Saturday, February 8, 2025

ಅಣ್ಣಳಿಕೆ ಫ್ರೆಂಡ್ಸ್ ಬಳಗದಿಂದ ಪ್ರತಿಭಾನ್ವೇಷಣೆ

ಬಂಟ್ವಾಳ: ಮಕ್ಕಳಲ್ಲಿ ಹುದುಗಿರುವ ಪ್ರತಿಭೆಯನ್ನು ಗುರುತಿಸುವ ಸಾಮರ್ಥ್ಯ ಪೋಷಕರಲ್ಲಿರಬೇಕು.ಮಕ್ಕಳಲ್ಲಿ ಕಲಾಪ್ರಕಾರಗಳ ಮೇಲಿನ ಆಸಕ್ತಿಯನ್ನು ಬೆಳೆಸುವ ಕಾರ್ಯ ಮಾಡಬೇಕು. ನಿಷ್ಕಲ್ಮಶವಾದ ಮಕ್ಕಳ ಮನಸ್ಸನ್ನು ಕ್ರಿಯಾತ್ಮಕ ಚಟುವಟಿಕೆಗಳಲ್ಲಿ ತೊಡಗಿಸಲು ಪ್ರೋತ್ಸಾಹಿಸಿ ಸೃಜನಶೀಲತೆಯನ್ನು ವೃದ್ಧಿಸಬೇಕು. ಆದರಿಂದ ಮಕ್ಕಳ ಪ್ರತಿಭೆ ವಿಕಸನಗೊಳ್ಳುವುದು ಎಂದು ರೋಟರಿ ವಲಯ ನಾಲ್ಕರ ಜಿಲ್ಲಾ ಅಸಿಸ್ಟೆಂಟ್ ಗವರ್ನರ್ ರೋ| ಪ್ರಕಾಶ್ ಕಾರಂತ್ ಅವರು ಹೇಳಿದರು.
ಅವರು ಬಂಟ್ವಾಳ ತಾ| ಕೊಯಿಲ ಅಣ್ಣಳಿಕೆ ಫ್ರೆಂಡ್ಸ್ ಬಳಗ ಇದರ ಆಶ್ರಯದಲ್ಲಿ ಲೊರೆಟ್ಟೊಹಿಲ್ ರೋಟರಿಕ್ಲಬ್ ಸಹಯೋಗದಲ್ಲಿ ಅಣ್ಣಳಿಕೆ ಶ್ರೀ ವಿಘ್ನೇಶ್ವರ ಕಲಾವೇದಿಕೆಯಲ್ಲಿ ಜ.19 ರಂದು ರಾತ್ರಿ ಜರಗಿದ 12ನೇ ವರ್ಷದ ಪ್ರತಿಭಾನ್ವೇಷಣಾ ಕಾರ್ಯಕ್ರಮವನ್ನು ಉದ್ಘಾಟಿಸಿ, ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಸದಸ್ಯ, ಪತ್ರಕರ್ತ ಆಲದಪದವು ಗೋಪಾಲ ಅಂಚನ್ ಅವರು ಮುಖ್ಯ ಅತಿಥಿಯಾಗಿ ಮಾತನಾಡಿ, ಎಲ್ಲಾ ಮಕ್ಕಳಲ್ಲಿ ಪ್ರತಿಭೆ ಹುದುಗಿರುತ್ತದೆ. ಅದಕ್ಕೆ ಪೂರಕ ವಾತಾವರಣ ದೊರಕಿದಾಗ ಪ್ರತಿಭೆ ವಿಕಸನವಾಗುತ್ತದೆ. ಮಕ್ಕಳಿಗೆ ಓದುವಿಕೆಯನ್ನೇ ಗುರಿಯಾಗಿಸದೆ ಕಲೆ, ಸಾಹಿತ್ಯದ ಜತೆ ಉತ್ತಮ ಸಂಸ್ಕಾರ ನೀಡುವುದು ಹಿರಿಯರ ಕರ್ತವ್ಯ ಎಂದು ಹೇಳಿದರು.
ಬಂಟ್ವಾಳ ವಕೀಲರ ಸಂಘದ ಅಧ್ಯಕ್ಷ ದೀಪಕ್ ಜೈನ್, ರಾಯಿ-ಕೊಯಿಲ-ಅರಳ ಹಿಂದೂ ಧರ್ಮೊತ್ಥಾನ ವೇದಿಕೆ ಅಧ್ಯಕ್ಷ ದುರ್ಗಾದಾಸ್ ಶೆಟ್ಟಿ ಮಾವಂತೂರು, ಶ್ರೀ ಕ್ಷೇ.ಧ.ಗ್ರಾ.ಯೋಜನೆ ಮೇಲ್ವಿಚಾರಕಿ ಹರಿಣಾಕ್ಷಿ ರೈ, ಪಂಜಿಕಲ್ಲು ಶ್ರೀ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಂಘದ ಅಧ್ಯಕ್ಷ ಕೇಶವ ಪೂಜಾರಿ ಅಸಲ್ದೋಡಿ, ಸಂಗಬೆಟ್ಟು ಗ್ರಾ.ಪಂ. ಸದಸ್ಯ ದೇವಪ್ಪ ಕರ್ಕೇರ ಉಪಸ್ಥಿತರಿದ್ದರು. ಫ್ರೆಂಡ್ಸ್ ಬಳಗದ ಸುಮಿತ್ರಾ ಆರ್. ಶೆಟ್ಟಿಗಾರ್, ಮಾಧವ ಅಣ್ಣಳಿಕೆ, ಸುರೇಶ್‌ಅಣ್ಣಳಿಕೆ, ಸುಜಾತಾ, ಅಂಕಿತಾ, ಆಕಾಶ್, ಮೋಹನ್ ಮತ್ತಿತರರು ಉಪಸ್ಥಿತರಿದ್ದರು
ಈ ಸಂದರ್ಭದಲ್ಲಿ ಕೊಯಿಲ ಹಿ.ಪ್ರಾ.ಶಾಲೆಯ 5 ರಿಂದ 7ನೇ ತರಗತಿ ಮತ್ತು ಪ್ರೌಢಶಾಲಾ 10ನೇ ತರಗತಿಯಲ್ಲಿ ಅಧಿಕ ಅಂಕ ಗಳಿಸಿದ ವಿದ್ಯಾರ್ಥಿಗಳನ್ನು ಪುರಸ್ಕರಿಸಲಾಯಿತು. ಭಾಗವಹಿಸಿದ ಎಲ್ಲಾ ಮಕ್ಕಳಿಗೆ ಸ್ಮರಣಿಕೆ ನೀಡಲಾಯಿತು.
ಪತ್ರಕರ್ತ ರತ್ನದೇವ್ ಪುಂಜಾಲಕಟ್ಟೆ ಸ್ವಾಗತಿಸಿದರು. ಫ್ರೆಂಡ್ಸ್ ಬಳಗ ಸಂಚಾಲಕ ರಾಮಚಂದ್ರ ಶೆಟ್ಟಿಗಾರ್ ಅವರು ಪ್ರಸ್ತಾವಿಸಿದರು. ಚಂದ್ರಹಾಸ ಅಣ್ಣಳಿಕೆ ವಂದಿಸಿದರು. ದಿನೇಶ್ ಸುವರ್ಣ ರಾಯಿ ಕಾರ್ಯಕ್ರಮ ನಿರೂಪಿಸಿದರು. ಬಳಿಕ ಪರಿಸರದ ಅಂಗನವಾಡಿ, ಪ್ರಾಥಮಿಕ, ಪ್ರೌಢ, ಪದವಿ ಪೂರ್ವ ವಿದ್ಯಾರ್ಥಿಗಳು, ಸ್ಥಳೀಯರು ಸಾಂಸ್ಕೃತಿಕ, ಮನೋರಂಜನ ಕಾರ್ಯಕ್ರಮ ಪ್ರದರ್ಶಿಸಿದರು.

More from the blog

ಅನರ್ಹ ಮತದಾರರ ಮತವನ್ನು ಚುನಾವಣಾ ಫಲಿತಾಂಶದ ಮತ ಎಣಿಕೆಗೆ ಪರಿಗಣಿಸಬಾರದು: ಉಚ್ಚ ನ್ಯಾಯಾಲಯದ ತೀರ್ಪು

ಬಂಟ್ವಾಳ: ಮಡಂತ್ಯಾ‌ರ್ ಪ್ರಾಥಮಿಕ ಸಹಕಾರಿ ಕೃಷಿ ಪತ್ತಿನ ಚುನಾವಣೆಯಲ್ಲಿ ಮತದಾನದ ಹಕ್ಕನ್ನು ಪಡೆದಿರುವ ವ್ಯಕ್ತಿಗಳ ಮತವನ್ನು ಚುನಾವಣಾ ಫಲಿತಾಂಶದ ಮತ ಎಣಿಕೆಯಲ್ಲಿ ಪರಿಗಣಿಸಬಾರದು ಎಂದು ಕರ್ನಾಟಕ ಉಚ್ಚ ನ್ಯಾಯಲಯವು ಐತಿಹಾಸಿಕ ತೀರ್ಪನ್ನು ಹೊರಡಿಸಿದೆ. ಮಡಂತ್ಯಾ‌ರ್ ಪ್ರಾಥಮಿಕ...

ಬಂಟ್ವಾಳ : ತಾಲೂಕು ಆಸ್ಪತ್ರೆಗೆ ವೈದ್ಯರನ್ನು ನೀಡಿ – ಸಚಿವ ದಿನೇಶ್ ಗುಂಡೂರಾವ್ ಗೆ ಮನವಿ

ಬಂಟ್ವಾಳ: ಸುಸಜ್ಜಿತವಾದ ಆಸ್ಪತ್ರೆಯಲ್ಲಿ ವೈದ್ಯಕೀಯ ಸೌಲಭ್ಯಗಳನ್ನು ಹೊಂದಿದೆಯಾದರೂ ರೋಗಿಗಳಿಗೆ ಚಿಕಿತ್ಸೆ ನೀಡಲು ಸರಿಯಾದ ವಿಭಾಗದಲ್ಲಿ ವೈದ್ಯರುಗಳಿಲ್ಲದೆ, ತಾಲೂಕಿನ ಬಡ ರೋಗಿಗಳಿಗೆ ತೊಂದರೆಯಾಗುತ್ತಿದ್ದು, ಕೂಡಲೇ ಸಮಸ್ಯೆ ಬಗೆಹರಿಸಲು ಸಾಮಾಜಿಕ ಕಾರ್ಯಕರ್ತ ಸಮಾದ್ ಕೈಕಂಬ ಅವರು...

ಕಣಿಯೂರು: ನುಡಿನಮನ, ಯಕ್ಷಗಾನ ತಾಳಮದ್ದಳೆ

ವಿಟ್ಲ: ಕನ್ಯಾನ ಕಣಿಯೂರು ಶ್ರೀ ಚಾಮುಂಡೇಶ್ವರಿ ದೇವಿ ಕ್ಷೇತ್ರದಲ್ಲಿ ಇತ್ತೀಚೆಗೆ ನಿಧನರಾದ ಯಕ್ಷಗಾನ ಕಲಾವಿದ, ಉಪನ್ಯಾಸಕ ಪಕಳಕುಂಜ ಶ್ಯಾಮ್ ಭಟ್, ಕೂಡ್ಲು ಗಣಪತಿ ಭಟ್ ಅವರಿಗೆ ನುಡಿ ನಮನ ಹಾಗೂ ಯಕ್ಷಗಾನ ತಾಳಮದ್ದಳೆ...

ಒಡಿಯೂರಿನಲ್ಲಿ 25ನೇ ತುಳು ಸಾಹಿತ್ಯ ಸಮ್ಮೇಳನ ಉದ್ಘಾಟನೆ

ವಿಟ್ಲ: ಒಡಿಯೂರು ರಥೋತ್ಸವ ತುಳುನಾಡ ಜಾತ್ರೆಯ ಅಂಗವಾಗಿ 25 ನೇ ವರ್ಷದ ತುಳು ಸಾಹಿತ್ಯ ಸಮ್ಮೇಳನ ಶ್ರೀ ಸಂಸ್ಥಾನದ ರಾಜಾಂಗಣದಲ್ಲಿ ನಡೆಯಿತು. ಸಮ್ಮೇಳನ ಉದ್ಘಾಟಿಸಿ ಆಶೀರ್ವಚನ ನೀಡಿದ ಶ್ರೀ ಗುರುದೇವದತ್ತ ಸಂಸ್ಥಾನದ ಶ್ರೀ ಗುರುದೇವಾನಂದ...