ಬಂಟ್ವಾಳ: ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಸಮಿತಿ ಇದರ ಆಶ್ರಯದಲ್ಲಿ ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ರವರ ಪುಣ್ಯ ತಿಥಿ ಕಾರ್ಯಕ್ರಮವನ್ನು ಕಾಂಗ್ರೆಸ್ ಕಚೇರಿಯಲ್ಲಿ ಆಚರಿಸಲಾಯಿತು. ಈ ಸಂದರ್ಭದಲ್ಲಿ ಮಾಜಿ ಸಚಿವರಾದ ಬಿ.ರಮಾನಾಥ ರೈ, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾದ ಹರೀಶ್ ಕುಮಾರ್, ಪ್ರಮುಖರಾದ ಶಶಿಧರ ಹೆಗಡೆ, ಪದ್ಮನಾಭ ನರಿಂಗಾಣ, ಸದಾಶಿವ ಉಳ್ಳಾಲ, ನವೀನ್ ಡಿ’ಸೋಜಾ, ಮೊದಲಾದವರು ಉಪಸ್ಥಿತರಿದ್ದರು.

