Sunday, February 9, 2025

ಅಡ್ಯನಡ್ಕ ಜನತಾ ಪ್ರೌಢಶಾಲೆಯಲ್ಲಿ ಯೋಗ ಪ್ರಾಣ ವಿದ್ಯಾ ತರಬೇತಿ

ಅಡ್ಯನಡ್ಕ: ಅಡ್ಯನಡ್ಕ ಜನತಾ ಪ್ರೌಢಶಾಲೆಯಲ್ಲಿ ವಿದ್ಯಾರ್ಥಿಗಳಿಗಾಗಿ ಏಕಾಗ್ರತೆ ಮತ್ತು ಮೆದುಳಿನ ಶಕ್ತಿ ವರ್ಧನೆಗೆ ಪೂರಕವಾದ ಧ್ಯಾನ,
ಉಸಿರಾಟ ಮತ್ತು ಆಸನಗಳನ್ನು ಪರಿಚಯಿಸುವ ಯೋಗ ಪ್ರಾಣ ವಿದ್ಯಾ ತರಬೇತಿ ಕಾರ್ಯಕ್ರಮವು ಜು.12ರಂದು ಜರುಗಿತು.
ಸಂಪನ್ಮೂಲ ವ್ಯಕ್ತಿಗಳಾಗಿ ಯೋಗ ಪ್ರಾಣ ವಿದ್ಯಾ ಸೆಂಟರ್ ಪುತ್ತೂರು ಇಲ್ಲಿನ ತರಬೇತುದಾರರಾದ ವಿನುತಾ ಎಂ.ಎಸ್. ಹಾಗೂ
ಪೂರ್ಣಿಮಾ ತರಬೇತಿ ನೀಡಿದರು. ಸೂಪರ್ ಬ್ರೈನ್ ಆಸನ, ಲಯಬದ್ಧ ಯೋಗೀಯ ಉಸಿರಾಟ, ಕ್ಷಮಾ ಸಾಧನ, ಪೃಥ್ವಿ ಶಾಂತಿ ಧ್ಯಾನ
ಇವುಗಳ ಬಗ್ಗೆ ಪ್ರಾಯೋಗಿಕ ತರಬೇತಿ ನೀಡಲಾಯಿತು.
ಜನತಾ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲ ಡಿ. ಶ್ರೀನಿವಾಸ್, ವಿಜ್ಞಾನ ಸಂಘದ ಮಾರ್ಗದರ್ಶಿ ಶಿಕ್ಷಕಿ ಕುಸುಮಾವತಿ ವೇದಿಕೆಯಲ್ಲಿ
ಉಪಸ್ಥಿತರಿದ್ದರು. ಹಿರಿಯ ಶಿಕ್ಷಕ ಎಸ್. ರಾಜಗೋಪಾಲ ಜೋಶಿ ಸ್ವಾಗತಿಸಿ, ಮುಖ್ಯೋಪಾಧ್ಯಾಯ ಟಿ.ಆರ್. ನಾಯ್ಕ್ ವಂದಿಸಿದರು.

More from the blog

ಯುವ ಸಂಗೀತೋತ್ಸವಕ್ಕೆ ಚಾಲನೆ

ಮಂಗಳೂರು: ಸಾಮಾಜಿಕ ಸ್ವಾಸ್ಥ್ಯ ಕ್ಕಾಗಿ ಮಾನಸಿಕ ನೆಮ್ಮದಿ ನೀಡುವಂತಹ ಸಂಗೀತ ಸಾಂಸ್ಕೃತಿಕ ಕಾರ್ಯಕ್ರಮಗಳು ಅಗತ್ಯವಿದೆ ಎಂದು ಕ್ಯಾ.ಬ್ರಿಜೇಶ್ ಚೌಟ ತಿಳಿಸಿದ್ದಾರೆ. ಅವರು ಮಂಗಳೂರಿನ ಕಲಾ ಸಾಧನ ಸಂಸ್ಥೆ ವತಿಯಿಂದ ನಗರದ ಟಿಎಂಎ ಪೈ ಇಂಟರ್‌ನ್ಯಾಶನಲ್...

ದೆಹಲಿಯಲ್ಲಿ ಬಿಜೆಪಿ ಭರ್ಜರಿ ಜಯಭೇರಿ…. ಸಿದ್ದಕಟ್ಟೆ ಪೇಟೆಯಲ್ಲಿ ಬಿಜೆಪಿ ಕಾರ್ಯಕರ್ತರಿಂದ ಪಟಾಕಿ ಸಿಡಿಸಿ ಸಂಭ್ರಮಾಚರಣೆ*

  ದೆಹಲಿ ವಿಧಾನ ಸಭೆಗೆ ನಡೆದ ಚುನಾವಣೆ ಯಲ್ಲಿ ಭಾರತೀಯ ಜನತಾ ಪಕ್ಷ 70 ಸ್ಥಾನ ಗಳಲ್ಲಿ ಬರೋಬ್ಬರಿ 48 ಸ್ಥಾನ ಗಳನ್ನು ಗೆಲ್ಲುವ ಮೂಲಕ ಭರ್ಜರಿ ಜಯಭೇರಿ ಗಳಿಸುವುದರೊಂದಿಗೆ ಪ್ರಧಾನಿ ನರೇಂದ್ರ ಮೋದಿಯವರ...

ಜುಗಾರಿ ಅಡ್ಡೆಗೆ ದಾಳಿ: ಹತ್ತು ಜನರ ಬಂಧನ

ಬಂಟ್ವಾಳ: ಹಣ ಪಣಕ್ಕಿಟ್ಟು ಜುಗಾರಿ ಆಟ ಆಡುತ್ತಿದ್ದ ಅಡ್ಡೆಗೆ ದಾಳಿ ನಡೆಸಿದ ಬಂಟ್ವಾಳ ಗ್ರಾಮಾಂತರ ಪೋಲೀಸ್ ಇನ್ಸ್ ಪೆಕ್ಟರ್ ಶಿವಕುಮಾರ್ ನೇತ್ರತ್ವದ ತಂಡ ಆಟದಲ್ಲಿ ನಿರತರಾಗಿದ್ದ 10 ಮಂದಿ ಆರೋಪಿಗಳನ್ನು ಹಾಗೂ ಸಾವಿರಾರು...

ಮಾರ್ಬಲ್ ಲಾರಿ ಪಲ್ಟಿ

ಬಂಟ್ವಾಳ: ಮಾರ್ಬಲ್ ಲೋಡ್ ಲಾರಿಯೊಂದು ತಾಂತ್ರಿಕ ದೋಷದಿಂದ ರಸ್ತೆಯ ವಿಭಾಜಕ್ಕೆ ಡಿಕ್ಕಿ ಹೊಡೆದು ಪಲ್ಟಿಯಾದ ಘಟನೆ ರಾಷ್ಟ್ರೀಯ ಮಂಗಳೂರು- ಬೆಂಗಳೂರು ರಸ್ತೆಯ ತುಂಬೆ ಸಮೀಪದ ರಾಮಲ್ ಕಟ್ಟೆ ಎಂಬಲ್ಲಿ ಪಲ್ಟಿಯಾಗಿದೆ. ಘಟನೆಯಿಂದ ಯಾವುದೇ ಅಪಾಯ...