Thursday, January 29, 2026

ಪದೇ ಪದೇ ಜೀವಗಳ ಬಲಿಪಡೆಯುತ್ತಿದೆ ರಾಷ್ಟ್ರೀಯ ಹೆದ್ದಾರಿ ಮಾಣಿ-ಕಲ್ಲಡ್ಕ ಮಧ್ಯೆ ಹೆದ್ದಾರಿ ಅವ್ಯವಸ್ಥೆ ಬಗ್ಗೆ ಜನರ ಆಕ್ರೋಶ, ಬಂಟ್ವಾಳ ಪೊಲೀಸರಿಂದ ಸ್ಥಳ ಪರಿಶೀಲನೆ

ಬಂಟ್ವಾಳ: ರಾಷ್ಟ್ರೀಯ ಹೆದ್ದಾರಿಯಲ್ಲಿ ಹೆಚ್ಚಾಗುತ್ತಿರುವ ರಸ್ತೆ ಅಪಘಾತಗಳು ಮತ್ತು ಡೆತ್ ಪ್ರಕರಣಗಳು. ರಸ್ತೆ ಅಪಘಾತದಿಂದ ಸಾವು ನೋವುಗಳು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಸೂಕ್ತವಾದ ಕ್ರಮಕ್ಕಾಗಿ ಪೋಲೀಸ್ ಇಲಾಖೆ ಮುಂದಾಗಿದೆ.

ಬಂಟ್ವಾಳ ತಾಲೂಕಿನ ಕಲ್ಲಡ್ಕದಲ್ಲಿ ಒಂದೇ ದಿನ ಎರಡು ಅಪಘಾತದಲ್ಲಿ ಇಬ್ಬರು ದ್ವಿಚಕ್ರವಾಹನ ಸವಾರರು ಮೃತಪಟ್ಟ ಹಿನ್ನೆಲೆಯಲ್ಲಿ ಬಂಟ್ವಾಳ ಡಿ.ವೈ.ಎಸ್.ಪಿ. ವೆಲೆಂಟೈನ್ ಡಿ.ಸೋಜ ಘಟನಾ ಸ್ಥಳಕ್ಕೆ ಭೇಟಿ ನೀಡಿ ಯಾವ ಕಾರಣದಿಂದ ಅಪಘಾತಗಳು ನಡೆಯುತ್ತದೆ ಮತ್ತು ಅಪಘಾತಗಳು ಕಡಿಮೆಯಾಗುವಂತೆ ಮಾಡಲು ಪೋಲೀಸ್ ಇಲಾಖೆ ಏನೇನೂ ಕ್ರಮಗಳನ್ನು ಕೈಗೊಳ್ಳಬೇಕಾಗುತ್ತದೆ ಎಂಬ ಬಗ್ಗೆ ಯೂ ಟ್ರಾಫಿಕ್ ಎಸ್.ರಾಜೇಶ್ ಕೆ.ವಿ, ಬಂಟ್ವಾಳ ನಗರ ಠಾಣಾ ಎಸ್.ಐ.ಅವಿನಾಶ್ ಗ್ರಾಮಾಂತರ ಎಸ್.ಐ. ಪ್ರಸನ್ನ, ಅವರ ಜೊತೆ ಚರ್ಚಿಸಿ ಬಳಿಕ ಕೆಲವೊಂದು ಪರಿಹಾರ ಕ್ರಮಗಳ ಬಗ್ಗೆ ತಿಳಿಸಿದ್ದಾರೆ. ಅದಲ್ಲದೆ ರಸ್ತೆಗೆ ಸಂಬಂಧಿಸಿದ ಇಂಜಿನಿಯರ್ ಗಳನ್ನು ಸ್ಥಳಕ್ಕೆ ಕರೆಸಿ ಕ್ರಮಗಳ ಬಗ್ಗೆ ಮಾಹಿತಿ ಪಡೆದಿದ್ದಾರೆ.

 

*ಬ್ಯಾರಿಕೇಡ್ ಹಾಗೂ ಕೋನ್ ಅಳವಡಿಕೆ*

ಕಲ್ಲಡ್ಕ ಜಂಕ್ಸನ್ ಅಂದರೆ ಮಂಗಳೂರು ಕಡೆಯಿಂದ ಪುತ್ತೂರು ಮತ್ತು ವಿಟ್ಲಕ್ಕೆ ತಿರುಗುವ ಶ್ರೀರಾಮ ಭಜನಾ ಮಂದಿರದ ಮುಂಭಾಗದ ಪ್ರದೇಶ ದಲ್ಲಿ ಅನೇಕ ಅಪಘಾತ ಗಳು ನಡೆಯುತ್ತಿದ್ದು, ನಿನ್ನೆಯೂ ಇದೇ ಸ್ಥಳದಲ್ಲಿ ಅಪಘಾತ ನಡೆದ ಹಿನ್ನೆಲೆಯಲ್ಲಿ ಈ ಭಾಗದಲ್ಲಿ ಬ್ಯಾರಿಕೇಡ್ ಗಳನ್ನು ಹಾಕಲಾಗಿದೆ.

ಜೊತೆಗೆ ವಿಟ್ಲ ರಸ್ತೆಯಲ್ಲಿ ಕೋನ್ ಅಳವಡಿಕೆ ಮಾಡಲಾಗಿದೆ. ಟ್ರಾಫಿಕ್ ಪೋಲೀಸರು ಕೂಡ ಈ ಭಾಗದಲ್ಲಿ ನಿಂತು ವಾಹನ ಸವಾರರಿಗೆ ಹಾಗೂ ರಸ್ತೆ ದಾಟುವಾಗ ಸಹಾಯ ಮಾಡುವ ಮೂಲಕ ಅಪಘಾತ ಸಂಭವಿಸಿದಂತೆ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲಾಗಿದೆ.

*ಕಲ್ಲಡ್ಕದಲ್ಲಿ ಸರ್ಕಲ್ ಅಥವಾ ಹಮ್ಸ್ ಆಗಬೇಕಾಗಿದೆ*

ಮಂಗಳೂರು ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಮಧ್ಯೆ ಕಲ್ಲಡ್ಕದಲ್ಲಿ ವಿಟ್ಲ ಕಡೆಗೆ ತಿರುಗುವ ಪ್ರದೇಶದಲ್ಲಿ ಸರ್ಕಲ್ ಒಂದು ಆಗಬೇಕಾಗಿದೆ, ಅಥವಾ ರಸ್ತೆಯಲ್ಲಿ ಹುಬ್ಬು ತಗ್ಗುಗಳನ್ನು (ಹಮ್ಸ್) ತುರ್ತಾಗಿ ಹಾಕಬೇಕಾದ ಅವಶ್ಯಕತೆ ಇದೆ ಎಂಬುದು ಸ್ಥಳೀಯ ರ ಮಾತು.

ಈ ಭಾಗದಲ್ಲಿ ಇತ್ತೀಚಿನ ದಿನಗಳಲ್ಲಿ ಅನೇಕ ಅಪಘಾತಗಳು ನಡೆದು ಸಾವುನೋವುಗಳು ಸಂಭವಿಸಿದೆ. ಇಲ್ಲಿನ ಅಪಘಾತಗಳು ಕಡಿಮೆಯಾಗಬೇಕಾದರೆ ಇದರ ಅಗತ್ಯ ವಿದೆ ಎಂದು ಹೇಳುತ್ತಿದ್ದಾರೆ.

ಅಥವಾ ಕಿರಿದಾದ ಈ ಭಾಗದ ರಸ್ತೆಯ ಅಗಲೀಕರಣವಾದರೂ ಆಗಬೇಕಾಗಿದೆ . ತುರ್ತಾಗಿ ಅಧಿಕಾರಿಗಳು ಕೆಲಸ ಮಾಡಬೇಕಾಗಿದೆ ಸ್ಥಳೀಯರು ಒತ್ತಾಯ ಮಾಡಿದ್ದಾರೆ.

*ಅವೈಜ್ಞಾನಿಕ ರೀತಿಯ ಕಾಮಗಾರಿಗಳೇ ರಸ್ತೆ ಅಪಘಾತಕ್ಕೆ ಕಾರಣ?*

ರಾಷ್ಟ್ರೀಯ ಹೆದ್ದಾರಿಯ ಡಾಮರೀಕರಣ ಆಗದೆ ಎರಡು ವರ್ಷಗಳು ಆಗಿತ್ತು. ಕೊನೆಗೂ ಈ ಬಾರಿ ರಸ್ತೆಗೆ ಡಾಮರೀಕರಣ ಮಾಡಲಾಗಿದೆ ಆದರೆ ಡಾಮರೀಕರಣದ ಬಳಿಕ ರಸ್ತೆಯ ಎರಡು ಬದಿಗಳು ಎತ್ತರವಾಗಿದ್ದು ರಸ್ತೆಯಿಂದ ಕೆಳಗೆ ವಾಹನಗಳನ್ನು ಇಳಿಸುವಂತಿಲ್ಲ, ಹಾಗಾಗಿ ರಸ್ತೆಯ ಎರಡು ಬದಿಗಳಿಗೆ ಡಾಮರೀಕರಣವಾದ ಕೂಡಲೇ ಮಣ್ಣು ಹಾಕುವ ಕೆಲಸ ಮಾಡಬೇಕಾಗಿತ್ತು.

ಅದಲ್ಲದೆ ರಸ್ತೆಯ ಬದಿಯಲ್ಲಿ ಪೊದೆಗಳು, ಗಿಡಗಂಟುಗಳು ಬೆಳೆದಿದ್ದು ರಸ್ತೆಯೇ ಕಾಣುತ್ತಿಲ್ಲ ರಾತ್ರಿ ಹೊತ್ತಿನಲ್ಲಿ ವಾಹನ ಚಾಲನೆ ಮಾಡುವ ಚಾಲಕರಿಗೆ ಬಹಳ ತೊಂದರೆಯಾಗುತ್ತಿದೆ.

ರಾಷ್ಟ್ರೀಯ ಹೆದ್ದಾರಿ ರಸ್ತೆಯಲ್ಲಿ ಕ್ಯಾಟ್ ಐ (ರಾತ್ರಿ ಹೊತ್ತಿನಲ್ಲಿ ಬೆಳಗುವ ನಾಮಫಲಕಗಳನ್ನು ) ವ್ಯವಸ್ಥೆ ಆಗಬೇಕಾಗಿದೆ.

ಈ ರೀತಿಯ ಕೆಲವೊಂದು ಪ್ರಮುಖವಾದ ಕೆಲಸಗಳು ಆಗಬೇಕಾದ ಅನಿವಾರ್ಯ ತೆ ಇದೆ ಎಂಬುದು ಸಾರ್ವಜನಿಕ ವಲಯದ ಮಾತು.

*ರಸ್ತೆ ನಿಯಮ ಪಾಲಿಸಿ*

ವಾಹನ ಸವಾರರು ಕೂಡ ಹೆಚ್ಚಿನ ಜಾಗೃತೆ ವಹಿಸಿ ಚಾಲನೆ ಮಾಡಬೇಕು ಮತ್ತು ರಸ್ತೆ ಸುರಕ್ಷತಾ ನಿಯಮಗಳನ್ನು ಪಾಲಿಸಬೇಕು.

ಅದರಲ್ಲೂ ದ್ವಿಚಕ್ರ ವಾಹನ ಸವಾರರು ಹೆಚ್ಚಿನ ಜಾಗರೂಕತೆ ವಹಿಸಬೇಕಾಗಿದೆ. ಅಂಕಿಅಂಶಗಳ ಪ್ರಕಾರ ರಸ್ತೆ ಅಪಘಾತದಲ್ಲಿ ಹೆಚ್ಚು ಸಾವುನೋವುಗಳು ಉಂಟಾಗಿದ್ದು ದ್ವಿಚಕ್ರವಾಹನ ಸವಾರರದ್ದು ಎಂಬುದು ದಾಖಲಾಗಿದೆ.

More from the blog

B.C. Road : ಮಂಗಳೂರು ಉಪವಿಭಾಗ ಮಟ್ಟದ ಬೆಂಕಿ ನಿಯಂತ್ರಣ ತರಬೇತಿ ಕಾರ್ಯಗಾರ

ಬಂಟ್ವಾಳ: ಅರಣ್ಯ ಇಲಾಖೆ ಮಂಗಳೂರು ವಿಭಾಗದ( ಬಂಟ್ವಾಳ, ಬೆಳ್ತಂಗಡಿ,ಮಂಗಳೂರು) ವತಿಯಿಂದ ಮಂಗಳೂರು ಉಪವಿಭಾಗ ಮಟ್ಟದ ಬೆಂಕಿ ನಿಯಂತ್ರಣ ತರಬೇತಿ ಕಾರ್ಯಗಾರ ಬಿಸಿರೋಡಿನ ರೋಟರಿ ಕ್ಲಬ್ ನ ಭವನದಲ್ಲಿ ನಡೆಯಿತು. ಕಾರ್ಯಕ್ರಮವನ್ನು ತಾಲೂಕು ಆರೋಗ್ಯಾಧಿಕಾರಿ ಅಶೋಕ್...

ಕಟೀಲು 7 ಮೇಳಗಳ ಜ.29ರ ಸೇವೆಯಾಟಗಳ ವಿವರ ಇಲ್ಲಿದೆ..

ಮಂಗಳೂರು: ಕಟೀಲು ಶ್ರೀ ದುರ್ಗಾಪರಮೇಶ್ವರೀ ಪ್ರಸಾದಿತ ದಶಾವತಾರ ಯಕ್ಷಗಾನ ಮಂಡಳಿ ಇದರ  7 ಮೇಳಗಳ ಜ.29ರ ಸೇವೆಯಾಟಗಳ ವಿವರ ಈ ಕೆಳಗಿನಂತಿವೆ.. ಜ.29ರ ಸೇವೆಯಾಟಗಳ ವಿವರ : ಉಮೇಶ್ ಅತಿಕಾರಿ, ಮುಳಿಂಜೆಗುತ್ತು, 'ಶ್ರೀ ಕೃಪಾ',...

ಬೆಂಗಳೂರಿಗಿಂತ ಮಂಗಳೂರಿನಲ್ಲಿ ವಾಯು ಗುಣಮಟ್ಟ ಕಳಪೆ – ಅಚ್ಚರಿ ವರದಿ ಬಹಿರಂಗ..!

ಮಂಗಳೂರು : ರಾಜ್ಯದ ವಿವಿಧ ನಗರಗಳಲ್ಲಿ ವಾಯು ಗುಣಮಟ್ಟ (AQI) ಆತಂಕಕಾರಿ ಮಟ್ಟಕ್ಕೆ ತಲುಪಿದ್ದು, ಈ ಪೈಕಿ ರಾಜಧಾನಿ ಬೆಂಗಳೂರಿಗಿಂತ ಮಂಗಳೂರಿನಲ್ಲಿ ಪರಿಸ್ಥಿತಿ ಮತ್ತಷ್ಟು ಹದಗೆಟ್ಟಿರುವುದು ವರದಿಯಾಗಿದೆ. ವರದಿಗಳ ಪ್ರಕಾರ, ಕರಾವಳಿ ಕರ್ನಾಟಕದ ಜಿಲ್ಲೆಗಳಾದ...

ದೈವೀಕೃಪೆಯಿಂದ ಮಾತ್ರ ಜೀವನರಥ ಎಳೆಯಬಹುದು : ಒಡಿಯೂರುಶ್ರೀ

ವಿಟ್ಲ: ಆತ್ಮರೂಪಿ ಭಗವಂತ ದೇಹದೊಳಗಿರುವಾಗಲೇ ಬದುಕಿನ ಸಾರ್ಥಕತೆ ಪಡೆಯಬೇಕು. ಧರ್ಮದ ಬಗ್ಗೆ ಮನೆಯಿಂದಲೇ ಜಾಗೃತಿ ಮೂಡಿಸುವ ಕಾರ್ಯವಾಗಬೇಕು. ಆಧ್ಯಾತ್ಮಿಕ ಬೆಳಕಿನಿಂದ ಮಾತ್ರ ರಾಷ್ಟ್ರ ಬೆಳಗಲು ಸಾಧ್ಯ ಎಂದು ಒಡಿಯೂರು ಶ್ರೀ ಗುರುದೇವದತ್ತ ಸಂಸ್ಥಾನದ...