Friday, January 30, 2026

ಅರ್ಕುಳ ಬೀಡಿನಲ್ಲಿ ಲಾಂಛನ ಬಿಡುಗಡೆ ಹಾಗೂ ಧ್ಯೇಯ ವಾಕ್ಯ ಅನಾವರಣ

ಬಂಟ್ವಾಳ : 18 ವರ್ಷದ ಹಿಂದೆ ಸ್ಥಾಪನೆಯಾದ ”  ಟೀಮ್ ವೀರಾಂಜನೇಯ ಫರಂಗಿಪೇಟೆ” ತಂಡದ ನೂತನ ಲಾಂಛನ ಬಿಡುಗಡೆ ಹಾಗೂ ಸಂಕಲ್ಪ ಸಮೃದ್ಧಿ ಸಾರ್ಥಕತೆ ಎಂಬ ಧ್ಯೇಯ ವಾಕ್ಯ ಅನಾವರಣ ಕಾರ್ಯಕ್ರಮವು ಅರ್ಕುಳ ಬೀಡುವಿನಲ್ಲಿ ನಡೆಯಿತು.

ಅರ್ಕುಳ ಬೀಡು ಧರ್ಮದರ್ಶಿಗಳಾದ   ವಜ್ರನಾಭ ಶೆಟ್ಟಿ  ಅವರು ಲಾಂಛನದ ಬಿಡುಗಡೆಗೊಳಿಸಿದರು. ಉಜಿರೆ ರಸ್ ಡಿ ಎಂ ಕಾಲೇಜಿನ ಉಪನ್ಯಾಸಕರಾದ  ಡಾ|| ಜಯಕುಮಾರ್ ಶೆಟ್ಟಿ ಧ್ಯೇಯ ವಾಕ್ಯವನ್ನು ಅನಾವರಣಗೊಳಿಸಿ  ಸಾಮಾಜಿಕ ಹಾಗೂ ಧಾರ್ಮಿಕ ಕಾರ್ಯಕ್ರಮಗಳ ಮುಖೇನ ಅಸ್ತಿತ್ವಕ್ಕೆ ಬಂದಿರುವ  ಟೀಮ್ ವೀರಾಂಜನೇಯ ಫರಂಗಿಪೇಟೆ ಯುವಕರ ತಂಡದ  ಸಮಾಜಮುಖಿ ಕಾರ್ಯಕ್ರಮಗಳ ಮೂಲಕ ಸ್ಥಳೀಯವಾಗಿ ಗುರುತಿಸಿರುವದನ್ನು ಶ್ಳಾಘಿಸಿದರು.   ಇದಕ್ಕು ಮೊದಲು ಅರ್ಕುಳ ಬೀಡು ಧರ್ಮ ಚಾವಡಿಯಲ್ಲಿ ಪ್ರಾರ್ಥನೆಯನ್ನು ಸಲ್ಲಿಸಲಾಯಿತು, ಸ್ಥಳೀಯ ಗಣ್ಯರಾದ ಕಂಪ ಸದಾನಂದ ಅಲ್ವಾ, ಚಂದ್ರಶೇಖರ ಗಾಂಭೀರ, ಜನಾರ್ದನ ಅರ್ಕುಳ, ಜಯರಾಜ್ ಕರ್ಕೇರ, ಸಂತೋಷ್  ಕುಮಾರ್   ತುಪ್ಪೆಕಲ್ಲು,ಕೆ ಆರ್ ಶೆಟ್ಟಿ ಅಡ್ಯಾರ್ ಪದವು,  ಸೇಸಪ್ಪ ಕರ್ಕೇರ ಧರ್ಮಗಿರಿ ಮೊದಲಾದವರು ಉಪಸ್ಥಿತರಿದ್ದರು.

ದಿನಕರ ಕರ್ಕೇರ ಮಂಟಮೆ ಸ್ವಾಗತಿಸಿ, ವಂದಿಸಿದರು.

More from the blog

Bantwal : ಫೆ.1ರಂದು ರಾಜ್ಯ ಸರಕಾರಿ ನೌಕರರ ಸಂಘದ ವಾರ್ಷಿಕ ಮಹಾಸಭೆ

ಬಂಟ್ವಾಳ : ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘದ ವಾರ್ಷಿಕ ಮಹಾಸಭೆ ಹಾಗೂ ವಿಶ್ರಾಂತ ಸರಕಾರಿ ನೌಕರರು ಮತ್ತು ಸಾಧಕರಿಗೆ ಅಭಿನಂದನಾ ಸಮಾರಂಭ ಬಿ.ಸಿ.ರೋಡಿನ ಸರಕಾರಿ ನೌಕರರ ಸಭಾಭವನದಲ್ಲಿ ಫೆ.1ರಂದು ಭಾನುವಾರ ನಡೆಯಲಿದೆ. 2023-24...

ಫೆ.3ರಿಂದ 07ರವರೆಗೆ ಕಶೆಕೋಡಿ ಶ್ರೀ ಲಕ್ಮೀವೆಂಕಟರಮಣ ದೇವಸ್ಥಾನದ ಜಾತ್ರೆ ಹಾಗೂ ಬ್ರಹ್ಮರಥೋತ್ಸವ

ಬಂಟ್ವಾಳ: ಕಶೆಕೋಡಿ ಶ್ರೀ ಲಕ್ಮೀವೆಂಕಟರಮಣ ದೇವಸ್ಥಾನದ ಜಾತ್ರಮಹೋತ್ಸವ ಹಾಗೂ ಬ್ರಹ್ಮರಥೋತ್ಸವ ಬ್ರಹ್ಮ ಶ್ರೀ ನೀಲೇಶ್ವರ ಉಚ್ಚಿಲತ್ತಾಯ ಪದ್ಮನಾಭ ತಂತ್ರಿಗಳ ನೇತ್ರತ್ವದಲ್ಲಿ ಫೆ.3 ರಿಂದ 07 ರವರೆಗೆ ನಡೆಯಲಿದೆ ಎಂದು ಸುಧಾಕರ ಶೆಣೈ ಮರೋಳಿ...

ಫೆ.3ರಂದು ಬಿ.ಸಿ.ರೋಡಿನ ಸ್ಪರ್ಶಾ ಕಲಾ ಮಂದಿರದಲ್ಲಿ ಮಹಿಳಾ & ಮಕ್ಕಳ ಸಂಭ್ರಮೋತ್ಸವ

ಬಂಟ್ವಾಳ: ವಾತ್ಸಲ್ಯಮಯಿ ಮಹಿಳಾ ಅಭಿವೃದ್ಧಿ ಮತ್ತು ಸಂಶೋಧನ ಸಂಸ್ಥೆ ( ರಿ.) ಬಾಳ್ತಿಲ ಮತ್ತು ಜವಾಹರ್ ಬಾಲ್ ಮಂಚ್ ದ.ಕ. ಇದರ ಸಂಯುಕ್ತ ಆಶ್ರಯದಲ್ಲಿ ಮಹಿಳಾ ಮತ್ತು ಮಕ್ಕಳ ಸಂಭ್ರಮೋತ್ಸವ ಫೆ.3ರಂದು ಮಂಗಳವಾರ...

ಜ.31ರಂದು ಲಯನ್ಸ್ ಇಂಟರ್ನ್ಯಾಷನಲ್ ಪ್ರಾಂತ್ಯ-6ರ ಪ್ರಾಂತೀಯ ಸಮ್ಮಿಲನ ಕಾರ್ಯಕ್ರಮ

ಬಂಟ್ವಾಳ: ಲಯನ್ಸ್ ಇಂಟರ್ನ್ಯಾಷನಲ್ ಪ್ರಾಂತ್ಯ-6ರ ಪ್ರಾಂತೀಯ ಸಮ್ಮಿಲನ ಕಾರ್ಯಕ್ರಮವು ಜ.31ರಂದು ಪ್ರಾಂತೀಯ ಅಧ್ಯಕ್ಷ ಉದ್ಯಮಿ ಬಾಲಕೃಷ್ಣ ಶೆಟ್ಟಿ ಪಿ. ಇವರ ಅಧ್ಯಕ್ಷತೆಯಲ್ಲಿ ಜ.31ರಂದು ಬಜಾರ್ ಆಡಿಟೋರಿಯಂ ಕಂದೂರು ಸಜಿಪಮೂಡದಲ್ಲಿ ನಡೆಯಲಿದೆ ಎಂದು ಸಮ್ಮೇಳನ...