Friday, February 7, 2025

ನಗದು ಕಳವು ಮಾಡಿದ ಆರೋಪಿ ಯನ್ನು ಬಂಧಿಸಿದ ಪುತ್ತೂರು ಪೋಲೀಸರು

ಪುತ್ತೂರು: ಕಬಕದಲ್ಲಿ ಹಾಡುಹಗಲೇ ಅಂಗಡಿಯಿಂದ ಸಾವಿರಾರು ರೂ ನಗದು ಕಳವು ಮಾಡಿದ ಆರೋಪಿ ಯನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರು ಪಡಿಸಿದ ಪುತ್ತೂರು ಪೋಲೀಸರು.
ಇಳಂತಿಲ ಗ್ರಾಮದ ನೇಜಿಕಾರು ನಿವಾಸಿ ದಿ! ಹಸನಬ್ಬ ಅವರ ಪುತ್ರ ಮಹಮ್ಮದ್ ಶಾಫಿ ( 27) ಬಂಧಿತ ಆರೋಪಿ.
ಈತನ ವಿರುದ್ದ ಉರುವ ಪೋಲೀಸ್ ಠಾಣೆಯ ಲ್ಲಿ ದರೋಡೆ ಪ್ರಕರಣ ದಾಖಲಾಗಿ ಬಂಧಿತ ನಾಗಿದ್ದ ಕಳೆದ ನಾಲ್ಕು ದಿನಗಳ ಹಿಂದೆಯಷ್ಟೆ ಬಿಡುಗಡೆಗೊಂಡಿದ್ದ.
ಕಬಕ ದಲ್ಲಿ ಗೋಪಾಲಕೃಷ್ಣ ರೈ ಅವರ ಪುತ್ತೂರು ಟಯರ್ಸ್ ಎಂಬ ಅಂಗಡಿಯಿಂದ ಈತ ಮಧ್ಯಾಹ್ನ2 ಗಂಟೆಯ ವೇಳೆ ಕಳವು ನಡೆಸಿದ್ದ.
ಮಾಲಕ ಗೋಪಾಲಕೃಷ್ಣ ರೈ ಅವರು ಅಂಗಡಿಯೊಳಗೆ ಸಾಮಾನು ತರಲೆಂದು ಹೋದ ವೇಳೆ ಕಾದು ಕುಳಿತಿದ್ದ ಈತ ಕ್ಯಾಸ್ ಕೌಂಟರ್ ನಲ್ಲಿದ್ದ 23 ಸಾವಿರ ರೂ ಯನ್ನು ಕದ್ದುಕೊಂಡು ಹೋಗಿದ್ದ.

ಸಾರ್ವಜನಿಕ ಮಾಹಿತಿ ಹಾಗೂ ಸಿ.ಸಿ.ಕ್ಯಾಮರಾ ಪೂಟೇಜ್ ಪಡೆದ ಪೋಲೀಸರು ಆರೋಪಿ ಯ ಬಂಧನ ಮಾಡಲು ಯಶಸ್ವಿಯಾಗಿ ದ್ದಾರೆ

ಪುತ್ತೂರು ನಗರ ಠಾಣಾ ನಿರೀಕ್ಷಕ ತಿಮ್ಮಪ್ಪ ನಾಯ್ಕ್ ಅವರ ಮಾರ್ಗದರ್ಶನ ದಲ್ಲಿ ಪಿ.ಎಸ್.ಐ.ರುಕ್ಮಯ ಮೂಲ್ಯ ಮತ್ತು ಸಿಬ್ಬಂದಿ ಗಳು ಕಾರ್ಯಚರಣೆ ನಡೆಸಿ ಆರೋಪಿಯನ್ನು ಬಂಧಿಸಿದ್ದಾರೆ.

More from the blog

ಅನರ್ಹ ಮತದಾರರ ಮತವನ್ನು ಚುನಾವಣಾ ಫಲಿತಾಂಶದ ಮತ ಎಣಿಕೆಗೆ ಪರಿಗಣಿಸಬಾರದು: ಉಚ್ಚ ನ್ಯಾಯಾಲಯದ ತೀರ್ಪು

ಬಂಟ್ವಾಳ: ಮಡಂತ್ಯಾ‌ರ್ ಪ್ರಾಥಮಿಕ ಸಹಕಾರಿ ಕೃಷಿ ಪತ್ತಿನ ಚುನಾವಣೆಯಲ್ಲಿ ಮತದಾನದ ಹಕ್ಕನ್ನು ಪಡೆದಿರುವ ವ್ಯಕ್ತಿಗಳ ಮತವನ್ನು ಚುನಾವಣಾ ಫಲಿತಾಂಶದ ಮತ ಎಣಿಕೆಯಲ್ಲಿ ಪರಿಗಣಿಸಬಾರದು ಎಂದು ಕರ್ನಾಟಕ ಉಚ್ಚ ನ್ಯಾಯಲಯವು ಐತಿಹಾಸಿಕ ತೀರ್ಪನ್ನು ಹೊರಡಿಸಿದೆ. ಮಡಂತ್ಯಾ‌ರ್ ಪ್ರಾಥಮಿಕ...

ಬಂಟ್ವಾಳ : ತಾಲೂಕು ಆಸ್ಪತ್ರೆಗೆ ವೈದ್ಯರನ್ನು ನೀಡಿ – ಸಚಿವ ದಿನೇಶ್ ಗುಂಡೂರಾವ್ ಗೆ ಮನವಿ

ಬಂಟ್ವಾಳ: ಸುಸಜ್ಜಿತವಾದ ಆಸ್ಪತ್ರೆಯಲ್ಲಿ ವೈದ್ಯಕೀಯ ಸೌಲಭ್ಯಗಳನ್ನು ಹೊಂದಿದೆಯಾದರೂ ರೋಗಿಗಳಿಗೆ ಚಿಕಿತ್ಸೆ ನೀಡಲು ಸರಿಯಾದ ವಿಭಾಗದಲ್ಲಿ ವೈದ್ಯರುಗಳಿಲ್ಲದೆ, ತಾಲೂಕಿನ ಬಡ ರೋಗಿಗಳಿಗೆ ತೊಂದರೆಯಾಗುತ್ತಿದ್ದು, ಕೂಡಲೇ ಸಮಸ್ಯೆ ಬಗೆಹರಿಸಲು ಸಾಮಾಜಿಕ ಕಾರ್ಯಕರ್ತ ಸಮಾದ್ ಕೈಕಂಬ ಅವರು...

ಕಣಿಯೂರು: ನುಡಿನಮನ, ಯಕ್ಷಗಾನ ತಾಳಮದ್ದಳೆ

ವಿಟ್ಲ: ಕನ್ಯಾನ ಕಣಿಯೂರು ಶ್ರೀ ಚಾಮುಂಡೇಶ್ವರಿ ದೇವಿ ಕ್ಷೇತ್ರದಲ್ಲಿ ಇತ್ತೀಚೆಗೆ ನಿಧನರಾದ ಯಕ್ಷಗಾನ ಕಲಾವಿದ, ಉಪನ್ಯಾಸಕ ಪಕಳಕುಂಜ ಶ್ಯಾಮ್ ಭಟ್, ಕೂಡ್ಲು ಗಣಪತಿ ಭಟ್ ಅವರಿಗೆ ನುಡಿ ನಮನ ಹಾಗೂ ಯಕ್ಷಗಾನ ತಾಳಮದ್ದಳೆ...

ಒಡಿಯೂರಿನಲ್ಲಿ 25ನೇ ತುಳು ಸಾಹಿತ್ಯ ಸಮ್ಮೇಳನ ಉದ್ಘಾಟನೆ

ವಿಟ್ಲ: ಒಡಿಯೂರು ರಥೋತ್ಸವ ತುಳುನಾಡ ಜಾತ್ರೆಯ ಅಂಗವಾಗಿ 25 ನೇ ವರ್ಷದ ತುಳು ಸಾಹಿತ್ಯ ಸಮ್ಮೇಳನ ಶ್ರೀ ಸಂಸ್ಥಾನದ ರಾಜಾಂಗಣದಲ್ಲಿ ನಡೆಯಿತು. ಸಮ್ಮೇಳನ ಉದ್ಘಾಟಿಸಿ ಆಶೀರ್ವಚನ ನೀಡಿದ ಶ್ರೀ ಗುರುದೇವದತ್ತ ಸಂಸ್ಥಾನದ ಶ್ರೀ ಗುರುದೇವಾನಂದ...