Saturday, January 31, 2026

ಕೊರೋನಾ ಸೋಂಕು ಪತ್ತೆಗೆ ಹೊಸ ಆಪ್- ಆರೋಗ್ಯ ಸೇತು

ಬಂಟ್ವಾಳ: ಮಹಾಮಾರಿ ಕೊರೊನಾ ಸೋಂಕು ನಿಯಂತ್ರಣಕ್ಕಾಗಿ ಭಾರತ ಸರ್ಕಾರ ಹೊಸ ಆಪ್ ಒಂದನ್ನು ಬಿಡುಗಡೆಗೊಳಿಸಿದೆ. ಭಾರತ ಸರ್ಕಾರ ಅರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯದ ಮೂಲಕ ಬಿಡುಗಡೆ ಮಾಡಿರುವ ದೃಡೀಕೃತ ಕೊರೊನಾ ವೈರಸ್ ಪೊಸಿಟಿವ್ ಪ್ರಕರಣಗಳ ಮಾಹಿತಿ ಪಡೆಯಲು ಆರೋಗ್ಯ ಸೇತು ಕೊವಿಡ್-19 ಕಾರ್ಯನಿರ್ವಹಿಸುತ್ತಿದೆ. ವೈರಸ್ ಸೋಂಕಿಗೆ ತುತ್ತಾಗಿರುವ ವ್ಯಕ್ತಿಯ ಮೇಲೆ ನಿಗಾ ಇರಿಸುವ ಮತ್ತು ವೈಯಕ್ತಿಕ ಅಲರ್ಟ್ ಸಂದೇಶದ ಮೂಲಕ ಎಚ್ಚರಿಕೆ ನೀಡುವ ವಿಶೇಷತೆಯುಳ್ಳ ಆರೋಗ್ಯ ಸೇತು ಕೊವಿಡ್-19 ಟ್ರ್ಯಾಕರ್ ಮೊಬೈಲ್ ಆಪ್ ಅಳವಡಿಸಿಕೊಂಡರೆ ನಿಮ್ಮ ಬಳಿ ಕೊರೋನಾ ಪೊಸಿಟಿವ್ ದೃಢಪಟ್ಟಿರುವ ವ್ಯಕ್ತಿ ಬಂದರೆ, ಅಥವಾ ನಿಮ್ಮ ಸಮೀಪ ಇದ್ದರೆ ಕೂಡಲೇ ಆಪ್ ಅಲರ್ಟ್ ಆಗುವ ಮೂಲಕ ಎಚ್ಚರಿಸುತ್ತದೆ. ಹೀಗಾಗಿ ಸಾಮಾಜಿಕ ಅಂತರ ಕಾಪಾಡಿಕೊಳ್ಳಲು ಈ ಅಪ್ ಉಪಯುಕ್ತವಾಗಿದೆ.


ಈ ಅಪ್ ಅನ್ನು ನೀವು ನಿಮ್ಮ ಸ್ಮಾರ್ಟ್ ಫೋನ್ ನಲ್ಲಿ ಪ್ಲೇ ಸ್ಟೋರ್ ನಲ್ಲಿ ಲಭ್ಯ. ಬ್ಲೂಟೂತ್ ಹಾಗೂ ಲೊಕೇಶನ್ ಆನ್ ಮಾಡಿರಬೇಕು.
ಈ ಆಪ್ ಅನ್ನು ಸಾರ್ವಜನಿಕರು, ಸರಕಾರಿ ನೌಕರರು, ಸ್ವಯಂ ಸೇವಕರು ಕಡ್ಡಾಯವಾಗಿ ಬಳಸಿ, ಎಚ್ಚರಿಕೆಯಿಂದರಬಹುದು.

More from the blog

ಫೆ.3 ಮತ್ತು 17ರಂದು ಪಣೋಲಿಬೈಲು ಕ್ಷೇತ್ರದಲ್ಲಿ ಅಗೇಲು ಸೇವೆ ಇಲ್ಲ 

ಬಂಟ್ವಾಳ : ತಾಲೂಕಿನ ಸಜೀಪಮೂಡ ಗ್ರಾಮದ ಕಾರಣಿಕ ಕ್ಷೇತ್ರ ಪಣೋಲಿಬೈಲು ಶ್ರೀ ಕಲ್ಲುರ್ಟಿ ದೈವಸ್ಥಾನದಲ್ಲಿ ಫೆಬ್ರವರಿ ತಿಂಗಳಿನಲ್ಲಿ ತಾ03 ಮತ್ತು17ರಂದು ಅಗೆಲು ಸೇವೆ ಇರುವುದಿಲ್ಲ ಉಳಿದ ಆದಿತ್ಯವಾರ ಮಂಗಳವಾರ ಶುಕ್ರವಾರ ಅಗೇಲು ಸೇವೆ...

ಬಂಟ್ವಾಳ ತಾಲೂಕು ಪಿಂಚಣಿದಾರರ ಸಂಘ : ಮಹಾಸಭೆ, ನೂತನ ಪದಾಧಿಕಾರಿಗಳ ಆಯ್ಕೆ 

ಬಂಟ್ವಾಳ : ಬಂಟ್ವಾಳ ತಾಲೂಕು ಪಿಂಚಣಿದಾರರ ಸಂಘ ಇದರ ಮಹಾಸಭೆ ಹಾಗೂ ನೂತನ ಪದಾಧಿಕಾರಿಗಳ ಆಯ್ಕೆ ಬಿ.ಸಿ.ರೋಡ್ ಸರಕಾರಿ ನೌಕರರ ಭವನದಲ್ಲಿ ಸಂಘದ ಕಾರ್ಯಕಾರಿ ಸಮಿತಿ ಅಧ್ಯಕ್ಷ ಪಿ .ಲೋಕನಾಥ ಶೆಟ್ಟಿ ಇವರ...

ಬಿ.ವಿ. ಕಾರಂತ ನೆನಪಿನ ಮಂಚಿ ನಾಟಕೋತ್ಸವ..

ಬಂಟ್ವಾಳ : ಬಿ ವಿ ಕಾರಂತ ರಂಗ ಭೂಮಿಕಾ ಟ್ರಸ್ಟ್ ವತಿಯಿಂದ ಬಿ.ವಿ. ಕಾರಂತ ನೆನಪಿನ ಮಂಚಿ ನಾಟಕೋತ್ಸವ ಮಂಚಿ ಕುಕ್ಕಾಜೆಯ ಸಿದ್ಧಿ ವಿನಾಯಕ ಭಜನಾ ಮಂದಿರದ ಸಭಾಂಗಣದಲ್ಲಿ ನಡೆಯಿತು. ಎರಡು ದಿವಸಗಳ ಈ...

ಸಾರಿಗೆ ಬಸ್‌ಗಳ ಮೇಲೆ, ನಿಲ್ದಾಣದಲ್ಲಿ ತಂಬಾಕು ಜಾಹೀರಾತು ತೆರವಿಗೆ ಸಚಿವ ರಾಮಲಿಂಗಾರೆಡ್ಡಿ ಸೂಚನೆ

ಬೆಂಗಳೂರು: ಸಾರಿಗೆ ಬಸ್, ಬಸ್ ನಿಲ್ದಾಣಗಳಲ್ಲಿ ತಂಬಾಕು ಉತ್ಪನ್ನಗಳ ಜಾಹೀರಾತುಗಳನ್ನು ಪ್ರದರ್ಶಿಸುವುದನ್ನು ಸಂಪೂರ್ಣವಾಗಿ ನಿಷೇಧಿಸಿ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಮಹತ್ವದ ಆದೇಶ ಹೊರಡಿಸಿದ್ದಾರೆ. ಸಾರ್ವಜನಿಕರ ಹಿತದೃಷ್ಟಿಯಿಂದ ಈ ಕೂಡಲೇ ಜಾರಿಗೆ ಬರುವಂತೆ ಸಾರಿಗೆ...