ವಿಟ್ಲ: ಹಲವು ಪ್ರಕರಣಗಳ ವಿಚಾರಣೆಗೆ ನ್ಯಾಯಾಲಯಕ್ಕೆ ಹಾಜರಾಗದೇ ಸುಮಾರು ಎರಡು ವರ್ಷದಿಂದ ತಲೆ ಮರೆಸಿಕೊಂಡಿದ್ದ ಆರೋಪಿಯೊಬ್ಬನನ್ನು ವಿಟ್ಲ ಪೊಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸುವಲ್ಲಿ ಯಶಸ್ವಿಯಾಗಿದ್ದಾರೆ.


ಬಾಕ್ರಬೈಲು ನಿವಾಸಿ ಬಾರಿಕ್ (33) ಬಂಧಿತ ಆರೋಪಿಯಾಗಿದ್ದಾನೆ. ಈತನು ವಿಟ್ಲ ಪೊಲೀಸ್ ಠಾಣೆಯ ಹಲವು ಕೇಸುಗಳಲ್ಲಿ ವಾರಂಟ್ ಗೆ ಸುಮಾರು 2 ವರ್ಷ ಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆ ಕರೆಸಿಕೊಂಡಿದ್ದ ಎನ್ನಲಾಗಿದೆ. ಖಚಿತ ಮಾಹಿತಿ ಮೇರೆಗೆ ವಿಟ್ಲ ಪೊಲೀಸ್ ವಶಕ್ಕೆ ಪಡೆದು ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದು, ನ್ಯಾಯಾಂಗ ಬಂಧನ ವಿಧಿಸಲಾಗಿದೆ.
ಇರುವಿಕೆಯ ಖಚಿತ ಮಾಹಿತಿ ಪಡೆದ ವಿಟ್ಲ ಪೊಲೀಸ್ ಸಿಬ್ಬಂದಿಗಳಾದ ಶ್ರೀಧರ ಕೆ., ಪ್ರಥಾಪ್ ರೆಡ್ಡಿ, ವಿನಾಯಕ್, ಸಂಜೀವ ಅವರು ಪೊಲೀಸ್ ವರಿಷ್ಠಾಧಿಕಾರಿ ಡಾ. ಲಕ್ಷ್ಮೀ ಪ್ರಸಾದ್, ಡಿವೈಎಸ್ಪಿ ವೆಲೆಂಟನ್ ಡಿಸೋಜ್ ಮಾರ್ಗದರ್ಶನದಲ್ಲಿ ವೃತ್ತ ನಿರೀಕ್ಷಕ ಟಿ. ಡಿ. ನಾಗರಾಜ್ ಅವರ ನೇತೃತ್ವದಲ್ಲಿ ವಿಟ್ಲ ಪಿ ಎಸ್ ಐ ವಿನೋದ್ ರೆಡ್ಡಿ ಅವರ ಸೂಚನೆಯಂತೆ ಬಂಧಿಸಿದ್ದಾರೆ.