Monday, January 26, 2026

ಸರಕಾರಿ ಅಧಿಕಾರಿಗಳ ಕರ್ತವ್ಯಕ್ಕೆ ಅಡ್ಡಿ: ಇಬ್ಬರ ಬಂಧನ

ಬಂಟ್ವಾಳ: ಕೋವಿಡ್ 19 ಕರ್ತವ್ಯದಲ್ಲಿದ್ದ ಸರಕಾರಿ ಅಧಿಕಾರಿಗಳ ಮೇಲೆ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಿಂಚಿನ ಕಾರ್ಯಚರಣೆ ನಡೆಸಿದ ಬಂಟ್ವಾಳ ಸಿ.ಐ.ನೇತ್ರತ್ವದ ಪೋಲೀಸ್ ತಂಡ ಇಬ್ಬರು ಆರೋಪಿಗಳನ್ನು ವಶಕ್ಕೆ ಪಡೆದುಕೊಂಡು ಪ್ರಕರಣ ದಾಖಲಿಸಿದೆ ಉಳಿದ ಆರೋಪಿಗಳಿಗಾಗಿ ಬಲೆಬೀಸಿದೆ.

ಬಾರೆಕಾಡು ನಿವಾಸಿ ರಫೀಕ್ ಮತ್ತು ಮಹಮ್ಮದ್ ಹ್ಯಾರಿಸ್ ಬಂಧಿತ ಆರೋಪಿ ಗಳು.

ಲಾಕ್ ಡೌನ್ ಅವಧಿಯಲ್ಲಿ ಗುಂಪು ಕಟ್ಟಿಕೊಂಡು ಅಂಗಡಿಗಳನ್ನು ತೆರೆದಿಟ್ಟಲ್ಲದೆ ಜೊತೆಗೆ ಪ್ರಶ್ನಿಸಿದ ಅಧಿಕಾರಿಗಳ ಮೇಲೆಯೇ ಹಲ್ಲೆ ನಡೆಸಿದ ಬಗ್ಗೆ ಪ್ಲೈಯಿಂಗ್ ಸ್ವ್ಕಾಡ್ ನ ಮಹಿಳಾ ಅಧಿಕಾರಿ ಯೋರ್ವರು ಬಂಟ್ವಾಳ ನಗರ ಪೋಲೀಸ್ ಠಾಣೆಯಲ್ಲಿ ಮಧ್ಯಾಹ್ನ ದೂರು ನೀಡಿದ್ದರು.
ದೂರಿನ ಹಿನ್ನೆಲೆಯಲ್ಲಿ ಕಾರ್ಯಚರಣೆ ಗಿಳಿದ ಪೋಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ
ಬಂಟ್ವಾಳ ಡಿ.ವೈ.ಎಸ್.ಪಿ.ಯವರ ನಿರ್ದೇಶನದಂತೆ ವೃತ್ತ ನಿರೀಕ್ಷಕರ ನೇತೃತ್ವದಲ್ಲಿ ಎರಡು ಎಸ್.ಐ.ಗಳ ಪ್ರತ್ಯೇಕ ತಂಡಗಳನ್ನು ರಚಿಸಲಾಗಿದೆ.
ಉಳಿದಿರುವ ಆರೋಪಿಗಳಿಗಾಗಿ ಶೋಧಕಾರ್ಯಮುಂದುವರಿದಿದೆ. ಘಟನೆ ನಡೆದ ಕೆಲವೇ ಗಂಟೆಗಳಲ್ಲಿ ಇಬ್ಬರು ಆರೋಪಿಗಳನ್ನು ಪೋಲೀಸರು ಬಂಧಿಸಿದ್ದಾರೆ. ಉಳಿದವರ ಮಾಹಿತಿ ಲಭ್ಯವಾಗಿದ್ದು ಅವರ ಬಂಧನ ಶೀಘ್ರವಾಗಿ ಮಾಡುವುದಾಗಿಯೂ ತಿಳಿಸಿದ್ದಾರೆ.

More from the blog

ಮಾಣಿಯಲ್ಲಿ ಹಿಂದೂ ಸಂಗಮ…

ಬಂಟ್ವಾಳ : ರಾಷ್ಟ್ರೀಯ ಸ್ವಯಂಸೇವಕ ಸಂಘದ ಶತಾಬ್ದಿ ಪ್ರಯುಕ್ತ ಮಾಣಿ ಪೆರಾಜೆ ಬರಿಮಾರ್ ನೆಟ್ಲ ಮುಡ್ನೂರು, ಅನಂತಾಡಿ ಗ್ರಾಮಗಳನ್ನು ಒಳಗೊಂಡ ಮಾಣಿ ಮಂಡಲದ ಹಿಂದೂ ಸಂಗಮ ಕಾರ್ಯಕ್ರಮ ನೇರಳಕಟ್ಟೆ ಗಣೇಶ ನಗರದಿಂದ ಬೃಹತ್ ಶೋಭಾಯಾತ್ರೆ...

ಜಕ್ರಿಬೆಟ್ಟು : ಕಿಂಡಿ ಅಣೆಕಟ್ಟಿನಲ್ಲಿ ನೀರು ಸಂಗ್ರಹ ಆರಂಭ

ಬಂಟ್ವಾಳ: ಬಂಟ್ವಾಳದ ಜಕ್ರಿಬೆಟ್ಟುನಲ್ಲಿ ಜೀವನದಿ ನೇತ್ರಾವತಿ ನದಿಗೆ ಅಡ್ಡಲಾಗಿ ಸಣ್ಣ ನೀರಾವರಿ ಇಲಾಖೆಯ ಮೂಲಕ ಸುಮಾರು 13.5. ಕೋ.ರೂ.ವೆಚ್ಚದಲ್ಲಿ ನಿರ್ಮಾಣಗೊಂಡ ಸೇತುವೆ ಸಹಿತ ಕಿಂಡಿ ಅಣೆಕಟ್ಟು(ಬ್ರಿಡ್ಜ್ ಕಂ ಬ್ಯಾರೇಜ್)ಗೆ ಗೇಟ್ ಹಾಕಿ ನೀರು...

ಅಮ್ಮುoಜೆ : ಶ್ರೀ ಸೋಮನಾಥೇಶ್ವರ ದೇವಸ್ಥಾನದ ಜಾತ್ರಾ ಮಹೋತ್ಸವ..

ಬಂಟ್ವಾಳ : ಅಮ್ಮುoಜೆ ಶ್ರೀ ಸೋಮನಾಥೇಶ್ವರ ದೇವಸ್ಥಾನದ ಜಾತ್ರಾ ಮಹೊತ್ಸವವು ವಿಜೃಂಭಣೆಯಿಂದ ನಡೆಯಿತು. ಜ.25ರಂದು ಭಾನುವಾರ ಬಲಿ ಉತ್ಸವ ನಡೆಯಿತು. ಶ್ರೀಕ್ಷೇತ್ರ ಪೊಳಲಿಯ ಸುಬ್ರಮಣ್ಯ ತಂತ್ರಿಯವರ ನೇತೃತ್ವದಲ್ಲಿ ಪೂಜಾ ವಿಧಿವಿಧಾನಗಳು ನಡೆಯಿತು. ದೇವಳದ ಅರ್ಚಕ ನರೇಂದ್ರ ಭಟ್,...

ಸೂರಿಕುಮೇರು : ರಾಷ್ಟ್ರೀಯ ಹೆದ್ದಾರಿಯಲ್ಲಿ ಡಿವೈಡರ್ ಹತ್ತಿ ನಿಂತ ಸರಕಾರಿ ಬಸ್

ಮಾಣಿ : ಇಲ್ಲಿನ ಸೂರಿಕುಮೇರು ರಾಜ್ ಕಮಲ್ ಹಾಲ್ ಸಮೀಪ ರಾಷ್ಟ್ರೀಯ ಹೆದ್ದಾರಿಯಲ್ಲಿ ಮಂಗಳೂರಿನಿಂದ ಬೆಂಗಳೂರಿಗೆ ತೆರಳುತ್ತಿದ್ದ ಸರಕಾರಿ ಬಸ್ ಡಿವೈಡರ್ ಹತ್ತಿ ನಿಂತ ಘಟನೆ ಸೋಮವಾರ ಬೆಳಗ್ಗಿನ ಜಾವ ನಡೆದಿದೆ. ಘಟನೆಯಿಂದ ಬಸ್‌ಗೆ...