Wednesday, February 12, 2025

ಸುಬ್ರಹ್ಮಣ್ಯ: ಗ್ರಾಮೀಣ ಯುವಕ ಅಜಿತೇಶ್. ಪಿ. ಎಸ್. ಭಾರತೀಯ ಸೇನೆಯ ಲೆಫ್ಟಿನೆಂಟ್ ಹುದ್ದೆಗೆ

ಸುಬ್ರಹ್ಮಣ್ಯ: ಮಾ.9 ರಂದು ಕುಕ್ಕೆ ಸುಬ್ರಹ್ಮಣ್ಯದ ಯುವಕ ಅಜಿತೇಶ್ ಪಿ.ಎಸ್, ಭಾರತೀಯ ಸೇನೆಯ ಉನ್ನತ ಹುದ್ದೆ ಲೆಫ್ಟಿನೆಂಟ್ ಆಗಿ ನಿಯುಕ್ತಿಗೊಂಡರು.

ಭಾರತದ ಅತ್ಯಂತ ಕಠಿಣ ಪರೀಕ್ಷೆಯಾದ SSB (UPSC) ಯಲ್ಲಿ ಉತ್ತೀರ್ಣರಾಗಿ, ಒಂದು ವರ್ಷಗಳ ಕಾಲ “ಅಧಿಕಾರಿಗಳ ತರಬೇತಿ ಅಕಾಡೆಮಿ”(OTA) ಯಲ್ಲಿ ತರಬೇತಿ ಪಡೆದು, ಇಂದು ಪಾಸಿಂಗ್ ಔಟ್ ಪೆರೇಡ್ ನಡೆಯಿತು.

ಅಜಿತೇಶ್ ಅವರು ಸುಬ್ರಹ್ಮಣ್ಯಗ್ರಾಮದ ನೂಚಿಲದ ಶ್ರೀಕೃಷ್ಣ ಶರ್ಮ ನಿವೃತ್ತ ಮುಖ್ಯೋಪಾಧ್ಯಾಯರು ವಿದ್ಯಾರತ್ನ ಮುಖ್ಯೋಪಾಧ್ಯಾಯರು ರವರ ಸುಪುತ್ರ ಪಾಸಿಂಗ್ ಔಟ್ ಪರೇಡ್ ಸಮಾರಂಭದಲ್ಲಿ ಅಜಿತೇಶ್ ರವರ ಕುಟುಂಬಸ್ತರು ಭಾಗವಹಿಸಿದರು.

ಚಿಕ್ಕ ವಯಸ್ಸಿನಲ್ಲೇ ಸೇನೆಗೆ ಸೇರುವ ಆಸೆಯಿಟ್ಟುಕೊಂಡಿದ್ದ ಅಜಿತೇಶ್ ರವರ ಕನಸು ನನಸಾಗಿದೆ. ಸುಬ್ರಹ್ಮಣ್ಯ ಗ್ರಾಮದ ಯುವಕನ ಸಾಧನೆ ಇಂದು ರಾಜ್ಯಕ್ಕೆ ಹೆಮ್ಮೆ ತಂದಿದೆ.

ತಂದೆ, ತಾಯಿ ಭಾರತೀಯ ಸೇನೆಗೆ ಸೇರಲು ತುಂಬಾ ಪ್ರೋತ್ಸಾಹ ನೀಡಿದ್ದಾರೆ,ಸೇನೆಗೆ ಸೇರಬೇಕು ಎಂಬುದು ಬಾಲ್ಯದ ಕನಸಾಗಿತ್ತು ಭಾರತ ದೇಶದ ಸೇನೆಯಲ್ಲಿ ಸೇವೆ ಮಾಡಲು ಹೆಮ್ಮೆ ಗೌರವ ಇದೆ,

ಸುಬ್ರಹ್ಮಣ್ಯ ಗ್ರಾಮದಲ್ಲಿ ಬಾಲ್ಯದ ವಿದ್ಯಾಭ್ಯಾಸ ಮಾಡಿ ಉನ್ನತ ವಿದ್ಯಾಭ್ಯಾಸಕ್ಕೆ ಬೇರೆಡೆ ತೆರಳಿದ್ದೇನೆ,ಸುಬ್ರಹ್ಮಣ್ಯ ಹೃದಯಕ್ಕೆ ತುಂಬಾ ಹತ್ತಿರವಾದ ಊರು ವಿದ್ಯಾಭ್ಯಾಸ ಮಾಡುತ್ತಿರುವ ಸಂದರ್ಭದಲ್ಲಿ ನನಗೆ ಭಾರತೀಯ ಸೇನೆಯಲ್ಲಿ ಅವಕಾಶ ಸಿಕ್ಕಿದೆ, ಒಂದು ವರ್ಷ ಕಠಿಣ ತರಬೇತಿ ಪಡೆದು ಮಾ.9ರಂದು ಲೆಫ್ಟಿನೆಂಟ್ ಆಗಿ ಅಧಿಕಾರ ಸ್ವೀಕರಿಸಿದ್ದೇನೆ,

ಲಡಾಕ್ ನಿಂದ ದೇಶಸೇವೆ ಪ್ರಾರಂಭ ವಾಗಲಿದೆ ಎಂದು ಮಾಧ್ಯಮದ ಮುಂದೆ ಸಂತೋಷದಿಂದ ತಿಳಿಸಿದರು.

More from the blog

ಅಕ್ರಮ ಮಸೀದಿ ನಿರ್ಮಾಣ ಆರೋಪ: ಕರಿಯಂಗಳ ಗ್ರಾ.ಪಂ.ಗೆ ಮುತ್ತಿಗೆ

ಬಂಟ್ವಾಳ: ಗ್ರಾಮ ಪಂಚಾಯತ್ ಅನುಮತಿ ಇಲ್ಲದೆ ಅಕ್ರಮವಾಗಿ ಸರಕಾರಿ ಜಾಗದಲ್ಲಿ ಕಟ್ಟಡ ನಿರ್ಮಿಸಿ ಅದರಲ್ಲಿ ಮದರಸ ಮಾಡಲು ಮುಂದಾಗಿದ್ದರೆ ಎಂದು ಆರೋಪಿಸಿದ ಗ್ರಾಮಸ್ಥರು ಇದನ್ನು ತಡೆಯುವಂತೆ ಗ್ರಾಮ ಪಂಚಾಯತ್ ಗೆ ಮುತ್ತಿಗೆ ಹಾಕಿದ...

ಪುರಸಭೆ ಎಡವಿದೆಲ್ಲಿ? ಬ್ಯಾನರ್ ವಿವಾದ!

ಬಂಟ್ವಾಳ: ಬಂಟ್ವಾಳ ಪುರಸಭೆ ನಿಯಮ ಉಲ್ಲಂಘಿಸಿ ಹಾಕಲಾದ ಫ್ಲೆಕ್ಸ್ ತೆರವು ಕಾರ್ಯಾಚರಣೆಯನ್ನು ತಡವಾಗಿ ಪ್ರಾರಂಭಿಸಿದೆ. ಜನವರಿ 29ರಂದು ಪುರಸಭೆಯ ಸಾಮಾನ್ಯ ಸಭೆಯಲ್ಲಿ ಈ ಕುರಿತು ಪುರಸಭೆಯ ಮುಖ್ಯಾಧಿಕಾರಿ ತೆರವು ಕಾರ್ಯಾಚರಣೆ ನಡೆಸುವುದಾಗಿ ಘೋಷಿಸಿ,...

ಸರಕಾರಿಯೋ, ತಾ.ಪಂ.ಗೆ ಸೇರಿದ ಜಾಗವೋ? ಇದೊಂದು ಬೇಲಿಯ ಕಥೆ!

ಬಂಟ್ವಾಳ: ತಾ.ಪಂ.ಅಧಿಕಾರಿ ವರ್ಗ ಕಚೇರಿ ಮುಂಭಾಗದ ಜಾಗಕ್ಕೆ ಕಬ್ಬಿಣದ ರಾಡ್ ಗಳ ಮೂಲಕ ಬೇಲಿ ಹಾಕಿದ್ದು, ಇದಿಗ ಈ ಜಾಗವು ಸರಕಾರಿ ಯೋ, ಅಥವಾ ತಾಲೂಕು ಪಂಚಾಯತ್ ಗೆ ಸೇರಿದ್ದೊ ಎಂಬ ಚರ್ಚೆಗೆ...

ಮನೆಗೆ ಬೆಂಕಿ

ಬಡಕಬೈಲ್: ಗೋಣಿ ಚೀಲ ವ್ಯಾಪಾರಿ ಮೋನಾಕ ಎಂಬವರ ಮನೆಗೆ ಆಕಸ್ಮಿಕಾ ಬೆಂಕಿ ಅನಾಹುತ. ಯಾವುದೇ ಸಾವು-ನೋವು ಸಂಭವಿಸಿಲ್ಲ. ತಡರಾತ್ರಿ ಘಟನೆ ಬೆಂಕಿ‌ ನಂದಿಸಲು ಅಗ್ನಿ ಶಾಮಕದಳ ಹರಸಾಹಸ ಶಾರ್ಟ್ ಸರ್ಕ್ಯೂಟ್ ಎನ್ನಲಾಗುತ್ತಿದೆ. ಘಟನಾ ಸ್ಥಳಕ್ಕೆ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು...