Wednesday, February 12, 2025

ಅಡ್ಯನಡ್ಕ: ಶ್ರೀ ಉಳ್ಳಾಲ್ತಿ ಭಜನಾ ಮಂದಿರ ವಾರ್ಷಿಕೋತ್ಸವ

ವಿಟ್ಲ: ಶ್ರೀ ಉಳ್ಳಾಲ್ತಿ ಭಜನಾ ಮಂದಿರ ಅಮೈ ಇದರ 47ನೇ ವಾರ್ಷಿಕೋತ್ಸವವು ಇತ್ತೀಚೆಗೆ ದೀಪ ಪ್ರತಿಷ್ಠೆ, ನಾನಾ ಭಜನಾ ಮಂಡಳಿಗಳಿಂದ ಭಜನೆ, ಗಣಪತಿ ಹವನ, ದುರ್ಗಾ ಪೂಜೆ, ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ, ಧಾರ್‍ಮಿಕ ಸಭೆ ಮೊದಲಾದ ಕಾರ್‍ಯಕ್ರಮಗಳೊಂದಿಗೆ ನಡೆಯಿತು.
ಧಾರ್‍ಮಿಕ ಸಭೆಯ ಅಧ್ಯಕ್ಷತೆಯನ್ನು ಕಾಟುಕುಕ್ಕೆ ಶ್ರೀ ಸತ್ಯಸಾಯಿ ಸೇವಾ ಸಮಿತಿಯ ಸಂಚಾಲಕರಾದ ಸಚ್ಚಿದಾನಂದ ಖಂಡೇರಿ ವಹಿಸಿದ್ದರು. ನಿವೃತ್ತ ಬಿ.ಎಸ್.ಎನ್.ಎಲ್. ಅಧಿಕಾರಿ ನಾರಾಯಣ ನಾಯ್ಕ ಎ. ಮುಖ್ಯ ಅತಿಥಿಗಳಾಗಿ ಆಗಮಿಸಿದ್ದರು. ಪೆರ್ಲ ಇಡಿಯಡ್ಕ ಶ್ರೀ ದುರ್ಗಾಪರಮೇಶ್ವರಿ (ಉಳ್ಳಾಲ್ತಿ) ವಿಷ್ಣುಮೂರ್ತಿ ಕ್ಷೇತ್ರದ ಪ್ರಧಾನ ಕಾರ್‍ಯದರ್ಶಿ ಸದಾನಂದ ಶೆಟ್ಟಿ ಕುದ್ವ ಧಾರ್‍ಮಿಕ ಉಪನ್ಯಾಸ ನೀಡಿದರು.
ಶಾಲಾ ವಿದ್ಯಾರ್ಥಿನಿಯರು ಪ್ರಾರ್ಥಿಸಿದರು. ಉದಯಶಂಕರ ಭಟ್ ಅಮೈ ಸ್ವಾಗತಿಸಿದರು. ಮಂಡಳಿಯ ಕಾರ್‍ಯದರ್ಶಿ ಪರಮೇಶ್ವರ ಕಾಯರ್ತಡ್ಕ ವರದಿ ವಾಚಿಸಿದರು. ಮಂದಿರದ ಅಧ್ಯಕ್ಷರಾದ ವೇಣುಗೋಪಾಲ ಅಮೈ ವಂದಿಸಿದರು. ಶಿವಪ್ಪ ನಾಯ್ಕ ಶಾಂತಿಮೂಲೆ ಕಾರ್‍ಯಕ್ರಮ ನಿರೂಪಿಸಿದರು. ಸಭಾ ಕಾರ್‍ಯಕ್ರಮದ ನಂತರ ಮಹಾ ಮಂಗಳಾರತಿ ಪ್ರಸಾದ ವಿತರಣೆ, ಅನ್ನ ಸಂತರ್ಪಣೆ, ಅಂಗನವಾಡಿ ಪುಟಾಣಿಗಳಿಂದ, ಹಾಗೂ ಮಕ್ಕಳಿಂದ ನಾನಾ ವಿನೋದಾವಳಿಗಳು ಜರಗಿದವು. ಶ್ರೀ ವೈಷ್ಣವಿ ನವರಾಜ್ ಭಟ್ ಅಮೈ ಮತ್ತು ಬಳಗದವರು ಸಂಗೀತ ಸಂಜೆ ಕಾರ್‍ಯಕ್ರಮ ನಡೆಸಿಕೊಟ್ಟರು.

More from the blog

ಫೆ.15 ರಂದು ಕಮಲಾಶ್ರಯ ಮನೆಯ ಹಸ್ತಾಂತರ ಹಾಗೂ ಗೃಹಪ್ರವೇಶ

ಬಂಟ್ವಾಳ: ಬಿಜೆಪಿ ಮಹಾಶಕ್ತಿ ಕೇಂದ್ರ ಮಾಣಿ ಮತ್ತು ಬಿಜೆಪಿ ಶಕ್ತಿ ಕೇಂದ್ರ ಅನಂತಾಡಿ ಇದರ ಸಹಕಾರದಿಂದ ಅನಂತಾಡಿ ಗ್ರಾಮದ ಬಾಬನಕಟ್ಟೆ ಎಂಬಲ್ಲಿ ಬಲ್ಲು ಕೊರಗ ಇವರ ಕುಟುಂಬಕ್ಕೆ ನಿರ್ಮಿಸಲಾದ ನೂತನ ಮನೆಯನ್ನು ಫೆ.15...

ಬೇಲಿ ವಿವಾದ : ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡ ಶಾಸಕ ರಾಜೇಶ್ ನಾಯ್ಕ್

ಬಂಟ್ವಾಳ: ತಾ.ಪಂ.ಅಧಿಕಾರಿ ವರ್ಗ ಕಚೇರಿ ಮುಂಭಾಗದ ಜಾಗಕ್ಕೆ ಕಬ್ಬಿಣದ ರಾಡ್ ಅಳವಡಿಸಿ ಬೇಲಿ ಹಾಕಿದ ವಿಚಾರಕ್ಕೆ ಸಂಬಂಧಿಸಿದಂತೆ ಸಾರ್ವಜನಿಕ ದೂರಿನ ಹಿನ್ನೆಲೆಯಲ್ಲಿ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಅವರು ತಾ.ಪಂ.ಗೆ ಹಠಾತ್...

ವಿಟ್ಲ ಪಿಎಂ ಶ್ರೀ ಸರಕಾರಿ ಪ್ರೌಢ ಶಾಲೆಯಲ್ಲಿ ಮೆಟ್ರಿಕ್ ಮೇಳ

ವಿಟ್ಲ: ವಿಟ್ಲ ಪಿ ಎಂ ಶ್ರೀ ಸರಕಾರಿ ಪ್ರೌಢ ಶಾಲೆ (ಆರ್ ಎಂ ಎಸ್ ಎಂ)ವಿಟ್ಲ ಇದರ ಪ್ರಾಥಮಿಕ ಶಾಲಾ ವಿಭಾಗದಲ್ಲಿ ಬುಧವಾರ ಮೆಟ್ರಿಕ್ ಮೇಳ ಕಾರ್ಯಕ್ರಮ ನಡೆಯಿತು. ಮೆಟ್ರಿಕ್ ಮೇಳವನ್ನು ವಿಟ್ಲ ಪಟ್ಟಣ...

ಚಾಲಕನಿಗೆ ಮೂರ್ಚೆ ರೋಗ ಬಂದು ಡಿವೈಡರ್ ಮೇಲೆ ಹತ್ತಿದ ಲಾರಿ

ಬಂಟ್ವಾಳ: ರಾ.ಹೆ.75ರ ತುಂಬೆ ಸಮೀಪ ಚಾಲಕನಿಗೆ ಮೂರ್ಛೆ ರೋಗ ಬಂದು ಲಾರಿಯೊಂದು ಡಿವೈಡರ್ ಮೇಲೆ ಹತ್ತಿ ಸುಮಾರು 100 ಮೀ.ನಷ್ಟು ಚಲಿಸಿ ನಿಂತಿದ್ದು,‌ ಸೀಟಿನಲ್ಲಿ ಬಿದ್ದಿದ್ದ ಚಾಲಕನನ್ನು ಸ್ಥಳೀಯರು ತುಂಬೆ ಆಸ್ಪತ್ರೆಗೆ ‌ಕರೆದುಕೊಂಡು...