Thursday, July 3, 2025

ಬಂಟ್ವಾಳದ ಇರಾದಲ್ಲಿ ಕೋಟ್ಯಂತರ ರೂ ವೆಚ್ಚದಲ್ಲಿ ನಿರ್ಮಾಣ ವಾಗಲಿರುವ ಕೇಂದ್ರ ಕಾರಾಗೃಹ ಸ್ಥಳ ಪರಿಶೀಲನೆ ನಡೆಸಿದ ಎ.ಡಿ.ಜಿ.ಪಿ.ಮೇಘರಿಕ್

ಬಂಟ್ವಾಳ: ಬಂಟ್ವಾಳ ತಾಲೂಕಿನ ಮುಡಿಪು ಸಮೀಪದ ಇರಾ ಮತ್ತು ಕುರ್ನಾಡು ಗ್ರಾಮದಲ್ಲಿ ನಿರ್ಮಾಣವಾಗಲಿರುವ ಕೇಂದ್ರ ಕಾರಾಗ್ರಹ ಮತ್ತು ಅಧಿಕಾರಿಗಳ ವಸತಿ ಸಮುಚ್ಚಯ ದ ಸ್ಥಳ ಪರಿವೀಕ್ಷಣೆ ಗೆ ಬೆಂಗಳೂರು ಎಡಿಜಿಪಿ ಎನ್.ಎಸ್.ಮೇಘರಿಕ್ ಅಗಮಿಸಿದ್ದರು.


ಸ್ಥಳ ಪರಿಶೀಲನೆ ನಡೆಸಿದ ಬಳಿಕ ಅಧಿಕಾರಿಗಳ ಜೊತೆ ಚರ್ಚೆ ನಡೆಸಿ
ಸೂಕ್ತವಾದ ಮಾಹಿತಿ ಪಡೆದು ಶೀಘ್ರವಾಗಿ ಕಾಮಗಾರಿಯ ಆರಂಭಕ್ಕೆ ಯಾವ ಎಲ್ಲಾ ರೀತಿಯ ವ್ಯವಸ್ಥೆ ಗಳು ಬೇಕು ಎಂಬುದನ್ನು ತಿಳಿದುಕೊಂಡರು.
ಪ್ರಸ್ತುತ ಮಂಗಳೂರು ಬೆಸೆಂಟ್ ಕಾಲೇಜಿನ ಪಕ್ಕದಲ್ಲಿರುವ ಹಳೆಯ ಜೈಲಿನ ಜಾಗದ ಕೊರತೆಯನ್ನು ನೀಗಿಸಲು ಮಂಗಳೂರು ಕ್ಷೇತ್ರ ವ್ಯಾಪ್ತಿಯಲ್ಲಿ ಬರುವ ಬಂಟ್ವಾಳ ತಾಲೂಕಿನ ಇರಾ ಮತ್ತು ಕುರ್ನಾಡು ಸಮೀಪದ ಕೈಗಾರಿಕಾ ಪ್ರದೇಶ ಅಭಿವೃದ್ಧಿ ನಿಗಮದವರು ನೀಡಿರುವ ಸುಮಾರು 64 ಎಕರೆ ಜಮೀನಿನಲ್ಲಿ ಅಂದಾಜು 250 ಕೋಟಿ ವೆಚ್ಚದಲ್ಲಿ 1000 ಜನ ಕೈದಿಗಳಿಗೆ ವ್ಯವಸ್ಥೆ ಇರುವ ಸುಸಜ್ಜಿತ ಮಾದರಿ ಜೈಲು ನಿರ್ಮಾಣ ಕ್ಕೆ ಮತ್ತು ಅಲ್ಲೇ ಪಕ್ಕದಲ್ಲಿ ಅಧಿಕಾರಿಗಳ ವಸತಿಗ್ರಹ ನಿರ್ಮಾಣಕ್ಕೆ ಸರಕಾರ ಮುಂದಾಗಿದ್ದಾರೆ.
ಪ್ರಥಮ ಹಂತದಲ್ಲಿ 100 ಕೋಟಿ ವೆಚ್ಚದಲ್ಲಿ ಜೈಲು ನಿರ್ಮಾಣ ಕಾರ್ಯ ನಡೆದ ಬಳಿಕ ಎರಡನೇ ಹಂತದಲ್ಲಿ ಅಧಿಕಾರಿಗಳ ವಸತಿ ನಿರ್ಮಾಣ ನಡೆಯುವ ಯೋಜನೆ ಹಾಕಿಕೊಂಡಿದ್ದಾರೆ
ಹಳೆಯ ಜೈಲು 11 ಎಕರೆ ಜಮೀನಿನಲ್ಲಿ ಇದ್ದು ಕೇವಲ 200 ಕೈದಿಗಳನ್ನು ಮಾತ್ರ ಜೈಲಿನಲ್ಲಿ ಹಾಕಲು ಸಾಧ್ಯವಾಗುತ್ತದೆ. ಉಳಿದಂತೆ ಅನೇಕ ಕೈದಿಗಳನ್ನು ಈ ಕೊರತೆಯಿಂದ ಬೇರೆ ಬೇರೆ ಜೈಲುಗಳಿಗೆ ವರ್ಗಾವಣೆ ಮಾಡಲಾಗುತ್ತದೆ.
ಈ ಸಮಸ್ಯೆ ನೀಗಿಸಲು ಮಾದರಿ ಕಾರಾಗ್ರಹ ನಿರ್ಮಾಣ ದ ಯೋಚನೆ ನಡೆಸಿ ಈಗಾಗಲೇ ಪೋಲೀಸ್ ಇಲಾಖೆಯ ಉನ್ನತ ಮಟ್ಟದ ಅಧಿಕಾರಿಗಳು ಸರಕಾರಕ್ಕೆ ಪ್ರಸ್ತಾವನೆ ಸಲ್ಲಿಸಿ, ಆಡಳಿತಾತ್ಮಕ ಅನುಮೋದನೆಯ ಹಂತದಲ್ಲಿ ದೆ ಎಂದು ತಿಳಿಸಿದ್ದಾರೆ.
ಇಂದು ಬೆಳಿಗ್ಗೆ ಕಾರಾಗೃಹ ನಿರ್ಮಾಣ ಕ್ಕೆ ಸೂಚಿಸಲಾಗಿರುವ ಜಮೀನಿಗೆ ಎ.ಡಿ.ಜಿ.ಪಿ.ಮೇಘರಿಕ್ , ಪಶ್ಚಿಮ ವಲಯ ಐ.ಜಿ.ಪಿ.ಹರಿಶೇಖರನ್ ,ಪೋಲೀಸ್ ಕಮೀಷನರ್ ಟಿ.ಆರ್.ಸುರೇಶ್, ಎಸ್.ಪಿ.ಡಿ.ಎಮ್.ಲಕ್ಮೀ ಪ್ರಸಾದ್, ಡಿ.ಸಿ.ಪಿ.ಉಮಾ, ಎ.ಸಿ.ಪಿ.ಶ್ರೀನಿವಾಸ ಗೌಡ,ಬಂಟ್ವಾಳ ಎ.ಎಸ್.ಪಿ.ಸೈದುಲ್ ಅಡಾವತ್ , ಜಿಲ್ಲಾ ಕಾರಾಗೃಹ ಅಧೀಕ್ಷಕ ಚಂದನ್ , ಪಿ.ಡಬ್ಲೂ.ಡಿ.ಇಂಜಿನಿಯರ್ ಉಮೇಶ್ ಭಟ್, ಬಂಟ್ವಾಳ ಗ್ರಾಮಾಂತರ ಎಸ್.ಐ.ಪ್ರಸನ್ನ ಮತ್ತಿತರರು ಉಪಸ್ಥಿತರಿದ್ದರು

More from the blog

Mangalore : ಹಬ್ಬಗಳ ಋತು ಆರಂಭ – ಆಚರಣೆಗೆ ಷರತ್ತು ವಿಧಿಸಿದ ಪೊಲೀಸ್ ಇಲಾಖೆ..

ಮಂಗಳೂರು : ಕೆಲವೇ ದಿನಗಳಲ್ಲಿ ಹಬ್ಬಗಳ ಋತು ಆರಂಭವಾಗಲಿದೆ. ಈ ಹಿನ್ನೆಲೆಯಲ್ಲಿ ನಗರದಲ್ಲಿ ಹಲವು ಸಾರ್ವಜನಿಕ ಕಾರ್ಯಕ್ರಮಗಳು ಮತ್ತು ಮೆರವಣಿಗೆಗಳು ನಡೆಯಲಿದೆ. ಅವುಗಳಲ್ಲಿ ಮುಹರ್ರಂ, ಶ್ರೀಕೃಷ್ಣ ಜನ್ಮಾಷ್ಟಮಿ ಮತ್ತು ಮೊಸರು ಕುಡಿಕೆ ,...

ಶ್ರೀ. ಕ್ಷೇ. ಧ. ಗ್ರಾ. ಯೋಜನೆಯ ಕ್ರಿಟಿಕಲ್ ಫಂಡ್ ಸಹಾಯಧನ ವಿತರಣೆ..

ಬಂಟ್ವಾಳ : ಬಂಟ್ವಾಳ ತಾಲೂಕಿನ ಬಾಳ್ತಿಲ ಗ್ರಾಮದ ಸುಧೆಕಾರು ಲೀಲಾ ಕೃಷ್ಣಪ್ಪ ಇವರ ಮಗನಾಧ ಹರೀಶ್ ಇವರು ಅನಾರೋಗ್ಯದಿಂದ ಬಳಲುತ್ತಿದ್ದು. ಇವರ ಚಿಕಿತ್ಸೆಗೆ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಕ್ರಿಟಿಕಲ್ ಫಂಡ್...

ಹಿಂದೂ ಸಂಘಟನೆಗಳ ಕಾರ್ಯಕರ್ತರ ಮೇಲೆ ನಡೆಯುತ್ತಿರುವ ಕಾನೂನು ವಿರೋಧಿ ಕ್ರಮ ಖಂಡಿಸಿ ಪ್ರತಿಭಟನೆಗೆ ಕರೆ 

ಮಂಗಳೂರು : ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಕಳೆದ 2 ತಿಂಗಳುಗಳಿಂದ ಹಿಂದೂ ಸಂಘಟನೆಗಳ ಸಾಮಾಜಿಕ ಕಾರ್ಯಕರ್ತರ ಮೇಲೆ ಪೊಲೀಸ್ ಇಲಾಖೆಯು ಕಾನೂನು ವಿರೋಧಿ ಕ್ರಮಗಳನ್ನು ಜಾರಿಗೊಳಿಸುತ್ತಿದೆ. ಇದಕ್ಕೆ ಪುಷ್ಠಿ ನೀಡುವಂತೆ...

ಕರ್ತವ್ಯ ನಿರತ ಪೊಲೀಸ್ ಸಿಬ್ಬಂದಿ ಮೇಲಿನ ಹಲ್ಲೆ ಪ್ರಕರಣ : ಆರೋಪಿ ಬಂಧನ..

ಬಂಟ್ವಾಳ: ಸಾರ್ವಜನಿಕ ಸ್ಥಳದಲ್ಲಿ ಮದ್ಯ ಸೇವೆನೆ ಮಾಡುತ್ತಿದ್ದ ವ್ಯಕ್ತಿಯನ್ನು ಪ್ರಶ್ನಿಸಿದ ರಾತ್ರಿ ಪಾಳಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಪೋಲೀಸ್ ಸಿಬ್ಬಂದಿ ಮೇಲೆ ಅರೋಪಿಯೋರ್ವ ಹಲ್ಲೆ ನಡೆಸಿದ ಘಟನೆ ಬಂಟ್ವಾಳ ಗ್ರಾಮಾಂತರ ಪೋಲೀಸ್ ಠಾಣಾ ವ್ಯಾಪ್ತಿಯ...