Wednesday, February 12, 2025

ಮನೆಯ ಚಿಲಕ ಮುರಿದು ಸುಳಿದ ಅಡಿಕೆ ಕಳವು

ಬಂಟ್ವಾಳ: ಮನೆಯ ಚಿಲಕ ಮುರಿದು ಸುಳಿದಿರುವ  ಅಡಿಕೆ ಕಳವು ಮಾಡಿದ ಘಟನೆ ಬಂಟ್ವಾಳ ಗ್ರಾಮಾಂತರ ಠಾಣಾ ವ್ಯಾಪ್ತಿಯ ಮಂಚಿ ಗ್ರಾಮದ ಮೊಂತಿಮಾರುಪಡ್ಪು ಎಂಬಲ್ಲಿ ನಿನ್ನೆ ರಾತ್ರಿ ನಡೆದಿದೆ.
ಬಂಟ್ವಾಳ ತಾಲೂಕಿನ ಮೊಂತಿಮಾರುಪಡ್ಪು ನಿವಾಸಿ ಮೊಯಿದ್ದೀನ್ ಎಂಬವರ ಹಳೆಯ ಮನೆಯಿಂದ ನಿನ್ನೆ ರಾತ್ರಿ ಸುಳಿದಿರುವ  76 ಸಾವಿರ ರೂ ಮೌಲ್ಯದ ಸುಮಾರು 3 ಕಿಂಟ್ವಾಲ್ ಅಡಿಕೆ ಕಳವುಗೈದಿರುವ ಬಗ್ಗೆ ಬಂಟ್ವಾಳ ಗ್ರಾಮಾಂತರ ಠಾಣೆ ಯಲ್ಲಿ ಪ್ರಕರಣ ದಾಖಲಾಗಿದೆ.


ಮೊಯಿದ್ದೀನ್ ಅವರು ಅಡಿಕೆ ಲೀಸ್ ಪಡೆಯುವ ವ್ಯಾಪಾರಿಯಾಗಿದ್ದಾರೆ.
ಹಾಗೆ ಲೀಸ್ ಗೆ ಪಡೆದ ಅಡಿಕೆಯನ್ನು ಇವರ ಮನೆಯ ಹತ್ತಿರ ಇರುವ ಹಳೆಯ ಮನೆಯಂಗಳದಲ್ಲಿ ಒಣಗಿಸಿ ಅದೇ ಮನೆಯಲ್ಲಿ ದಾಸ್ತಾನು ಇರಿಸುತ್ತಾರೆ.
ದಾಸ್ತಾನು ಇರಿಸಿದ ಒಣ ಅಡಿಕೆ ಯನ್ನು ಹಳೆಯ ಮನೆಯಲ್ಲಿ ಸುಳಿಯುತ್ತಿದ್ದರು.
ನಿನ್ನೆ ಕೂಡಾ ಅಡಿಕೆ ಸುಳಿಯುವ ಕೆಲಸಗಾರರು ಬಂದು ಸುಮಾರು 9 ಗೋಣಿ ಚೀಲ ಅಡಕೆ ಸುಳಿದು ಹೋಗಿದ್ದರು.
ಮನೆಯವರು ಅಡಿಕೆಯನ್ನು ಅಲ್ಲಿಯೇ ಇಟ್ಟು ಮನೆಗೆ ಬೀಗ ಹಾಕಿ ಹೋಗಿದ್ದರು.
ಇಂದು ಬೆಳಿಗ್ಗೆ ಮತ್ತೆ ಅಡಿಕೆ ಸುಳಿಯಲು ಎಂದು ಕೆಲಸಗಾರರೊಂದಿಗೆ ಹಳೆ ಮನೆಗೆ ಬಂದು ನೋಡಿದಾಗ ಚಿಲಕ ಮುರಿದಿತ್ತು.
ಒಳಗೆ ಹೋಗಿ ನೋಡಿದಾಗ 9 ಗೋಣಿ ಸುಳಿದ ಅಡಿಕೆ ಗೋಣಿ ಚೀಲದಲ್ಲಿ ಕೇವಲ 3 ಗೋಣಿಗಳು ಮಾತ್ರ ಇತ್ತು.
ಉಳಿದ 6 ಗೋಣಿ ಚೀಲಗಳು ಸುಮಾರು 3 ಕಿಂಟ್ವಾಲ್ ಅಡಿಕೆ ಕಳವಾಗಿತ್ತು.
ಮೊಯಿದ್ದೀನ್ ಅವರು ಮಾಡಿದ ಚಿಲ್ಲರೆ ಸಾಲವನ್ನು ತೀರಿಸಲು ಎಂದು ಅಡಿಕೆ ಸುಳಿದು ಮಾರಾಟ ಮಾಡಲು ಯೋಚಿಸಿದ್ದರು.

ಬಂಟ್ವಾಳ ಎಸ್.ಪಿ.ಸೈದುಲ್ ಅಡಾವತ್ ಅವರ ನಿರ್ದೇಶನ ದಂತೆ ವೃತ್ತ ನಿರೀಕ್ಷಕ ಟಿ.ಡಿ.ನಾಗರಾಜ್ ಅವರ ನೇತೃತ್ವದಲ್ಲಿ ಗ್ರಾಮಾಂತರ ಎಸ್ ಐ ಪ್ರಸನ್ನ ಅವರ ತಂಡ ಕಳವು ಆರೋಪಿಗಳ ಪತ್ತೆಗೆ ಕಾರ್ಯಚರಣೆ ಆರಂಭಿಸಿದ್ದಾರೆ.

ಘಟನಾ ಸ್ಥಳಕ್ಕೆ ಬಂಟ್ವಾಳ ಗ್ರಾಮಾಂತರ ಎಸ್.ಐ.ಪ್ರಸನ್ನ, ಪ್ರೋಬೆಸನರಿ ಎಸ್.ಐ.ವಿನೋದ್ ಎಚ್.ಕೆ ಹಾಗೂ ಸಿಬ್ಬಂದಿ ಗಳು ಬೇಟಿ ನೀಡಿ ಪರಿಶೀಲಿಸಿ ಪ್ರಕರಣ ದಾಖಲಿಸಿ ಕೊಂಡಿದ್ದಾರೆ.

More from the blog

ಅಕ್ರಮ ಮಸೀದಿ ನಿರ್ಮಾಣ ಆರೋಪ: ಕರಿಯಂಗಳ ಗ್ರಾ.ಪಂ.ಗೆ ಮುತ್ತಿಗೆ

ಬಂಟ್ವಾಳ: ಗ್ರಾಮ ಪಂಚಾಯತ್ ಅನುಮತಿ ಇಲ್ಲದೆ ಅಕ್ರಮವಾಗಿ ಸರಕಾರಿ ಜಾಗದಲ್ಲಿ ಕಟ್ಟಡ ನಿರ್ಮಿಸಿ ಅದರಲ್ಲಿ ಮದರಸ ಮಾಡಲು ಮುಂದಾಗಿದ್ದರೆ ಎಂದು ಆರೋಪಿಸಿದ ಗ್ರಾಮಸ್ಥರು ಇದನ್ನು ತಡೆಯುವಂತೆ ಗ್ರಾಮ ಪಂಚಾಯತ್ ಗೆ ಮುತ್ತಿಗೆ ಹಾಕಿದ...

ಪುರಸಭೆ ಎಡವಿದೆಲ್ಲಿ? ಬ್ಯಾನರ್ ವಿವಾದ!

ಬಂಟ್ವಾಳ: ಬಂಟ್ವಾಳ ಪುರಸಭೆ ನಿಯಮ ಉಲ್ಲಂಘಿಸಿ ಹಾಕಲಾದ ಫ್ಲೆಕ್ಸ್ ತೆರವು ಕಾರ್ಯಾಚರಣೆಯನ್ನು ತಡವಾಗಿ ಪ್ರಾರಂಭಿಸಿದೆ. ಜನವರಿ 29ರಂದು ಪುರಸಭೆಯ ಸಾಮಾನ್ಯ ಸಭೆಯಲ್ಲಿ ಈ ಕುರಿತು ಪುರಸಭೆಯ ಮುಖ್ಯಾಧಿಕಾರಿ ತೆರವು ಕಾರ್ಯಾಚರಣೆ ನಡೆಸುವುದಾಗಿ ಘೋಷಿಸಿ,...

ಸರಕಾರಿಯೋ, ತಾ.ಪಂ.ಗೆ ಸೇರಿದ ಜಾಗವೋ? ಇದೊಂದು ಬೇಲಿಯ ಕಥೆ!

ಬಂಟ್ವಾಳ: ತಾ.ಪಂ.ಅಧಿಕಾರಿ ವರ್ಗ ಕಚೇರಿ ಮುಂಭಾಗದ ಜಾಗಕ್ಕೆ ಕಬ್ಬಿಣದ ರಾಡ್ ಗಳ ಮೂಲಕ ಬೇಲಿ ಹಾಕಿದ್ದು, ಇದಿಗ ಈ ಜಾಗವು ಸರಕಾರಿ ಯೋ, ಅಥವಾ ತಾಲೂಕು ಪಂಚಾಯತ್ ಗೆ ಸೇರಿದ್ದೊ ಎಂಬ ಚರ್ಚೆಗೆ...

ನಂದಾವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರಾಗಿ ಪ್ರಭಾಕರ್ ಶೆಟ್ಟಿ ಆಯ್ಕೆ

ಬಂಟ್ವಾಳ: ತಾಲೂಕಿನ ಸಜೀಪಮಾಗಣೆಯ ಪ್ರಧಾನ ದೇವಾಲಯ ಪಾಣೆಮಂಗಳೂರಿಗೆ ಸಮೀಪದ ನಂದಾವರ ಶ್ರೀ ವಿನಾಯಕ ಶಂಕರನಾರಾಯಣ ದುಗಾಂಭ ಕ್ಷೇತ್ರದ ನೂತನ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರಾಗಿ ಕಾಂತಾಡಿಗುತ್ತು ಪ್ರಭಾಕರ ಶೆಟ್ಟಿ ಅವರು ಆಯ್ಕೆಯಾಗಿದ್ದಾರೆ. ಉಳಿದಂತೆ ಸಮಿತಿ ಸದಸ್ಯರಾಗಿ...