Friday, June 27, 2025

ಎಸ್.ಎಸ್.ಎಲ್.ಸಿ.ಪರೀಕ್ಷೆಗೆ ಪ್ರವೇಶ ನಿರಾಕರಣೆ ಮಾಡಿದ ಖಾಸಗಿ ಶಾಲೆ: ವಿದ್ಯಾರ್ಥಿಗಳ ಭವಿಷ್ಯದ ಮೇಲೆ ಪ್ರಭಾವ

ಬಂಟ್ವಾಳ: ಶಿಕ್ಷಣದಿಂದ ವಂಚಿರಾಗಬಾರದು, ಗುಣಮಟ್ಟದ ಶಿಕ್ಷಣ ಬೇಕು ಎಂಬ ಸರಕಾರದ ಚಿಂತನೆ ಒಂದೆಡೆಯಾದರೆ, ಇನ್ನೊಂದು ಕಡೆಯಿಂದ ತಮ್ಮ ಮಕ್ಕಳಿಗೆ ಉತ್ತಮ ಶಿಕ್ಷಣ ಸಿಗಬೇಕು ಎಂಬ ಹಂಬಲ ಪೋಷಕರದ್ದು.‌
ಆದರೆ ಈ ನಡುವೆ ಉತ್ತಮ ಫಲಿತಾಂಶ ಬರಬೇಕು ಶಾಲೆಗೆ ಹೆಸರು ಬರಬೇಕು ಅ ಮೂಲಕ ವಿದ್ಯಾರ್ಥಿಗಳ ಸಂಖ್ಯೆ ಹೆಚ್ಚಾಗಬೇಕು ಎಂಬುದು ಖಾಸಗಿ ಶಿಕ್ಷಣ ಸಂಸ್ಥೆಗಳದ್ದು.
ಇದಕ್ಕೇನಪ್ಪಾ ಅಂತ ಕೇಳಿದರೆ ಇಲ್ಲಿದೆ ನೋಡಿ
ಅಲ್ಲಿಪಾದೆ ಖಾಸಗಿ ಶಾಲೆಯೊಂದರ ನಾಲ್ವರು ವಿಧ್ಯಾರ್ಥಿಗಳಿಗೆ ಇಲ್ಲಿನ ಶಿಕ್ಷಕರು ಎಸ್ .ಎಸ್.ಎಲ್. ಸಿ. ಪರೀಕ್ಷೆ ಗೆ ಪ್ರವೇಶ ನಿರಾಕರಣೆ ಮಾಡಿದ ಘಟನೆ ನಡೆದಿದೆ.
ಕಾರಣ ಇಷ್ಟೇ ಈ ನಾಲ್ವರು ವಿದ್ಯಾರ್ಥಿಗಳು ಕಲಿಕೆಯಲ್ಲಿ ಹಿಂದೆ ಉಳಿದಿದ್ದರು ಅನ್ನುವ ಕಾರಣಕ್ಕಾಗಿ ಪೋಷಕರ ಅನುಮತಿಯೊಂದಿಗೆ ಹತ್ತನೇ ತರಗತಿಯ ಪರೀಕ್ಷೆಗೆ ನೊಂದಾವಣೆಯನ್ನು ಮಾಡದೆ ವಿದ್ಯಾರ್ಥಿಗಳು ಪರೀಕ್ಷೆ ಗೆ ಹಾಜರಾಗಲು ಸಾಧ್ಯವಾಗದಂತೆ ಅಗಿದೆ.
ಕಲಿಕೆಯಲ್ಲಿ ಹಿಂದೆ ಉಳಿದಿದ್ದರಿಂದ ಈ ಶಾಲೆಯ ಫಲಿತಾಂಶ ದ ಮೇಲೆ ಪರಿಣಾಮ ಬೀಳುವ ಸಾದ್ಯತೆ ಗಳಿವೆ ಎಂಬ ಯೋಚನೆ ಈ ಶಾಲೆಯ ಕಮಿಟಿ ಯವರದ್ದಾಗಿರಬೇಕು ಎಂದು ಹೇಳಲಾಗುತ್ತಿದೆ.

ಶಾಲೆಗೆ ಬಿ.ಒ.ಪ್ರಕಾಶ್ ಬೇಟಿ: ಅಲ್ಲಿಪಾದೆ ಖಾಸಗಿ ಶಾಲೆಯಲ್ಲಿ ನಾಲ್ವರು ವಿದ್ಯಾರ್ಥಿಗಳ ಪ್ರವೇಶ ನಿರಾಕರಣೆಯ ಮಾಹಿತಿ ಪಡೆದ ಬಳಿಕ ಶಾಲೆಗೆ ಆಗಮಿಸಿದ ಕ್ಷೇತ್ರ ಶಿಕ್ಷಣಾಧಿಕಾರಿ ಪ್ರಕಾಶ್ ಅವರು ಪರಿಶೀಲನೆ ನಡೆಸಿ 24 ಗಂಟೆಯೊಳಗೆ ಸ್ಪಷ್ಟ ನೆ ನೀಡುವಂತೆ ಶಾಲೆಯವರಿಗೆ ನೋಟೀಸ್ ನೀಡಿದ್ದಾರೆ.
ಜೊತೆಗೆ ಒಂದು ವರ್ಷ ವಿದ್ಯಾರ್ಥಿಗಳ ಶಿಕ್ಷಣದ ಭವಿಷ್ಯ ದ ಮೇಲೆ ಪರಿಣಾಮ ಬೀರುತ್ತದೆ, ಹಾಗಾಗಿ ಅದಕ್ಕೆ ಬೇಕಾದ ಕ್ರಮಗಳನ್ನು ಈ ಶಾಲೆಯವರೇ ಭರಿಸಬೇಕು ಎಂದು ಹೇಳಿದ್ದಾರೆ.
ಇದೇ ರೀತಿ ಕೆಲ ವರ್ಷಗಳ ಹಿಂದೆ ಸಿದ್ದಕಟ್ಟೆ ಸರಕಾರಿ ಶಾಲೆಯೊಂದರಲ್ಲಿ ಘಟನೆ ನಡೆದು ಶಾಲಾ ಶಿಕ್ಷನೋರ್ವನ ಅಮಾನುತ ಕೂಡ ನಡೆದಿದೆ.

More from the blog

ಬಡ ಮಗುವಿನ ಚಿಕಿತ್ಸೆ ನೆರವಿಗೆ ಮುಂದಾದ ಸಿದ್ದಕಟ್ಟೆ ಪ್ರಾ. ಕೃ. ಪತ್ತಿನ ಸಹಕಾರ ಸಂಘ…

ಬಂಟ್ವಾಳ : ತಾಲೂಕಿನ ಕರ್ಪೆ ಗ್ರಾಮದ ಕುಟ್ಟಿಕಳ ನಿವಾಸಿ ಹಿರಣ್ಯಾಕ್ಷ ಶಾಂತಿ ಹಾಗೂ ಸೌಮ್ಯ ದಂಪತಿಗಳ 5 ವರ್ಷದ ಪುಟ್ಟ ಹೆಣ್ಣು ಮಗು ಮನಸ್ವಿಳಿಗೆ ಅರೋಗ್ಯದಲ್ಲಿ ರಕ್ತದ ಕ್ಯಾನ್ಸರ್ ಇರುವುದರಿಂದ ಇನ್ನೂ ಹೆಚ್ಚಿನ...

ಕರ್ನಾಟಕದ ಕರಾವಳಿ ಸೇರಿ ಹಲವೆಡೆ ಜು. 3ರವರೆಗೆ ಭಾರಿ ಮಳೆ..

ಮಂಗಳೂರು : ರಾಜ್ಯದಾದ್ಯಂತ ಮಳೆಯ ಆರ್ಭಟ ಮುಂದುವರೆದಿದೆ. ಇಂದು (ಜೂನ್ 27) ಸಹ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದ್ದು, ಹವಾಮಾನ ಇಲಾಖೆಯು ಹೈ ಅಲರ್ಟ್ ಘೋಷಿಸಿದೆ. ಕೊಡಗಿನಲ್ಲಿ ಭಾರಿ ಮಳೆಯಾಗುವ ನಿರೀಕ್ಷೆಯಿದ್ದು, ರೆಡ್...

5 ವರ್ಷದ ಮಗುವಿನ ಚಿಕಿತ್ಸೆಗೆ ಸಂಗಬೆಟ್ಟು ಗ್ರಾ. ಪಂ ವತಿಯಿಂದ ಸಹಾಯಧನದ ಚೆಕ್ ಹಸ್ತಾಂತರ.. 

ಬಂಟ್ವಾಳ : ತಾಲೂಕಿನ ಕರ್ಪೆ ಗ್ರಾಮದ ಕುಟ್ಟಿಕಳ ನಿವಾಸಿ ಹಿರಣ್ಯಾಕ್ಷ ಶಾಂತಿ ಹಾಗೂ ಸೌಮ್ಯ ದಂಪತಿಗಳ 5 ವರ್ಷದ ಪುಟ್ಟ ಹೆಣ್ಣು ಮಗು ಮನಸ್ವಿಳಿಗೆ ಅರೋಗ್ಯದಲ್ಲಿ ರಕ್ತದ ಕ್ಯಾನ್ಸರ್ ಇರುವುದರಿಂದ ಅರೋಗ್ಯದ ವೆಚ್ಚಕ್ಕಾಗಿ...

Old Bridge : ಮಂಗಳೂರು ಎನ್.ಐ.ಟಿ.ಕೆ ಸಂಸ್ಥೆ ಅಧಿಕಾರಿಗಳಿಂದ ಪಾಣೆಮಂಗಳೂರು ಹಳೆ ಸೇತುವೆಯ ಸಾಮರ್ಥ್ಯ ಪರೀಕ್ಷೆ

ಬಂಟ್ವಾಳ: ಬ್ರಿಟಿಷ್ ಕಾಲದ ಪಾಣೆಮಂಗಳೂರು ಸೇತುವೆಯ ಸಾಮರ್ಥ್ಯ ಪರೀಕ್ಷೆ ನಡೆಸುವ ಉದ್ದೇಶದಿಂದ ಮಂಗಳೂರು ಎನ್.ಐ.ಟಿ.ಕೆ ಸಂಸ್ಥೆಯಿಂದ ಇಬ್ಬರು ಅಧಿಕಾರಿಗಳು ಆಗಮಿಸಿ, ಜಿಲ್ಲಾಧಿಕಾರಿ ಅವರಿಗೆ ವರದಿ ನೀಡಿದ್ದಾರೆ. ಹಳೆ ಸೇತುವೆ ಬಗ್ಗೆ ಸ್ಥಳ ವೀಕ್ಷಣೆಗೆ ಏನ್...