Wednesday, June 25, 2025

ಜಮ್ಮು: 4 ಉಗ್ರರನ್ನು ಹೊಡೆದುರುಳಿಸಿದ ಭಾರತೀಯ ಸೇನೆ

ಶ್ರೀನಗರ: ದೇಶದಲ್ಲಿ ಕೊರೋನಾ ವೈರಸ್ ಮಂಡೆ ಬಿಸಿಯ ಮಧ್ಯೆ ಗಡಿಯಲ್ಲಿ ಉಗ್ರರ ಕಾಟ ಮುಂದುವರಿದಿದೆ. ಕೊರೋನಾ ಭಯದ ಮಧ್ಯೆಯೇ ಭಾರತೀಯ ಸೇನೆ ಜಮ್ಮು ಮತ್ತು ಕಾಶ್ಮೀರದಲ್ಲಿ ಭರ್ಜರಿ ಕಾರ್ಯಾಚರಣೆ ನಡೆಸಿದ್ದು, ನಾಲ್ವರು ಉಗ್ರರನ್ನು ಹೊಡೆದುರುಳಿಸಿದ್ದಾರೆ.

ಜಮ್ಮು ಮತ್ತು ಕಾಶ್ಮೀರದ ಶೋಪಿಯಾನ್ ಜಿಲ್ಲೆಯ ಮೆಲಾಹುಲಾ ಎಂಬ ಪ್ರದೇಶದಲ್ಲಿ ಸೇನಾಪಡೆ ಕಾರ್ಯಾಚರಣೆ ನಡೆಸಿದ್ದು, ನಾಲ್ವರು ಉಗ್ರರನ್ನು ಹತ್ಯೆ ಮಾಡಿದ್ದಾರೆಂದು ಮಾಹಿತಿ ತಿಳಿದು ಬಂದಿದೆ.

ಉಗ್ರರು ಅಡಗಿ ಕುಳಿತಿರುವ ಖಚಿತ ಮಾಹಿತಿ ತಿಳಿಯುತ್ತಿದ್ದಂತೆಯೇ ಸೇನಾ ಪಡೆಗಳು ಕಾರ್ಯಾಚರಣೆಗಿಳಿದಿದ್ದಾರೆ. ಈ ವೇಳೆ ಉಗ್ರರು ಏಕಾಏಕಿ ಸೇನಾಪಡೆಗಳ ಮೇಲೆ ಗುಂಡಿನ ದಾಳಿ ನಡೆಸಿದ್ದು, ಕೂಡಲೇ ಚುರುಕುಗೊಂಡ ಸೇನಾಪಡೆಗಳು ಕಾರ್ಯಾಚರಣೆಯನ್ನು ಎನ್ಕೌಂಟರ್’ಗೆ ಮಾರ್ಪಡಿಸಿ ಮೊದಲಿಗೆ ಇಬ್ಬರು ಉಗ್ರರನ್ನು ಹತ್ಯೆ ಮಾಡಿದ್ದರು. ಬಳಿಕ ಮತ್ತಷ್ಟು ಉಗ್ರರು ಅಡಗಿ ಕುಳಿತಿರುವ ಶಂಕೆಗಳು ವ್ಯಕ್ತವಾದ ಹಿನ್ನೆಲೆಯಲ್ಲಿ ಕಾರ್ಯಾಚರಣೆಯನ್ನು ಮುಂದುವರೆಸಿ ಮತ್ತಿಬ್ಬರು ಉಗ್ರರನ್ನು ಹತ್ಯೆ ಮಾಡಿದ್ದಾರೆ. ಪ್ರಸ್ತುತ ಸ್ಥಳದಲ್ಲಿ ಕಾರ್ಯಾಚರಣೆ ಮುಂದುವರೆದಿದೆ ಎಂದು ಹೇಳಲಾಗುತ್ತಿದ್ದು, ಹತ್ಯೆಯಾದ ಉಗ್ರರ ಕುರಿತು ಸೇನಾಪಡೆಗಳು ಮಾಹಿತಿ ಕಲೆ ಹಾಕುತ್ತಿವೆ ಎಂದು ವರದಿಗಳು ತಿಳಿಸಿವೆ.

ಕೊರೊನಾ ಭೀತಿಯಿಂದ ಜಗತ್ತು ಇಡೀ ನಲುಗುತ್ತಿದ್ದರೆ ಉಗ್ರರು ಮಾತ್ರ ತಮ್ಮ ಕೀಳು ಮಟ್ಟದ ಬುದ್ದಿ ಯನ್ನು ತೋರ್ಪಡಿಸುತ್ತಲೆ ಇದ್ದಾರೆ.

More from the blog

ವೀರಕಂಭ ಗ್ರಾಮದ ರೈತರಿಗೆ ಕೃಷಿ ಬಗ್ಗೆ ಅರಿವು ಮೂಡಿಸುವ ಕಾರ್ಯಕ್ರಮ..

ಬಂಟ್ವಾಳ : ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಕೃಷಿ ಇಲಾಖೆ ಬಂಟ್ವಾಳ ತಾಲೂಕು 2025-26 ನೇ ಸಾಲಿನ ರಾಷ್ಟ್ರೀಯ ನೈಸರ್ಗಿಕ ಕೃಷಿ ಅಭಿಯಾನ ಯೋಜನೆಯಡಿ ರೈತರಿಗೆ ಕೃಷಿ ಬಗ್ಗೆ ಅರಿವು ಮೂಡಿಸುವ ಕಾರ್ಯಕ್ರಮ...

ಆಕ್ಸಿಯಂ-4 ಉಡಾವಣೆ ಯಶಸ್ವಿ – ಭಾರತೀಯ ಗಗನಯಾತ್ರಿ ಶುಭಾಂಶು ಶುಕ್ಲಾ ಅಂತರಿಕ್ಷಯಾನ ಶುರು..

ಆಕ್ಸಿಯಮ್ 4 ಮಿಷನ್ ಬುಧವಾರ ಫ್ಲೋರಿಡಾದ ಕೆನಡಿ ಬಾಹ್ಯಾಕಾಶ ಕೇಂದ್ರದಿಂದ ಯಶಸ್ವಿಯಾಗಿ ಉಡಾವಣೆಯಾಗಿದೆ. ಮಧ್ಯಾಹ್ನ ಭಾರತೀಯ ಕಾಲಮಾನ 12.01ಕ್ಕೆ ಆಕ್ಸಿಯಮ್-4 ಬಾಹ್ಯಾಕಾಶ ಯೋಜನೆಯ ಗಗನಯಾತ್ರಿಗಳನ್ನು ಹೊತ್ತ ಸ್ಪೇಸ್ಎಕ್ಸ್ ಫಾಲ್ಕನ್-9 ನೌಕೆ, ಅಂತಾರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣ...

Rain Alert : ರಾಜ್ಯದಲ್ಲಿ ಮುಂಗಾರು ಚುರುಕು – ಕರಾವಳಿ ಸೇರಿ ಹಲವೆಡೆ 3 ದಿನ ಭಾರೀ ಮಳೆ ಸಾಧ್ಯತೆ..

ಮಂಗಳೂರು : ಕರ್ನಾಟಕದಲ್ಲಿ ಕಳೆದ ಮೂರ್ನಾಲ್ಕು ದಿನಗಳಿಂದ ಮುಂಗಾರು ಚುರುಕುಗೊಂಡಿದೆ. ಕರಾವಳಿ ಸೇರಿ ಹಲವೆಡೆ ಧಾರಾಕಾರ ಮಳೆಯಾಗುವ ಸಾಧ್ಯತೆ ಇದ್ದು, 6 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಮುಂಗಾರು ಆರಂಭವಾಗಿ 15 ದಿನಗಳು ಕಳೆದರೂ...

ರಾಜ್ಯ ಮಟ್ಟದ ಸಾಹಿತ್ಯ ಸ್ಪರ್ಧೆಯ ಬಹುಮಾನ ವಿತರಣೆ

ಬಂಟ್ವಾಳ : ಕವಿ‌, ಸಾಹಿತಿ, ಸಂಘಟಕ ಯುವವಾಹಿನಿಯ ಸಲಹೆಗಾರ ಬಿ ತಮ್ಮಯ ನೆನಪಿನ ರಾಜ್ಯಮಟ್ಟದ ಸಾಹಿತ್ಯ ಸ್ಪರ್ಧೆ ಆಯೋಜಿಸಲಾತ್ತು. ಈ ಸ್ಪರ್ಧೆಯಲ್ಲಿ ದಕ್ಷಿಣ ಕನ್ನಡ, ಉಡುಪಿ, ಕಾಸರಗೋಡು, ಹೊಸಪೇಟೆ , ವಿಜಯನಗರ, ಬೆಂಗಳೂರು, ಚಿತ್ರದುರ್ಗ,...