Monday, January 26, 2026

ಪ್ರೇಮಸಲ್ಲಾಪದ ವಿಡಿಯೋ ವೈರಲ್ ಆರೋಪಿ ಪೋಲೀಸ್ ವಶಕ್ಕೆ

ಬಂಟ್ವಾಳ: ಸಾಮಾಜಿಕ ಜಾಲತಾಣದಲ್ಲಿ ಯವಕ ಯುವತಿಯ ಪ್ರೇಮ ಸಲ್ಲಾಪದ ವಿಡಿಯೋ ವೈರಲ್ ಆರೋಪಿ ನಗರ ಠಾಣಾ ಪೋಲೀಸರ ವಶಕ್ಕೆ.

ವ್ಯಕ್ತಿ ಯೋರ್ವ ಯುವತಿ ಜೊತೆಯಲ್ಲಿ ನಗ್ನವಾಗಿ ಪ್ರೇಮಸಲ್ಲಾಪವಾಡುವ ವೀಡಿಯೋ ವೊಂದು ವ್ಯಾಟ್ಸ್ ಅಪ್ ಮೂಲಕ ಹರಿದಾಡುತ್ತಿದ್ದು , ಈ ಬಗ್ಗೆ ಸ್ಥಳೀಯ ಸಂಘಟನೆಯ ದೂರಿನಂತೆ ಬಂಟ್ವಾಳ ನಗರ ಠಾಣಾ ಎಸ್. ಐ.ಚಂದ್ರಶೇಖರ್ ಅವರು ಆರೋಪಿಯನ್ನು ದೂರು ನೀಡಿದ ಕೆಲವೇ ಕ್ಷಣದಲ್ಲಿ ವಶಕ್ಕೆ ಪಡೆದು ಕೊಂಡಿದ್ದು ವಿಚಾರಣೆ ನಡೆಯುತ್ತಿದೆ.
ಬಂಟ್ವಾಳ ಪುರಸಭಾ ವ್ಯಾಪ್ತಿಯ ಲೊರೆಟ್ಟು ಟಿಪ್ಪು ನಗರ ನಿವಾಸಿ ಮೋನು ಯಾನೆ ಅಬ್ದುಲ್ ರಹಿಮಾನ್ (55)ಅವರನ್ನು ಪೋಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.
ಈತ ಮೀನು ವ್ಯಾಪಾರಿ ಯಾಗಿದ್ದು ಎರಡು ಮದುವೆಯಾಗಿ 9 ಮಂದಿ ಮಕ್ಕಳಿದ್ದಾರೆ.
ಈತ ಯುವತಿಯೊಂದಿಗೆ ನಗ್ನವಾಗಿ ಪ್ರೇಮಸಲ್ಲಾಪವಾಡುವ ವೀಡಿಯೋ ಚಿತ್ರೀಕರಣ ನಡೆಸಿ ಅಬಳಿಕ ಸಾಮಾಜಿಕ ಜಾಲತಾಣದಲ್ಲಿ ಹರಿಯಬಿಟ್ಟಿದ್ದಾನೆ ಎಂಬ ಆರೋಪ ಸಂಘಟನೆಯವರದ್ದು.
ಸಂಘಟನೆಯ ಪ್ರಮುಖರ ದೂರಿನಂತೆ ನಗರ ಠಾಣಾ ಪೋಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.
ಘಟನೆ ಎಲ್ಲಿ‌ನಡೆದಿದೆ ಎಂಬುದು ತನಿಖೆಯ ಬಳಿಕವಷ್ಟೇ ಗೊತ್ತಾಗಬೇಕಾಗಿದೆ.

More from the blog

ಉಸ್ತುವಾರಿ ಸಚಿವರು ಗಣರಾಜ್ಯೋತ್ಸವ ವೇದಿಕೆಯನ್ನು ಸುಳ್ಳು ಹರಡಲು ಬಳಸಿಕೊಂಡಿರುವುದು ಖೇದಕರ : ಸಂಸದ ಕ್ಯಾ.ಚೌಟ

ಮಂಗಳೂರು: ಸಂವಿಧಾನಿಕ ಹುದ್ದೆಯನ್ನು ದುರುಪಯೋಗಪಡಿಸಿ ಸುಳ್ಳಿನ ಕಾರ್ಖಾನೆಯನ್ನೇ ಸೃಷ್ಟಿಸುವ ಕಾಂಗ್ರೆಸ್‌ ಸರ್ಕಾರದ ಪ್ರಯತ್ನ ಸಂಪೂರ್ಣ ವಿಫಲಗೊಂಡಿರುವ ಕಾರಣ ಇದೀಗ ಸಚಿವ ದಿನೇಶ್‌ ಗುಂಡೂರಾವ್‌ ಅವರು ಘನವೆತ್ತ ರಾಜ್ಯಪಾಲರ ನಡೆಯನ್ನು ಟೀಕಿಸುತ್ತಿದ್ದಾರೆ ಎಂದು ದಕ್ಷಿಣ...

ಸಂಗಬೆಟ್ಟು ಗ್ರಾ.ಪಂ ವಿಶೇಷ ಗ್ರಾಮ ಸಭೆ : ವಿಬಿ-ಜಿ ರಾಮ್ ಜಿ ಯೋಜನೆ ಅನುಷ್ಠಾನಕ್ಕೆ ತೀರ್ಮಾನ 

ಬಂಟ್ವಾಳ : ಕೇಂದ್ರ ಸರಕಾರವು ಹೊಸದಾಗಿ ಜಾರಿಗೆ ತಂದಿರುವ ವಿಬಿ-ಜಿ ರಾಮ್ ಜಿ ("ವಿಕಸಿತ್ ಭಾರತ್ "ಗ್ಯಾರಂಟಿ ಯೋಜಗಾರ್ ಮತ್ತು ಆಜೀವಿಕಾ ಮಿಷನ್ (ಗ್ರಾಮೀಣ್) ಯೋಜನೆಯು ಒಂದು ಅತ್ಯುತ್ತಮ ಯೋಜನೆಯಾಗಿದ್ದು, ಇದರಲ್ಲಿನ ಕೆಲವೊಂದು...

ವೈಭವದಿಂದ ಜರುಗಿದ ಮಡಂತ್ಯಾರು ಮಂಡಲದ ಹಿಂದು ಸಂಗಮ ಕಾರ್ಯಕ್ರಮ..

ಮಡಂತ್ಯಾರು : ರಾಷ್ಟ್ರೀಯ ಸ್ವಯಂಸೇವಕ ಸಂಘದ ಶತಾಬ್ದಿ ವರ್ಷದ ಅಂಗವಾಗಿ, ಮಡಂತ್ಯಾರು ಮಂಡಲದ ಹಿಂದು ಸಂಗಮ ಕಾರ್ಯಕ್ರಮವು ಜ. 25 ಭಾನುವಾರದಂದು ಮಡಂತ್ಯಾರಿನಲ್ಲಿ ಅತ್ಯಂತ ವೈಭವ ಮತ್ತು ಶಿಸ್ತಿನೊಂದಿಗೆ ನಡೆಯಿತು. ಸಂಜೆ ನಾಲ್ಕು ಗಂಟೆಗೆ...

ತುಳುನಾಡ ಜಾತ್ರೆ – ಶ್ರೀ ಒಡಿಯೂರು ರಥೋತ್ಸವ, ಬ್ರಹ್ಮಕಲಶೋತ್ಸವ ಹೊರೆ ಕಾಣಿಕೆ, ಉಗ್ರಾಣ ಮುಹೂರ್ತ

ವಿಟ್ಲ: ಜ.27 ಮತ್ತು 28 ರಂದು ಒಡಿಯೂರು ಶ್ರೀ ಗುರುದೇವ ದತ್ತ ಸಂಸ್ಥಾನದಲ್ಲಿ ನಡೆಯಲಿರುವ ತುಳುನಾಡ ಜಾತ್ರೆ -ಶ್ರೀ ಒಡಿಯೂರು ರಥೋತ್ಸವ, ಬ್ರಹ್ಮಕಲಶೋತ್ಸವ, ವಂದೇ ಮಾತರಂ ತುಳು ಸಾಹಿತ್ಯ ಸಮ್ಮೇಳನದ ಅಂಗವಾಗಿ ಹಸಿರುವಾಣಿ...