Monday, January 26, 2026

ಅರಣ್ಯ ಇಲಾಖಾ ವಾಹನ ಡಿಕ್ಕಿ, ಪಾದಾಚಾರಿ ಸಾವು: ಇಲಾಖಾ ವಾಹನದಲ್ಲಿ ಲಕ್ಷಾಂತರ ರೂ ಹಣ ಸಂಶಯ?

ಬಂಟ್ವಾಳ: ಸರಕಾರಿ ಇಲಾಖೆಗೆ ಸೇರಿದ ವಾಹನವೊಂದು ಪಾದಾಚಾರಿಗೆ ಡಿಕ್ಕಿ ಹೊಡೆದು ಗಂಭೀರವಾಗಿ ಗಾಯಗೊಂಡಿದ್ದ ಪಾದಚಾರಿಯನ್ನು ಆಸ್ಪತ್ರೆಗೆ ದಾಖಲಿಸಿಲಾಗಿದೆಯಾದರೂ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಬಗ್ಗೆ ಟ್ರಾಫಿಕ್ ಎಸ್.ಐ.ಸುತೇಶ್ ಮಾಧ್ಯಮಕ್ಕೆ ತಿಳಿಸಿದ್ದಾರೆ.


ಪುತ್ತೂರು ಅರಣ್ಯ ಇಲಾಖೆಗೆ ಸೇರಿದ ವಾಹನ ಇದಾಗಿದ್ದು, ಬಿಸಿರೋಡು ಕಡೆಯಿಂದ ಮಂಗಳೂರು ‌ಕಡೆಗೆ ಸಂಚಾರ ಮಾಡುತ್ತಿದ್ದ ವೇಳೆ ಅಪಘಾತ ಸಂಭವಿಸಿದೆ ಎನ್ನಲಾಗಿದೆ.
ಸದ್ಯ ಮೃತಪಟ್ಟ ಪಾದಾಚಾರಿಯ ಬಗ್ಗೆ ವಿವರ ಲಭ್ಯವಾಗಿಲ್ಲ. ಮಂಗಳೂರು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಬಗ್ಗೆ ಮಾಹಿತಿ ನೀಡಿದ್ದಾರೆ.
ಪುತ್ತೂರು ಅರಣ್ಯ ಇಲಾಖೆಯ ಆರ್.ಎಫ್.ಕಿರಣ್ ಎಂಬವರು ಸಂಚಾರ ಮಾಡುತ್ತಿದ್ಧ ಬೊಲೆರೋ ವಾಹನ ಪರಂಗಿಪೇಟೆಯ ರಿಕ್ಷಾ ಪಾರ್ಕ್ ನ ಎದುರು ಪಾದಚಾರಿಗೆ ಡಿಕ್ಕಿಹೊಡೆದಿದೆ.
ಸ್ಥಳಕ್ಕೆ ಮೆಲ್ಕಾರ್ ಟ್ರಾಫಿಕ್ ಪೋಲೀಸರು ಬೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

*ಲಕ್ಷಾಂತರ ರೂ ಹಣದ ಕಟ್ಟು ಇಲಾಖಾ ವಾಹನದಲ್ಲಿ*

ಅರಣ್ಯ ಇಲಾಖೆಯ ವಾಹನ ಅಪಘಾತ ಸಂಭವಿಸಿದ ಕೂಡಲೇ ವಾಹನ ಚಾಲಕ ಸ್ಥಳದಿಂದ ಪರಾರಿಯಾಗಿದ್ದ. ರಕ್ತಸಿಕ್ತವಾಗಿ ಒದ್ದಾಡುತ್ತಿದ್ದಾತನನ್ನು ಅಲ್ಲೇ ಇದ್ದ
ರಿಕ್ಷಾ ಚಾಲಕರಿಬ್ಬರು ಅದೇ ಸರಕಾರಿ ಇಲಾಖೆಯ ವಾಹನದಲ್ಲಿ ಹಾಕಿಕೊಂಡು ಮಂಗಳೂರು ಖಾಸಗಿ ಆಸ್ಪತ್ರೆಗೆ ಸೇರಿಸಿದ್ದಾರೆ. ಆದರೆ ಗಂಭೀರವಾಗಿ ಗಾಯಗೊಂಡಿದ್ದ ಪಾದಾಚಾರಿಯನ್ನು ಬದುಕಿಸುವ ಪ್ರಯತ್ನ ಫಲನೀಡಲಿಲ್ಲ.
ಅಪಘಾತ ಸಂಭವಿಸಿದ ಸಂದರ್ಭದಲ್ಲಿ ಅನಾಮಿಕನ ಜೀವ ಉಳಿಸುವ ನಿಟ್ಟಿನಲ್ಲಿ ಇಲ್ಲಿನ ನಿವಾಸಿಗಳಿಬ್ಬರು ಸರಕಾರಿ ವಾಹನದಲ್ಲಿ ಆಸ್ಪತ್ರೆಗೆ ಸೇರಿಸಿ ವಾಪಾಸು ಬರುತ್ತಿದ್ದ ವೇಳೆ ವಳಚ್ಚಿಲ ಎಂಬಲ್ಲಿಗೆ ಇಲಾಖೆಯ ಚಾಲಕ ಆಗಮಿಸಿ ವಾಹನದೊಳಗಿದ್ದ ಕಡತಗಳನ್ನು ಪಡೆದುಕೊಂಡು ಹೋಗಿದ್ದಾರೆ.
ಅದರೆ ಈ ಇಲಾಖಾ ವಾಹನದಲ್ಲಿ ಲಕ್ಷಾಂತರ ರೂ ಹಣದ ಕಂತೆ ಇತ್ತು ಎಂದು ಹೇಳಲಾಗಿದೆ.
ಚಾಲಕನ ಸೀಟಿನ ಬಳಿಯಲ್ಲಿ ಇತ್ತು ಎನ್ನಲಾಗಿರುವ ಹಣದ ಕಂತೆಯನ್ನು ವಳಚ್ಚಿಲ್ ನಿಂದ ಎಸ್ಕೇಪ್ ಮಾಡಲಾಗಿದೆಯೆ? ಹೀಗೊಂದು ಸಂಶಯ ಇದೀಗ ಸ್ಥಳೀಯವಾಗಿ ಉಂಟಾಗಿದ್ದು, ಇಷ್ಟೊಂದು ಹಣವನ್ನು ಇಲಾಖಾ ವಾಹನದಲ್ಲಿ ರಾತ್ರಿ ವೇಳೆ ಎಲ್ಲಿಗೆ ಕೊಂಡುಹೋಗಲಾಗುತ್ತಿತ್ತು ಎಂದು ಪ್ರಶ್ನೆ ಮಾಡುತ್ತಿದ್ದಾರೆ.
ಆದರೆ ನಿಜವಾಗಿಯೂ ಅದರಲ್ಲಿ ಹಣದ ಕಂತೆಯಿತ್ತಾ? ಅಥವಾ ಗಾಳಿಸುದ್ದಿಯಾ ಎಂಬುದನ್ನು ಮೇಲಾಧಿಕಾರಿಗಳ ತನಿಖೆಯ ಬಳಿಕವಷ್ಟೇ ತಿಳಿಯಬೇಕಾಗಿದೆ.

More from the blog

ಗೋಳ್ತಮಜಲು ಮಂಡಲದ ಹಿಂದು ಸಂಗಮ ಕಾರ್ಯಕ್ರಮ..

ಬಂಟ್ವಾಳ : ಗೋಳ್ತಮಜಲು, ಬಾಳ್ತಿಲ, ಅಮ್ಟೂರು ಗ್ರಾಮಗಳನ್ನೊಳಗೊಂಡ ಗೋಳ್ತಮಜಲು ಮಂಡಲದ ಹಿಂದು ಸಂಗಮ ಕಾರ್ಯಕ್ರಮ ಗೋಪೂಜೆಯ ಮೂಲಕ ಭವ್ಯ ಶೋಭಾಯಾತ್ರೆಗೆ ಪುತ್ತೂರು ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಡಾ. ಪ್ರಭಾಕರ ಭಟ್ ಚಾಲನೆ...

ಯುವಶಕ್ತಿಗೆ ವೇದಿಕೆಯಾದ ಕೋಟಿ ಚೆನ್ನಯ ಕ್ರೀಡೋತ್ಸವ : ಬಿ. ಜನಾರ್ದನ ಪೂಜಾರಿ

ಬಂಟ್ವಾಳ : ಕೋಟಿ ಚೆನ್ನಯ ಕ್ರೀಡೋತ್ಸವವು ಯುವಜನತೆಯಲ್ಲಿ ಶಿಸ್ತು, ಆರೋಗ್ಯ ಹಾಗೂ ಸಹಭಾವನೆಯನ್ನು ಬೆಳೆಸುವ ಅತ್ಯುತ್ತಮ ವೇದಿಕೆಯಾಗಿದೆ. ಇಂತಹ ಕ್ರೀಡೋತ್ಸವಗಳ ಮೂಲಕ ಯುವಶಕ್ತಿ ಒಗ್ಗೂಡಿ ಸಮಾಜದ ಅಭಿವೃದ್ಧಿಗೆ ಸ್ಪೂರ್ತಿದಾಯಕ ದಿಕ್ಕು ನೀಡುತ್ತದೆ” ಎಂದು...

ಭಾರತದ ಸಂಸ್ಕೃತಿ ಉಳಿಸಿ ಬೆಳೆಸುವ ಜವಾಬ್ದಾರಿ ಯುವಪೀಳಿಗೆಗಿದೆ : ಭಕ್ತಿಭೂಷಣ್ ದಾಸ್ ಸ್ವಾಮೀಜಿ

ಬಂಟ್ವಾಳ: ಬಂಟ್ವಾಳ ತಾಲೂಕು ಹಿಂದು ಸಂಗಮ ಆಯೋಜನಾ ಸಮಿತಿಯ ಸಂಗಬೆಟ್ಟು , ಕರ್ಪೆ, ಕುಕ್ಕಿಪಾಡಿ, ಎಲಿಯನಡುಗೋಡು ಗ್ರಾಮಗಳನ್ನೊಳಗೊಂಡ ಸಂಗಬೆಟ್ಟು ಮಂಡಲದ ವತಿಯಿಂದ ಹಿಂದು ಸಂಗಮ ಕಾರ್ಯಕ್ರಮ ಸಿದ್ದಕಟ್ಟೆ ಕೇಂದ್ರ ಮೈದಾನದಲ್ಲಿ ರವಿವಾರ ನಡೆಯಿತು. ಗೋ...

ವಿಟ್ಲ : ಜಾತ್ರೆಯ ಪ್ರಯುಕ್ತ ನೇಮೋತ್ಸವ..

ವಿಟ್ಲ : ಮಹತೋಭಾರ ಶ್ರೀ ಪಂಚಲಿಂಗೇಶ್ವರ ದೇವಸ್ಥಾನ ವಿಟ್ಲ ಇದರ ವರ್ಷಂಪ್ರತಿ ನಡೆಯುವ ಕಾಲಾವಧಿ ಜಾತ್ರೆಯ ಪ್ರಯುಕ್ತ ಅರಸು ಮುಂಡಾಲತ್ತಾಯ, ಮಲರಾಯ ದೈವ, ಕೊಡಮಣಿತ್ತಾಯ ಹಾಗೂ ಪಿಲಿಚಾಮುಂಡಿ ದೈವಕ್ಕೆ ದೇವಸ್ಥಾನದ ಎದುರು ನೇಮೋತ್ಸವ...