ಬಂಟ್ವಾಳ: ಅಮ್ಟೂರು ಗ್ರಾಮದ ಕೃಷ್ಣಾಪುರದಲ್ಲಿ 1 ಕೋ.ರೂ.ವೆಚ್ಚದಲ್ಲಿ ನಿರ್ಮಾಣಗೊಂಡಿರುವ ಕಿಂಡಿ ಅಣೆಕಟ್ಟು-ಕಿರುಸೇತುವೆಯನ್ನು ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ಉಳಿಪ್ಪಾಡಿಗುತ್ತು ಅವರು ಉದ್ಘಾಟಿಸಿದರು.

ಬಳಿಕ ಮಾತನಾಡಿದ ಅವರು, ಕಿಂಡಿ ಅಣೆಕಟ್ಟುಗಳಿಂದ ಅಂತರ್ಜಲ ವೃದ್ಧಿಯ ಜತೆಗೆ ಕೃಷಿಕರಿಗೆ ಅನುಕೂಲವಾಗಿದೆ. ಎರಡು ಉದ್ದೇಶದಿಂದ ನಿರ್ಮಾಣಗೊಂಡಿರುವ ಇದರ ಎರಡೂ ಭಾಗಗಳಲ್ಲಿ ಮುಂದಿನ ದಿನಗಳಲ್ಲಿ ರಸ್ತೆ ನಿರ್ಮಿಸುವ ಕುರಿತು ಶಾಸಕರು ಭರವಸೆ ನೀಡಿದರು.
ಮಾಜಿ ಶಾಸಕ ಪದ್ಮನಾಭ ಕೊಟ್ಟಾರಿ, ಸ್ಥಳೀಯ ಬಿಜೆಪಿ ಅಧ್ಯಕ್ಷ ಪ್ರಭಾಕರ ಶೆಟ್ಟಿ, ಗ್ರಾ.ಪಂ.ಸದಸ್ಯರಾದ ಎಲಿಯಾಸ್ ಡಿಸೋಜಾ, ಪ್ರೇಮಾ, ಪವಿತ್ರಾ, ಜಯಂತ, ಗೋಪಾಲಕೃಷ್ಣ ಪೂವಳ, ರಮನಾಥ ರಾಯಿ, ಪುರುಷೋತ್ತಮ ಶೆಟ್ಟಿ ವಾಮದಪದವು, ಸಣ್ಣ ನೀರಾವರಿ ಇಲಾಖೆಯ ಸಹಾಯಕ ಎಂಜಿನಿಯರ್ ಶಿವಪ್ರಸನ್ನ, ಗುತ್ತಿಗೆದಾರ ಪ್ರಭಾಕರ ಹೆಗ್ಡೆ, ದೇವದಾಸ್ ಕೃಷ್ಣಾಪುರ, ಪರಮೇಶ್ವರ, ಗೋಪಾಲ ಪೂಜಾರಿ, ಜಾನ್ ಡಿಸೋಜಾ, ಚಂದು ಕೃಷ್ಣಾಪುರ ಮೊದಲಾದವರು ಉಪಸ್ಥಿತರಿದ್ದರು.
ಬಂಟ್ವಾಳ ತಾ.ಪಂ.ಮಾಜಿ ಉಪಾಧ್ಯಕ್ಷ ದಿನೇಶ್ ಅಮ್ಟೂರು ಸ್ವಾಗತಿಸಿ, ವಂದಿಸಿದರು.
