Wednesday, February 12, 2025

ಅಡ್ಯನಡ್ಕ: ಶ್ರೀ ಮಹಮ್ಮಾಯಿ ಭಜನಾ ಮಂದಿರ ಲೋಕಾರ್ಪಣೆ

ಅಡ್ಯನಡ್ಕ: ಆದಿವಾಸಿ ಬುಡಕಟ್ಟು ಜನಾಂಗಗಳಿಂದಾಗಿ ದೇಶದ ಸಂಸ್ಕೃತಿ ಉಳಿದುಕೊಂಡಿದೆ. ಸಮಾಜದ ಗುರುತಿಸುವಿಕೆಯನ್ನು ಸಂಘಗಳ ಮೂಲಕ ಯುವ ಸಮುದಾಯಕ್ಕೆ ನೀಡುವ ಅನಿವಾರ್ಯತೆ ಇದೆ. ಜಾತಿ ಸಂಘಟನೆಗಳು ಸಮಾಜದ ಆರ್ಥಿಕ ಸ್ವಾವಲಂಬನೆಯನ್ನು ಗಟ್ಟಿಗೊಳಿಸಲು ಅನಿವಾರ್ಯ ಎಂದು ಪುತ್ತೂರು ಶಾಸಕ ಸಂಜೀವ ಮಠಂದೂರು ಹೇಳಿದರು.
ಅವರು ಶನಿವಾರ ಅಡ್ಯನಡ್ಕ ಶ್ರೀ ಮಹಮ್ಮಾಯಿ ಮರಾಟಿ ಸಂಘದ ನೂತನ ಶ್ರೀ ಮಹಮ್ಮಾಯಿ ಸಭಾಭವನ ಲೋಕಾರ್ಪಣೆಗೊಳಿಸಿ ಮಾತನಾಡಿದರು. ಆರ್ಥಿಕವಾಗಿ ಹಿಂದುಳಿದ ಸಮಾಜದ ಜನರು ಮುಂದುವರಿಯಲು ಸರಕಾರ ಹಲವು ಯೋಜನೆಗಳನ್ನು ಹಾಕಿಕೊಂಡಿದೆ. ಸಚಿವರ ಹಾಗೂ ಸಂಸದರ ಅನುದಾನ ಒದಗಿಸಲು ಬೇಕಾದ ಕ್ರಮ ತೆಗೆದುಕೊಳ್ಳಲಾಗುವುದು. ಸಭಾಭವನಕ್ಕೆ ೫ ಲಕ್ಷ ಹಾಗೂ ರಸ್ತೆ ಅಭಿವೃದ್ಧಿಗೆ 5 ಲಕ್ಷವನ್ನು ಸರಕಾರದ ವತಿಯಿಂದ ನೀಡಲಾಗುವುದು ಎಂದು ತಿಳಿಸಿದರು.
ಫಲಕ ಅನಾವರಣಗೊಳಿದ ದ. ಕ. ಜಿಲ್ಲಾ ಪಂಚಾಯಿತಿ ಅಧ್ಯಕ್ಷೆ ಮೀನಾಕ್ಷಿ ಶಾಂತಿಗೋಡು ಮಾತನಾಡಿ ಸರಕಾರದ ಸೌಲಭ್ಯಗಳನ್ನು ಕಟ್ಟ ಕಡೆಯ ವ್ಯಕ್ತಿಗೆ ತಲುಪಿಸುವ ಜವಾಬ್ದಾರಿ ಪ್ರತಿಯೊಬ್ಬರಿಗೂ ಇದೆ. ಸಾಧಿಸಬೇಕೆಂಬ ಛಲವಿದ್ದಾಗ ಉತ್ತಮ ಕಾರ್ಯಗಳನ್ನು ಮಾಡಲು ಸಾಧ್ಯ. ಸರ್ವರ ಸಹಕಾರದ ಮೂಲಕ ಸಮುದಾಯ ಮುಂದೆ ಬಂದು ಸಭಾಭವನ ನಿರ್ಮಾಣ ಮಾಡಿರುವುದು ಹೆಮ್ಮೆಯ ವಿಚಾರವಾಗಿದೆ ಎಂದರು.
ಕೇಪು ಗ್ರಾಮ ಪಂಚಾಯಿತಿ ಅಧ್ಯಕ್ಷ ತಾರಾನಾಥ ಆಳ್ವ ಕುಕ್ಕೆಬೆಟ್ಟು, ಜಿಲ್ಲಾ ಪಂಚಾಯಿತಿ ಉಪಾಧ್ಯಕ್ಷೆ ಕಸ್ತೂರಿ ಪಂಜ, ಸದಸ್ಯೆ ಜಯಶ್ರೀ ಕೋಡಂದೂರು, ತಾಲೂಕು ಪಂಚಾಯಿತಿ ಉಪಾಧ್ಯಕ್ಷ ಅಬ್ಬಾಸ್ ಅಲಿ, ಸದಸ್ಯೆ ಕವಿತಾ ಸುಬ್ಬ ನಾಯ್ಕ, ಕೇಪು ಪಂಚಾಯಿತಿ ಉಪಾಧ್ಯಕ್ಷೆ ಯಶಸ್ವಿನಿ ಶಾಸ್ತ್ರಿ ನೆಕ್ಕರೆ, ಸದಸ್ಯರಾದ ಪುಷ್ಪಾಕರ ರೈ ಚೆಲ್ಲಡ್ಕ, ಅಬ್ದುಲ್ ಕರೀಮ್ ಕುದ್ದುಪದವು, ವಿಠಲ ನಾಯ್ಕ ಕೋಪ್ರೆ, ಕುದ್ದುಪದವು ದಿವ್ಯಶಕ್ತಿ ಯುವಕ ಮಂಡಲದ ಗೌರವ ಸಲಹೆಗಾರ ರಾಧಾಕೃಷ್ಣ ಶೆಟ್ಟಿ ಚೆಲ್ಲಡ್ಕ, ತಾಲೂಕು ಪಂಚಾಯಿತಿ ಮಾಜಿ ಅಧ್ಯಕ್ಷೆ ಲಲಿತಾ ಶಿವಪ್ಪ ನಾಯ್ಕ ಕೋಡಂದೂರು, ಸಂಘದ ಅಧ್ಯಕ್ಷ ಗೋವಿಂದ ನಾಯ್ಕ ನೆಗಳಗುಳಿ, ಕಾರ್ಯದರ್ಶಿ ಸುರೇಶ್ ನಾಯ್ಕ ಕೋಡಂದೂರು, ಸಂಚಾಲಕ ಗೋಪಾಲ ನಾಯ್ಕ ಇರಾಯಿಮೂಲೆ ಮತ್ತಿತರರು ಉಪಸ್ಥಿತರಿದ್ದರು.

ಶ್ರೀಜಾ ವಿ. ಪ್ರಾರ್ಥಿಸಿದರು. ಗೌರವಾಧ್ಯಕ್ಷ ಐತ್ತಪ್ಪ ನಾಯ್ಕ ಸ್ವಾಗತಿಸಿದರು. ಉಪಾಧ್ಯಕ್ಷ ಚಂದಪ್ಪ ನಾಯ್ಕ ಕೆಳಗಿನಪದವು ಪ್ರಸ್ತಾವನೆಗೈದರು. ಉಪಾಧ್ಯಕ್ಷ ಕುಂಞ ನಾಯ್ಕ ವಂದಿಸಿದರು. ಕೋಶಾಧಿಕಾರಿ ತಿಮ್ಮಪ್ಪ ನಾಯ್ಕ ಕಾರ್ಯಕ್ರಮ ನಿರೂಪಿಸಿದರು.

ಬೆಳಗ್ಗೆ ಸೂರ್ಯನಾರಾಯಣ ಕೇಕುಣ್ಣಾಯ ಅವರ ಪೌರೋಹಿತ್ಯದಲ್ಲಿ ಗಣಪತಿ ಹವನ, ಶ್ರೀ ಸತ್ಯನಾರಾಯಣ ದೇವರ ಪೂಜೆ, ಸಾಯಂಕಾಲ ಶ್ರೀ ದೂರ್ಗಾ ಪೂಜೆ, ಸಾಂಸ್ಕೃತಿಕ ಕಲಾ ವೈಭವ, ರಾತ್ರಿ ಕೇಪು ಮೈರ ಶ್ರೀ ದುರ್ಗಾ ಕಲಾ ತಂಡದ ಪುಗರ್ತೆಕಲಾವಿದರು ವಿಟ್ಲ ಅಭಿನಯದ ಆರ್ ತೂಪೆರ್ ತುಳು ಹಾಸ್ಯಮಯ ನಾಟಕ ಪ್ರದರ್ಶನಗೊಂಡಿತು.

More from the blog

ಚಾಲಕನಿಗೆ ಮೂರ್ಚೆ ರೋಗ ಬಂದು ಡಿವೈಡರ್ ಮೇಲೆ ಹತ್ತಿದ ಲಾರಿ

ಬಂಟ್ವಾಳ: ರಾ.ಹೆ.75ರ ತುಂಬೆ ಸಮೀಪ ಚಾಲಕನಿಗೆ ಮೂರ್ಛೆ ರೋಗ ಬಂದು ಲಾರಿಯೊಂದು ಡಿವೈಡರ್ ಮೇಲೆ ಹತ್ತಿ ಸುಮಾರು 100 ಮೀ.ನಷ್ಟು ಚಲಿಸಿ ನಿಂತಿದ್ದು,‌ ಸೀಟಿನಲ್ಲಿ ಬಿದ್ದಿದ್ದ ಚಾಲಕನನ್ನು ಸ್ಥಳೀಯರು ತುಂಬೆ ಆಸ್ಪತ್ರೆಗೆ ‌ಕರೆದುಕೊಂಡು...

ನೇಣು ಬಿಗಿದು ಯುವಕ ಆತ್ಮಹತ್ಯೆ

ಬಂಟ್ವಾಳ: ಖಿನ್ನತೆಯಿಂದ ಅವಿವಾಹಿತ ವ್ಯಕ್ತಿಯೊರ್ವನು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಅಮ್ಟಾಡಿ ನಿವಾಸಿ ಮೆಕ್ಸಿನ್ ತಾವ್ರೋ ಅವರ ಮಗ ಜೀವನ್  ತಾವ್ರೋ ( 37) ಆತ್ಮಹತ್ಯೆ ಮಾಡಿಕೊಂಡ ಯುವಕ. ‌‌‌ಜೀವನ್ ಅವರು ಅಗಾಗ...

ಅಕ್ರಮ ಮಸೀದಿ ನಿರ್ಮಾಣ ಆರೋಪ: ಕರಿಯಂಗಳ ಗ್ರಾ.ಪಂ.ಗೆ ಮುತ್ತಿಗೆ

ಬಂಟ್ವಾಳ: ಗ್ರಾಮ ಪಂಚಾಯತ್ ಅನುಮತಿ ಇಲ್ಲದೆ ಅಕ್ರಮವಾಗಿ ಸರಕಾರಿ ಜಾಗದಲ್ಲಿ ಕಟ್ಟಡ ನಿರ್ಮಿಸಿ ಅದರಲ್ಲಿ ಮದರಸ ಮಾಡಲು ಮುಂದಾಗಿದ್ದರೆ ಎಂದು ಆರೋಪಿಸಿದ ಗ್ರಾಮಸ್ಥರು ಇದನ್ನು ತಡೆಯುವಂತೆ ಗ್ರಾಮ ಪಂಚಾಯತ್ ಗೆ ಮುತ್ತಿಗೆ ಹಾಕಿದ...

ಪುರಸಭೆ ಎಡವಿದೆಲ್ಲಿ? ಬ್ಯಾನರ್ ವಿವಾದ!

ಬಂಟ್ವಾಳ: ಬಂಟ್ವಾಳ ಪುರಸಭೆ ನಿಯಮ ಉಲ್ಲಂಘಿಸಿ ಹಾಕಲಾದ ಫ್ಲೆಕ್ಸ್ ತೆರವು ಕಾರ್ಯಾಚರಣೆಯನ್ನು ತಡವಾಗಿ ಪ್ರಾರಂಭಿಸಿದೆ. ಜನವರಿ 29ರಂದು ಪುರಸಭೆಯ ಸಾಮಾನ್ಯ ಸಭೆಯಲ್ಲಿ ಈ ಕುರಿತು ಪುರಸಭೆಯ ಮುಖ್ಯಾಧಿಕಾರಿ ತೆರವು ಕಾರ್ಯಾಚರಣೆ ನಡೆಸುವುದಾಗಿ ಘೋಷಿಸಿ,...