Thursday, February 5, 2026

ಅಡ್ಯನಡ್ಕ: ಆನಿಮೇಶನ್ ಕಲಿಕಾ ತರಬೇತಿ

ಅಡ್ಯನಡ್ಕ: ಕಾರ್ಟೂನ್ ರಚನೆಯು ಅತ್ಯಂತ ಸುಲಭವಾಗಿ ಮತ್ತು ಆಸಕ್ತಿದಾಯಕವಾಗಿ ಕಲಿಯಬಲ್ಲ ಚಿತ್ರ ರಚನಾ ಪದ್ಧತಿಯಾಗಿದೆ. ಇಂದು ಕಾರ್ಟೂನ್ ಮತ್ತು ಆನಿಮೇಶನ್ ಕ್ಷೇತ್ರದಲ್ಲಿ ಸೃಜನಶೀಲ ಕಲಾವಿದರಿಗೆ ಹೆಚ್ಚಿನ ಬೇಡಿಕೆಯಿದೆ ಎಂದು ವ್ಯಂಗ್ಯಚಿತ್ರ ಕಲಾವಿದ ಮತ್ತು ಆನಿಮೇಟರ್ ಜಯರಾಮ ನಾವಡ ನಿಟಿಲಾಪುರ ಅವರು ಹೇಳಿದರು.
ಸಾಹಿತ್ಯ ಸಂಘ ಜನತಾ ಪ್ರೌಢಶಾಲೆ ಅಡ್ಯನಡ್ಕ ಮತ್ತು ’ಅಮೃತವಾಹಿನಿ’ ಸಹಯೋಗದಲ್ಲಿ ಜೂ.೨೯ರಂದು ಅಡ್ಯನಡ್ಕ ಜನತಾ ಪ್ರೌಢಶಾಲೆಯ ವಾರಣಾಶಿ ಕೃಷ್ಣ ಸಭಾಂಗಣದಲ್ಲಿ ನಡೆದ ಚಿತ್ರಕಲೆ ಮಾಹಿತಿ ಮತ್ತು ತರಬೇತಿ ಕಾರ್‍ಯಕ್ರಮದಲ್ಲಿ ಅವರು ವಿದ್ಯಾರ್ಥಿಗಳಿಗೆ ಆನಿಮೇಶನ್ ಮತ್ತು ಕಾರ್ಟೂನ್ ರಚನೆಯ ತರಬೇತಿ ನೀಡಿದರು.
ಮತ್ತೋರ್ವ ಸಂಪನ್ಮೂಲ ವ್ಯಕ್ತಿಯಾಗಿ ಪಾಲ್ಗೊಂಡಿದ್ದ ಚಿತ್ರಕಲಾವಿದ, ವಿನ್ಯಾಸಕಾರ ನವೀನ್ ಜಿ. ಪುತ್ತೂರು ಅವರು ವಿದ್ಯಾರ್ಥಿಗಳಿಗೆ ನಾನಾ ಪ್ರಕಾರದ ಚಿತ್ರಕಲೆಯ ಮಾದರಿಗಳನ್ನು ಪರಿಚಯಿಸಿ ಮಾಹಿತಿ ನೀಡಿದರು.
ಸಾಹಿತ್ಯ ಸಂಘದ ಗೌರವಾಧ್ಯಕ್ಷ, ಮುಖ್ಯ ಶಿಕ್ಷಕ ಟಿ. ಆರ್. ನಾಯ್ಕ್ ಕಾರ್‍ಯಕ್ರಮವನ್ನು ಉದ್ಘಾಟಿಸಿದರು. ಕನ್ನಡ ಅಧ್ಯಾಪಕ ಶಿವಕುಮಾರ ಸಾಯ ಅವರು ಪ್ರಸ್ತಾವಿಸಿ, ಪರಿಚಯಿಸಿದರು. ಸಂಪನ್ಮೂಲ ವ್ಯಕ್ತಿಗಳಿಗೆ ಸ್ಮರಣಿಕೆ ನೀಡಿ ಗೌರವಿಸಲಾಯಿತು. ಸಾಹಿತ್ಯ ಸಂಘದ ಅಧ್ಯಕ್ಷೆ ಮಧುರಾ ಬಿ. ಸ್ವಾಗತಿಸಿದರು. ಕಾರ್‍ಯದರ್ಶಿ ಕೃತಿಕಾ ಎಂ. ಎಸ್. ವಂದಿಸಿದರು. ಉಪಾಧ್ಯಕ್ಷೆ ನಾಗವೇಣಿ ಎ. ಕಾರ್‍ಯಕ್ರಮ ನಿರೂಪಿಸಿದರು.

 

More from the blog

ಬಂಟ್ವಾಳ : SDPI ವತಿಯಿಂದ ಬೂತ್ ಲೆವೆಲ್ ಏಜೆಂಟ್‌ಗಳ ಸಮ್ಮಿಲನ ಕಾರ್ಯಕ್ರಮ

ಬಂಟ್ವಾಳ : ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (SDPI) ಬಂಟ್ವಾಳ ವಿಧಾನಸಭಾ ಕ್ಷೇತ್ರ ಸಮಿತಿ ವತಿಯಿಂದ ಬೂತ್ ಲೆವೆಲ್ ಏಜೆಂಟ್‌ಗಳ (BLA) ಸಮ್ಮಿಲನ ಕಾರ್ಯಕ್ರಮವು ಪಕ್ಷದ ಕಚೇರಿಯಲ್ಲಿ ನಡೆಯಿತು. ಕಾರ್ಯಕ್ರಮಕ್ಕೆ ಕ್ಷೇತ್ರಾಧ್ಯಕ್ಷ ಶಾಹುಲ್...

ನೆಟ್ಲಮುಡ್ನೂರು ವಲಯ ಕಾಂಗ್ರೆಸ್ ಸಭೆ..

ವಿಟ್ಲ : ನೆಟ್ಲಮುಡ್ನೂರು ವಲಯ ಕಾಂಗ್ರೆಸ್ ಸಮಿತಿ ಸಭೆಯು ನೇರಳಕಟ್ಟೆ ಜನಪ್ರಿಯ ಗಾರ್ಡನ್ ನಲ್ಲಿ ನಡೆಯಿತು. ಸಬೆಯ ಅಧ್ಯಕ್ಷತೆ ವಹಿಸಿದ್ದ ಮಾಜಿ ಸಚಿವ ಬಿ.ರಮಾನಾಥ ರೈ ಮಾತನಾಡಿ, ಪೆ.09 ರಿಂದ 12 ರ ತನಕ...

ಶ್ರೀ.ಕ್ಷೇ.ಧ.ಗ್ರಾ.ಯೋ.ಬಿ.ಸಿ. ಟ್ರಸ್ಟ್ ಬಂಟ್ವಾಳ : ವಾತ್ಸಲ್ಯಕಿಟ್ ಹಸ್ತಾಂತರ ಕಾರ್ಯಕ್ರಮ..

ಬಂಟ್ವಾಳ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ (ರಿ) ಬಂಟ್ವಾಳ ತಾಲೂಕು ಜ್ಞಾನವಿಕಾಸ ಕಾರ್ಯಕ್ರಮದಡಿಯಲ್ಲಿ ಆರ್ಥಿಕವಾಗಿ ಅತಿ ದುರ್ಬಲ ಕುಟುಂಬಗಳಿಗೆ ವಾತ್ಸಲ್ಯಕಿಟ್ ಹಸ್ತಾಂತರ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು. ಶ್ರೀ ಕ್ಷೇತ್ರ ಗ್ರಾಮಾಭಿವೃದ್ಧಿ ಯೋಜನೆ...

ಕಟೀಲು 7 ಮೇಳಗಳ ಫೆ.05ರ ಸೇವೆಯಾಟಗಳ ವಿವರ ಇಲ್ಲಿದೆ..

ಮಂಗಳೂರು: ಕಟೀಲು ಶ್ರೀ ದುರ್ಗಾಪರಮೇಶ್ವರೀ ಪ್ರಸಾದಿತ ದಶಾವತಾರ ಯಕ್ಷಗಾನ ಮಂಡಳಿ ಇದರ 7 ಮೇಳಗಳ ಫೆ.05ರ ಸೇವೆಯಾಟಗಳ ವಿವರ ಈ ಕೆಳಗಿನಂತಿವೆ.. ಫೆ.05ರ ಸೇವೆಯಾಟಗಳ ವಿವರ : ವಿಜಯ ಶೆಟ್ಟಿ, ಕೆಳಗಿನ ಮನೆ, ಸಾಣೂರು,...