Wednesday, February 12, 2025

ಅಡ್ಯನಡ್ಕ ಜನತಾ ಪ್ರೌಢಶಾಲೆ: ಸಾರ್ವಜನಿಕ ಶಿಕ್ಷಣ ಇಲಾಖೆ ವತಿಯಿಂದ ಉಚಿತ ಬೈಸಿಕಲ್ ವಿತರಣೆ

ಅಡ್ಯನಡ್ಕ: ಇಲ್ಲಿನ ಜನತಾ ಪ್ರೌಢಶಾಲೆಯಲ್ಲಿ ಸಾರ್ವಜನಿಕ ಶಿಕ್ಷಣ ಇಲಾಖೆಯ ವತಿಯಿಂದ ಎಂಟನೆಯ ತರಗತಿ ವಿದ್ಯಾರ್ಥಿಗಳಿಗೆ
ಸರಕಾರವು ಕೊಡಮಾಡಿರುವ ಉಚಿತ ಬೈಸಿಕಲ್‌ಗಳನ್ನು ಇಂದು ಫೆ.20ರಂದು ವಿತರಿಸಲಾಯಿತು.
ಕೇಪು ಗ್ರಾ. ಪಂ. ಸದಸ್ಯ ಮತ್ತು ಅಡ್ಯನಡ್ಕ ಎಜುಕೇಶನಲ್ ಸೊಸೈಟಿಯ ಸದಸ್ಯರೂ ಆಗಿರುವ ಅಬ್ದುಲ್ ಕರೀಮ್ ಕುದ್ದುಪದವು
ಅವರು ಬೈಸಿಕಲ್‌ಗಳನ್ನು ಪೋಷಕರ ಸಮ್ಮುಖದಲ್ಲಿ ವಿದ್ಯಾರ್ಥಿಗಳಿಗೆ ಹಸ್ತಾಂತರಿಸಿದರು. ಈ ಸಮಾರಂಭದಲ್ಲಿ ಅಡ್ಯನಡ್ಕ ಜನತಾ
ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲ ಡಿ. ಶ್ರೀನಿವಾಸ್ ಉಪಸ್ಥಿತರಿದ್ದರು. ಜನತಾ ಪ್ರೌಢಶಾಲೆಯ ಮುಖ್ಯೋಪಾಧ್ಯಾಯ ಟಿ. ಆರ್.
ನಾಯ್ಕ್ ಕಾರ್ಯಕ್ರಮ ನಿರೂಪಿಸಿ, ವಂದಿಸಿದರು. ಶಿಕ್ಷಕ ವೃಂದದ ಎಸ್. ರಾಜಗೋಪಾಲ ಜೋಶಿ, ಪಿ. ಉದಯಕೃಷ್ಣ ಭಟ್,
ಕುಸುಮಾವತಿ, ಗೀತಾ ಎಚ್. ಶೆಟ್ಟಿ ಮತ್ತು ಶಿವಕುಮಾರ ಸಾಯ ಸಹಕರಿಸಿದರು.

More from the blog

ಗಣಿ ಇಲಾಖೆ ಅಧಿಕಾರಿ ವಿರುದ್ಧ ಕ್ರಮಕ್ಕೆ ಸೂಚನೆ

ಬಂಟ್ವಾಳ : ಬಂಟ್ವಾಳದಲ್ಲಿ ಫೆ. 5 ರಂದು ನಡೆದ ಜನತಾದರ್ಶನಕ್ಕೆ ಗೈರು ಹಾಜರಾದ ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಅಧಿಕಾರಿ ವಿರುದ್ಧ ಕ್ರಮ ಕೈಗೊಳ್ಳಲು ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್...

ಯುವ ಕಾಂಗ್ರೆಸ್ ಚುನಾವಣೆ ಫಲಿತಾಂಶ ಪ್ರಕಟ : ಜಿಲ್ಲಾ ಪ್ರಧಾನ ಕಾರ್ಯದರ್ಶಿ ಹುದ್ದೆಯಲ್ಲಿ ಹಾಶೀರ್ ಪೇರಿಮಾರ್ ಗೆ ಮೊದಲ ಸ್ಥಾನ

ಮಂಗಳೂರು: ಯುವ ಕಾಂಗ್ರೆಸ್ ದಕ್ಷಿಣ ಕನ್ನಡ ಜಿಲ್ಲಾ ಘಟಕದ ಪ್ರಧಾನ ಕಾರ್ಯದರ್ಶಿ ಹುದ್ದೆಗೆ ನಡೆದ ಚುನಾವಣೆಯಲ್ಲಿ ಕರ್ನಾಟಕ ರಾಜ್ಯ ವಿಧಾನಸಭೆಯ ಸಭಾಧ್ಯಕ್ಷರು, ಮಂಗಳೂರು ವಿಧಾನಸಭಾ ಕ್ಷೇತ್ರದ ಶಾಸಕರಾದ ಯು.ಟಿ ಖಾದರ್ ಫರೀದ್ ಅವರ...

ಕುಂಭಮೇಳದಲ್ಲಿ ಕಾಲ್ತುಳಿತ : ಮೃತಪಟ್ಟ ಭಕ್ತರಿಗೆ ಕಿಶೋರ್ ಕುಮಾರ್ ಪುತ್ತೂರು ತೀವ್ರ ಸಂತಾಪ

ಕುಂಭಮೇಳದಲ್ಲಿ ಕಾಲ್ತುಳಿತದಿಂದಾಗಿ ಪ್ರಾಣ ಕಳೆದುಕೊಂಡ ಭಕ್ತರಿಗಾಗಿ ನಾನು ತೀವ್ರ ಸಂತಾಪವನ್ನು ವ್ಯಕ್ತಪಡಿಸುತ್ತಿದ್ದೇನೆ. ಅವರ ಅಗಲಿಕೆಯ ನೋವನ್ನು ಸಹಿಸುವ ಶಕ್ತಿಯನ್ನು ಕುಟಂಬದವರಿಗೆ ಭಗವಂತ ನೀಡಲಿ ಎಂದು ಎಂದು ವಿಧಾನ ಪರಿಷತ್ ಸದಸ್ಯ ಕಿಶೋರ್ ಕುಮಾರ್...

ದುಬೈನಿಂದ ಮಂಗಳೂರಿಗೆ ಭೇಟಿ ನೀಡಿದ್ದ ವ್ಯಕ್ತಿಗೆ ಮಂಕಿಪಾಕ್ಸ್ ದೃಢ

ಮಂಗಳೂರು: 40 ವರ್ಷದ ವ್ಯಕ್ತಿಯಲ್ಲಿ ಮಂಕಿಪಾಕ್ಸ್‌ ಸೋಂಕು ಪತ್ತೆ ಆಗಿದೆ. ಆ ಮೂಲಕ ಕರ್ನಾಟಕದಲ್ಲಿ ಪತ್ತೆಯಾದ ಮೊದಲ ಮಂಕಿಪಾಕ್ಸ್ ಪ್ರಕರಣವಾಗಿದೆ. ದುಬಾೖಯಿಂದ ಜ.17ರಂದು ಹಿಂದಿರುಗಿದ್ದ 40 ವರ್ಷದ ವ್ಯಕ್ತಿಯಲ್ಲಿ ಮಂಕಿ ಪಾಕ್ಸ್‌ ರೋಗ ಲಕ್ಷಣಗಳು...