ಬಂಟ್ವಾಳ: ಯಕ್ಷಾಭಿಮಾನಿಗಳು ಅಣ್ಣಳಿಕೆ, ಕೊಯಿಲ ಇದರ ವತಿಯಿಂದ 13ನೇ ವರ್ಷದ ತಾಳಮದ್ದಳೆ ಕೂಟ ಹಾಗೂ ಯಕ್ಷಗಾನ ಕಲಾವಿದ, ಸಂಘಟಕ ದಿ.ಶ್ರೀ ವಿಶ್ವನಾಥ ಸ್ವಾಮಿ,ಸುವರ್ಣನಾಡು ಅವರ ಸಂಸ್ಮರಣೆ ಮತ್ತು ಯಕ್ಷಗಾನ ತಾಳಮದ್ದಳೆ ಅಣ್ಣಳಿಕೆ ವಿಘ್ನೇಶ್ವರ ಸಭಾಭವನದಲ್ಲಿ ಅ.31ರಂದು ರವಿವಾರ ಜರಗಲಿದೆ.
ಮಧ್ಯಾಹ್ನ 2 ಗಂಟೆಗೆ ಸಂಸ್ಮರಣೆ ನಡೆಯಲಿದ್ದು, ಖ್ಯಾತ ಹಿರಿಯ ಹಾಸ್ಯ ಕಲಾವಿದ ಪದ್ಮನಾಭ ಶೆಟ್ಟಿಗಾರ್ ಅವರನ್ನು ಸನ್ಮಾನಿಸಲಾಗುವುದು. ಬಳಿಕ ಜಿಲ್ಲೆಯ ಖ್ಯಾತ ಕಲಾವಿದರ ಕೂಡುವಿಕೆಯಲ್ಲಿ , ಹರಿಪ್ರಸಾದ್ ರಾವ್ ಸಂಯೋಜನೆಯಲ್ಲಿ ವಾಲಿ ಮೋಕ್ಷ ಯಕ್ಷಗಾನ ತಾಳಮದ್ದಳೆ ನಡೆಯಲಿದೆ. ಹಿಮ್ಮೇಳದಲ್ಲಿ ರವಿಚಂದ್ರ ಕನ್ನಡಿಕಟ್ಟೆ, ಚಂದ್ರಶೇಖರ ಭಟ್ ಕೊಂಕಣಾಜೆ, ಸತ್ಯಜಿತ್ ರಾವ್ ರಾಯಿ, ವಿಜಯ ಅರಳ, ಮುಮ್ಮೇಳದಲ್ಲಿ ಉಜಿರೆ ಅಶೋಕ ಭಟ್, ಸುಣ್ಣಂಬಳ ವಿಶ್ವೇಶ್ವರ ಭಟ್,ದಿನೇಶ್ ಶೆಟ್ಟಿ ಕಾವಳಕಟ್ಟೆ, ಪ್ರೇಮ್ ರಾಜ್ ಕೊಯಿಲ, ಸದಾಶಿವ ಶೆಟ್ಟಿ ಸಿದ್ದಕಟ್ಟೆ ಭಾಗವಹಿಸುವರು. ಎಂದು ಸಂಘಟಕ ರಾಮಚಂದ್ರ ಶೆಟ್ಟಿಗಾರ್ ಪ್ರಕಟನೆಯಲ್ಲಿ ತಿಳಿಸಿದ್ದಾರೆ.


