Sunday, January 25, 2026

ಸ್ಕೂಟರ್‌ ಕಳವು ಪ್ರಕರಣ: ಮೂವರ ಬಂಧನ

ಬೆಳ್ತಂಗಡಿ : ತಾಲೂಕಿನ ಹಲವು ಕಡೆಗಳಲ್ಲಿ ಸ್ಕೂಟರ್‌‌ ಕಳವು ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳನ್ನು ಬೆಳ್ತಂಗಡಿ ಠಾಣೆ ಪೊಲೀಸರು ಬಂಧಿಸಿದ ಬಗ್ಗೆ ವರದಿಯಾಗಿದೆ.
ಉಜಿರೆ ಗ್ರಾಮದ ಹಳೆಪೇಟೆ ನಿವಾಸಿ ಅರುಣ್‌‌ ಶೆಟ್ಟಿ (30), ಬೆಳ್ತಂಗಡಿ ಕನ್ಯಾಡಿ ಗ್ರಾಮದ ಗುರಿಪಳ್ಳ ಹೇಮಂತ್‌ ಬಿರ್ವ ಯಾನೆ ಹರ್ಷಿತ್‌ (20), ಉಜಿರೆ ಗ್ರಾಮದ ಸಂಪತ್‌‌‌ ಯಾನೆ ಶ್ಯಾಮ್‌‌‌ (24) ಬಂಧಿತ ಆರೋಪಿಗಳು ಎನ್ನಲಾಗಿದೆ.
ಮೇ ೧೨. ರಂದು ಉಜಿರೆ ಗ್ರಾಮದ ವಂದನಾ ಭಂಡರ್ಕಾರ್‌ (40) ಅವರ ೨೪,೦೦೦/- ರೂ. ಮೌಲ್ಯದ ಸ್ಕೂಟರ್‌‌ ಕಾಣೆಯಾಗಿರುವ ಬಗ್ಗೆ ಬೆಳ್ತಂಗಡಿ ಠಾಣೆಯಲ್ಲಿ ದೂರು ನೀಡಿದ್ದರು.
ಈ ಪ್ರಕರಣದ ಬಳಿಕ ಉಜಿರೆ ಗ್ರಾಮದ ಪಂಚರಿಕಾಡು ರಬ್ಬರ್‌ ತೋಟದಲ್ಲಿ ಮೂರು ಮಂದಿ ಸ್ಕೂಟರ್‌‌ನ ಬಿಡಿಭಾಗಗಳನ್ನು ಕಳಚುತ್ತಿರುವ ವಿಚಾರದ ಬಗ್ಗೆ ಮಾಹಿತಿ ತಿಳಿದ ಪೊಲೀಸರು ಸ್ಥಳಕ್ಕೆ ತೆರಳಿ ದಾಳಿ ನಡೆಸಿದ್ದು, ಆರೋಪಿಗಳನ್ನು ಬಂಧಿಸಲಾಗಿತ್ತು. ವಿಚಾರಣೆ ನಡೆಸಿದ್ದ ಸಂದರ್ಭ ಸತ್ಯ ಒಪ್ಪಿಕೊಂಡ ಆರೋಪಿಗಳು, ಉಜಿರೆಯ ಗ್ಯಾರೇಜ್‌‌ನಲ್ಲಿ ನಿಲ್ಲಿಸಿದ್ದ ಸ್ಕೂಟರ್‌ ಸೇರಿದಂತೆ ಎರಡು ಸ್ಕೂಟರ್‌‌‌ಗಳನ್ನು ಕಳ್ಳತನ ಮಾಡಿ ಅದರ ಬಿಡಿಭಾಗಗಳನ್ನು ಕಳಚಿ ಮಾರಾಟ ಮಾಡಲು ಪ್ರಯತ್ನಿಸಿರುವುದಾಗಿ ತಿಳಿಸಿದ್ದಾರೆ.
ಬೆಳ್ತಂಗಡಿ ವೃತ್ತನಿರೀಕ್ಷಕ ಸಂದೇಶ್‌‌‌ ಪಿ.ಜಿ.ಹಾಗೂ ಬೆಳ್ತಂಗಡಿ ಪಿಎಸ್‌‌ಐ ನಂದಕುಮಾರ್‌ ನೇತೃತ್ವದಲ್ಲಿ ಎಎಸ್‌ಐ ದೇವಪ್ಪ, ಎಎಸ್‌ಐ ತಿಲಕ್‌‌‌, ಪಿಸಿಗಳಾದ ಪುಟ್ಟಸ್ವಾಮಪ್ಪ, ಚರಣ್‌ರಾಜ್‌‌‌‌, ವೆಂಕಟೇಶ್‌‌‌‌, ಅಶೋಕ್‌ ಕಾರ್ಯಾಚರಣೆಯಲ್ಲಿ‌‌‌ ಭಾಗವಹಿಸಿದ್ಧಾರೆ.

More from the blog

ಗೋಳ್ತಮಜಲು ಮಂಡಲದ ಹಿಂದು ಸಂಗಮ ಕಾರ್ಯಕ್ರಮ..

ಬಂಟ್ವಾಳ : ಗೋಳ್ತಮಜಲು, ಬಾಳ್ತಿಲ, ಅಮ್ಟೂರು ಗ್ರಾಮಗಳನ್ನೊಳಗೊಂಡ ಗೋಳ್ತಮಜಲು ಮಂಡಲದ ಹಿಂದು ಸಂಗಮ ಕಾರ್ಯಕ್ರಮ ಗೋಪೂಜೆಯ ಮೂಲಕ ಭವ್ಯ ಶೋಭಾಯಾತ್ರೆಗೆ ಪುತ್ತೂರು ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಡಾ. ಪ್ರಭಾಕರ ಭಟ್ ಚಾಲನೆ...

ಯುವಶಕ್ತಿಗೆ ವೇದಿಕೆಯಾದ ಕೋಟಿ ಚೆನ್ನಯ ಕ್ರೀಡೋತ್ಸವ : ಬಿ. ಜನಾರ್ದನ ಪೂಜಾರಿ

ಬಂಟ್ವಾಳ : ಕೋಟಿ ಚೆನ್ನಯ ಕ್ರೀಡೋತ್ಸವವು ಯುವಜನತೆಯಲ್ಲಿ ಶಿಸ್ತು, ಆರೋಗ್ಯ ಹಾಗೂ ಸಹಭಾವನೆಯನ್ನು ಬೆಳೆಸುವ ಅತ್ಯುತ್ತಮ ವೇದಿಕೆಯಾಗಿದೆ. ಇಂತಹ ಕ್ರೀಡೋತ್ಸವಗಳ ಮೂಲಕ ಯುವಶಕ್ತಿ ಒಗ್ಗೂಡಿ ಸಮಾಜದ ಅಭಿವೃದ್ಧಿಗೆ ಸ್ಪೂರ್ತಿದಾಯಕ ದಿಕ್ಕು ನೀಡುತ್ತದೆ” ಎಂದು...

ಭಾರತದ ಸಂಸ್ಕೃತಿ ಉಳಿಸಿ ಬೆಳೆಸುವ ಜವಾಬ್ದಾರಿ ಯುವಪೀಳಿಗೆಗಿದೆ : ಭಕ್ತಿಭೂಷಣ್ ದಾಸ್ ಸ್ವಾಮೀಜಿ

ಬಂಟ್ವಾಳ: ಬಂಟ್ವಾಳ ತಾಲೂಕು ಹಿಂದು ಸಂಗಮ ಆಯೋಜನಾ ಸಮಿತಿಯ ಸಂಗಬೆಟ್ಟು , ಕರ್ಪೆ, ಕುಕ್ಕಿಪಾಡಿ, ಎಲಿಯನಡುಗೋಡು ಗ್ರಾಮಗಳನ್ನೊಳಗೊಂಡ ಸಂಗಬೆಟ್ಟು ಮಂಡಲದ ವತಿಯಿಂದ ಹಿಂದು ಸಂಗಮ ಕಾರ್ಯಕ್ರಮ ಸಿದ್ದಕಟ್ಟೆ ಕೇಂದ್ರ ಮೈದಾನದಲ್ಲಿ ರವಿವಾರ ನಡೆಯಿತು. ಗೋ...

ವಿಟ್ಲ : ಜಾತ್ರೆಯ ಪ್ರಯುಕ್ತ ನೇಮೋತ್ಸವ..

ವಿಟ್ಲ : ಮಹತೋಭಾರ ಶ್ರೀ ಪಂಚಲಿಂಗೇಶ್ವರ ದೇವಸ್ಥಾನ ವಿಟ್ಲ ಇದರ ವರ್ಷಂಪ್ರತಿ ನಡೆಯುವ ಕಾಲಾವಧಿ ಜಾತ್ರೆಯ ಪ್ರಯುಕ್ತ ಅರಸು ಮುಂಡಾಲತ್ತಾಯ, ಮಲರಾಯ ದೈವ, ಕೊಡಮಣಿತ್ತಾಯ ಹಾಗೂ ಪಿಲಿಚಾಮುಂಡಿ ದೈವಕ್ಕೆ ದೇವಸ್ಥಾನದ ಎದುರು ನೇಮೋತ್ಸವ...