Sunday, June 29, 2025

ಕೃಷಿ ಉತ್ಪನ್ನ ಸಹಕಾರಿ ಮಾರಾಟ ಸಂಘದ ವಾರ್ಷಿಕ ಮಹಾಸಭೆ

ಬಂಟ್ವಾಳ: ಬಂಟ್ವಾಳ ತಾಲೂಕು ಕೃಷಿ ಉತ್ಪನ್ನ ಸಹಕಾರಿ ಮಾರಾಟ ಸಂಘ ನಿಯಮಿತ ಜೋಡುಮಾರ್ಗ ಇದರ ವಾರ್ಷಿಕ ಮಹಾಸಭೆ ಬಿಸಿರೋಡಿನ ಲಯನ್ಸ್ ಸೇವಾ ಮಂದಿರದಲ್ಲಿ ಸಂಘ ದ ಅಧ್ಯಕ್ಷ ರವೀಂದ್ರ ಕಂಬಳಿ ಅವರ ಅಧ್ಯಕ್ಷ ತೆಯಲ್ಲಿ ನಡೆಯಿತು.
ಸಂಘ ಈ ವರ್ಷ 16,18.625 ಲಕ್ಷ ಲಾಭಾಂಶ ಹೊಂದಿದ್ದು, 7.97 ಲಕ್ಷ ಪಾಲು ಬಂಡವಾಳ ಹೊಂದಿದೆ, 10 ಕೋಟಿ ನಿರಖು ಠೇವಣಿ ಹೊಂದಿದೆ.
ಡಿ.ಸಿ.ಸಿ.ಬ್ಯಾಂಕ್ ನಲ್ಲಿ 663 ಲಕ್ಷ  ಠೇವಣಿ ಹೂಡಿದ್ದು, 389 ಲಕ್ಷ ಹೊರಸಾಲ ಕೊಟ್ಟಿರುತ್ತದೆ, ಲೆಕ್ಕ ಪರಿಶೋಧನ ವರದಿಯಲ್ಲಿ  ” ಎ” ವರ್ಗವನ್ನು ಹೊಂದಿದೆ.

ಈ ಸಂಘದ ಮೂಲಕ ಪ್ರತಿ ವರ್ಷ ಸಾಮಾಜಿಕ ಚಟುವಟಿಕೆ ಗಳಿಗೆ ಹೆಚ್ಚು ಒತ್ತು ನೀಡುತ್ತಿದೆ, ಪ್ರತಿ ವರ್ಷ ವಿದ್ಯಾರ್ಥಿಗಳಿಗೆ 1 ಲಕ್ಷ  ವಿದ್ಯಾರ್ಥಿ ವೇತನ ಆರೋಗ್ಯ ಶಿಬಿರ ಹೀಗೆ ಅನೇಕ ಸಾರ್ವಜನಿಕರಿಗೆ ಉಪಯೋಗವಾಗುವ ಕಾರ್ಯಕ್ರಮ ಗಳನ್ನು ಆಯೋಜಿಸುತ್ತಿದ್ದೇವೆ ಎಂದು ಅವರು ಹೇಳಿದರು.
ಸಂಘವು ಸ್ವಂತ 3.47 ಎಕ್ರೆ ಜಮೀನು ಹೊಂದಿದ್ದು , 7 ಗೋದಾಮುಗಳು ಈ ಜಾಗದಲ್ಲಿ ಹೊಂದಿದೆ. 3 ಬ್ರಾಂಚಗಳನ್ನು ಹೊಂದಿದ್ದು ರೈತರ ಅನುಕೂಲಕ್ಕದ ದೃಷ್ಟಿಯಿಂದ  ಸಾಮಾಗ್ರಿಗಳನ್ನು
ಮಾರಾಟ ಮಾಡುವ ವ್ಯವಸ್ಥೆ ಮಾಡಿದೆ ಎಂದು ಅವರು ತಿಳಿಸಿದರು.
ಈ ಸಂದರ್ಭದಲ್ಲಿ ಸಂಘದ ಉಪಾಧ್ಯಕ್ಷ ರಾದ ಹರ್ಷಿಣಿ, ನಿರ್ದೇಶಕ ರುಗಳಾದ ಬಿ.ಟಿ.ನಾರಾಯಣ ಭಟ್, ಸೀತಾರಾಮ ಶೆಟ್ಟಿ, ಜ್ಞಾನೇಶ್ವರ ಪ್ರಭು, ಪಿ.ಸುಬ್ರಹ್ಮಣ್ಯ ರಾವ್, ರತ್ನ, ಶಶಿಕಲಾ ಉಡುಪ, ರಾಮನಾಯ್ಕ, ಪದ್ಮನಾಭ ಕಿದಬೆಟ್ಟು, ಸುಂದರ ಭಂಡಾರಿ, ಪಿ.ವೆಂಕಟೇಶ ನಾವುಡ, ಪ್ರಭಾಕರ ಶೆಟ್ಟಿ ಅವರು ಉಪಸ್ಥಿತರಿದ್ದರು.
ಸಂಘದ ಅದ್ಯಕ್ಷ ರವೀಂದ್ರ ಕಂಬಳಿ ಸ್ವಾಗತಿಸಿ, ನಿರ್ದೇಶಕ ಬಿ.ಟಿ.ನಾರಾಯಣ ಭಟ್ ವಂದಿಸಿದರು.

ಸಂಘದ ಮುಖ್ಯಕಾರ್ಯನಿರ್ವಹಣಾಧಿಕಾರಿ ಯು. ಧರ್ಮಪಾಲ ಭಂಡಾರಿ ಕಾರ್ಯಕ್ರಮ ನಿರೂಪಿಸಿದರು

More from the blog

ತುಂಬೆ ಕಾಲೇಜಿನಲ್ಲಿ ಸಂಸ್ಥಾಪಕರ ದಿನಾಚರಣೆ ಮತ್ತು ಕಂಪ್ಯೂಟರ್ ಲ್ಯಾಬ್ ಉದ್ಘಾಟನೆ..

ಬಂಟ್ವಾಳ : ಡಾ.ಬಿ.ಅಹಮದ್ ಹಾಜಿ ಅವರ ಸಾಧನಾ ಗಾಥೆಯನ್ನು ಹಾಗೂ ಅವರ ಜೀವನದ ಬಗ್ಗೆ ಕೇಳಿದಾಗ ಅವರು ಎಷ್ಟೊಂದು ಉದಾತ್ತ ವ್ಯಕ್ತಿತ್ವದವರು ಮತ್ತು ಶಿಸ್ತು ಮತ್ತು ಬದ್ಧತೆಯಲ್ಲಿ ಬಾಳಿದವರು ಎನ್ನುವುದು ಅರ್ಥವಾಗುತ್ತದೆ. ಅಂಥವರನ್ನು...

Pneumonia : ನ್ಯುಮೋನಿಯಾ ಜ್ವರದಿಂದ ಬಳಲುತ್ತಿದ್ದ ಬಿಜೆಪಿ ಕಾರ್ಯಕರ್ತ ಚಿಕಿತ್ಸೆ ಫಲಕಾರಿಯಾಗದೆ ಮೃತ್ಯು..

ಬಂಟ್ವಾಳ: ನ್ಯುಮೋನಿಯಾ ಜ್ವರದಿಂದ ಬಳಲುತ್ತಿದ್ದ ಕುಕ್ಕಾಜೆ ಬಿಜೆಪಿ ಕಾರ್ಯಕರ್ತನೊರ್ವ ಚಿಕಿತ್ಸೆ ಫಲಕಾರಿಯಾಗದೆ ಮಂಗಳೂರು ಖಾಸಗಿ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದ ಘಟನೆ ನಡೆದಿದೆ. ಬಂಟ್ವಾಳ ತಾಲೂಕಿನ ಮಂಚಿ ಸಮೀಪದ ಕುಕ್ಕಾಜೆ ನಿವಾಸಿ ಬಿಜೆಪಿ ಯುವ ಕಾರ್ಯಕರ್ತ ,ಸಾಮಾಜಿಕ...

ಸರಕಾರಿ ಹಿ. ಪ್ರಾ. ಶಾಲೆ ಕೆಮ್ಮಾನುಪಲ್ಕೆ : ಶಾಲಾ ಮಂತ್ರಿಮಂಡಲ ಪ್ರಮಾಣವಚನ..

ಬಂಟ್ವಾಳ : ಬಂಟ್ವಾಳ ತಾಲೂಕಿನ ಕಡೇಶಿವಾಲಯ ಗ್ರಾಮದ ಸರಕಾರಿ ಹಿ ಪ್ರಾ ಶಾಲೆ ಕೆಮ್ಮಾನುಪಲ್ಕೆ ಇಲ್ಲಿ 2025-26 ನೇ ಸಾಲಿನ ಶಾಲಾ ಮಂತ್ರಿಮಂಡಲದ ಮಂತ್ರಿಗಳಿಗೆ ಪ್ರಮಾಣವಚನ ವನ್ನು ಶಾಲಾ ಮುಖ್ಯ ಶಿಕ್ಷಕ ಉದಯಕುಮಾರ್...

ಪಂತಡ್ಕ : ಎಸ್.ಕೆ.ಎಸ್.ಬಿ.ವಿ ವತಿಯಿಂದ ಸಮಸ್ತ ನೂರನೇ ಸ್ಥಾಪಕ ದಿನಾಚರಣೆ..

ಬಂಟ್ವಾಳ : ನೆಟ್ಲಮುಡ್ನೂರು ಗ್ರಾಮದ ತರ್ಬಿಯತುಲ್ ಇಸ್ಲಾಂ ಮದ್ರಸ ಪಂತಡ್ಕ ಇದರ ವಿದ್ಯಾರ್ಥಿ ಸಂಘಟನೆ ಎಸ್.ಕೆ.ಎಸ್.ಬಿ.ವಿ ವತಿಯಿಂದ ಸಮಸ್ತ ನೂರನೇ ಸ್ಥಾಪಕ ದಿನಾಚರಣೆ ಕಾರ್ಯಕ್ರಮ ಮದ್ರಸ ವಠಾರದಲ್ಲಿ ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಸ್ಥಳೀಯ...