Saturday, July 12, 2025

ಸಿಎಎ ವಿರುದ್ಧ ಬೃಹತ್ ಪ್ರತಿಭಟನೆಗೆ ಚಾಲನೆ

ಮಂಗಳೂರು: ಸಿಎಎ, ಎನ್‌ಆರ್‌ಸಿ ನಂತಹ ಸಂವಿಧಾನ ವಿರೋಧಿ ನೀತಿಗಳ ವಿರುದ್ಧ ಜನಜಾಗೃತಿ ಮೂಡಿಸಲು ದ.ಕ. ಜಿಲ್ಲೆಯ 28 ಸಂಘಟನೆಗಳ ನೇತೃತ್ವದಲ್ಲಿ ದ.ಕ. ಮತ್ತು ಉಡುಪಿ ಮುಸ್ಲಿಂ ಸೆಂಟ್ರಲ್ ಕಮಿಟಿ ಇಂದು ಮಧ್ಯಾಹ್ನ 2:30ಕ್ಕೆ ಅಡ್ಯಾರ್-ಕಣ್ಣೂರು ಕೇಂದ್ರ ಜುಮಾ ಮಸೀದಿ ಸಮೀಪದ ಶಹಾ ಗಾರ್ಡನ್‌ನಲ್ಲಿ ಬೃಹತ್ ಜನಜಾಗೃತಿ ಸಮಾವೇಶಕ್ಕೆ ಚಾಲನೆ ನೀಡಿದರು.
ಉಭಯ ಜಿಲ್ಲೆಯ ಸಮಾನ‌ ಮನಸ್ಕ ಸಂಘಟನೆಗಳ ಸಹಯೋಗದಲ್ಲಿ ನಡೆಯುವ ಸಮಾವೇಶದಲ್ಲಿ ‘ನಾವು ಭಾರತೀಯರು ತಂಡ’ದ ನಿವೃತ್ತ ಐಎಎಸ್ ಅಧಿಕಾರಿ ಹರ್ಷ ಮಂದರ್, ಕಣ್ಣನ್ ಗೋಪಿನಾಥನ್, ವಿಶ್ರಾಂತ ನ್ಯಾಯಮೂರ್ತಿ ಗೋಪಾಲಗೌಡ, ಮಾನವ ಹಕ್ಕುಗಳ ಹೋರಾಟಗಾರ ಶಿವಸುಂದರ್, ನ್ಯಾಯವಾದಿ ಸುಧೀರ್ ಕುಮಾರ್ ಮುರೊಳಿ ಮುಖ್ಯ ಭಾಷಣ ಮಾಡಲಿದ್ದಾರೆ.


ಖಾಝಿಗಳಾದ ಅಲ್‌ಹಾಜ್ ತ್ವಾಕಾ ಅಹ್ಮದ್‌ ಮುಸ್ಲಿಯಾರ್, ಅಲ್‌ಹಾಜ್ ಬೇಕಲ ಇಬ್ರಾಹಿಂ ಮುಸ್ಲಿಯಾರ್, ದ.ಕ. ಜಿಲ್ಲಾ ವಕ್ಫ್ ಸಲಹಾ ಸಮಿತಿಯ ಅಧ್ಯಕ್ಷ ಕಣಚೂರು ಮೋನು, ಶಾಸಕ ಯುಟಿ ಖಾದರ್, ಮಾಜಿ ಶಾಸಕ ಮೊಯ್ದಿನ್‌ ಬಾವಾ, ಎಸ್‌ವೈಎಸ್ ರಾಜ್ಯ ಪ್ರಧಾನ ಕಾರ್ಯದರ್ಶಿ ಡಾ. ಅಬ್ದುಲ್ ರಶೀದ್ ಝೈನಿ, ಸಮಸ್ತ ಮುಶಾವರ ರಾಜ್ಯ ಕಾರ್ಯದರ್ಶಿ ಯು.ಕೆ. ಅಬ್ದುಲ್ ಅಝೀಝ್ ದಾರಿಮಿ, ಜಮಾಅತೆ ಇಸ್ಲಾಮಿ ಹಿಂದ್ ರಾಜ್ಯ ಕಾರ್ಯದರ್ಶಿ ಮುಹಮ್ಮದ್ ಕುಂಞಿ, ಪಿಎಫ್‌ಐ ರಾಜ್ಯಾಧ್ಯಕ್ಷ ಮುಹಮ್ಮದ್ ಶಾಕಿಬ್, ಎಸ್‌ಕೆಎಸ್‌ಎಂ ದಾವಾ‌ ಕಾರ್ಯದರ್ಶಿ ಎಂಜಿ ಮುಹಮ್ಮದ್, ಯುನಿವೆಫ್ ರಾಜ್ಯಾಧ್ಯಕ್ಷ ರಫೀಉದ್ದೀನ್ ಕುದ್ರೋಳಿ, ಡಿವೈಎಫ್‌ಐ ದ.ಕ.ಜಿಲ್ಲಾಧ್ಯಕ್ಷ ಬಿಕೆ‌ ಇಮ್ತಿಯಾಝ್ ಭಾಗವಹಿಸಿದ್ದಾರೆ.

More from the blog

ಶ್ರೀ ಕ್ಷೇ.ಧ.ಗ್ರಾ.ಯೋ.ಬಿ.ಸಿ ಟ್ರಸ್ಟ್ ಮಾಣಿ ವಲಯದ ವತಿಯಿಂದ ಪರಿಸರ ದಿನಾಚರಣೆ ಕಾರ್ಯಕ್ರಮ..

ಬಂಟ್ವಾಳ : ಬಂಟ್ವಾಳ ತಾಲೂಕಿನ ನೆಟ್ಲ ಮುಡ್ನೂರು ಗ್ರಾಮದ ಸರಕಾರಿ ಕಿರಿಯ ಪ್ರಾಥಮಿಕ ಶಾಲೆ ಏಮಾಜೆಯಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿ ಸಿ ಟ್ರಸ್ಟ್ (ರಿ.) ವಿಟ್ಲ ಇದರ ಮಾಣಿ...

ಕುಂಜರ್ಕಳದ ತಡೆಗೋಡೆ, ಬಸ್ಸು ತಂಗುದಾಣ, ಹೈಮಾಸ್ಟ್ ದೀಪ ಉದ್ಘಾಟಿಸಿದ ಯು.ಟಿ.ಖಾದರ್..

ಬಂಟ್ವಾಳ: ಶಾಸಕರ ಅನುದಾನದಿಂದ ನಿರ್ಮಾಣಗೊಂಡ ಪುದು ಗ್ರಾಮದ ಕುಂಜರ್ಕಳದ ತಡೆಗೋಡೆ, ೧೦ನೇ ಮೈಲುಕಲ್ಲು ಬಳಿ ಬಸ್ಸು ತಂಗುದಾಣ ಹಾಗೂ ತ್ವಾಹಾ ಜುಮಾ ಮಸೀದಿ ಬಳಿ ಅನುಷ್ಠಾನಗೊಂಡ ಹೈಮಾಸ್ಟ್ ದೀಪವನ್ನು ಸ್ಪೀಕರ್ ಯು.ಟಿ.ಖಾದರ್ ಅವರು...

ಗುರು ಪೂರ್ಣಿಮೆಯ ಪ್ರಯುಕ್ತ ನಿವೃತ ಶಿಕ್ಷಕಿ ಲಕ್ಷ್ಮೀ ಅವರಿಗೆ ಗೌರವರ್ಪಣೆ 

ಬಂಟ್ವಾಳ : ಗುರು ಪೂರ್ಣಿಮೆಯ ಪ್ರಯುಕ್ತ ಸಜೀಪ ಮುನ್ನೂರು ಬಿಜೆಪಿ ಗ್ರಾಮ ಸಮಿತಿಯ 4ನೇ ವಾರ್ಡಿನ ಬೊಕ್ಕಸ ನಿವಾಸಿಯಾದ ನಿವೃತ ಶಿಕ್ಷಕಿಯಾದ ಮಾತೃ ವಾತ್ಸಲ್ಯದ ಲಕ್ಷ್ಮೀ ಟೀಚರ್ ಇವರಿಗೆ ಬಿಜೆಪಿ ಮುಖಂಡರು ಮಾಜಿ...

ಕೆಂಪುಕಲ್ಲು, ಮರಳು ಸಮಸ್ಯೆ : ಜು.14ಕ್ಕೆ ಬಂಟ್ವಾಳ ತಾಲೂಕು ಕೇಂದ್ರದಲ್ಲಿ ಪ್ರತಿಭಟನೆ..

ಬಂಟ್ವಾಳ :ಕಾಂಗ್ರೆಸ್ ನೇತೃತ್ವದ ಕರ್ನಾಟಕ ರಾಜ್ಯ ಸರ್ಕಾರದ ದುರಡಳಿತ ನೀತಿಯಿಂದಾಗಿ ದಕ್ಷಿಣ ಕನ್ನಡ ಜೆಲ್ಲೆಯಲ್ಲಿ ಕೆಂಪು ಕಲ್ಲು ಮತ್ತು ಮರಳು ಕ್ರತಕ ಅಭಾವ ಸ್ರಷ್ಟಿಸಿರುವುದರಿಂದ ತೀವ್ರ ಸಮಸ್ಯೆಯಿಂದ ಬಡವರು ನಿರ್ಮಿಸುತ್ತಿರುವ ಸಾವಿರಾರು ಮನೆಗಳು...