Tuesday, January 27, 2026

ದಾಸ್ತಾನಿರಿಸಿದ್ದ 3 ಕ್ವಿಂಟಾಲ್ ಅಡಿಕೆ ಕಳವು : ಪ್ರಕರಣ ದಾಖಲು

ಬಂಟ್ವಾಳ: ಮನೆಯ‌ ಅಟ್ಟದಲ್ಲಿ ದಾಸ್ತಾನಿಟ್ಟಿದ್ದ 3 ಕ್ವಿಂಟಾಲ್ ನಷ್ಟು ಅಡಿಕೆಯನ್ನು ಕಳವುಗೈದ ಘಟನೆ ಬಂಟ್ವಾಳ ತಾ.ನ ಕರ್ಪೆ ಗ್ರಾಮದಲ್ಲಿ ನಡೆದಿದ್ದು,ಈ ಬಗ್ಗೆ ಬಂಟ್ವಾಳ ಗ್ರಾಮಂತರ ಪೊಲೀಸ್ ಠಾಣೆಯಲ್ಲಿ‌ ಕೇಸುದಾಖಲಾಗಿದೆ.

ಕರ್ಪೆಗ್ರಾಮದ ಕೆ. ಜಿನಚಂದ್ರ ಜೈನ್ ಅವರ ನಿವಾಸದಲ್ಲಿ ಈ ಕಳವು ಕೃತ್ಯ ನಡೆದಿದೆ.ಜಿನಚಂದ್ರ ಜೈನ್ ಅವರು ಪ್ರಸ್ತುತ ಬಿ.ಮೂಡ ಗ್ರಾಮದಲ್ಲಿ ವಾಸ್ತವ್ಯವಿದ್ದು,ಮಾ.1 ರಂದು ಕರ್ಪೆಗೆ ತೆರಳಿ ಸುಮಾರು 11 ಗೋಣಿ ಚೀಲದಷ್ಟು ಒಣಗಿಸಿದ್ದ ಸುಮಾರು 3 ಕ್ವಿಂಟಾಲ್ ಅಡಿಕೆಯನ್ನು ಮನೆಯ ಅಟ್ಟದಲ್ಲಿರಿಸಿ ಮನೆಗೆ ಬೀಗ ಹಾಕಿ ಸಂಜೆ ವಾಪಾಸ್ ಬಂಟ್ವಾಳದ ಮನೆಗೆ ಬಂದಿದ್ದರು.

ಮರುದಿನ ಬೆಳಿಗ್ಗೆ‌ ಕರ್ಪೆಯ ಮನೆಗೆ ಹೋದಾಗ ಮನೆಯ ಹಿಂಬದಿ ಬಾಗಿಲು ಹಾಗೂ ಮನೆಯೊಳಗಿನ ಬಾಗಿಲು ತೆರೆದುಕೊಂಡಿದ್ದು,ಅನುಮಾನದಿಂದ ನೋಡಿದಾಗ ಯಾರೋ ಕಳ್ಳರು ಮನೆಯ ಹಿಂಭಾಗದ ಕಿಟಕಿಯ ರಾಡ್ ನ್ನು ಮುರಿದು ಒಳಪ್ರವೇಶಿಸಿ ಮನೆಯ ಅಟ್ಟದಲ್ಲಿ ಇಟ್ಟಿದ್ದ ಸುಲಿಯದ  11 ಗೋಣಿ  ಚೀಲಗಳಲ್ಲಿ ತುಂಬಿಸಿ ದಾಸ್ತಾನಿಟ್ಟಿದ್ದ ಅಡಿಕೆಯನ್ನು ಕಳವುಗೈದಿರುವುದು ಕಂಡು ಬಂದಿದೆ ಎಂದು ಅವರು ದೂರಿನಲ್ಲಿ‌ತಿಳಿಸಿದ್ದಾರೆ. ಕಳವಾದ ಅಡಿಕೆಯ ಮೌಲ್ಯ ಸುಮಾರು 60 ಸಾ. ರೂ. ಎಂದು ಅಂದಾಜಿಸಲಾಗಿದೆ.

ಈ ಬಗ್ಗೆ ಬಂಟ್ವಾಳ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು,ತನಿಖೆ ನಡೆಯುತ್ತಿದೆ.

More from the blog

ವಿದ್ಯಾರ್ಜನೆ ಪಡೆದ ಸಂಸ್ಥೆಗೆ ನೀಡುವ ಸಹಾಯಸ್ತ ದೇವತಾ ಕಾರ್ಯಕ್ಕೆ ಸಮಾನ : ಪ್ರಭಾಕರ ಪ್ರಭು

ಬಂಟ್ವಾಳ : ಬಾಲ್ಯದಲ್ಲಿ ಬಾಹ್ಯ ಪ್ರಪಂಚದಲ್ಲಿನ ಆಗುಹೋಗುಗಳ ಬಗ್ಗೆ ಪರಿಚಯಿಸಿ ಪ್ರಾಥಮಿಕ ಶಾಲಾ ಪೂರ್ವ ಶಿಕ್ಷನವನ್ನು ನೀಡುತ್ತಿರುವ ಅಂಗನವಾಡಿಗಳ ಮೂಲಭೂತ ಸೌಕರ್ಯಗಳಿಗೆ ನೀಡುವ ಸಹಾಯಸ್ತಾವು ದೇವತಾ ಕಾರ್ಯಕ್ಕೆ ಸಮಾನವಾಗಿರುತ್ತದೆ ಎಂದೂ ಸಿದ್ದಕಟ್ಟೆ ಪ್ರಾಥಮಿಕ...

ಮಣಿಹಳ್ಳ : ಹಿಂದೂ ಯುವಸೇನೆ ಏಕಲವ್ಯ ಶಾಖೆ ಆಶ್ರಯದಲ್ಲಿ ಎಳ್ಳು ಗಂಟು ದೀಪೋತ್ಸವ..

ಬಂಟ್ವಾಳ : ಹಿಂದೂ ಯುವಸೇನೆ ಏಕಲವ್ಯ ಶಾಖೆ ಮಣಿಹಳ್ಳ ಇದರ ಆಶ್ರಯದಲ್ಲಿ ವಿಶ್ವ ಶಾಂತಿಗಾಗಿ, ಲೋಕ ಕಲ್ಯಾಣಾರ್ಥವಾಗಿ, ಶನಿದೋಷ ಪರಿಹಾರಕ್ಕಾಗಿ ಸಕಲ ಇಷ್ಟಾರ್ಥ ಸಿದ್ಧಿಗಾಗಿ ಜ. 24ರಂದು ಶನಿವಾರ ನಡೆದ ಸತತ 14...

ಕೊಡಾಜೆ : ತರ್ಬಿಯತುಲ್ ಇಸ್ಲಾಂ ಮದ್ರಸದಲ್ಲಿ ಗಣರಾಜ್ಯೋತ್ಸವ ಆಚರಣೆ

ಬಂಟ್ವಾಳ : ಕೊಡಾಜೆ ಬದ್ರಿಯಾ ಜುಮಾ ಮಸೀದಿ ಇದರ ಅಧೀನದ ತರ್ಬಿಯತುಲ್ ಇಸ್ಲಾಂ ಮದ್ರಸದ ವತಿಯಿಂದ ಗಣರಾಜ್ಯೋತ್ಸವ ಆಚರಿಸಲಾಯಿತು. ಸಮಾರಂಭದ ಅಧ್ಯಕ್ಷತೆ ವಹಿಸಿದ್ದ ಮಸೀದಿ ಅಧ್ಯಕ್ಷ ಅಬ್ಬಾಸ್ ನೇರಳಕಟ್ಟೆ ಧ್ವಜಾರೋಹಣ ನೆರವೇರಿಸಿದರು. ಮಸೀದಿ ಕಾರ್ಯದರ್ಶಿ ಎಸ್.ಎಂ.ರಫೀಕ್...

ಕಟೀಲು 7 ಮೇಳಗಳ ಜ.27ರ ಸೇವೆಯಾಟಗಳ ವಿವರ ಇಲ್ಲಿದೆ..

ಮಂಗಳೂರು: ಕಟೀಲು ಶ್ರೀ ದುರ್ಗಾಪರಮೇಶ್ವರೀ ಪ್ರಸಾದಿತ ದಶಾವತಾರ ಯಕ್ಷಗಾನ ಮಂಡಳಿ ಇದರ 7 ಮೇಳಗಳ ಜ.27ರ ಸೇವೆಯಾಟಗಳ ವಿವರ ಈ ಕೆಳಗಿನಂತಿವೆ.. ಜ.27ರ ಸೇವೆಯಾಟಗಳ ವಿವರ : ಆಡಳಿತ ಮಂಡಳಿ, ಶ್ರೀ ಮಹಾಗಣಪತಿ ದೇವಸ್ಥಾನ,...