Tuesday, February 3, 2026

ಅನಂತಾಡಿ: ಸೇವಾ ಚಟುವಟಿಕೆಯ ಅಂಗವಾಗಿ ಸೋಲಾರ್ ದೀಪ ಅಳವಡಿಕೆ

ಬಂಟ್ವಾಳ: ಪ್ರಧಾನಿ ನರೇಂದ್ರ ಮೋದಿ ಅವರ ಅಧಿಕಾರದ 7ನೇ ವರ್ಷದ ಸಂಭ್ರಮಾಚರಣೆಯ ಸೇವಾ ಕಾರ್ಯದ ಅಂಗವಾಗಿ ಅನಂತಾಡಿ ಗ್ರಾಮದ ಗೋಳಿಕಟ್ಟೆ ಜಂಕ್ಷನ್ ನಲ್ಲಿ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಅವರು ಸೋಲಾರ್ ಹೈ ಮಾಸ್ಕ್ ದೀಪಕ್ಕೆ ಚಾಲನೆ ನೀಡಿದರು.

ಸೇವಾ ಕಾರ್ಯದ ಮೂಲಕ ಆಚರಣೆ ಮಾಡಬೇಕು ಎನ್ನುವ ಯೋಚನೆಯಂತೆ ಈ ಭಾಗದ ಸಾರ್ವಜನಿಕ ರಿಗೆ ಬಹುಉಪಯೋಗದ ದೃಷ್ಟಿಯಿಂದ ಸೋಲಾರ್ ಹೈಮಾಸ್ಕ್ ದೀಪವನ್ನು ಅಳವಡಿಸಲಾಗಿದೆ ಎಂದು ಶಾಸಕರು ತಿಳಿಸಿದರು.

ಈ ಸಂದರ್ಭದಲ್ಲಿ ನೆಟ್ಲ ಮುಡ್ನೂರು ಗ್ರಾಮಪಂಚಾಯತ್ ಅಧ್ಯಕ್ಷ ಸತೀಶ್, ಅನಂತಾಡಿ ಗ್ರಾಮಪಂಚಾಯತ್ ಅಧ್ಯಕ್ಷ ಗಣೇಶ್ ಪೂಜಾರಿ, ಮಾಣಿ ಬಿಜೆಪಿ ಮಹಾಶಕ್ತಿ ಕೇಂದ್ರದ ಅಧ್ಯಕ್ಷ ರೊನಾಲ್ಡ್ ಡಿಸೋಜ, ಪ್ರಧಾನಕಾರ್ಯದರ್ಶಿ ಸನತ್ ಕುಮಾರ್, ನೇರಳಕಟ್ಟೆ ವ್ಯವಸಾಯ ಸಹಕಾರಿ ಕೇಂದ್ರದ ಅಧ್ಯಕ್ಷ ಪುಷ್ಪರಾಜ ಚೌಟ, ಉಪಾಧ್ಯಕ್ಷ ತನಿಯಪ್ಪ ಗೌಡ, ಮಾಜಿ ತಾ.ಪಂ.ಸದಸ್ಯೆ ಗೀತಾಚಂದ್ರಶೇಖರ್, ಪ್ರಮುಖರಾದ ಗಣೇಶ್ ರೈ ಮಾಣಿ, ಯಶವಂತ ನಾಯ್ಕ್ ನಗ್ರಿ, ನಾರಾಯಣ ಶೆಟ್ಟಿ ಮಾಣಿ, ಶಕೀಲ್ ನೆಟ್ಲ ಮುಡ್ನೂರು,ಅಶೋಕ್ ರೈ, ಧನಂಜಯ್, ಜಯಂತಿ,ದಿನೇಶ್ ಅನಂತಾಡಿ ಹರೀಶ್ಉಪಸ್ಥಿತರಿದ್ದರು.

ಅನಂತಾಡಿ: ಸೇವಾ ಚಟುವಟಿಕೆಯ ಅಂಗವಾಗಿ ಸೋಲಾರ್ ದೀಪ ಅಳವಡಿಕೆ

More from the blog

ಐಸಿವೈಎಂ ಲೊರೆಟ್ಟೊ ಘಟಕದ 30ನೇ ಮಾಣಿಕ್ಯ ಮಹೋತ್ಸವ

ಬಂಟ್ವಾಳ: ಇಂಡಿಯನ್ ಕ್ಯಾಥೊಲಿಕ್ ಯೂತ್ ಮೂವ್ ಮೆಂಟ್ (ಐಸಿವೈಎಂ) ಲೊರೆಟ್ಟೊ ಘಟಕದ 30ನೇ ಮಾಣಿಕ್ಯ ಮಹೋತ್ಸವ ನಡೆಯಿತು. ಪವಿತ್ರ ಬಲಿಪೂಜೆಯನ್ನು ರೆ.ಫಾ. ಅಶ್ವಿನ್ ಲೋಹಿತ್ ಕಾರ್ಡೋಜಾ, ರೆವರೆಂಡ್ ಫ್ರಾನ್ಸಿಸ್ ಕ್ರಾಸ್ತಾ ಮತ್ತು ಲೊರೆಟ್ಟೊ ಸೆಂಟ್ರಲ್...

ಮಂಗಳೂರು ಕರಾವಳಿಯನ್ನು ʼಕಡಲ ಪವನ ಶಕ್ತಿ ಉತ್ಪಾದನಾ ವಲಯʼವಾಗಿ ಅಭಿವೃದ್ಧಿಪಡಿಸಲು ಸಂಸದ ಕ್ಯಾ. ಚೌಟ ಮನವಿ

ನವದೆಹಲಿ: ಭಾರತದ ಗ್ರೀನ್‌ ಎನರ್ಜಿ ಸ್ವಾವಲಂಬನೆ ಮತ್ತು ಬಂದರು ಆಧಾರಿತ ಅಭಿವೃದ್ಧಿ ಕಾರ್ಯತಂತ್ರವನ್ನು ದೃಷ್ಟಿಯಲ್ಲಿಟ್ಟುಕೊಂಡು ಮಂಗಳೂರು ಕಡಲ ತೀರದಲ್ಲಿ ‘ಕಡಲ ಪವನ ಶಕ್ತಿ’ ('ಸಮುದ್ರ ತೀರದ ಪವನ ಶಕ್ತಿ' Offshore Wind Energy)...

ಅಂಗಡಿ, ಹೋಟೆಲ್ ನಾಮಫಲಕಗಳಲ್ಲಿ ಕನ್ನಡ ಕಡ್ಡಾಯ – ದರ್ಶನ್ ಎಚ್. ವಿ

ಮಂಗಳೂರು : ಎಲ್ಲಾ ರೀತಿಯ ಅಂಗಡಿ, ಕಂಪನಿ, ಕಚೇರಿಗಳು ಹೋಟೇಲ್ ಸೇರಿದಂತೆ ವಾಣಿಜ್ಯ ಸಂಸ್ಥೆಗಳ ಹೆಸರನ್ನು ನಾಮಫಲಕಗಳಲ್ಲಿ ಕನ್ನಡದಲ್ಲಿ ಕಡ್ಡಾಯವಾಗಿ ನಮೂದಿಸಬೇಕು ಎಂದು ಜಿಲ್ಲಾಧಿಕಾರಿ ದರ್ಶನ್ ಎಚ್. ವಿ ಸೂಚಿಸಿದ್ದಾರೆ. ಅವರು ಸೋಮವಾರ ಜಿಲ್ಲಾಧಿಕಾರಿ...

Panemangaluru : ಸ್ಕೂಟರ್ ಗೆ ಕಾರು ಡಿಕ್ಕಿ – ಸವಾರನಿಗೆ ಗಾಯ

ಬಂಟ್ವಾಳ: ಕಾರು ಡಿಕ್ಕಿಯಾಗಿ ಸ್ಕೂಟರ್ ಸವಾರ ಗಾಯಗೊಂಡು ಆಸ್ಪತ್ರೆಗೆ ದಾಖಲಾದ ಘಟನೆ ಪಾಣೆಮಂಗಳೂರು ಸರ್ವೀಸ್ ರಸ್ತೆಯಲ್ಲಿ ನಡೆದಿದೆ. ಸ್ಕೂಟರ್ ಸವಾರ ನರಿಕೊಂಬು ನಿವಾಸಿ ಮುಸ್ತಫಾ ಗಾಯಗೊಂಡ ವ್ಯಕ್ತಿಯಾಗಿದ್ದಾನೆ. ಸ್ಕೂಟರ್ ಸವಾರ ಮುಸ್ತಫಾ ಅವರು ನರಿಕೊಂಬು ರಸ್ತೆಯಿಂದ...