Tuesday, July 15, 2025

ಅಳಿಕೆ: ಪ್ರತಿಭಾ ಪುರಸ್ಕಾರ ಮತ್ತು ಸನ್ಮಾನ ಸಮಾರಂಭ

ವಿಟ್ಲ: ಅಳಿಕೆ ಶ್ರೀ ಸತ್ಯಸಾಯಿ ಲೋಕಸೇವಾ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಪ್ರತಿಭಾ ಪುರಸ್ಕಾರ ಮತ್ತು ಸನ್ಮಾನ ಸಮಾರಂಭ ನಡೆಯಿತು.
ಸುಮಾರು 40 ವರ್ಷಗಳಷ್ಟು ಅಧ್ಯಾಪಕ ವೃತ್ತಿಯಲ್ಲಿ ತೊಡಗಿಸಿಕೊಂಡು 10 ವರ್ಷಗಳ ಕಾಲ ಈ ಶಾಲೆಯಲ್ಲಿ ಸೇವೆಗೈದ ಎಂ. ಗೋಪಾಲಕೃಷ್ಣ ಭಟ್ ಅವರನ್ನು ಸನ್ಮಾನಿಸಲಾಯಿತು. ಶ್ರೀ ಸತ್ಯಸಾಯಿ ಲೋಕಸೇವಾ ಟ್ರಸ್ಟ್, ಶಾಲಾಭಿವೃದ್ದಿ ಸಮಿತಿ, ಶಿಕ್ಷಕ ವೃಂದ ಮತ್ತು ಮಕ್ಕಳ ವತಿಯಿಂದ ಸಂಸ್ಥೆಯ ಅಧ್ಯಕ್ಷರಾದ ಯು. ಗಂಗಾಧರ ಭಟ್‌ರವರು ಸನ್ಮಾನಿಸಿ ಶುಭ ಹಾರೈಸಿದರು.
ಮುಖ್ಯ ಅತಿಥಿಗಳಾದ ಭಾರತ ಸೇವಾಶ್ರಮ ಕನ್ಯಾನ ಇದರ ಕಾರ್‍ಯದರ್ಶಿ ಯಸ್. ಈಶ್ವರ ಭಟ್‌ರವರು ಯಾವುದೇ ಪ್ರಶಸ್ತಿಗಿಂತಲೂ ಶಿಷ್ಯ ವೃಂದ ಗುರುಗಳ ಮೇಲೆ ಇಟ್ಟ ಪ್ರೀತಿಯೇ ಶ್ರೇಷ್ಠ ಪ್ರಶಸ್ತಿ ಎಂದರು.
ಸಭೆಯಲ್ಲಿ ಕಾನ ಈಶ್ವರ ಭಟ್ ಹಾಗೂ ವಿಟ್ಲ ವಲಯದ ಶಿಕ್ಷಣ ಸಂಯೋಜಕಿಯಾದ ಪುಷ್ಪಾ ಭಾಗವಹಿಸಿದ್ದರು. ಶಿಕ್ಷಕರಾದ ವೇಣುಗೋಪಾಲ ಶೆಟ್ಟಿಯವರು ಸನ್ಮಾನಿತರ ಬಗ್ಗೆ ಅಭಿನಂದನಾ ಭಾಷಣ ಮಾಡಿದರು. ಸಂಸ್ಥೆಯ ಆಡಳಿತಾಧಿಕಾರಿ ಮತ್ತು ಶಾಲಾಭಿವೃದ್ಧಿ ಸಮಿತಿಯ ಅಧ್ಯಕ್ಷರಾದ ಎಸ್. ಜನಾರ್ದನ ನಾಯಕ್ ಸನ್ಮಾನ ಪತ್ರ ವಾಚಿಸಿದರು. ಸಂಚಾಲಕರಾದ ಕೆ.ಯಸ್. ಕೃಷ್ಣ ಭಟ್, ಕಾರ್‍ಯದರ್ಶಿಗಳಾದ ಎಸ್. ಚಂದ್ರಶೇಖರ ಭಟ್ ಉಪಸ್ಥಿತರಿದ್ದರು.
ನಿವೃತ್ತ ಮುಖ್ಯ ಶಿಕ್ಷಕರಾದ ಯಂ. ರುಕ್ಮಯ್ಯ ಗೌಡ ಸ್ವಾಗತಿಸಿದರು. ಮುಖ್ಯ ಶಿಕ್ಷಕ ಈಶ್ವರ ನಾಯ್ಕ್ ಎಸ್. ರವರು ಶಾಲಾ ವರದಿ ವಾಚಿಸಿ, ವಂದಿಸಿದರು. ದೈಹಿಕ ಶಿಕ್ಷಣ ಶಿಕ್ಷಕ ರಾಜೇಂದ್ರ ರೈ. ಕಾರ್‍ಯಕ್ರಮ ನಿರೂಪಿಸಿದರು. ಮಧ್ಯಾಹ್ನ ಭೋಜನದ ಬಳಿಕ ಗೋಪಾಲಕೃಷ್ಣ ಭಟ್ ನಿರ್ದೇಶಿಸಿದ ಮಾಯಾವಿ ಇಂದ್ರಾರಿ ಎಂಬ ಯಕ್ಷಗಾನ ಮಕ್ಕಳಿಂದ ಪ್ರದರ್ಶಿಸಲ್ಪಟ್ಟಿತು.

More from the blog

ಒಡಿಯೂರು ಶ್ರೀ ಜನ್ಮದಿನೋತ್ಸವ ಸೇವಾ ಸಂಭ್ರಮದ ಅಂಗವಾಗಿ ಬೃಹತ್ ಉಚಿತ ವೈದ್ಯಕೀಯ ಶಿಬಿರ

ವಿಟ್ಲ : ನಮ್ಮ ಶಾರೀರಿಕ ಮತ್ತು ಮಾನಸಿಕ ಆರೋಗ್ಯ ಬದುಕಿನ ಉತ್ತುಂಗಕ್ಕೆ ಕಾರಣವಾಗುತ್ತದೆ. ಬದುಕು ಪೂರ್ತಿ ಆರೋಗ್ಯದ ಬಗ್ಗೆ ಕಾಳಜಿ ವಹಿಸಬೇಕು. ಋತುವಿಗನುಗುಣವಾಗಿ ಹಿತ, ಮಿತ ಆಹಾರ ಸೇವಿಸಿದಾಗ ಉತ್ತಮ ಆರೋಗ್ಯ ಪಡೆಯಬಹುದು...

ಧನಾತ್ಮಕ ಚಿಂತನೆಗಳಿಂದ ಮಾತ್ರ ಉತ್ತಮ ಕಾರ್ಯಗಳು ನಡೆಯಲು ಸಾಧ್ಯ- ಮಾಣಿಲಶ್ರೀ

ವಿಟ್ಲ: ನಮ್ಮ ಕಣ್ಣುಗಳಿಗೆ ಕಾಣದಿರುವ ಶಕ್ತಿಯೇ ದೇವರು. ದೇವರನ್ನು ಬಿಟ್ಟು ನಾವು ಯಾವ ಕಾರ್ಯವನ್ನೂ ಮಾಡಿದರೂ ನಿಷ್ಪ್ರಯೋಜಕ. ಉಸಿರು ಇದ್ದಷ್ಟು ದಿನ ಲೋಕಹಿತ ಕಾರ್ಯ ಮಾಡಬೇಕು. ಧನಾತ್ಮಕ ಚಿಂತನೆಗಳಿಂದ ಮಾತ್ರ ಉತ್ತಮ ಕಾರ್ಯಗಳು...

ನೈಸರ್ಗಿಕ ವಿಪತ್ತುಗಳಿಗೆ ಮೂಲ ಕಾರಣವೆ ಅರಣ್ಯ ನಾಶ : ಮನೋಜ್ ಮಿನೇಜಸ್ 

ಬಂಟ್ವಾಳ: ನೈಸರ್ಗಿಕ ವಿಪತ್ತುಗಳಿಗೆ  ಮೂಲ ಕಾರಣವೆ ಅರಣ್ಯನಾಶ. ಜಲ ನೆಲ ಪ್ರಾಣಿ ಸಂಕುಲಗಳು ದೇವರ ಆಸ್ತಿ ಅವುಗಳನ್ನು ಸರಿಯಾಗಿ ನಡೆಸುವ ಜವಾಬ್ದಾರಿ ನಮ್ಮದು. ಪರಿಸರ ರಕ್ಷಣೆ ನಮ್ಮೆಲ್ಲರ ಜವಾಬ್ದಾರಿ .ಕಳೆದ 5 ವರ್ಷಗಳಿಂದ...

B.C. ROAD : ಕೆಂಪುಕಲ್ಲು, ಮರಳು ಅಭಾವ : ಬಂಟ್ವಾಳ ಬಿಜೆಪಿ ವತಿಯಿಂದ ಪ್ರತಿಭಟನಾ ಸಭೆ..

ಬಂಟ್ವಾಳ: ಕೆಂಪುಕಲ್ಲು ಕಲ್ಲಿನ ರಾಜಧನವನ್ನು 40 ರೂ.ಗಳಿಂದ 280 ರೂ.ಗಳಿಗೆ ಏರಿಕೆ ಮಾಡಿರುವ ರಾಜ್ಯ ಸರಕಾರವು ಮರಳು ತೆಗೆಯುವ ಕಾನೂನನ್ನೂ ಸರಳಗೊಳಿಸದೆ ಜನರಿಗೆ ಕದಿಯಲು ಪ್ರೇರಣೆ ನೀಡುತ್ತಿದೆ. ಕೆಂಪು ಕಲ್ಲು ಹಾಗೂ ಮರಳಿನ...