Wednesday, February 12, 2025

ದಾಸ್ತಾನಿರಿಸಿದ್ದ 3 ಕ್ವಿಂಟಾಲ್ ಅಡಿಕೆ ಕಳವು : ಪ್ರಕರಣ ದಾಖಲು

ಬಂಟ್ವಾಳ: ಮನೆಯ‌ ಅಟ್ಟದಲ್ಲಿ ದಾಸ್ತಾನಿಟ್ಟಿದ್ದ 3 ಕ್ವಿಂಟಾಲ್ ನಷ್ಟು ಅಡಿಕೆಯನ್ನು ಕಳವುಗೈದ ಘಟನೆ ಬಂಟ್ವಾಳ ತಾ.ನ ಕರ್ಪೆ ಗ್ರಾಮದಲ್ಲಿ ನಡೆದಿದ್ದು,ಈ ಬಗ್ಗೆ ಬಂಟ್ವಾಳ ಗ್ರಾಮಂತರ ಪೊಲೀಸ್ ಠಾಣೆಯಲ್ಲಿ‌ ಕೇಸುದಾಖಲಾಗಿದೆ.

ಕರ್ಪೆಗ್ರಾಮದ ಕೆ. ಜಿನಚಂದ್ರ ಜೈನ್ ಅವರ ನಿವಾಸದಲ್ಲಿ ಈ ಕಳವು ಕೃತ್ಯ ನಡೆದಿದೆ.ಜಿನಚಂದ್ರ ಜೈನ್ ಅವರು ಪ್ರಸ್ತುತ ಬಿ.ಮೂಡ ಗ್ರಾಮದಲ್ಲಿ ವಾಸ್ತವ್ಯವಿದ್ದು,ಮಾ.1 ರಂದು ಕರ್ಪೆಗೆ ತೆರಳಿ ಸುಮಾರು 11 ಗೋಣಿ ಚೀಲದಷ್ಟು ಒಣಗಿಸಿದ್ದ ಸುಮಾರು 3 ಕ್ವಿಂಟಾಲ್ ಅಡಿಕೆಯನ್ನು ಮನೆಯ ಅಟ್ಟದಲ್ಲಿರಿಸಿ ಮನೆಗೆ ಬೀಗ ಹಾಕಿ ಸಂಜೆ ವಾಪಾಸ್ ಬಂಟ್ವಾಳದ ಮನೆಗೆ ಬಂದಿದ್ದರು.

ಮರುದಿನ ಬೆಳಿಗ್ಗೆ‌ ಕರ್ಪೆಯ ಮನೆಗೆ ಹೋದಾಗ ಮನೆಯ ಹಿಂಬದಿ ಬಾಗಿಲು ಹಾಗೂ ಮನೆಯೊಳಗಿನ ಬಾಗಿಲು ತೆರೆದುಕೊಂಡಿದ್ದು,ಅನುಮಾನದಿಂದ ನೋಡಿದಾಗ ಯಾರೋ ಕಳ್ಳರು ಮನೆಯ ಹಿಂಭಾಗದ ಕಿಟಕಿಯ ರಾಡ್ ನ್ನು ಮುರಿದು ಒಳಪ್ರವೇಶಿಸಿ ಮನೆಯ ಅಟ್ಟದಲ್ಲಿ ಇಟ್ಟಿದ್ದ ಸುಲಿಯದ  11 ಗೋಣಿ  ಚೀಲಗಳಲ್ಲಿ ತುಂಬಿಸಿ ದಾಸ್ತಾನಿಟ್ಟಿದ್ದ ಅಡಿಕೆಯನ್ನು ಕಳವುಗೈದಿರುವುದು ಕಂಡು ಬಂದಿದೆ ಎಂದು ಅವರು ದೂರಿನಲ್ಲಿ‌ತಿಳಿಸಿದ್ದಾರೆ. ಕಳವಾದ ಅಡಿಕೆಯ ಮೌಲ್ಯ ಸುಮಾರು 60 ಸಾ. ರೂ. ಎಂದು ಅಂದಾಜಿಸಲಾಗಿದೆ.

ಈ ಬಗ್ಗೆ ಬಂಟ್ವಾಳ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು,ತನಿಖೆ ನಡೆಯುತ್ತಿದೆ.

More from the blog

ಫೆ.15 ರಂದು ಕಮಲಾಶ್ರಯ ಮನೆಯ ಹಸ್ತಾಂತರ ಹಾಗೂ ಗೃಹಪ್ರವೇಶ

ಬಂಟ್ವಾಳ: ಬಿಜೆಪಿ ಮಹಾಶಕ್ತಿ ಕೇಂದ್ರ ಮಾಣಿ ಮತ್ತು ಬಿಜೆಪಿ ಶಕ್ತಿ ಕೇಂದ್ರ ಅನಂತಾಡಿ ಇದರ ಸಹಕಾರದಿಂದ ಅನಂತಾಡಿ ಗ್ರಾಮದ ಬಾಬನಕಟ್ಟೆ ಎಂಬಲ್ಲಿ ಬಲ್ಲು ಕೊರಗ ಇವರ ಕುಟುಂಬಕ್ಕೆ ನಿರ್ಮಿಸಲಾದ ನೂತನ ಮನೆಯನ್ನು ಫೆ.15...

ಬೇಲಿ ವಿವಾದ : ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡ ಶಾಸಕ ರಾಜೇಶ್ ನಾಯ್ಕ್

ಬಂಟ್ವಾಳ: ತಾ.ಪಂ.ಅಧಿಕಾರಿ ವರ್ಗ ಕಚೇರಿ ಮುಂಭಾಗದ ಜಾಗಕ್ಕೆ ಕಬ್ಬಿಣದ ರಾಡ್ ಅಳವಡಿಸಿ ಬೇಲಿ ಹಾಕಿದ ವಿಚಾರಕ್ಕೆ ಸಂಬಂಧಿಸಿದಂತೆ ಸಾರ್ವಜನಿಕ ದೂರಿನ ಹಿನ್ನೆಲೆಯಲ್ಲಿ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಅವರು ತಾ.ಪಂ.ಗೆ ಹಠಾತ್...

ಚಾಲಕನಿಗೆ ಮೂರ್ಚೆ ರೋಗ ಬಂದು ಡಿವೈಡರ್ ಮೇಲೆ ಹತ್ತಿದ ಲಾರಿ

ಬಂಟ್ವಾಳ: ರಾ.ಹೆ.75ರ ತುಂಬೆ ಸಮೀಪ ಚಾಲಕನಿಗೆ ಮೂರ್ಛೆ ರೋಗ ಬಂದು ಲಾರಿಯೊಂದು ಡಿವೈಡರ್ ಮೇಲೆ ಹತ್ತಿ ಸುಮಾರು 100 ಮೀ.ನಷ್ಟು ಚಲಿಸಿ ನಿಂತಿದ್ದು,‌ ಸೀಟಿನಲ್ಲಿ ಬಿದ್ದಿದ್ದ ಚಾಲಕನನ್ನು ಸ್ಥಳೀಯರು ತುಂಬೆ ಆಸ್ಪತ್ರೆಗೆ ‌ಕರೆದುಕೊಂಡು...

ನೇಣು ಬಿಗಿದು ಯುವಕ ಆತ್ಮಹತ್ಯೆ

ಬಂಟ್ವಾಳ: ಖಿನ್ನತೆಯಿಂದ ಅವಿವಾಹಿತ ವ್ಯಕ್ತಿಯೊರ್ವನು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಅಮ್ಟಾಡಿ ನಿವಾಸಿ ಮೆಕ್ಸಿನ್ ತಾವ್ರೋ ಅವರ ಮಗ ಜೀವನ್  ತಾವ್ರೋ ( 37) ಆತ್ಮಹತ್ಯೆ ಮಾಡಿಕೊಂಡ ಯುವಕ. ‌‌‌ಜೀವನ್ ಅವರು ಅಗಾಗ...