ಕೇರಳ : ದುಬೈನಿಂದ 191 ಪ್ರಯಾಣಿಕರನ್ನು ಹೊತ್ತು ಕೇರಳ ತಲುಪಿದ ಏರ್ ಇಂಡಿಯಾ ವಿಮಾನ ಕಲ್ಲಿಕೋಟೆ ವಿಮಾನ ನಿಲ್ದಾಣ ರನ್ವೇನಲ್ಲಿ ಸ್ಕಿಡ್ ಆಗಿದ್ದು, ಅಪ್ಪಳಿಸಿದ ರಭಸಕ್ಕೆ ವಿಮಾನ ಎರಡು ಭಾಗವಾಗವಾದ ಘಟನೆ ರಾತ್ರಿ 7.40ರ ಸುಮಾರಿಗೆ ನಡೆದಿದೆ.


ಭಾರಿ ಮಳೆಯ ನಡುವೆಯೇ ರಕ್ಷಣಾ ಕಾರ್ಯ ನಡೆಯುತ್ತಿದೆ. ವಿಮಾನದ ಸಂಖ್ಯೆ IX-1344 ಆಗಿದ್ದು, ಸಾರ್ವಜನಿಕವಾಗಿ ಲಭ್ಯವಾದ ಘಟನಾವಳಿಯ ಮೊದಲ ದೃಶ್ಯಗಳಲ್ಲಿ ವಿಮಾನವು ಎರಡು ತುಂಡುಗಳಾಗಿ ಒಡೆದಿದ್ದು, ಅದರ ಅವಶೇಷಗಳು ರನ್ವೇ ಮತ್ತು ಅದರಾಚೆಗೆ ಹರಡಿಕೊಂಡಿರುವ ಬಗ್ಗೆ ವರದಿಯಾಗಿದೆ.
ಸದ್ಯದ ಮಾಹಿತಿ ಪ್ರಕಾರ 10 ಕ್ಕೂ ಅಧಿಕ ಮಂದಿ ಮೃತ ಪಟ್ಟ ಶಂಕೆ ಇದ್ದು, ಅನೇಕ ಪ್ರಯಾಣಿಕರು ಗಾಯಗೊಂಡಿರುವುದಾಗಿ ತಿಳಿದು ಬಂದಿದೆ. ಘಟನಾ ಸ್ಥಳದಲ್ಲಿ ರಕ್ಷಣಾ ಸಿಬ್ಬಂದಿ, ಪೊಲೀಸರು ಹಾಗೂ ಆಂಬುಲೆನ್ಸ್ಗಳು ಕಾರ್ಯಾಚರಿಸುತ್ತಿದೆ.












