Thursday, June 26, 2025

’ಧಾರ್ಮಿಕತೆಯಲ್ಲಿ ವೈಜ್ಞಾನಿಕ ವಿಚಾರಗಳು ಅಡಗಿದೆ’- ಕಣಿಯೂರು ಶ್ರೀ

ವಿಟ್ಲ: ಹಿಂದಿನ ಕಾಲದಲ್ಲಿ ತಪಸ್ಸಿನ ಮೂಲಕ ಪಡೆಯುತ್ತಿದ್ದ ದೇವರ ಅನುಗ್ರಹ ಇಂದು ಭಜನೆಯಿಂದ ಲಭಿಸುತ್ತದೆ. ಭಕ್ತಿ ಭಾವದ ಮೂಲಕ ದೇವರ ಆರಾಧನೆ ಮಾಡಬೇಕು. ಧಾರ್ಮಿಕತೆಯಲ್ಲಿ ವೈಜ್ಞಾನಿಕ ವಿಚಾರಗಳು ಅಡಗಿದ್ದು, ಮುಂದಿನ ಜನಾಂಗಕ್ಕೆ ನೀಡುವ ಕಾರ್‍ಯವಾಗಬೇಕು ಎಂದು ಕನ್ಯಾನ ಕಣಿಯೂರು ಶ್ರೀ ಚಾಮುಂಡೇಶ್ವರಿ ಕ್ಷೇತ್ರದ ಶ್ರೀ ಮಹಾಬಲ ಸ್ವಾಮೀಜಿ ಹೇಳಿದರು.
ಅವರು ಶನಿವಾರ ರಾತ್ರಿ ಅಳಿಕೆ ಕಲ್ಲೆಂಚಿಪಾದೆ ಶ್ರೀ ಮಹಾದೇವಿ ಭಜನಾ ಮಂಡಳಿಯ ಶ್ರೀ ಮಹಾದೇವಿ ಭಜನಾ ಮಂದಿರದ ಸುವರ್ಣ ಮಹೋತ್ಸವ ಸಮಾರಂಭದ ಧಾರ್‍ಮಿಕ ಸಭೆಯಲ್ಲಿ ಆಶೀರ್ವಚನ ನೀಡಿದರು.
ಬಾಳೆಕೋಡಿ ಶ್ರೀ ಶಿಲಾಂಜನ ಕ್ಷೇತ್ರದ ಶ್ರೀ ಡಾ. ಶಶಿಕಾಂತಮಣಿ ಸ್ವಾಮೀಜಿ ಆಶೀರ್ವಚನ ನೀಡಿ ಭಜನೆಯ ಮೂಲಕ ಸಂಘಟನೆ ಮಾಡಲು ಸಾಧ್ಯವಿದೆ. ಒಂದೇ ರೀತಿಯ ಭಾವನೆ ಚಿಂತನೆ ಇದ್ದಾಗ ಕಾರ್‍ಯದಲ್ಲಿ ಪರಿಪೂರ್ಣತೆ ಇರುತ್ತದೆ ಎಂದು ಹೇಳಿದರು.
ತಾರಾನಾಥ ಕೊಟ್ಟಾರಿ ಪರಂಗಿಪೇಟೆ ಮಾತನಾಡಿ ಸಾತ್ವಿಕ ಮನಸ್ಸು ಇದ್ದಾಗ ಸಮಾಜದಲ್ಲಿ ಪರಿವರ್ತನೆ ಮಾಡಬಹುದು. ನಾಯಕತ್ವ ಇದ್ದಾಗ ಸಂಘಟನೆಗಳು ಮುಂಚೂಣಿಯಲ್ಲಿರುತ್ತವೆ. ಕಾರ್ಯಕರ್ತರ ಪರಿಶ್ರಮ ಇದ್ದಾಗ ಕಾರ್ಯಕ್ರಮ ಯಶಸ್ವಿಯಾಗುತ್ತದೆ ಎಂದು ತಿಳಿಸಿದರು.
ಇದೇ ಸಂದರ್ಭದಲ್ಲಿ ನಾನಾ ಕ್ಷೇತ್ರಗಳಲ್ಲಿ ಸಾಧನೆಗೈದ ಎಂ. ಡಿ. ಮಾಯಿಲ ಮಂಚಿ, ಅಮ್ಮಣ್ಣ ಅಳಕೆಮಜಲು, ನಂದಿತಾ ಅವರನ್ನು ಸನ್ಮಾನಿಸಲಾಯಿತು. ಭಜನಾ ಮಂದಿರ ನಿರ್‍ಮಾಣಕ್ಕೆ ನೆರವಾದವರನ್ನು ಗೌರವಿಸಲಾಯಿತು.
ಸಮಾರಂಭದ ಅಧ್ಯಕ್ಷತೆಯನ್ನು ಕಲ್ಲೆಂಚಿಪಾದೆ ಶ್ರೀ ಮಹಾದೇವಿ ಭಜನಾ ಮಂಡಳಿ ಗೌರವಾಧ್ಯಕ್ಷ ಕಾನ ಈಶ್ವರ ಭಟ್ ವಹಿಸಿದ್ದರು. ಮಾಣಿ ಕರ್ನಾಟಕ ಪ್ರೌಢಶಾಲೆ ದೈಹಿಕ ಶಿಕ್ಷಣ ಶಿಕ್ಷಕ ಗಂಗಾಧರ ರೈ ಮಾಣಿ, ಕೆಎಸ್‌ಆರ್‌ಟಿಸಿ ಹೆಡ್ ಆರ್ಟಿಷಿಯನ್ ದಿನೇಶ್ ಎ. ಕಾನತ್ತಡ್ಕ, ಯಶೋಧರ ಬಂಗೇರ, ಎಂ. ಡಿ. ವೆಂಕಪ್ಪ ಮತ್ತಿತರರು ಉಪಸ್ಥಿತರಿದ್ದರು.
ಮೋಕ್ಷಿತಾ, ಆಷಿತಾ ಪ್ರಾರ್ಥಿಸಿದರು. ರಾಮ ಜಿ. ಎನ್. ಸ್ವಾಗತಿಸಿದರು. ಚೆನ್ನಪ್ಪ ಪಿ. ಅಳಿಕೆ ಪ್ರಸ್ತಾವನೆಗೈದರು. ಆನಂದ, ಲಲಿತಾ ಸನ್ಮಾನ ಪತ್ರ ಓದಿದರು. ಆನಂದ ಜಿ. ವಂದಿಸಿದರು. ಜಯರಾಮ ಪಡ್ರೆ ಕಾರ್‍ಯಕ್ರಮ ನಿರೂಪಿಸಿದರು.

More from the blog

School Holiday : ಭಾರೀ ಮಳೆ ಮುನ್ಸೂಚನೆ : ನಾಳೆ ಬೆಳ್ತಂಗಡಿ ತಾಲೂಕಿನ ಶಾಲೆಗಳಿಗೆ ರಜೆ..

ಬೆಳ್ತಂಗಡಿ: ತಾಲೂಕಿನಾದ್ಯಂತ ಸುರಿಯುತ್ತಿರುವ ಧಾರಾಕಾರ ಮಳೆಯ ಹಿನ್ನಲೆ ಬೆಳ್ತಂಗಡಿ ತಾಲೂಕಿನ ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆ, ಖಾಸಗಿ ವಿದ್ಯಾಸಂಸ್ಥೆಗಳಿಗೆ ಜೂನ್ 26ರಂದು ರಜೆ ಘೋಷಣೆ ಮಾಡಲಾಗಿದೆ. ಮುಂಜಾಗೃತ ಕ್ರಮವಾಗಿ ತಹಶೀಲ್ದಾರ್ ರವರ ತಾಲೂಕು ವಿಪತ್ತು...

Bantwal Police :ಜೂನ್ 26 ರಂದು ” ಮಾದಕ ದ್ರವ್ಯ ಮುಕ್ತ ಸಮಾಜಕ್ಕಾಗಿ ” ಅಭಿಯಾನ 2025 ಕಾರ್ಯಕ್ರಮ

ಬಂಟ್ವಾಳ: ದ.ಕ.ಜಿಲ್ಲಾ ಪೋಲೀಸ್ ಇಲಾಖೆ ಹಾಗೂ ಬಂಟ್ವಾಳ ವೃತ್ತದ ಪೋಲೀಸ್ ಇಲಾಖೆಯ ವತಿಯಿಂದ ಬಿಸಿರೋಡಿನಲ್ಲಿ ಜೂನ್ 26 ರಂದು " ಮಾದಕ ದ್ರವ್ಯ ಮುಕ್ತ ಸಮಾಜಕ್ಕಾಗಿ " ಅಭಿಯಾನ 2025 ಕಾರ್ಯಕ್ರಮ ನಡೆಯಲಿದೆ...

Kalladka : ಕಲ್ಲಡ್ಕ ಪ್ಲೈ ಓವರ್ ಸಂಪೂರ್ಣವಾಗಿ ಸಂಚಾರಕ್ಕೆ ಮುಕ್ತ..

ಬಂಟ್ವಾಳ : ಬಂಟ್ವಾಳ ತಾಲೂಕಿನ ಕಲ್ಲಡ್ಕದ ಪ್ಲೈ ಓವರ್ ಚತುಷ್ಪಥ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಬಿಸಿರೋಡು - ಅಡ್ಡಹೊಳೆ ಅತೀ ಉದ್ದದ ಪ್ಲೈ ಓವರ್ ಸಂಪೂರ್ಣವಾಗಿ ಸಂಚಾರಕ್ಕೆ ಮುಕ್ತವಾಗಿದೆ. ಕಳೆದ 25 ದಿನಗಳ ಹಿಂದೆ...

ಇಡ್ಕಿದು ಗ್ರಾ. ಪಂ ಸಭಾಂಗಣದಲ್ಲಿ ರಾಜಕೀಯ ಸಭೆ ನಡೆಸಲು ಅನುಮತಿ ವಿಚಾರ : ಪಿಡಿಒ ಅಮಾನತು

ವಿಟ್ಲ: ಬಂಟ್ವಾಳ ತಾಲೂಕು ಇಡ್ಕಿದು ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ರಾಜಕೀಯ ಸಭೆ ನಡೆಸಲು ಅವಕಾಶ ನೀಡಿದ‌ ಆರೋಪದ ಹಿನ್ನೆಲೆ ಯಲ್ಲಿ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಗೋಕುಲ್ ದಾಸ್ ಭಕ್ತ ರವರನ್ನು ಅಮಾನತು...