Wednesday, February 12, 2025

ಅರ್ಕುಳ ಬೀಡಿನಲ್ಲಿ ಲಾಂಛನ ಬಿಡುಗಡೆ ಹಾಗೂ ಧ್ಯೇಯ ವಾಕ್ಯ ಅನಾವರಣ

ಬಂಟ್ವಾಳ : 18 ವರ್ಷದ ಹಿಂದೆ ಸ್ಥಾಪನೆಯಾದ ”  ಟೀಮ್ ವೀರಾಂಜನೇಯ ಫರಂಗಿಪೇಟೆ” ತಂಡದ ನೂತನ ಲಾಂಛನ ಬಿಡುಗಡೆ ಹಾಗೂ ಸಂಕಲ್ಪ ಸಮೃದ್ಧಿ ಸಾರ್ಥಕತೆ ಎಂಬ ಧ್ಯೇಯ ವಾಕ್ಯ ಅನಾವರಣ ಕಾರ್ಯಕ್ರಮವು ಅರ್ಕುಳ ಬೀಡುವಿನಲ್ಲಿ ನಡೆಯಿತು.

ಅರ್ಕುಳ ಬೀಡು ಧರ್ಮದರ್ಶಿಗಳಾದ   ವಜ್ರನಾಭ ಶೆಟ್ಟಿ  ಅವರು ಲಾಂಛನದ ಬಿಡುಗಡೆಗೊಳಿಸಿದರು. ಉಜಿರೆ ರಸ್ ಡಿ ಎಂ ಕಾಲೇಜಿನ ಉಪನ್ಯಾಸಕರಾದ  ಡಾ|| ಜಯಕುಮಾರ್ ಶೆಟ್ಟಿ ಧ್ಯೇಯ ವಾಕ್ಯವನ್ನು ಅನಾವರಣಗೊಳಿಸಿ  ಸಾಮಾಜಿಕ ಹಾಗೂ ಧಾರ್ಮಿಕ ಕಾರ್ಯಕ್ರಮಗಳ ಮುಖೇನ ಅಸ್ತಿತ್ವಕ್ಕೆ ಬಂದಿರುವ  ಟೀಮ್ ವೀರಾಂಜನೇಯ ಫರಂಗಿಪೇಟೆ ಯುವಕರ ತಂಡದ  ಸಮಾಜಮುಖಿ ಕಾರ್ಯಕ್ರಮಗಳ ಮೂಲಕ ಸ್ಥಳೀಯವಾಗಿ ಗುರುತಿಸಿರುವದನ್ನು ಶ್ಳಾಘಿಸಿದರು.   ಇದಕ್ಕು ಮೊದಲು ಅರ್ಕುಳ ಬೀಡು ಧರ್ಮ ಚಾವಡಿಯಲ್ಲಿ ಪ್ರಾರ್ಥನೆಯನ್ನು ಸಲ್ಲಿಸಲಾಯಿತು, ಸ್ಥಳೀಯ ಗಣ್ಯರಾದ ಕಂಪ ಸದಾನಂದ ಅಲ್ವಾ, ಚಂದ್ರಶೇಖರ ಗಾಂಭೀರ, ಜನಾರ್ದನ ಅರ್ಕುಳ, ಜಯರಾಜ್ ಕರ್ಕೇರ, ಸಂತೋಷ್  ಕುಮಾರ್   ತುಪ್ಪೆಕಲ್ಲು,ಕೆ ಆರ್ ಶೆಟ್ಟಿ ಅಡ್ಯಾರ್ ಪದವು,  ಸೇಸಪ್ಪ ಕರ್ಕೇರ ಧರ್ಮಗಿರಿ ಮೊದಲಾದವರು ಉಪಸ್ಥಿತರಿದ್ದರು.

ದಿನಕರ ಕರ್ಕೇರ ಮಂಟಮೆ ಸ್ವಾಗತಿಸಿ, ವಂದಿಸಿದರು.

More from the blog

ಫೆ.15 ರಂದು ಕಮಲಾಶ್ರಯ ಮನೆಯ ಹಸ್ತಾಂತರ ಹಾಗೂ ಗೃಹಪ್ರವೇಶ

ಬಂಟ್ವಾಳ: ಬಿಜೆಪಿ ಮಹಾಶಕ್ತಿ ಕೇಂದ್ರ ಮಾಣಿ ಮತ್ತು ಬಿಜೆಪಿ ಶಕ್ತಿ ಕೇಂದ್ರ ಅನಂತಾಡಿ ಇದರ ಸಹಕಾರದಿಂದ ಅನಂತಾಡಿ ಗ್ರಾಮದ ಬಾಬನಕಟ್ಟೆ ಎಂಬಲ್ಲಿ ಬಲ್ಲು ಕೊರಗ ಇವರ ಕುಟುಂಬಕ್ಕೆ ನಿರ್ಮಿಸಲಾದ ನೂತನ ಮನೆಯನ್ನು ಫೆ.15...

ಬೇಲಿ ವಿವಾದ : ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡ ಶಾಸಕ ರಾಜೇಶ್ ನಾಯ್ಕ್

ಬಂಟ್ವಾಳ: ತಾ.ಪಂ.ಅಧಿಕಾರಿ ವರ್ಗ ಕಚೇರಿ ಮುಂಭಾಗದ ಜಾಗಕ್ಕೆ ಕಬ್ಬಿಣದ ರಾಡ್ ಅಳವಡಿಸಿ ಬೇಲಿ ಹಾಕಿದ ವಿಚಾರಕ್ಕೆ ಸಂಬಂಧಿಸಿದಂತೆ ಸಾರ್ವಜನಿಕ ದೂರಿನ ಹಿನ್ನೆಲೆಯಲ್ಲಿ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಅವರು ತಾ.ಪಂ.ಗೆ ಹಠಾತ್...

ವಿಟ್ಲ ಪಿಎಂ ಶ್ರೀ ಸರಕಾರಿ ಪ್ರೌಢ ಶಾಲೆಯಲ್ಲಿ ಮೆಟ್ರಿಕ್ ಮೇಳ

ವಿಟ್ಲ: ವಿಟ್ಲ ಪಿ ಎಂ ಶ್ರೀ ಸರಕಾರಿ ಪ್ರೌಢ ಶಾಲೆ (ಆರ್ ಎಂ ಎಸ್ ಎಂ)ವಿಟ್ಲ ಇದರ ಪ್ರಾಥಮಿಕ ಶಾಲಾ ವಿಭಾಗದಲ್ಲಿ ಬುಧವಾರ ಮೆಟ್ರಿಕ್ ಮೇಳ ಕಾರ್ಯಕ್ರಮ ನಡೆಯಿತು. ಮೆಟ್ರಿಕ್ ಮೇಳವನ್ನು ವಿಟ್ಲ ಪಟ್ಟಣ...

ಚಾಲಕನಿಗೆ ಮೂರ್ಚೆ ರೋಗ ಬಂದು ಡಿವೈಡರ್ ಮೇಲೆ ಹತ್ತಿದ ಲಾರಿ

ಬಂಟ್ವಾಳ: ರಾ.ಹೆ.75ರ ತುಂಬೆ ಸಮೀಪ ಚಾಲಕನಿಗೆ ಮೂರ್ಛೆ ರೋಗ ಬಂದು ಲಾರಿಯೊಂದು ಡಿವೈಡರ್ ಮೇಲೆ ಹತ್ತಿ ಸುಮಾರು 100 ಮೀ.ನಷ್ಟು ಚಲಿಸಿ ನಿಂತಿದ್ದು,‌ ಸೀಟಿನಲ್ಲಿ ಬಿದ್ದಿದ್ದ ಚಾಲಕನನ್ನು ಸ್ಥಳೀಯರು ತುಂಬೆ ಆಸ್ಪತ್ರೆಗೆ ‌ಕರೆದುಕೊಂಡು...