Saturday, February 8, 2025

ಅರಳ: ಶ್ರೀ ಗರುಡ ಮಹಾಕಾಳಿ ದೇವಸ್ಥಾನ ಫೆ. 14ರಿಂದ ವಾರ್ಷಿಕ ಜಾತ್ರೆ, ಮಹಾ ರಥೋತ್ಸವ

ಬಂಟ್ವಾಳ: ತಾಲ್ಲೂಕಿನ ಅರಳ ಮತ್ತು ಕೊಯಿಲ ಗ್ರಾಮ ದೇವತೆಯಾಗಿ ಗುರುತಿಸಿಕೊಂಡಿರುವ ಪುರಾಣ ಪ್ರಸಿದ್ಧ ಅರಳ ಶ್ರೀ ಗರುಡ ಮಹಾಕಾಳಿ ದೇವಸ್ಥಾನದಲ್ಲಿ ಇದೇ 14ರಿಂದ 19ರತನಕ ವಾರ್ಷಿಕ ಜಾತ್ರಾ ಮಹೋತ್ಸವ ಮತ್ತು ಮಹಾ ರಥೋತ್ಸವ ಕಾರ್ಯಕ್ರಮವು ನಡ್ವಂತಾಡಿ ಉದಯ ಪಾಂಗಣ್ಣಾಯ ಉಪಸ್ಥಿತಿಯಲ್ಲಿ ನಡೆಯಲಿದೆ.
ಇದೇ 14ರಂದು ಬೆಳಿಗ್ಗೆ ಗಂಟೆ 8.45ಕ್ಕೆ ಕುಂಟ ಮುಹೂರ್ತ ನಡೆದು ಸಂಜೆ ಗಂಟೆ 5.30ಕ್ಕೆ ಧೂಮಾವತಿ ದೈವದ ಭಂಡಾರ ಬಂದು ಬಳಿಕ ಧ್ವಜಾರೋಹಣ ಉತ್ಸವ ನಡೆಯಲಿದೆ.
ಇದೇ 15ರಂದು ರಾತ್ರಿ ದೀಪದಬಲಿ ಉತ್ಸವ, ರಾತ್ರಿ 9.30 ಗಂಟೆಗೆ ಕಟೀಲು ಮೇಳದವರಿಂದ ‘ಪಂಚ ಕಲ್ಯಾಣ’ ಯಕ್ಷಗಾನ ಬಯಲಾಟ ಪ್ರದರ್ಶನಗೊಳ್ಳಲಿದೆ.
ಇದೇ 16ರಂದು ನಡುಬಲಿ ಉತ್ಸವ, ಚಂದ್ರಮಂಡಲೋತ್ಸವ ಹಾಗೂ ರಾತ್ರಿ 9ಗಂಟೆಗೆ ಕೊಯಿಲ ವೈಷ್ಣವಿ ಕಲಾವಿದರಿಂದ ‘ಕುಸಲ್ದ ಗೌಜಿ’ ಕಾರ್ಯಕ್ರಮ ನಡೆಯಲಿದೆ.
ಇದೇ 17ರಂದು ರಾತ್ರಿ 7ಗಂಟೆಗೆ ‘ಮಹಾ ರಥೋತ್ಸವ’ ಹಾಗೂ ರಾತ್ರಿ 9.30 ಗಂಟೆಗೆ ಮಂಗಳೂರು ಓಂಕಾರ್ ಕ್ರಿಯೇಶನ್ ಮತ್ತು ಕಲಾ ಸಂಗಮ ಕಲಾವಿದರಿಂದ ‘ದೇಶ ಕರೆದಾಗ’ ನಾಟಕ ಪ್ರದರ್ಶನಗೊಳ್ಳಲಿದೆ.
ಇದೇ 18ರಂದು ಬೆಳಿಗ್ಗೆ ಚಂಡಿಕಾಯಾಗ, ಬೆಳಿಗ್ಗೆ 9ಗಂಟೆಗೆ ತುಲಾಭಾರ ಸೇವೆ, 10.30 ಗಂಟೆಗೆ ಕಲ್ಲೇರಿ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮ, ರಾತ್ರಿ ಧೂಮಾವತಿ ದೈವದ ನೇಮೋತ್ಸವ, ರಾತ್ರಿ 9 ಗಂಟೆಗೆ ಸುಂಕದಕಟ್ಟೆ ತಂಡದಿಂದ ‘ಆಯೆ ಬರೆತಿನ’ ತುಳು ನಾಟಕ ಪ್ರದರ್ಶನಗೊಳ್ಳಲಿದೆ. ಪ್ರತಿದಿನ ಮಧ್ಯಾಹ್ನ ಮತ್ತು ರಾತ್ರಿ ಸಾರ್ವಜನಿಕ ಅನ್ನಸಂತರ್ಪಣೆ ನಡೆಯಲಿದೆ ಎಂದು ಪ್ರಕಟಣೆ ತಿಳಿಸಿದೆ.

More from the blog

ಅನರ್ಹ ಮತದಾರರ ಮತವನ್ನು ಚುನಾವಣಾ ಫಲಿತಾಂಶದ ಮತ ಎಣಿಕೆಗೆ ಪರಿಗಣಿಸಬಾರದು: ಉಚ್ಚ ನ್ಯಾಯಾಲಯದ ತೀರ್ಪು

ಬಂಟ್ವಾಳ: ಮಡಂತ್ಯಾ‌ರ್ ಪ್ರಾಥಮಿಕ ಸಹಕಾರಿ ಕೃಷಿ ಪತ್ತಿನ ಚುನಾವಣೆಯಲ್ಲಿ ಮತದಾನದ ಹಕ್ಕನ್ನು ಪಡೆದಿರುವ ವ್ಯಕ್ತಿಗಳ ಮತವನ್ನು ಚುನಾವಣಾ ಫಲಿತಾಂಶದ ಮತ ಎಣಿಕೆಯಲ್ಲಿ ಪರಿಗಣಿಸಬಾರದು ಎಂದು ಕರ್ನಾಟಕ ಉಚ್ಚ ನ್ಯಾಯಲಯವು ಐತಿಹಾಸಿಕ ತೀರ್ಪನ್ನು ಹೊರಡಿಸಿದೆ. ಮಡಂತ್ಯಾ‌ರ್ ಪ್ರಾಥಮಿಕ...

ಬಂಟ್ವಾಳ : ತಾಲೂಕು ಆಸ್ಪತ್ರೆಗೆ ವೈದ್ಯರನ್ನು ನೀಡಿ – ಸಚಿವ ದಿನೇಶ್ ಗುಂಡೂರಾವ್ ಗೆ ಮನವಿ

ಬಂಟ್ವಾಳ: ಸುಸಜ್ಜಿತವಾದ ಆಸ್ಪತ್ರೆಯಲ್ಲಿ ವೈದ್ಯಕೀಯ ಸೌಲಭ್ಯಗಳನ್ನು ಹೊಂದಿದೆಯಾದರೂ ರೋಗಿಗಳಿಗೆ ಚಿಕಿತ್ಸೆ ನೀಡಲು ಸರಿಯಾದ ವಿಭಾಗದಲ್ಲಿ ವೈದ್ಯರುಗಳಿಲ್ಲದೆ, ತಾಲೂಕಿನ ಬಡ ರೋಗಿಗಳಿಗೆ ತೊಂದರೆಯಾಗುತ್ತಿದ್ದು, ಕೂಡಲೇ ಸಮಸ್ಯೆ ಬಗೆಹರಿಸಲು ಸಾಮಾಜಿಕ ಕಾರ್ಯಕರ್ತ ಸಮಾದ್ ಕೈಕಂಬ ಅವರು...

ಕಣಿಯೂರು: ನುಡಿನಮನ, ಯಕ್ಷಗಾನ ತಾಳಮದ್ದಳೆ

ವಿಟ್ಲ: ಕನ್ಯಾನ ಕಣಿಯೂರು ಶ್ರೀ ಚಾಮುಂಡೇಶ್ವರಿ ದೇವಿ ಕ್ಷೇತ್ರದಲ್ಲಿ ಇತ್ತೀಚೆಗೆ ನಿಧನರಾದ ಯಕ್ಷಗಾನ ಕಲಾವಿದ, ಉಪನ್ಯಾಸಕ ಪಕಳಕುಂಜ ಶ್ಯಾಮ್ ಭಟ್, ಕೂಡ್ಲು ಗಣಪತಿ ಭಟ್ ಅವರಿಗೆ ನುಡಿ ನಮನ ಹಾಗೂ ಯಕ್ಷಗಾನ ತಾಳಮದ್ದಳೆ...

ಒಡಿಯೂರಿನಲ್ಲಿ 25ನೇ ತುಳು ಸಾಹಿತ್ಯ ಸಮ್ಮೇಳನ ಉದ್ಘಾಟನೆ

ವಿಟ್ಲ: ಒಡಿಯೂರು ರಥೋತ್ಸವ ತುಳುನಾಡ ಜಾತ್ರೆಯ ಅಂಗವಾಗಿ 25 ನೇ ವರ್ಷದ ತುಳು ಸಾಹಿತ್ಯ ಸಮ್ಮೇಳನ ಶ್ರೀ ಸಂಸ್ಥಾನದ ರಾಜಾಂಗಣದಲ್ಲಿ ನಡೆಯಿತು. ಸಮ್ಮೇಳನ ಉದ್ಘಾಟಿಸಿ ಆಶೀರ್ವಚನ ನೀಡಿದ ಶ್ರೀ ಗುರುದೇವದತ್ತ ಸಂಸ್ಥಾನದ ಶ್ರೀ ಗುರುದೇವಾನಂದ...