Wednesday, February 12, 2025

ಅರ್ಕುಳದಿಂದ ಪೊಳಲಿಗೆ ಶ್ರೀ ಧರ್ಮದೇವತೆಗಳ ಭಂಡಾರದ ಶೋಭಾಯಾತ್ರೆ ಶ್ರದ್ಧಾಭಕ್ತಿಯ ದಿವ್ಯ ಸಂಚಲನವನ್ನು ಮೂಡಿಸಲಿರುವ ಪರಂಪರಾನುಗತ ಶೋಭಾಯಾತ್ರೆ

ಶ್ರದ್ಧಾ ಭಕ್ತಿ ಹಾಗೂ ಸಾಮರಸ್ಯದಕ್ಷೇತ್ರವಾದ ಅರ್ಕುಳ ಶ್ರೀ ಉಳ್ಳಾಕ್ಲು ಮಗೃಂತಾಯಿ ಧರ್ಮದೇವತೆಗಳ ಸಾನಿಧ್ಯ ಹಾಗೂ ಶ್ರೀ ಕ್ಷೇತ್ರ ಪೊಳಲಿಯ ಶ್ರೀ ರಾಜರಾಜೇಶ್ವರಿಅಮ್ಮನವರಿಗೂ ಅವಿನಾಭಾವ ಸಂಬಂಧ.ಪೊಳಲಿ ಶ್ರೀ ರಾಜರಾಜೇಶ್ವರಿದೇವಸ್ಥಾನದ ಪುನರ್ನಿರ್ಮಾಣದ ಶುಭವಸರದಲ್ಲಿ ಶ್ರೀ ಉಳ್ಳಾಕ್ಲು ಮಗೃಂತಾಯಿ ಧರ್ಮದೇವತೆಗಳ ಮಾಡ ಹಾಗೂ ಸಾಣ ಪುನರ್ನವೀಕರಣಗೊಂಡು, ಬ್ರಹ್ಮಕಲಶೋತ್ಸವದ ಸಮಯ ಅರ್ಕುಳ ಬೀಡಿನಿಂದ ಶ್ರೀ ದೈವಗಳ ಭಂಡಾರವು ಶ್ರೀ ಕ್ಷೇತ್ರ ಪೊಳಲಿಗೆ ಆಗಮಿಸಿ ನೇಮ ಸೇವೆಯು ಸಂಪನ್ನಗೊಂಡಿದೆ.
ವರ್ಷಾವಧಿಜಾತ್ರೆಯ ಪುಣ್ಯವಸರದಲ್ಲ್ಲಿ ಪೂರ್ವಕಟ್ಟುಕಟ್ಟಳೆಗೆ ಅನುಸಾರವಾಗಿ ಅರ್ಕುಳ ಬೀಡಿನಿಂದ ಶ್ರೀ ದೈವಗಳ ಭಂಡಾರವು ಶ್ರೀ ಕ್ಷೇತ್ರ ಪೊಳಲಿಗೆ ಎಪ್ರಿಲ್ 12 ರ ಶುಕ್ರವಾರದ ದ್ವಜಾವರೋಹಣದ ದಿನ ಆಗಮಿಸಿ ರಾತ್ರಿ ನೇಮ ಸೇವೆಯು ಸಂಪನ್ನಗೊಳ್ಳಲಿದೆ.
ಧಾರ್ಮಿಕತೆಯ ಸೊಗಡಿನೊಂದಿಗೆ ಜನಮಾನಸದಲ್ಲಿ ಶ್ರದ್ಧಾಭಕ್ತಿಯ ದಿವ್ಯ ಸಂಚಲನವನ್ನು ಮೂಡಿಸಲಿರುವ ಹಾಗೂ ತುಳುನಾಡಿನಲ್ಲಿಯೇ ಅತೀ ದೀರ್ಘವಾದ ಪರಂಪರಾನುಗತ ಶೋಭಾಯಾತ್ರೆಯು ಎಪ್ರಿಲ್ 12 ರ ಶುಕ್ರವಾರದಂದು ನಡೆಯಲಿದೆ.
ಎಪ್ರಿಲ್ 12 ನೇ ಶುಕ್ರವಾರ ಬೆಳಿಗ್ಗೆ 6.30ಕ್ಕೆ ಅರ್ಕುಳ ಬೀಡಿನಿಂದ ಹೊರಟು ಮೇರಮಜಲು (7.00), ಕುಟ್ಟಿಕಳ (7.45) ತೇವುಕಾಡು (8.00) ಮಹಮ್ಮಾಯಿಕಟ್ಟೆ- ಅಬ್ಬೆಟ್ಟುಗೋಳಿ (8.30), ಅಮ್ಮುಂಜೆ (9.30), ಬಡಕಬೈಲು (10.00) ಪುಂಚಮೆ(10.30) ಮಾರ್ಗವಾಗಿ ಶೋಭಾಯಾತ್ರೆಯು 11.00 ಕ್ಕೆ ಶ್ರೀ ಕ್ಷೇತ್ರ ಪೊಳಲಿ ತಲುಪಲಿದೆ. ಅಂದು ರಾತ್ರಿ ಅರ್ಕುಳ ಶ್ರೀ ಉಳ್ಳಾಕ್ಲು ಮಗೃಂತಾಯಿ ಧರ್ಮದೇವತೆಗಳಿಗೆ ನೇಮ ಸೇವೆಯು ಸಂಪನ್ನಗೊಳ್ಳಲಿದೆ.
ದಿನಾಂಕ ೧೩-೦೩-೨೦೧೯ ನೇ ಶನಿವಾರ ಬೆಳಿಗ್ಗೆ ೬.೦೦ ಗಂಟೆಗೆ ಭಂಡಾರವು ಪೊಳಲಿಯಿಂದ ಹೊರಟು ॒ಬಡಕಬೈಲು(೬.೩೦), ಧನುಪೂಜೆ(೭.೦೦), ॒ಕಲ್ಪನೆ(೭.೩೦), ಬೆಂಜನಪದವು(೭.೪೫), ಕೊಡ್ಮಾಣ್(೮.೦೦), ನೆತ್ರೆಕೆರೆ (೮.೧೫) ಕಡೆಗೋಳಿ (೮.೩೦) ಫರಂಗಿಪೇಟೆ ಮಾರ್ಗವಾಗಿ ೯.೦೦ ಗಂಟೆಗೆ ಅರ್ಕುಳ ಬೀಡುತಲುಪಲಿದೆ.
ಅರ್ಕುಳ ಬೀಡಿನಿಂದ ಶ್ರೀ ಕ್ಷೇತ್ರ ಪೊಳಲಿಗೆ ಸಂಪನ್ನಗೊಳ್ಳಲಿರುವ ಶ್ರೀ ಉಳ್ಳಾಕ್ಲು ಮಗೃಂತಾಯಿ ಧರ್ಮದೇವತೆಗಳ ಭಂಡಾರದ ಮೆರವಣಿಗೆಯಲ್ಲಿ ಲೌಕಿಕ ಹಾಗೂ ಪಾರಮಾರ್ಥಿವಾಗಿ ಶುಭಪ್ರದವಾದ ಪಾದಯಾತ್ರಿಗಳಾಗಿ ಭಕ್ತಾದಿಗಳು ಭಾಗವಹಿಸಲಿದ್ದಾರೆ ಎಂದುಅರ್ಕುಳ ಬೀಡು ವಜ್ರನಾಭ ಶೆಟ್ಟಿ ತಿಳಿಸಿದ್ದಾರೆ.

More from the blog

ಅಕ್ರಮ ಮಸೀದಿ ನಿರ್ಮಾಣ ಆರೋಪ: ಕರಿಯಂಗಳ ಗ್ರಾ.ಪಂ.ಗೆ ಮುತ್ತಿಗೆ

ಬಂಟ್ವಾಳ: ಗ್ರಾಮ ಪಂಚಾಯತ್ ಅನುಮತಿ ಇಲ್ಲದೆ ಅಕ್ರಮವಾಗಿ ಸರಕಾರಿ ಜಾಗದಲ್ಲಿ ಕಟ್ಟಡ ನಿರ್ಮಿಸಿ ಅದರಲ್ಲಿ ಮದರಸ ಮಾಡಲು ಮುಂದಾಗಿದ್ದರೆ ಎಂದು ಆರೋಪಿಸಿದ ಗ್ರಾಮಸ್ಥರು ಇದನ್ನು ತಡೆಯುವಂತೆ ಗ್ರಾಮ ಪಂಚಾಯತ್ ಗೆ ಮುತ್ತಿಗೆ ಹಾಕಿದ...

ಪುರಸಭೆ ಎಡವಿದೆಲ್ಲಿ? ಬ್ಯಾನರ್ ವಿವಾದ!

ಬಂಟ್ವಾಳ: ಬಂಟ್ವಾಳ ಪುರಸಭೆ ನಿಯಮ ಉಲ್ಲಂಘಿಸಿ ಹಾಕಲಾದ ಫ್ಲೆಕ್ಸ್ ತೆರವು ಕಾರ್ಯಾಚರಣೆಯನ್ನು ತಡವಾಗಿ ಪ್ರಾರಂಭಿಸಿದೆ. ಜನವರಿ 29ರಂದು ಪುರಸಭೆಯ ಸಾಮಾನ್ಯ ಸಭೆಯಲ್ಲಿ ಈ ಕುರಿತು ಪುರಸಭೆಯ ಮುಖ್ಯಾಧಿಕಾರಿ ತೆರವು ಕಾರ್ಯಾಚರಣೆ ನಡೆಸುವುದಾಗಿ ಘೋಷಿಸಿ,...

ಸರಕಾರಿಯೋ, ತಾ.ಪಂ.ಗೆ ಸೇರಿದ ಜಾಗವೋ? ಇದೊಂದು ಬೇಲಿಯ ಕಥೆ!

ಬಂಟ್ವಾಳ: ತಾ.ಪಂ.ಅಧಿಕಾರಿ ವರ್ಗ ಕಚೇರಿ ಮುಂಭಾಗದ ಜಾಗಕ್ಕೆ ಕಬ್ಬಿಣದ ರಾಡ್ ಗಳ ಮೂಲಕ ಬೇಲಿ ಹಾಕಿದ್ದು, ಇದಿಗ ಈ ಜಾಗವು ಸರಕಾರಿ ಯೋ, ಅಥವಾ ತಾಲೂಕು ಪಂಚಾಯತ್ ಗೆ ಸೇರಿದ್ದೊ ಎಂಬ ಚರ್ಚೆಗೆ...

ನಂದಾವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರಾಗಿ ಪ್ರಭಾಕರ್ ಶೆಟ್ಟಿ ಆಯ್ಕೆ

ಬಂಟ್ವಾಳ: ತಾಲೂಕಿನ ಸಜೀಪಮಾಗಣೆಯ ಪ್ರಧಾನ ದೇವಾಲಯ ಪಾಣೆಮಂಗಳೂರಿಗೆ ಸಮೀಪದ ನಂದಾವರ ಶ್ರೀ ವಿನಾಯಕ ಶಂಕರನಾರಾಯಣ ದುಗಾಂಭ ಕ್ಷೇತ್ರದ ನೂತನ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರಾಗಿ ಕಾಂತಾಡಿಗುತ್ತು ಪ್ರಭಾಕರ ಶೆಟ್ಟಿ ಅವರು ಆಯ್ಕೆಯಾಗಿದ್ದಾರೆ. ಉಳಿದಂತೆ ಸಮಿತಿ ಸದಸ್ಯರಾಗಿ...