Saturday, July 12, 2025

ಕಾರು ಮರಕ್ಕೆ ಡಿಕ್ಕಿ ಐವರಿಗೆ ಗಾಯ ಕಿರು ಚಿತ್ರ ತಂಡದ ಸದಸ್ಯರಿಗೆ ಗಾಯ

ಬಂಟ್ವಾಳ: ಮಂಗಳೂರು ಬಿಸಿರೋಡು ರಾಷ್ಟ್ರೀಯ ಹೆದ್ದಾರಿಯ ರಾಮಲ್ ಕಟ್ಟೆ ಎಂಬಲ್ಲಿ ಕಾರು ಮರಕ್ಕೆ ಡಿಕ್ಕಿಯಾಗಿ ಐವರು ಪ್ರಯಾಣಿಕರು ಗಾಯಗೊಂಡ ಘಟನೆ ಇಂದು ಬೆಳಿಗ್ಗೆ ನಡೆದಿದೆ.

ಮಂಗಳೂರು ನಿವಾಸಿಗಳಾದ ಆನಂದಿತ್, ಶರತ್,ಶುಸಾನ್, ಹರ್ಷ,ಶ್ರೀರಾಮ್ ಗಾಯಗೊಂಡವರು.

ಮಂಗಳೂರಿನಿಂದ ಪುತ್ತೂರು ಕಡೆಗೆ ಕಿರುಚಲನ ಚಿತ್ರವೊಂದರ ಸೂಟಿಂಗ್ ನಡೆಸಲು ಐದು ಜನರ ತಂಡವೊಂದು ಬೆಳಿಗ್ಗೆ ಮಂಗಳೂರಿನಿಂದ ಹೊರಟಿತ್ತು.

ರಾಮಲ್ ಕಟ್ಟೆ ಎಂಬಲ್ಲಿ ಕಾರು ನಿಯಂತ್ರಣ ಕಳೆದುಕೊಂಡು ಅಥವಾ ಕಾರಿನ ತಾಂತ್ರಿಕ ದೋಷ ವೋ ಗೊತ್ತಿಲ್ಲ ರಸ್ತೆಯ ಬದಿಗೆ ತೆರಳಿ ಮರವೊಂದಕ್ಕೆಡಿಕ್ಕಿಯಾಗಿದೆ. ಡಿಕ್ಕಿಯಾದ ರಭಸಕ್ಕೆ ಕಾರು ಸಂಪೂರ್ಣ ಜಖಂ ಗೊಂಡಿದೆ.

ಕಾರಿನಲ್ಲಿದ್ದ ಐವರು ಪ್ರಯಾಣಿಕರ ಪೈಕಿ ಇಬ್ಬರು ಗಂಭೀರ ವಾಗಿ ಗಾಯಗೊಂಡರೆ ಉಳಿದ ಮೂವರಿಗೆ ಅಲ್ಪಸ್ವಲ್ಪ ಗಾಯಗಳಾಗಿದೆ. ಘಟನಾ ಸ್ಥಳಕ್ಕೆ ಟ್ರಾಫಿಕ್ ಎಸ್. ಐ.ರಾಜೇಶ್ ಕೆ.ವಿ.ಬೇಟಿ ನೀಡಿದ್ದಾರೆ.

More from the blog

ಕುಂಜರ್ಕಳದ ತಡೆಗೋಡೆ, ಬಸ್ಸು ತಂಗುದಾಣ, ಹೈಮಾಸ್ಟ್ ದೀಪ ಉದ್ಘಾಟಿಸಿದ ಯು.ಟಿ.ಖಾದರ್..

ಬಂಟ್ವಾಳ: ಶಾಸಕರ ಅನುದಾನದಿಂದ ನಿರ್ಮಾಣಗೊಂಡ ಪುದು ಗ್ರಾಮದ ಕುಂಜರ್ಕಳದ ತಡೆಗೋಡೆ, ೧೦ನೇ ಮೈಲುಕಲ್ಲು ಬಳಿ ಬಸ್ಸು ತಂಗುದಾಣ ಹಾಗೂ ತ್ವಾಹಾ ಜುಮಾ ಮಸೀದಿ ಬಳಿ ಅನುಷ್ಠಾನಗೊಂಡ ಹೈಮಾಸ್ಟ್ ದೀಪವನ್ನು ಸ್ಪೀಕರ್ ಯು.ಟಿ.ಖಾದರ್ ಅವರು...

ಗುರು ಪೂರ್ಣಿಮೆಯ ಪ್ರಯುಕ್ತ ನಿವೃತ ಶಿಕ್ಷಕಿ ಲಕ್ಷ್ಮೀ ಅವರಿಗೆ ಗೌರವರ್ಪಣೆ 

ಬಂಟ್ವಾಳ : ಗುರು ಪೂರ್ಣಿಮೆಯ ಪ್ರಯುಕ್ತ ಸಜೀಪ ಮುನ್ನೂರು ಬಿಜೆಪಿ ಗ್ರಾಮ ಸಮಿತಿಯ 4ನೇ ವಾರ್ಡಿನ ಬೊಕ್ಕಸ ನಿವಾಸಿಯಾದ ನಿವೃತ ಶಿಕ್ಷಕಿಯಾದ ಮಾತೃ ವಾತ್ಸಲ್ಯದ ಲಕ್ಷ್ಮೀ ಟೀಚರ್ ಇವರಿಗೆ ಬಿಜೆಪಿ ಮುಖಂಡರು ಮಾಜಿ...

ಕೆಂಪುಕಲ್ಲು, ಮರಳು ಸಮಸ್ಯೆ : ಜು.14ಕ್ಕೆ ಬಂಟ್ವಾಳ ತಾಲೂಕು ಕೇಂದ್ರದಲ್ಲಿ ಪ್ರತಿಭಟನೆ..

ಬಂಟ್ವಾಳ :ಕಾಂಗ್ರೆಸ್ ನೇತೃತ್ವದ ಕರ್ನಾಟಕ ರಾಜ್ಯ ಸರ್ಕಾರದ ದುರಡಳಿತ ನೀತಿಯಿಂದಾಗಿ ದಕ್ಷಿಣ ಕನ್ನಡ ಜೆಲ್ಲೆಯಲ್ಲಿ ಕೆಂಪು ಕಲ್ಲು ಮತ್ತು ಮರಳು ಕ್ರತಕ ಅಭಾವ ಸ್ರಷ್ಟಿಸಿರುವುದರಿಂದ ತೀವ್ರ ಸಮಸ್ಯೆಯಿಂದ ಬಡವರು ನಿರ್ಮಿಸುತ್ತಿರುವ ಸಾವಿರಾರು ಮನೆಗಳು...

ಬ್ರಹ್ಮ ಶ್ರೀ ನಾರಾಯಣ ಗುರು ವಸತಿ ಶಾಲೆ : ನೂತನ ಕಟ್ಟಡಕ್ಕೆ ವಿದ್ಯಾರ್ಥಿಗಳನ್ನು ಸ್ಥಳಾಂತರಿಸಲು ಶಾಸಕ ರಾಜೇಶ್ ನಾಯ್ಕ್ ನಿರ್ದೇಶನ..

ಬಂಟ್ವಾಳ: ದ.ಕ.ಜಿಲ್ಲೆಗೆ ಮಂಜೂರಾಗಿರುವ ಏಕೈಕ ಬ್ರಹ್ಮ ಶ್ರೀ ನಾರಾಯಣ ಗುರು ವಸತಿ ಶಾಲೆಗೆ ನೂತನ ಸುಸಜ್ಜಿತ ‌ಕಟ್ಟಡ ನಿರ್ಮಾಣ ಕಾಮಗಾರಿ ಬಹುತೇಕ ಪೂರ್ಣಗೊಂಡಿದ್ದು,ವಿದ್ಯಾರ್ಥಿಗಳ ಅನುಕೂಲತೆಯ ದೃಷ್ಟಿಯಿಂದ ಶೀಘ್ರ ಹೊಸ ಕಟ್ಟಡಕ್ಕೆ ಸ್ಥಳಾಂತರಿಸುವಂತೆ ಬಂಟ್ವಾಳ...