Thursday, July 10, 2025

ಅಳಿಕೆ: ವಾರ್ಷಿಕೋತ್ಸವ, ಗೆಜ್ಜೆ ಪ್ರದಾನ

ಅಳಿಕೆ: ಶ್ರೀ ಸ್ಕಂದ ಬಾಲಕಲಾ ವೃಂದ ಇದರ ದ್ವಿತೀಯ ವಾರ್ಷಿಕೋತ್ಸವ ಹಾಗೂ ಯಕ್ಷಗಾನ ತರಬೇತಿ ಪಡೆದ ಬಾಲ ಕಲಾವಿದರಿಗೆ ಗೆಜ್ಜೆ ಪ್ರದಾನ ಹಾಗೂ ರಂಗಪ್ರವೇಶ ಕಾರ್ಯಕ್ರಮವು ಸುದರ್ಶನ ವಿಜಯ-ಗಜೆಂದ್ರ ಮೊಕ್ಷ ಯಕ್ಷಗಾನದೊಂದಿಗೆ ಅಳಿಕೆ ಚೆಂಡುಕಳ ಗಣೇಶೋತ್ಸವ ಸಮಿತಿ ಸಭಾಂಗಣದಲ್ಲಿ ನಡೆಯಿತು.
ಈ ಸಂದರ್ಭದಲ್ಲಿ ನಡೆದ ಸಭಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಲಾವೃಂದದ ಗೌರವ ಸಲಹೆಗಾರ ಪೂವಪ್ಪ ಶೆಟ್ಟಿ ಅಳಿಕೆ ಅಧ್ಯಕ್ಷತೆಯಲ್ಲಿ ನಡೆಯಿತು. ಅಳಿಕೆ ಶ್ರೀಸತ್ಯಸಾಯಿ ಲೋಕಸೇವಾ ವಿದ್ಯಾಸಂಸ್ಥೆಯ ಹಿರಿಯ ವಿಜ್ಞಾನ ಅಧ್ಯಾಪಕ ರತ್ನಾಕರ ರೈ, ಅಳಿಕೆ ಗ್ರಾಮ ಪಂಚಾಯತ್ ಅಧ್ಯಕ್ಷ ಪದ್ಮನಾಭ ಪೂಜಾರಿ ಸಣ್ಣಗುತ್ತು, ಗಣೇಶೋತ್ಸವ ಸಮಿತಿಯ ಕಿರಣ್ ಪ್ರಸಾದ್ ರೈ, ಡಾ.ರಮೇಶ್.ಬಿ., ಹಿರಿಯ ಯಕ್ಷಗಾನ ಕಲಾವಿದ ಉಮೇಶ್ ಶೆಟ್ಟಿ ಉಬರಡ್ಕ, ಒಡಿಯೂರು ಜೈ ಗುರುದೇವ್ ಕಲಾಕೇಂದ್ರದ ಸಂಚಾಲಕ ಸಂತೋಷ್ ಭಂಡಾರಿ ಒಡಿಯೂರು ಅತಿಥಿಗಳಾಗಿ ಭಾಗವಹಿಸಿದರು. ಕಾರ್ಯಕ್ರಮದಲ್ಲಿ ನಾಟ್ಯ ಗುರು ಗಣೇಶ ಆಚಾರ್ಯ ಕೊಂದಲಕೋಡಿ ಅವರಿಗೆ ವಿಧ್ಯಾರ್ಥಿಗಳಿಂದ ಗುರುವಂದನೆ ನಡೆಯಿತು. ಡಾಕ್ಟರೇಟ್ ಪದವಿ ಪುರಸ್ಕೃತ ಪ್ರಾಧ್ಯಾಪಕ ಡಾ.ರಮೇಶ್.ಬಿ. ಅವರನ್ನು ಸನ್ಮಾನಿಸಲಾಯಿತು. ಸಮಿತಿಯ ನಿರ್ವಾಹಕಿ ಅಂಗನವಾಡಿ ಶಿಕ್ಷಕಿಯಾಗಿದ್ದು, ಮೇಲ್ವಿಚಾರಕಿಯಾಗಿ ಭಡ್ತಿ ಹೊಂದಿದ ಲೀಲಾವತಿ ರಾಮಗೌಡರವರನ್ನು ಗೌರವಿಸಲಾಯಿತು.
ಸಮಿತಿಯ ಸಂಚಾಲಕ ಸದಾಶಿವ ಅಳಿಕೆ ಪ್ರಸ್ತಾವನೆಗೈದರು. ಸಹಸಂಚಾಲಕ ವಿಜಯಶಂಕರ ಆಳ್ವ ಸ್ವಾಗತಿಸಿದರು. ಸಹ ಸಂಚಾಲಕ ಚಂದ್ರಹಾಸ ಶೆಟ್ಟಿ ಪುಳಿತ್ತಡಿ ವಂದಿಸಿದರು.

More from the blog

ರಾಜ್ಯದ ಜಿಲ್ಲಾ ಆಸ್ಪತ್ರೆಗಳಲ್ಲಿ ಗ್ರಂಥಾಲಯ ಸ್ಥಾಪನೆಗೆ ಸೂಕ್ತ ಕ್ರಮ – ದಿನೇಶ್ ಗುಂಡೂರಾವ್.. 

ಮಂಗಳೂರು : ರಾಜ್ಯದ ಜಿಲ್ಲಾ ಆಸ್ಪತ್ರೆಗಳಲ್ಲಿ ಗ್ರಂಥಾಲಯ ಸ್ಥಾಪನೆಗೆ ಸೂಕ್ತ ಕ್ರಮ ಕೈ ಗೊಳ್ಳಲಾಗುವುದುಎಂದು ಅರೋಗ್ಯ ಹಾಗೂ ಕುಟುಂಬ ಕಲ್ಯಾಣ ಇಲಾಖೆ ಸಚಿವ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ. ಅವರು...

ಕಾರ್ಮಿಕರ ಅಖಿಲ ಭಾರತ ಮುಷ್ಕರದ ಅಂಗವಾಗಿ ಕಾರ್ಮಿಕರ ಪ್ರತಿಭಟನೆ..

ಬಂಟ್ವಾಳ : ಕಾರ್ಮಿಕ ಕಾಯ್ದೆಗಳ ತಿದ್ದುಪಡಿ ವಿರೋಧಿಸಿ ಹಾಗೂ ಕೇಂದ್ರ ಸರಕಾರದ ಕಾರ್ಮಿಕ ವಿರೋಧಿ ನೀತಿಗಳನ್ನು ವಿರೋಧಿಸಿ ಕಾರ್ಮಿಕ ಸಂಘಟನೆಗಳಿಂದ ಅಖಿಲ ಭಾರತ ಮುಷ್ಕರದ ದ ಅಂಗವಾಗಿ ಜೆ.ಸಿ.ಟಿ.ಯು ಮತ್ತು ಸಂಯುಕ್ತ ಹೋರಾಟ...

ಭಾರೀ ಮಳೆ ಮುನ್ಸೂಚನೆ : ಒಂದು ವಾರ ಕರ್ನಾಟಕದ ಕರಾವಳಿ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್..

ಮಂಗಳೂರು : ರಾಜ್ಯದ ಕರಾವಳಿ ಹಾಗೂ ಮಲೆನಾಡು ಜಿಲ್ಲೆಗಳಲ್ಲಿ ಇಂದಿನಿಂದ ಜುಲೈ 14ರವರೆಗೆ ಭಾರಿ ಮಳೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಶಿವಮೊಗ್ಗ, ಚಿಕ್ಕಮಗಳೂರು,...

ಕುಡ್ತಮುಗೇರು: ಬಸ್ಸಿನಿಂದ ರಸ್ತೆಗೆ ಬಿದ್ದ ವ್ಯಕ್ತಿ ಚಿಕಿತ್ಸೆ ಫಲಕಾರಿಯಾಗದೆ ಸಾವು 

ವಿಟ್ಲ: ಖಾಸಗಿ ಬಸ್ಸಿನಿಂದ ಬಿದ್ದ ವ್ಯಕ್ತಿಯೋರ್ವರು ಚಿಕಿತ್ಸೆಗೆ ಸ್ಪಂಧಿಸದೆ ಆಸ್ಪತ್ರೆಯಲ್ಲಿ ಮೃತಪಟ್ಟ ಘಟನೆ ಕುಡ್ತಮುಗೇರು ಎಂಬಲ್ಲಿ ನಡೆದಿದೆ. ಬಂಟ್ವಾಳ ತಾಲೂಕು ಕೊಳ್ನಾಡು ಗ್ರಾಮದ ಕೊಡಂಗೆ ನಿವಾಸಿ ಚಿದಾನಂದ ರೈ (43 ವ.) ಮೃತಪಟ್ಟವರು. ಜು.7ರಂದು ಬೆಳಗ್ಗೆ...