Wednesday, June 25, 2025

ಕಲ್ಲೇಗ ಟೈಗರ್ಸ್‌ ಮುಖ್ಯಸ್ಥ ಅಕ್ಷಯ್‌ ಕಲ್ಲೇಗ ಹತ್ಯೆಗೆ ಪ್ರತೀಕಾರಕ್ಕೆ ಸ್ಕೆಚ್‌ ​: ನಾಲ್ವರು ವಶಕ್ಕೆ

ಪುತ್ತೂರು: ಕಲ್ಲೇಗ ಟೈಗರ್ಸ್ ಹುಲಿ ವೇಷ ತಂಡದ ಮುಖ್ಯಸ್ಥ ಅಕ್ಷಯ್ ಕಲ್ಲೇಗ ಕೊಲೆಗೆ ಪ್ರತಿಕಾರ ತಿರಿಸಿಕೊಳ್ಳುವ ಸಲುಹುವಾಗಿ ಪ್ಲ್ಯಾನ್ ಮಾಡಿದ್ದ ನಾಲ್ವರನ್ನು ಪುತ್ತೂರು ನಗರ ಠಾಣೆ ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಬಂಟ್ವಾಳ ನಿವಾಸಿ ಕಿಶೋರ್‌ ಕಲ್ಲಡ್ಕ, ಪುತ್ತೂರಿನ ಮನೋಜ್‌, ಆಶಿಕ್‌ ಹಾಗೂ ಸನತ್‌ ಕುಮಾರ್‌ ಎಂಬುವವರು ಬಂಧಿತರು.

ಅಕ್ಷಯ್ ಕಲ್ಲೇಗ ಕೊಲೆಗೆ ಪ್ರತಿಕಾರ ತಿರಿಸಿಕೊಳ್ಳಲು ಹತ್ಯೆಯ ಆರೋಪಿ ಮನೀಶ್ ಸಹೋದರ ಮನೋಜ್​ ಎಂಬವವರಿಗೆ ಬೆದರಿಕೆ ಕರೆ ಮಾಡಿದ್ದರು. ಈ ಹಿನ್ನಲೆ ಮನೋಜ್ ಪುತ್ತೂರು ನಗರ ಠಾಣೆಗೆ ದೂರು ನೀಡಿದ್ದರು.

‘ನಿನ್ನ ತಮ್ಮ ಮನೀಶ್ ಹಾಗೂ ಉಳಿದ ಆರೋಪಿಗಳು ಜೈಲಿನಿದ್ದಾರೆ. ಆದ್ರೆ, ನಿನ್ನನ್ನ ಬಿಡಲ್ಲ ಎಂದು ಫೋನ್ ಕರೆ ಮಾಡಿದ್ದರು. ಬಳಿಕ ಮನೋಜ್ ಚಲನವಲನವನ್ನ ದುಷ್ಕರ್ಮಿಗಳ ತಂಡ ಗಮನಿಸುತ್ತಿದ್ದರು. ಅದರಂತೆ ಪುತ್ತೂರಿನ ಮುಕ್ರಂಪಾಡಿಯಲ್ಲಿ ಕಾರಿನಲ್ಲಿ ನಾಲ್ವರು ದುಷ್ಕರ್ಮಿಗಳ ತಂಡ ತಲ್ವಾರ್ ಸಹಿತ ಅವಿತ್ತಿದ್ದರು. ಸದ್ಯ ಕಾರು, ತಲ್ವಾರ್ ಸಹಿತ ಆರೋಪಿಗಳನ್ನು ವಶಕ್ಕೆ ಪಡೆದ ಪೊಲೀಸರು, ಆರ್ಮ್ಸ್ ಆ್ಯಕ್ಟ್ ಅಡಿ‌ ಪ್ರಕರಣ ದಾಖಲು ಮಾಡಿದ್ದಾರೆ.

More from the blog

Bantwal Police :ಜೂನ್ 26 ರಂದು ” ಮಾದಕ ದ್ರವ್ಯ ಮುಕ್ತ ಸಮಾಜಕ್ಕಾಗಿ ” ಅಭಿಯಾನ 2025 ಕಾರ್ಯಕ್ರಮ

ಬಂಟ್ವಾಳ: ದ.ಕ.ಜಿಲ್ಲಾ ಪೋಲೀಸ್ ಇಲಾಖೆ ಹಾಗೂ ಬಂಟ್ವಾಳ ವೃತ್ತದ ಪೋಲೀಸ್ ಇಲಾಖೆಯ ವತಿಯಿಂದ ಬಿಸಿರೋಡಿನಲ್ಲಿ ಜೂನ್ 26 ರಂದು " ಮಾದಕ ದ್ರವ್ಯ ಮುಕ್ತ ಸಮಾಜಕ್ಕಾಗಿ " ಅಭಿಯಾನ 2025 ಕಾರ್ಯಕ್ರಮ ನಡೆಯಲಿದೆ...

ಸ್ಕೂಟರ್ ಹಾಗೂ ಲಾರಿ ನಡುವೆ ಅಪಘಾತ: ಸ್ಕೂಟರ್ ಸವಾರ ಸಾವು

ಬಂಟ್ವಾಳ: ದ್ವಿಚಕ್ರವಾಹನ ಮತ್ತು ಲಾರಿ ನಡುವೆ ನಡೆದ ಅಪಘಾತದಲ್ಲಿ ಸ್ಕೂಟರ್ ಸವಾರ ಸ್ಥಳದಲ್ಲಿಯೇ ಮೃತಪಟ್ಟ ಘಟನೆ ಬಂಟ್ವಾಳ ‌ತಾಲೂಕಿನ ಫರಂಗಿಪೇಟೆ ಸಮೀಪದ ಹತ್ತನೇ ಮೈಲುಕಲ್ಲು ಎಂಬಲ್ಲಿ ನಡೆದಿದೆ. ಬೆಳ್ತಂಗಡಿ ತಾಲೂಕಿನ ಪುತ್ತಿಲ ಗ್ರಾಮದ ಕಳೆಂಜಬೈಲು...

ದೆಹಲಿ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮ : ಮೈ ಭಾರತ್ ನ ಯುವ ರಾಯಭಾರಿಯಾಗಿ ಶ್ರೀಕಾಂತ್ ಪೂಜಾರಿ‌ ಆಯ್ಕೆ

ಪುತ್ತೂರು: ಈ ಬಾರಿ ದೆಹಲಿಯಲ್ಲಿ ನಡೆಯುವ ಸ್ವಾತಂತ್ರೋತ್ಸವ ಕಾರ್ಯಕ್ರಮ ದಲ್ಲಿ ಮೈ ಭಾರತ್ ನವದೆಹಲಿಯ ಮೈ ಭಾರತ್ ನ ಯುವ ರಾಯಭಾರಿಯಾಗಿ ಪಾಲ್ಗೊಳ್ಳಲು ದಕ್ಷಿಣ ಜಿಲ್ಲೆಯ ಪುತ್ತೂರು ತಾಲ್ಲೂಕಿನ ಶ್ರೀಕಾಂತ್ ಪೂಜಾರಿ ಬಿರಾವು...

ಜಿಲ್ಲಾಧಿಕಾರಿ ಮುಲ್ಲೈ ಮುಹಿಲನ್ ವರ್ಗಾವಣೆ

ಬಂಟ್ವಾಳ: ಮಂಗಳೂರು ಜಿಲ್ಲಾಧಿಕಾರಿಯಾಗಿ ದರ್ಶನ್ ಎಚ್.ವಿ.ಅವರನ್ನು ನೇಮಕಗೊಳಿಸಿ ಸರಕಾರ ಅದೇಶ ಹೊರಡಿಸಿದೆ. ಮಕ್ಕಳ ಪ್ರಿಯರಾದ ಮಂಗಳೂರು ಜಿಲ್ಲಾಧಿಕಾರಿ ಮುಲ್ಲೈ ಮುಹಿಲನ್ ಅವರನ್ನು ಬೆಂಗಳೂರಿಗೆ ವರ್ಗಾವಣೆ ಮಾಡಿದ್ದಾರೆ.