Saturday, February 8, 2025

ಎಸ್.ಎಸ್.ಎಲ್.ಸಿ.ಪರೀಕ್ಷೆಗೆ ಪ್ರವೇಶ ನಿರಾಕರಣೆ ಮಾಡಿದ ಖಾಸಗಿ ಶಾಲೆ: ವಿದ್ಯಾರ್ಥಿಗಳ ಭವಿಷ್ಯದ ಮೇಲೆ ಪ್ರಭಾವ

ಬಂಟ್ವಾಳ: ಶಿಕ್ಷಣದಿಂದ ವಂಚಿರಾಗಬಾರದು, ಗುಣಮಟ್ಟದ ಶಿಕ್ಷಣ ಬೇಕು ಎಂಬ ಸರಕಾರದ ಚಿಂತನೆ ಒಂದೆಡೆಯಾದರೆ, ಇನ್ನೊಂದು ಕಡೆಯಿಂದ ತಮ್ಮ ಮಕ್ಕಳಿಗೆ ಉತ್ತಮ ಶಿಕ್ಷಣ ಸಿಗಬೇಕು ಎಂಬ ಹಂಬಲ ಪೋಷಕರದ್ದು.‌
ಆದರೆ ಈ ನಡುವೆ ಉತ್ತಮ ಫಲಿತಾಂಶ ಬರಬೇಕು ಶಾಲೆಗೆ ಹೆಸರು ಬರಬೇಕು ಅ ಮೂಲಕ ವಿದ್ಯಾರ್ಥಿಗಳ ಸಂಖ್ಯೆ ಹೆಚ್ಚಾಗಬೇಕು ಎಂಬುದು ಖಾಸಗಿ ಶಿಕ್ಷಣ ಸಂಸ್ಥೆಗಳದ್ದು.
ಇದಕ್ಕೇನಪ್ಪಾ ಅಂತ ಕೇಳಿದರೆ ಇಲ್ಲಿದೆ ನೋಡಿ
ಅಲ್ಲಿಪಾದೆ ಖಾಸಗಿ ಶಾಲೆಯೊಂದರ ನಾಲ್ವರು ವಿಧ್ಯಾರ್ಥಿಗಳಿಗೆ ಇಲ್ಲಿನ ಶಿಕ್ಷಕರು ಎಸ್ .ಎಸ್.ಎಲ್. ಸಿ. ಪರೀಕ್ಷೆ ಗೆ ಪ್ರವೇಶ ನಿರಾಕರಣೆ ಮಾಡಿದ ಘಟನೆ ನಡೆದಿದೆ.
ಕಾರಣ ಇಷ್ಟೇ ಈ ನಾಲ್ವರು ವಿದ್ಯಾರ್ಥಿಗಳು ಕಲಿಕೆಯಲ್ಲಿ ಹಿಂದೆ ಉಳಿದಿದ್ದರು ಅನ್ನುವ ಕಾರಣಕ್ಕಾಗಿ ಪೋಷಕರ ಅನುಮತಿಯೊಂದಿಗೆ ಹತ್ತನೇ ತರಗತಿಯ ಪರೀಕ್ಷೆಗೆ ನೊಂದಾವಣೆಯನ್ನು ಮಾಡದೆ ವಿದ್ಯಾರ್ಥಿಗಳು ಪರೀಕ್ಷೆ ಗೆ ಹಾಜರಾಗಲು ಸಾಧ್ಯವಾಗದಂತೆ ಅಗಿದೆ.
ಕಲಿಕೆಯಲ್ಲಿ ಹಿಂದೆ ಉಳಿದಿದ್ದರಿಂದ ಈ ಶಾಲೆಯ ಫಲಿತಾಂಶ ದ ಮೇಲೆ ಪರಿಣಾಮ ಬೀಳುವ ಸಾದ್ಯತೆ ಗಳಿವೆ ಎಂಬ ಯೋಚನೆ ಈ ಶಾಲೆಯ ಕಮಿಟಿ ಯವರದ್ದಾಗಿರಬೇಕು ಎಂದು ಹೇಳಲಾಗುತ್ತಿದೆ.

ಶಾಲೆಗೆ ಬಿ.ಒ.ಪ್ರಕಾಶ್ ಬೇಟಿ: ಅಲ್ಲಿಪಾದೆ ಖಾಸಗಿ ಶಾಲೆಯಲ್ಲಿ ನಾಲ್ವರು ವಿದ್ಯಾರ್ಥಿಗಳ ಪ್ರವೇಶ ನಿರಾಕರಣೆಯ ಮಾಹಿತಿ ಪಡೆದ ಬಳಿಕ ಶಾಲೆಗೆ ಆಗಮಿಸಿದ ಕ್ಷೇತ್ರ ಶಿಕ್ಷಣಾಧಿಕಾರಿ ಪ್ರಕಾಶ್ ಅವರು ಪರಿಶೀಲನೆ ನಡೆಸಿ 24 ಗಂಟೆಯೊಳಗೆ ಸ್ಪಷ್ಟ ನೆ ನೀಡುವಂತೆ ಶಾಲೆಯವರಿಗೆ ನೋಟೀಸ್ ನೀಡಿದ್ದಾರೆ.
ಜೊತೆಗೆ ಒಂದು ವರ್ಷ ವಿದ್ಯಾರ್ಥಿಗಳ ಶಿಕ್ಷಣದ ಭವಿಷ್ಯ ದ ಮೇಲೆ ಪರಿಣಾಮ ಬೀರುತ್ತದೆ, ಹಾಗಾಗಿ ಅದಕ್ಕೆ ಬೇಕಾದ ಕ್ರಮಗಳನ್ನು ಈ ಶಾಲೆಯವರೇ ಭರಿಸಬೇಕು ಎಂದು ಹೇಳಿದ್ದಾರೆ.
ಇದೇ ರೀತಿ ಕೆಲ ವರ್ಷಗಳ ಹಿಂದೆ ಸಿದ್ದಕಟ್ಟೆ ಸರಕಾರಿ ಶಾಲೆಯೊಂದರಲ್ಲಿ ಘಟನೆ ನಡೆದು ಶಾಲಾ ಶಿಕ್ಷನೋರ್ವನ ಅಮಾನುತ ಕೂಡ ನಡೆದಿದೆ.

More from the blog

ಅನರ್ಹ ಮತದಾರರ ಮತವನ್ನು ಚುನಾವಣಾ ಫಲಿತಾಂಶದ ಮತ ಎಣಿಕೆಗೆ ಪರಿಗಣಿಸಬಾರದು: ಉಚ್ಚ ನ್ಯಾಯಾಲಯದ ತೀರ್ಪು

ಬಂಟ್ವಾಳ: ಮಡಂತ್ಯಾ‌ರ್ ಪ್ರಾಥಮಿಕ ಸಹಕಾರಿ ಕೃಷಿ ಪತ್ತಿನ ಚುನಾವಣೆಯಲ್ಲಿ ಮತದಾನದ ಹಕ್ಕನ್ನು ಪಡೆದಿರುವ ವ್ಯಕ್ತಿಗಳ ಮತವನ್ನು ಚುನಾವಣಾ ಫಲಿತಾಂಶದ ಮತ ಎಣಿಕೆಯಲ್ಲಿ ಪರಿಗಣಿಸಬಾರದು ಎಂದು ಕರ್ನಾಟಕ ಉಚ್ಚ ನ್ಯಾಯಲಯವು ಐತಿಹಾಸಿಕ ತೀರ್ಪನ್ನು ಹೊರಡಿಸಿದೆ. ಮಡಂತ್ಯಾ‌ರ್ ಪ್ರಾಥಮಿಕ...

ಬಂಟ್ವಾಳ : ತಾಲೂಕು ಆಸ್ಪತ್ರೆಗೆ ವೈದ್ಯರನ್ನು ನೀಡಿ – ಸಚಿವ ದಿನೇಶ್ ಗುಂಡೂರಾವ್ ಗೆ ಮನವಿ

ಬಂಟ್ವಾಳ: ಸುಸಜ್ಜಿತವಾದ ಆಸ್ಪತ್ರೆಯಲ್ಲಿ ವೈದ್ಯಕೀಯ ಸೌಲಭ್ಯಗಳನ್ನು ಹೊಂದಿದೆಯಾದರೂ ರೋಗಿಗಳಿಗೆ ಚಿಕಿತ್ಸೆ ನೀಡಲು ಸರಿಯಾದ ವಿಭಾಗದಲ್ಲಿ ವೈದ್ಯರುಗಳಿಲ್ಲದೆ, ತಾಲೂಕಿನ ಬಡ ರೋಗಿಗಳಿಗೆ ತೊಂದರೆಯಾಗುತ್ತಿದ್ದು, ಕೂಡಲೇ ಸಮಸ್ಯೆ ಬಗೆಹರಿಸಲು ಸಾಮಾಜಿಕ ಕಾರ್ಯಕರ್ತ ಸಮಾದ್ ಕೈಕಂಬ ಅವರು...

ಕಣಿಯೂರು: ನುಡಿನಮನ, ಯಕ್ಷಗಾನ ತಾಳಮದ್ದಳೆ

ವಿಟ್ಲ: ಕನ್ಯಾನ ಕಣಿಯೂರು ಶ್ರೀ ಚಾಮುಂಡೇಶ್ವರಿ ದೇವಿ ಕ್ಷೇತ್ರದಲ್ಲಿ ಇತ್ತೀಚೆಗೆ ನಿಧನರಾದ ಯಕ್ಷಗಾನ ಕಲಾವಿದ, ಉಪನ್ಯಾಸಕ ಪಕಳಕುಂಜ ಶ್ಯಾಮ್ ಭಟ್, ಕೂಡ್ಲು ಗಣಪತಿ ಭಟ್ ಅವರಿಗೆ ನುಡಿ ನಮನ ಹಾಗೂ ಯಕ್ಷಗಾನ ತಾಳಮದ್ದಳೆ...

ಒಡಿಯೂರಿನಲ್ಲಿ 25ನೇ ತುಳು ಸಾಹಿತ್ಯ ಸಮ್ಮೇಳನ ಉದ್ಘಾಟನೆ

ವಿಟ್ಲ: ಒಡಿಯೂರು ರಥೋತ್ಸವ ತುಳುನಾಡ ಜಾತ್ರೆಯ ಅಂಗವಾಗಿ 25 ನೇ ವರ್ಷದ ತುಳು ಸಾಹಿತ್ಯ ಸಮ್ಮೇಳನ ಶ್ರೀ ಸಂಸ್ಥಾನದ ರಾಜಾಂಗಣದಲ್ಲಿ ನಡೆಯಿತು. ಸಮ್ಮೇಳನ ಉದ್ಘಾಟಿಸಿ ಆಶೀರ್ವಚನ ನೀಡಿದ ಶ್ರೀ ಗುರುದೇವದತ್ತ ಸಂಸ್ಥಾನದ ಶ್ರೀ ಗುರುದೇವಾನಂದ...