Monday, June 30, 2025

ಮೆಲ್ಕಾರ್ ಮಹಿಳಾ ಪದವಿ ಪೂರ್ವ ಹಾಗೂ ಪದವಿ ಕಾಲೇಜ್: 11ನೇ ವಾರ್ಷಿಕೋತ್ಸವ ಸಮಾರಂಭ

ಬಂಟ್ವಾಳ: ಸ್ವಚ್ಛ ಮನಸು ಹಾಗೂ ಸ್ವಸ್ಥ ಮನಸ್ಸಿನಿಂದ ಸಾಮಾಜಿಕ ಸೌಹಾರ್ದತೆ ಮತ್ತು ಆರೋಗ್ಯ ಪೂರ್ಣ ಸಮಾಜ ನಿರ್ಮಾಣ ಸಾಧ್ಯ, ಇದಕ್ಕೆ ಸುಧಾರಿತ ಕಲಿಕಾ ಕ್ರಮ ಪೂರಕ ಎಂದು ಮಂಗಳೂರು ವಿಶ್ವವಿದ್ಯಾಲಯದ ಉಪ ಕುಲಪತಿ ಪ್ರೊ. ಯಡಪಡಿತ್ತಾಯ ಹೇಳಿದ್ದಾರೆ.
ಮಂಗಳೂರು ಎಜುಕೇಶನ್ ಎನ್‌ಹ್ಯಾನ್ಸ್‌ಮೆಂಟ್ ಟ್ರಸ್ಟ್‌ನಡಿ ಸಜೀಪ ಮುನ್ನೂರಿನ ಮಾರ್ನಬೈಲ್‌ನಲ್ಲಿ ಕಾರ್ಯಾಚರಿಸುತ್ತಿರುವ ಮೆಲ್ಕಾರ್ ಮಹಿಳಾ ಪದವಿ ಪೂರ್ವ ಹಾಗೂ ಪದವಿ ಕಾಲೇಜಿನ 11ನೇ ವಾರ್ಷಿಕೋತ್ಸವವನ್ನು ಉದ್ಘಾಟಿಸಿ ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿದರು
ಯೆನೆಪೋಯ ವಿಶ್ವವಿದ್ಯಾಲಯದ ಸಹ ಕುಲಾಧಿಪತಿ ಪರ್ಹಾದ್ ಯೆನೆಪೋಯ, ಮಂಗಳೂರು ಎಜುಕೇಶನ್ ಎನ್‌ಹ್ಯಾನ್ಸ್‌ಮೆಂಟ್ ಟ್ರಸ್ಟ್‌ನ ಅಧ್ಯಕ್ಷ ಎಸ್.ಎಂ. ರಶೀದ್ ಹಾಜಿ ಮಾತನಾಡಿದರು.

ಕಾಲೇಜಿನ ಪ್ರಾಂಶುಪಾಲ ಬಿ.ಕೆ. ಅಬ್ದುಲ್ ಲತೀಫ್ ವಾರ್ಷಿಕ ವರದಿ ವಾಚಿಸಿದರು. ಪ್ರಸಕ್ತ ಸಾಲಿನಲ್ಲಿ ಹೆಚ್ಚು ಅಂಕ ಗಳಿಸಿದ ವಿದ್ಯಾರ್ಥಿಗಳನ್ನು ಗೌರವಿಸಲಾಯಿತು. ಉಪಪ್ರಾಂಶುಪಾಲೆ ಸುನೀತಾ ಪೆರೇರಾ, ಮುಹಮ್ಮದ್ ಶಿಬಾಬ್ ಬಹುಮಾನಗಳ ಪಟ್ಟಿ ವಾಚಿಸಿದರು. ಕ್ರೀಡೆ ಹಾಗೂ ಸಾಂಸ್ಕೃತಿ ಸ್ಪರ್ಧಾ ವಿಜೇತರಿಗೆ ಬಹುಮಾನಗಳನ್ನು ವಿತರಿಸಲಾಯಿತು.

ಫಾತಿಮಾ ಜುಮಾನ ಸ್ವಾಗತಿಸಿ, ಫಾತಿಮಾ ಸುಆದಾ ನಿರೂಪಿಸಿ, ಶಾಹಿನಾ ವಂದಿಸಿದರು. ಸಭಾ ಕಾರ್ಯಕ್ರಮದ ಬಳಿಕ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು.

More from the blog

ವೆನ್ ಲಾಕ್ : ಹೊರವಲಯದಲ್ಲಿ ಜಮೀನು ಕಾದಿರಿಸಲು ಸಚಿವರ ಸೂಚನೆ..

ಮಂಗಳೂರು: ವೆನ್ಲಾಕ್ ಜಿಲ್ಲಾಸ್ಪತ್ರೆಯ ಭವಿಷ್ಯದ ಅಭಿವೃದ್ದಿಯ ದ್ರಷ್ಟಿಯಿಂದ ನಗರದ ಕೇಂದ್ರಭಾಗದ ಹೊರವಲಯದಲ್ಲಿ ಜಮೀನು ಕಾದಿರಿಸುವಂತೆ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಸೂಚಿಸಿದ್ದಾರೆ. ಅವರು ಸೋಮವಾರ ತ್ರೈಮಾಸಿಕ ಕೆ ಡಿ ಪಿ ಸಭೆಯ ಅಧ್ಯಕ್ಷತೆ...

ಬೋಳಂತೂರು : ಮನೆ ದುರಸ್ತಿ ಶ್ರಮದಾನ ಕಾರ್ಯಕ್ರಮ..

ಬಂಟ್ವಾಳ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ ಸಿ ಟ್ರಸ್ಟ್ (ರಿ.)ವಿಟ್ಲ ಇದರ ಕಲ್ಲಡ್ಕ ವಲಯ ಶೌರ್ಯ ವಿಪತ್ತು ನಿರ್ವಹಣಾ ಘಟಕ ಹಾಗೂ ಭೀಮ್ ಸಂಜೀವಿನಿ ಬೋಳಂತೂರು ಇದರ ಜಂಟಿ...

ಮಾಣಿಲ – ಸಾಮೂಹಿಕ ಲಕ್ಷ್ಮೀ ಪೂಜೆ : ಧಾರ್ಮಿಕ ಸಭೆ..

ವಿಟ್ಲ: ಕೋಪ, ಅಹಂಕಾರ, ಗರ್ವಗಳೆಲ್ಲವೂ ಬದುಕಿಗೆ ಎಂದೂ ಪ್ರಯೋಜನಕ್ಕೆ ಬಾರವು. ಉದ್ರೇಕ ರೋಷ, ದ್ವೇಷಗಳಿಂದ ಏನೂ ಸಾಧಿಸಲಾಗದು. ಭ್ರಮೆಯಿಂದ ಹೊರಬೇಕಾದರೆ ಗುರುಶಕ್ತಿಯನ್ನು ಅರಿತುಕೊಳ್ಳುವ ಜ್ಞಾನವನ್ನು ಹೊಂದಬೇಕು. ಎಲ್ಲರನ್ನೂ ಎಲ್ಲವನ್ನೂ ಪ್ರೀತಿಸುತ್ತಾ ಸಾಗೋಣ ಎಂದು...

ಫರಂಗಿಪೇಟೆ: ರಾಷ್ಟ್ರೀಯ ಹೆದ್ದಾರಿ ಸ್ವಚ್ಛತಾ ಅಭಿಯಾನ

ಬಂಟ್ವಾಳ: ರಾಷ್ಟ್ರೀಯ ಹೆದ್ದಾರಿ ೭೫ರ ಮಂಗಳೂರು- ಬಿ.ಸಿ.ರೋಡು ಹೆದ್ದಾರಿಯನ್ನು ತ್ಯಾಜ್ಯ ಮುಕ್ತಗೊಳಿಸುವ ನಿಟ್ಟಿನಲ್ಲಿ ಸ್ವಚ್ಛತೆಗಾಗಿ ನಿಮ್ಮೊಂದಿಗೆ ನಾವು, ನಮ್ಮೊಂದಿಗೆ ನೀವು ಅಭಿಯಾನ ಹಮ್ಮಿಕೊಳ್ಳಲಾಗಿದ್ದು, ಇದರ ಭಾಗವಾಗಿ ಅಡ್ಯಾರ್ ನಿಂದ ಫರಂಗಿಪೇಟೆ ಮೂಲಕ ಕಡೆಗೋಳಿವರೆಗೆ...