Friday, June 27, 2025

“ಪಾಕಿಸ್ತಾನ ಪರ ಘೋಷಣೆ ಕೂಗಿದ ಅಮೂಲ್ಯ ವಿರುದ್ಧ ಪ್ರತಿಭಟನೆ”

ಬಂಟ್ವಾಳ: ಭಯೋತ್ಪಾದಕ ಶಕ್ತಿಗಳ ಪ್ರೇರಣೆಯಿಂದ ದೇಶದೊಳಗಿರುವ ರಾಷ್ಟ್ರವಿರೋಧಿಗಳು ಪಾಕಿಸ್ತಾನಕ್ಕೆ ಜೈಕಾರ ಕೂಗುವ ಕೆಲಸ ಮಾಡುತ್ತಿದ್ದು, ಅಂತವರ ಸರಕಾರ ವಿರುದ್ಧ ಕಠಿನ ಕ್ರಮ ಜರಗಿಸುವ ಕೆಲಸ ಮಾಡಬೇಕಿದೆ ಎಂದು ಹಿಂದೂ ಜಾಗರಣಾ ವೇದಿಕೆ ಪ್ರಾಂತ್ಯ ಕಾರ್ಯದರ್ಶಿ ರಾಧಾಕೃಷ್ಣ ಅಡ್ಯ‌ಂತಾಯ ಹೇಳಿದರು.
ಬಂಟ್ವಾಳ ಹಾಗೂ ವಿಟ್ಲ ತಾಲೂಕು ಹಿಂದೂ ಜಾಗರಣಾ ವೇದಿಕೆ ಆಶ್ರಯದಲ್ಲಿ ಬಿ.ಸಿ.ರೋಡಿನ ಮಿನಿವಿಧಾನಸೌಧದ ಮುಂಂಭಾಗದಲ್ಲಿ ಸೋಮವಾರ ನಡೆದ “ಪಾಕಿಸ್ತಾನ ಪರ ಘೋಷಣೆ ಕೂಗಿದ ಅಮೂಲ್ಯ ವಿರುದ್ಧ ನಡೆದ ಪ್ರತಿಭಟನೆ” ಯಲ್ಲಿ ಅವರು ಮಾತನಾಡಿದರು. ಈ ಘಟನೆ ಕೇವಲ ಅಮೂಲ್ಯ ಎಂಬ ಯುವತಿಗೆ ಸೀಮಿತವಾಗಿಲ್ಲ, ಇದರ ಹಿಂದೆ ನಕ್ಸಲ್, ಸಿಮಿಯಂತಹಾ ದೇಶದ್ರೋಹಿಗಳ ಕೈವಾಡವಿದ್ದು ಈ ಬಗ್ಗೆ ಪೊಲೀಸ್ ಇಲಾಖೆ ಗಂಭೀರ ಕ್ರಮ ಕೈಗೊಳ್ಳಬೇಕು ಎಂದವರು ಒತ್ತಾಯಿಸಿದರು. ಅಮೂಲ್ಯ ಸಿಎಎ ವಿರುದ್ದ ನಡೆದ 20 ಪ್ರತಿಭಟನೆಗಳಲ್ಲಿ ಭಾಗವಹಿಸಿ ದೇಶ ದ್ರೋಹದ ಮಾತುಗಳನ್ನು ಆಡಿರುವುದನ್ನು ಪೊಲೀಸ್ ಇಲಾಖೆಯೇ ಖಚಿತಪಡಿಸಿದ್ದು, ದೇಶದ ಅನ್ನತಿಂದು, ನೀರು ಕುಡಿದು ದೇಶಕ್ಕೆ‌ ವಿರುದ್ದವಾಗಿ ವರ್ತಿಸುವವರನ್ನು ಸುಮ್ಮನೆ ಬಿಡಬಾರದು ಎಂದು ಅಡ್ಯಂತಾಯ ಆಗ್ರಹಿಸಿದರು.
ಹಿಂಜಾಗರಣಾ ವೇದಿಕೆಯ ಜಿಲ್ಲಾ ಸಂಪರ್ಕ ಪ್ರಮುಖ್ ನರಸಿಂಹಶೆಟ್ಟಿ ಮಾಣಿ‌ ಮಾತನಾಡಿ, ಶತ್ರು ರಾಷ್ಟ್ರ ಪಾಕಿಸ್ತಾನ ಕ್ಕೆ ಜೈಕಾರ ಹಾಕುವ ಅಮೂಲ್ಯ ಲಿಯೋನ ಳಿಗೆ ತಕ್ಕ ಶಿಕ್ಷೆಯಾಗುವ ವರೆಗೂ ಸಂಘಟನೆ ಹೋರಾಟ ನಡೆಸಲಿದ್ದು, ಅಮೂಲ್ಯ ಪ್ರಕರಣವನ್ನು ರಾಷ್ಟ್ರೀಯ ತನಿಖಾದಳಕ್ಕೆ ಒಪ್ಪಿಸಬೇಕು ಎಂದರು.


ಹಿಂದೂ ಜಾಗರಣ ವೇದಿಕೆ ಜಿಲ್ಲಾಧ್ಯಕ್ಷ ಜಗದೀಶ್ ನೆತ್ರಕೆರೆ, ವಿಟ್ಲ ಅಧ್ಯಕ್ಷ ಗಣೇಶ ಕುಲಾಲ್, ಬಂಟ್ವಾಳ ಅಧ್ಯಕ್ಷ ಚಂದ್ರ ಕಲಾಯಿ, ವಿಟ್ಲ ಸಂಪರ್ಕ ಪ್ರಮುಖ್ ರತ್ನಾಕರ್ ಶೆಟ್ಟಿ, ಪ್ರಮುಖರಾದ ಮಚ್ಚೇಂದ್ರ ಸಾಲ್ಯಾನ್, ಗ್ರಾ.ಪಂ‌.ಸದಸ್ಯ ಶೇಖರ ಶೆಟ್ಟಿ ಅಮ್ಟಾಡಿ, ರವಿ ಭಂಡಾರಿ ಕಲ್ಲಡ್ಕ ,ಯೋಗೀಶ್ ತುಂಬೆ, ವಿಶ್ವ ಹಿಂದೂ ಪರಿಷತ್ತಿನ ಪದ್ಮನಾಭ ಕಟ್ಟೆ, ಶರತ್ ಆಮೈ ಮೊದಲಾದವರು ಉಪಸ್ಥಿತರಿದ್ದರು. ಈ ಸಂದರ್ಭ ಬಂಟ್ವಾಳ ಉಪ ತಹಶೀಲ್ದಾರರ ಮೂಲಕ ಕರ್ನಾಟಕ ಸರ್ಕಾರದ ಮುಖ್ಯಮಂತ್ರಿ ಹಾಗೂ ರಾಜ್ಯಪಾಲರಿಗೆ ಮನವಿಯನ್ನು ಸಲ್ಲಿಸಲಾಯಿತು.

More from the blog

ಪಂತಡ್ಕ : ಎಸ್.ಕೆ.ಎಸ್.ಬಿ.ವಿ ವತಿಯಿಂದ ಸಮಸ್ತ ನೂರನೇ ಸ್ಥಾಪಕ ದಿನಾಚರಣೆ..

ಬಂಟ್ವಾಳ : ನೆಟ್ಲಮುಡ್ನೂರು ಗ್ರಾಮದ ತರ್ಬಿಯತುಲ್ ಇಸ್ಲಾಂ ಮದ್ರಸ ಪಂತಡ್ಕ ಇದರ ವಿದ್ಯಾರ್ಥಿ ಸಂಘಟನೆ ಎಸ್.ಕೆ.ಎಸ್.ಬಿ.ವಿ ವತಿಯಿಂದ ಸಮಸ್ತ ನೂರನೇ ಸ್ಥಾಪಕ ದಿನಾಚರಣೆ ಕಾರ್ಯಕ್ರಮ ಮದ್ರಸ ವಠಾರದಲ್ಲಿ ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಸ್ಥಳೀಯ...

K. Annamalai – ಬಿಜೆಪಿಯ ನೂತನ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಅಣ್ಣಾಮಲೈ ಆಯ್ಕೆ..

ಅಣ್ಣಾ ಮಲೈಯವರನ್ನು ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಯಾಗಿ ಬಿಜೆಪಿ ಹೈಕಮಾಂಡ್ ಘೋಷಣೆ ಮಾಡಿದೆ. ಬಿಜೆಪಿಯಲ್ಲಿ ಅಣ್ಣಾ ಮಲೈ ಅವರು ಪಾಪ್ಯುಲರ್ ಆಗಿದ್ದು, ಯುವ ಕಾರ್ಯಕರ್ತರ ಮನಸ್ಸು ಗೆದ್ದಿರುವ ನಾಯಕನಾಗಿ ಮಿಂಚುತ್ತಿದ್ದಾರೆ. ತಮಿಳುನಾಡು ರಾಜ್ಯದ ಬಿಜೆಪಿ ಅಧ್ಯಕ್ಷರಾಗಿದ್ದ ಇವರು...

ಬಡ ಮಗುವಿನ ಚಿಕಿತ್ಸೆ ನೆರವಿಗೆ ಮುಂದಾದ ಸಿದ್ದಕಟ್ಟೆ ಪ್ರಾ. ಕೃ. ಪತ್ತಿನ ಸಹಕಾರ ಸಂಘ…

ಬಂಟ್ವಾಳ : ತಾಲೂಕಿನ ಕರ್ಪೆ ಗ್ರಾಮದ ಕುಟ್ಟಿಕಳ ನಿವಾಸಿ ಹಿರಣ್ಯಾಕ್ಷ ಶಾಂತಿ ಹಾಗೂ ಸೌಮ್ಯ ದಂಪತಿಗಳ 5 ವರ್ಷದ ಪುಟ್ಟ ಹೆಣ್ಣು ಮಗು ಮನಸ್ವಿಳಿಗೆ ಅರೋಗ್ಯದಲ್ಲಿ ರಕ್ತದ ಕ್ಯಾನ್ಸರ್ ಇರುವುದರಿಂದ ಇನ್ನೂ ಹೆಚ್ಚಿನ...

ಕರ್ನಾಟಕದ ಕರಾವಳಿ ಸೇರಿ ಹಲವೆಡೆ ಜು. 3ರವರೆಗೆ ಭಾರಿ ಮಳೆ..

ಮಂಗಳೂರು : ರಾಜ್ಯದಾದ್ಯಂತ ಮಳೆಯ ಆರ್ಭಟ ಮುಂದುವರೆದಿದೆ. ಇಂದು (ಜೂನ್ 27) ಸಹ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದ್ದು, ಹವಾಮಾನ ಇಲಾಖೆಯು ಹೈ ಅಲರ್ಟ್ ಘೋಷಿಸಿದೆ. ಕೊಡಗಿನಲ್ಲಿ ಭಾರಿ ಮಳೆಯಾಗುವ ನಿರೀಕ್ಷೆಯಿದ್ದು, ರೆಡ್...