Wednesday, February 12, 2025

ಕರ್ನಾಟಕ ರಾಜ್ಯ ಗೇರು ಉತ್ಪಾದಕರ ಅಸೋಸಿಯೇಶನ್ ನೂತನ ಅಧ್ಯಕ್ಷರಾಗಿ ಮೂಡುಬಿದಿರೆಯ ಅನಂತ ಕೃಷ್ಣರಾವ್ ಆಯ್ಕೆ

ಮಂಗಳೂರು: ಕರ್ನಾಟಕ ರಾಜ್ಯ ಗೇರು ಉತ್ಪಾದಕರ ಅಸೋಸಿಯೇಶನ್ ಇದರ ನೂತನ ಅಧ್ಯಕ್ಷರಾಗಿ ಮೂಡುಬಿದಿರೆಯ ಶ್ರೀ ವಿಜಯಲಕ್ಷ್ಮೀ ಕ್ಯಾಶ್ಯೂ ಇಂಡಸ್ಟ್ರೀಸ್ ನ ಅನಂತ ಕೃಷ್ಣರಾವ್ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ಕಳೆದ ಸೆ 30 ರಂದು ಮಂಗಳೂರಿನಲ್ಲಿ ಜರಗಿದ ಎಸೋಸಿಯೇಶನ್ ಇದರ 69ನೇ ವಾರ್ಷಿಕ ಮಹಾಸಭೆಯಲ್ಲಿ ಈ ಆಯ್ಕೆ ನಡೆದಿದೆ.

ಉಪಾಧ್ಯಕ್ಷರಾಗಿ ಎಂ.ತುಕಾರಾಮ ಪ್ರಭು (ಮೆ. ಮಾಧವರಾಯ ಪ್ರಭು ಮಂಗಳೂರು) , ಕೋಶಾಧಿಕಾರಿಯಾಗಿ ಗಣೇಶ್ ಕಾಮತ್ ( ಶ್ರೀ ಮಹಾಗಣಪತಿ ಕ್ಯಾಶ್ಯೂ ಇಂಡಸ್ಟ್ರೀಸ್ ಮಂಗಳೂರು) ಕಾರ್ಯದರ್ಶಿಯಾಗಿ ಅಮಿತ್ ಪೈ ( ಅಮಿತ್ ಕ್ಯಾಶ್ಯೂಸ್ ಪ್ರೈ.ಲಿ. ಉಡುಪಿ) ಜತೆ ಕಾರ್ಯದರ್ಶಿಯಾಗಿ ಸನತ್ ಪೈ ( ಶ್ರೀ ಗಜಾನನ ಕ್ಯಾಶ್ಯೂ ಇಂಡಸ್ಟ್ರೀಸ್ ಉಡುಪಿ ) ಆಯ್ಕೆಯಾಗಿದ್ದಾರೆ.

ಕಾರ್ಯಕಾರಿ ಸಮಿತಿ ಸದಸ್ಯರಾಗಿ ಪ್ರಮೋದ್ ಕಾಮತ್, ವಿಠಲರಾಯ ಕಾಮತ್,ರೋಹಿದಾಸ್ ಪೈ, ಯೋಗೀಶ್ ಮಲ್ಯ, ಸತ್ಯಪ್ರಸಾದ್ ಪೈ, ಗಣೇಶ್ ಕಿಣಿ, ಅಶೋಕ್ ಕಾಮತ್, ಗಣೇಶ್ ಹೆಗ್ಡೆ, ಚೈತನ್ಯ ಪೈ, ಶ್ರೀನಿವಾಸ್ ಹೆಗ್ಡೆ, ಬಲರಾಮ್ ಕೆ.ಎಸ್. ಕಾರ್ತಿಕ್ ಭೂಷಣ್, ಸಂಪತ್ ಶೆಟ್ಟಿ, ವಿಠಲ ಭಕ್ತ, ಜಯಪ್ರಕಾಶ್ ಶೆಟ್ಟಿ ಮಿಥುನ್ ನಾಯಕ್, ವಿಕ್ರಮ್ ಪ್ರಭು, ಶ್ರೀನಿವಾಸ ಕಾಮತ್, ಜಾನ್ಸನ್ ಡಿಸಿಲ್ವ, ಕೃಷ್ಣ ಕಾಮತ್, ಅದೀತ್ ರಾವ್ ಕಲ್ಬಾವಿ ಆಯ್ಕೆಯಾಗಿದ್ದಾರೆ.

ಸಂಸ್ಥೆಯ ಉನ್ನತ ಪರಂಪರೆಯನ್ನು ಇನ್ನಷ್ಟು ಅಭಿವೃದ್ಧಿಪರವಾಗಿ ಉನ್ನತ ಸಾಧನೆಯ ಗುರಿಯೊಂದಿಗೆ ಮುನ್ನಡೆಸುವ, ಗೇರು ಕೃಷಿಯಲ್ಲಿ ಗೇರು ಉತ್ಪಾದನೆ, ಉತ್ಪನ್ನಗಳ ಹೆಚ್ಚಳದ ಅಗತ್ಯ, ಗೇರು ಮಾರುಕಟ್ಟೆ, ಉದ್ಯಮವನ್ನು ಬೆಳೆಸುವ ಕುರಿತ ಕಾರ್ಯ ಯೋಜನೆಗಳನ್ನು ಹಾಕಿಕೊಳ್ಳುವುದಾಗಿ ನೂತನ ಅಧ್ಯಕ್ಷ ಎಸ್. ಅನಂತ ಕೃಷ್ಣ ರಾವ್ ತಿಳಿಸಿದ್ಧಾರೆ.

More from the blog

ಫೆ.15 ರಂದು ಕಮಲಾಶ್ರಯ ಮನೆಯ ಹಸ್ತಾಂತರ ಹಾಗೂ ಗೃಹಪ್ರವೇಶ

ಬಂಟ್ವಾಳ: ಬಿಜೆಪಿ ಮಹಾಶಕ್ತಿ ಕೇಂದ್ರ ಮಾಣಿ ಮತ್ತು ಬಿಜೆಪಿ ಶಕ್ತಿ ಕೇಂದ್ರ ಅನಂತಾಡಿ ಇದರ ಸಹಕಾರದಿಂದ ಅನಂತಾಡಿ ಗ್ರಾಮದ ಬಾಬನಕಟ್ಟೆ ಎಂಬಲ್ಲಿ ಬಲ್ಲು ಕೊರಗ ಇವರ ಕುಟುಂಬಕ್ಕೆ ನಿರ್ಮಿಸಲಾದ ನೂತನ ಮನೆಯನ್ನು ಫೆ.15...

ಬೇಲಿ ವಿವಾದ : ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡ ಶಾಸಕ ರಾಜೇಶ್ ನಾಯ್ಕ್

ಬಂಟ್ವಾಳ: ತಾ.ಪಂ.ಅಧಿಕಾರಿ ವರ್ಗ ಕಚೇರಿ ಮುಂಭಾಗದ ಜಾಗಕ್ಕೆ ಕಬ್ಬಿಣದ ರಾಡ್ ಅಳವಡಿಸಿ ಬೇಲಿ ಹಾಕಿದ ವಿಚಾರಕ್ಕೆ ಸಂಬಂಧಿಸಿದಂತೆ ಸಾರ್ವಜನಿಕ ದೂರಿನ ಹಿನ್ನೆಲೆಯಲ್ಲಿ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಅವರು ತಾ.ಪಂ.ಗೆ ಹಠಾತ್...

ಚಾಲಕನಿಗೆ ಮೂರ್ಚೆ ರೋಗ ಬಂದು ಡಿವೈಡರ್ ಮೇಲೆ ಹತ್ತಿದ ಲಾರಿ

ಬಂಟ್ವಾಳ: ರಾ.ಹೆ.75ರ ತುಂಬೆ ಸಮೀಪ ಚಾಲಕನಿಗೆ ಮೂರ್ಛೆ ರೋಗ ಬಂದು ಲಾರಿಯೊಂದು ಡಿವೈಡರ್ ಮೇಲೆ ಹತ್ತಿ ಸುಮಾರು 100 ಮೀ.ನಷ್ಟು ಚಲಿಸಿ ನಿಂತಿದ್ದು,‌ ಸೀಟಿನಲ್ಲಿ ಬಿದ್ದಿದ್ದ ಚಾಲಕನನ್ನು ಸ್ಥಳೀಯರು ತುಂಬೆ ಆಸ್ಪತ್ರೆಗೆ ‌ಕರೆದುಕೊಂಡು...

ನೇಣು ಬಿಗಿದು ಯುವಕ ಆತ್ಮಹತ್ಯೆ

ಬಂಟ್ವಾಳ: ಖಿನ್ನತೆಯಿಂದ ಅವಿವಾಹಿತ ವ್ಯಕ್ತಿಯೊರ್ವನು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಅಮ್ಟಾಡಿ ನಿವಾಸಿ ಮೆಕ್ಸಿನ್ ತಾವ್ರೋ ಅವರ ಮಗ ಜೀವನ್  ತಾವ್ರೋ ( 37) ಆತ್ಮಹತ್ಯೆ ಮಾಡಿಕೊಂಡ ಯುವಕ. ‌‌‌ಜೀವನ್ ಅವರು ಅಗಾಗ...