Saturday, January 31, 2026

ಸಿದ್ಧಕಟ್ಟೆ ಸ.ಪ್ರ.ದ ಕಾಲೇಜು: ಅಂತರರಾಷ್ಟ್ರೀಯ ಭ್ರಷ್ಟಾಚಾರ ವಿರೋಧಿ ದಿನಾಚರಣೆ

ಬಂಟ್ವಾಳ: ತಾಲೂಕಿನ ಸಿದ್ಧಕಟ್ಟೆ ಸರಕಾರಿ ಪ್ರಥಮ ದರ್ಜೆ ಕಾಲೇಜು ಇದರ ಆಂತರಿಕ ಗುಣಮಟ್ಟ ಭರವಸೆ ಕೋಶ ಹಾಗೂ ಅರ್ಥಶಾಸ್ತ್ರ ವಿಭಾಗದ ವತಿಯಿಂದ ಅಂತರರಾಷ್ಟ್ರೀಯ ಭ್ರಷ್ಟಾಚಾರ ವಿರೋಧಿ ದಿನಾಚರಣೆಯನ್ನು ನಿನ್ನೆ (ಡಿ.9) ಆಯೋಜಿಸಲಾಗಿತ್ತು.
ರಾಜ್ಯಶಾಸ್ತ್ರ ವಿಭಾಗದ ಮುಖ್ಯಸ್ಥೆ ನಸೀಮಾ ಬೇಗಂ ಎಸ್. ಪ್ರಾಸ್ತಾವಿಕವಾಗಿ ಮಾತನಾಡಿ, ಭ್ರಷ್ಟಾಚಾರದಿಂದಾಗುವ ಸಾಮಾಜಿಕ, ರಾಜಕೀಯ ನಷ್ಟಗಳ ಬಗ್ಗೆ ತಿಳಿ ಹೇಳಿ ಯುವಜನತೆ ಭ್ರಷ್ಟಾಚಾರ ವಿರೋಧಿ ಮನೋಭಾವನೆಯಿಂದ ಸಮಾಜದಲ್ಲಿ ಜಾಗೃತಿ ಮೂಡಿಸಿದರೆ ಮುಂದಿನ ದಿನಗಳಲ್ಲಿ ಭ್ರಷ್ಟಾಚಾರ ರಹಿತ ಸಮಾಜ ನಿರ್ಮಾಣವಾಗಬಹುದು ಎಂದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ ಕಾಲೇಜಿನ ಪ್ರಾಂಶುಪಾಲೆ ಸೌಮ್ಯ ಹೆಚ್.ಕೆ. ಮಾತನಾಡಿ, ಭ್ರಷ್ಟಾಚಾರದ ವಿವಿಧ ಕ್ಷೇತ್ರಗಳು ಅದರಿಂದಾಗುವ ಕೆಡುಕುಗಳನ್ನು ವಿವರಿಸಿ ಭ್ರಷ್ಟಾಚಾರದ ವಿರೋಧಿ ದಿನದ ಮಹತ್ವವನ್ನು ವಿವರಿಸಿ ವಿದ್ಯಾರ್ಥಿಗಳಲ್ಲಿ ಭ್ರಷ್ಟಾಚಾರ ನಿರ್ಮೂಲನದ ಬಗ್ಗೆ ಜಾಗೃತಿ ಮೂಡಿಸಿದರು. ಅದರ ಜೊತೆಗೆ ಭ್ರಷ್ಟಾಚಾರಕ್ಕೆ ಕಾರಣವಾಗುವ ವಿವಿಧ ಸನ್ನಿವೇಶಗಳು ಹಾಗೂ ಭ್ರಷ್ಟಾಚಾರದ ಪ್ರಭಾವವನ್ನು ತಗ್ಗಿಸಲು ಯುವ ಜನತೆಯು ಕೈಗೊಳ್ಳಬೇಕಾದ ವರ್ತನೆಯ ಬಗ್ಗೆ ತಿಳಿಸಿದರು.
ಕಾರ್ಯಕ್ರಮದಲ್ಲಿ ತೃತೀಯ ಬಿ.ಎ.ತರಗತಿಯ ವಿದ್ಯಾರ್ಥಿನಿಯರಾದ ಲಕ್ಷ್ಮಿ ಸ್ವಾಗತಿಸಿ, ಜಾಹ್ನವಿ ವಂದಿಸಿದರು. ಶ್ರಾವ್ಯ ಕಾರ್ಯಕ್ರಮ ನಿರೂಪಿಸಿ, ಚೇತನ ಮತ್ತು ವಿಶಾಲಾಕ್ಷಿ ಪ್ರಾರ್ಥಿಸಿದರು.

 

More from the blog

ವಿಕಾಸ್ ಪುತ್ತೂರು ಅವರಿಗೆ ನೀಡಿದ ನೋಟಿಸ್ ಇಲಾಖೆಯ ಕಣ್ಣು ತಪ್ಪಿನಿಂದ ಆಗಿದ್ದಂತೆ!!!!

ಬಂಟ್ವಾಳ: ದ.ಕ.ಜಿಲ್ಲೆಯ ಬಂಟ್ವಾಳ ತಾಲೂಕಿನ ಬಿಜೆಪಿ ಯುವ ನಾಯಕ ವಿಕಾಸ್ ಪುತ್ತೂರು ಅವರಿಗೆ ದ್ವೇಷ ಭಾಷಣದ ಆರೋಪದ ಮೇಲೆ ಪೋಲೀಸ್ ಇಲಾಖೆ ನೀಡಿದ ನೋಟಿಸ್ ನ ವಿರುದ್ದ ಅಧಿವೇಶನದಲ್ಲಿ ವಿಧಾನ ಪರಿಷತ್ತು ಸದಸ್ಯ...

ಮಂಗಳೂರು : ಸ್ಟ್ರೀಟ್ ಫುಡ್ ಫೆಸ್ಟ್ ಗೆ ಚಾಲನೆ

ಮಂಗಳೂರು : ಕರಾವಳಿ ಉತ್ಸವದ ಅಂಗವಾಗಿ 3 ದಿನಗಳ ಸ್ಟ್ರೀಟ್ ಫುಡ್ ಫೆಸ್ಟ್ ಗೆ ಶುಕ್ರವಾರ ಚಾಲನೆ ನೀಡಲಾಯಿತು. ನಗರದ ಕದ್ರಿ ಪಾರ್ಕ್ ಮುಖ್ಯ ರಸ್ತೆಯಲ್ಲಿ ನಡೆಯುತ್ತಿರುವ ಕಾರ್ಯಕ್ರಮಕ್ಕೆ ಖ್ಯಾತ ಚೆಫ್ ಶ್ರೀಯಾ...

Bantwal : ಫೆ.1ರಂದು ರಾಜ್ಯ ಸರಕಾರಿ ನೌಕರರ ಸಂಘದ ವಾರ್ಷಿಕ ಮಹಾಸಭೆ

ಬಂಟ್ವಾಳ : ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘದ ವಾರ್ಷಿಕ ಮಹಾಸಭೆ ಹಾಗೂ ವಿಶ್ರಾಂತ ಸರಕಾರಿ ನೌಕರರು ಮತ್ತು ಸಾಧಕರಿಗೆ ಅಭಿನಂದನಾ ಸಮಾರಂಭ ಬಿ.ಸಿ.ರೋಡಿನ ಸರಕಾರಿ ನೌಕರರ ಸಭಾಭವನದಲ್ಲಿ ಫೆ.1ರಂದು ಭಾನುವಾರ ನಡೆಯಲಿದೆ. 2023-24...

ಫೆ.3ರಿಂದ 07ರವರೆಗೆ ಕಶೆಕೋಡಿ ಶ್ರೀ ಲಕ್ಮೀವೆಂಕಟರಮಣ ದೇವಸ್ಥಾನದ ಜಾತ್ರೆ ಹಾಗೂ ಬ್ರಹ್ಮರಥೋತ್ಸವ

ಬಂಟ್ವಾಳ: ಕಶೆಕೋಡಿ ಶ್ರೀ ಲಕ್ಮೀವೆಂಕಟರಮಣ ದೇವಸ್ಥಾನದ ಜಾತ್ರಮಹೋತ್ಸವ ಹಾಗೂ ಬ್ರಹ್ಮರಥೋತ್ಸವ ಬ್ರಹ್ಮ ಶ್ರೀ ನೀಲೇಶ್ವರ ಉಚ್ಚಿಲತ್ತಾಯ ಪದ್ಮನಾಭ ತಂತ್ರಿಗಳ ನೇತ್ರತ್ವದಲ್ಲಿ ಫೆ.3 ರಿಂದ 07 ರವರೆಗೆ ನಡೆಯಲಿದೆ ಎಂದು ಸುಧಾಕರ ಶೆಣೈ ಮರೋಳಿ...