ದಾವಣಗೆರೆ, ಎ.14: ದಾವಣಗೆರೆಯ ಆನಗೋಡು ಗ್ರಾಮದ ಬಳಿ ಮಾಜಿ ಸಚಿವ ಯು.ಟಿ.ಖಾದರ್ ಪ್ರಯಾಣಿಸುತ್ತಿದ್ದ ಕಾರು ಅಪಘಾತಕ್ಕೊಳಗಾಗಿದೆ.


ಯು.ಟಿ ಖಾದರ್ ಅವರು ಬೆಳಗಾವಿ ಉಪಚುನಾವಣೆ ಪ್ರಚಾರಕ್ಕೆ ತೆರಳುತ್ತಿದ್ದರು. ಈ ವೇಳೆ ಆನಗೋಡು ಹಂಪ್ಸ್ ಸಮೀಪ ಮುಂದಡ ಸಾಗುತ್ತಿದ್ದ ಕಂಟೈನರ್ಗೆ ಕಾರು ಢಿಕ್ಕಿ ಹೊಡೆದಇದೆ. ಢಿಕ್ಕಿಯಾದ ಪರಿಣಾಮ ಕಾರಿನ ಮುಂಭಾಗ ನಜ್ಜುಗುಜ್ಜಾಗಿದ್ದು, ಖಾದರ್ ಅವರು ಅಪಾಯದಿಂದ ಪಾರಾಗಿದ್ದಾರೆ.
ಘಟನೆಯ ಬಳಿಕ ಖಾದರ್ ಅವರು ಬೆಂಗಳೂರಿಗೆ ಹಿಂದಿರುಗಿದ್ದಾರೆ. ಘಟನಾ ಸ್ಥಳಕ್ಕೆ ಎಸ್.ಪಿ. ಹನುಮಂತರಾಯ ತೆರಳಿದ್ದು, ಪರಿಶೀಲನೆ ನಡೆಸಿದ್ದಾರೆ.












