರರು ವಾಹನ ಸಹಿತ ಪರಾರಿಯಾಗಿದ್ದಾರೆ.
ಬೆಳ್ತಂಗಡಿ ಪೋಲೀಸರು ಸ್ಥಳಕ್ಕೆ ಭೇಟಿ ನೀಡಿ ಪ್ರಕರಣ ದಾಖಲಿಸಿ ಕೊಂಡಿದ್ದಾರೆ.

