Wednesday, July 9, 2025

ದನ ಕಳ್ಳತನ ನಾಲ್ವರು ಆರೋಪಿಗಳ ಬಂಧನ: ಗ್ರಾಮಾಂತರ ಎಸ್.ಐ.ಪ್ರಸನ್ನ ನೇತ್ರತ್ವದಲ್ಲಿ ಕಾರ್ಯಚರಣೆ

ಬಂಟ್ವಾಳ, ಎ. ೩೦: ಬಂಟ್ವಾಳ ತಾಲೂಕಿನಾದ್ಯಂತ ವರದಿಯಾಗಿರುವ ದನ ಕಳವು ಪ್ರಕರಣಗಳನ್ನು ಭೇದಿಸಿದ ಬಂಟ್ವಾಳ ಪೊಲೀಸರು ನಾಲ್ವರು ಆರೋಪಿಗಳನ್ನು ಮಂಗಳವಾರ ಬಂಧಿಸಿದ್ದಾರೆ.


ಬಂಟ್ವಾಳ ತಾಲೂಕಿನ ಪುದು ಗ್ರಾಮದ ನಿವಾಸಿಗಳಾದ ಇಮ್ರಾನ್ ಯಾನೆ ಕುಟ್ಟ ಇಮ್ರಾನ್ (೩೧),
ಜೈನುದ್ದೀನ್ (೨೨), ಹಿದಾಯುತುಲ್ಲಾ (೨೪), ಫಾರೂಕ್ ಯಾನೆ ಮಲಿಕ್ (೨೯) ಬಂಧಿತ ಆರೋಪಿಗಳು.
ಪ್ರಕರಣಗಳಲ್ಲಿ ಕೃತ್ಯಕ್ಕೆ ಬಳಸಿದ ಮಾರುತಿ ರಿಡ್ಜ್ ಕಾರು, ವಿವಿಧ ಪ್ರಕರಣಗಳಲ್ಲಿ ಕಳವು ಮಾಡಿದಂತಹ ೪ ದನಗಳು ವಶಪಡಿಸಿಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಆರೋಪಿಗಳು ಅಮೆಮಾರ್ ಮತ್ತು ಕುಂಪನಮಜಲು ಪ್ರದೇಶಕ್ಕೆ ಸೇರಿದ್ದು, ಇವರ ಮೇಲೆ ಬಂಟ್ವಾಳ ಗ್ರಾಮಾಂತರ, ಬಂಟ್ವಾಳ ನಗರ, ವಿಟ್ಲ, ಪೂಂಜಾಲಕಟ್ಟೆ, ವಾಮಂಜೂರು, ಕಾವೂರು, ಕೋಣಾಜೆ, ಉಳ್ಳಾಲ, ಸೋಮವಾರ ಪೇಟೆ, ಕುಶಾಲನಗರ, ಸಕಲೇಶಪುರ, ಬಜಪೆ, ಮಡಿಕೇರಿ, ಶನಿವಾರ ಸಂತೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ದನ ಕಳವು, ಹಲ್ಲೆ, ದೊಂಬಿ, ಪ್ರಕರಣಗಳು ದಾಖಲಾಗಿರುತ್ತವೆ ಎಂದು ಪೊಲೀದರು ತಿಳಿಸಿದ್ದಾರೆ.
ಆರೋಪಿಗಳನ್ನು ನ್ಯಾಯಾಲಯದ ಮುಂದೆ ಹಾಜರುಪಡಿಸಿದ್ದು, ನ್ಯಾಯಾಲಯವು ಆರೋಪಿತರಿಗೆ ನ್ಯಾಯಾಂಗ ಬಂಧನ ವಿಧಿಸಿರುತ್ತದೆ ಎಂದು ಪೊಲೀಸರು ತಿಳಿಸಿದ್ದಾರೆ.
ಬಂಟ್ವಾಳ ವೃತ್ತ ನಿರೀಕ್ಷಕ ಶರಣ ಗೌಡ, ಎಸ್ಸೈ ಪ್ರಸನ್ನ, ಪಿಎಸ್ಸೈಗಳಾದ ವಿನೋದ್, ಜಂಬುರಾಜ್ ಮಹಾಜನ್, ಹೆಡ್‌ಕಾನ್ ಸ್ಟೆಬಲ್‌ಗಳಾದ ಸುರೇಶ್, ಜನಾರ್ದನ, ಮಾದವ ಗೌಡ, ರಾಧಾಕೃಷ್ಣ, ಪಿಸಿಗಳಾದ ನಝೀರ್, ಮನೋಜ್, ಸುಬ್ರಹ್ಮಣ್ಯ, ವಿಶಾಲಾಕ್ಷಿ ಅವರು ಈ ಪ್ರಕರಣವನ್ನು ಭೇದಿಸಲು ಯಶಸ್ವಿಯಾಗಿದ್ದಾರೆ.

More from the blog

ನಾಯಕತ್ವ ಬೆಳವಣಿಗೆಗೆ ಶ್ರಮದೊಂದಿಗೆ ನಿಷ್ಠೆ, ತಾಳ್ಮೆ ರೂಡಿಸಿಕೊಂಡಾಗ ಯಶಸ್ಸು ಸಾಧ್ಯ : ರೋ. ರಾಘವೇಂದ್ರ ಭಟ್

ಬಂಟ್ವಾಳ : ನಾಯಕತ್ವದ ಬೆಳವಣಿಗೆಗೆ ಶ್ರಮದೊಂದಿಗೆ ನಿಷ್ಠೆ ಮತ್ತು ತಾಳ್ಮೆ ರೂಡಿಸಿಕೊಳ್ಳಬೇಕು ಈ ನಿಟ್ಟಿನಲ್ಲಿ ಅವಕಾಶ ಗಳನ್ನು ಹುಡುಕಿಕೊಂಡು, ದೇಶದ ಇತಿಹಾಸದಲ್ಲಿ ಕಾಣುವ ವಿವಿಧ ಕ್ಷೆತ್ರದಲ್ಲಿ ಗಣನೀಯ ಸೇವೆ ಗೈದರವರ ಆದರ್ಶ ಗಳನ್ನು...

ಜು.10ರಂದು ಹಿಂದೂ ಜನಜಾಗೃತಿ ಸಮಿತಿಯಿಂದ ಗುರುಪೂರ್ಣಿಮಾ ಮಹೋತ್ಸವ ಆಯೋಜನೆ

ಬಿ.ಸಿ. ರೋಡ್ : ಸಮಸ್ತ ಜಗತ್ತು ಯುದ್ಧದತ್ತ ಸಾಗುತ್ತಿದೆ. ಭಾರತದಲ್ಲಿಯೂ ಜಿಹಾದಿ ಭಯೋತ್ಪಾದಕರು ಹಿಂದೂಗಳನ್ನು ಹತ್ಯೆ ಮಾಡಿ, ಭಾರತವನ್ನು ಯುದ್ಧಕ್ಕೆ ಪ್ರೇರೇಪಿಸುತ್ತಿದ್ದಾರೆ. ಶ್ರೀರಾಮ, ಶ್ರೀಕೃಷ್ಣನಂತಹ ಅವತಾರಗಳಿಂದ ಹಿಡಿದು ಛತ್ರಪತಿ ಶಿವಾಜಿ ಮಹಾರಾಜ, ಮಹಾರಾಣಾ...

ಶ್ರೀ ಕ್ಷೇತ್ರ ಪೊಳಲಿಯಲ್ಲಿ ಲಕ್ಷ ಕುಂಕುಮಾರ್ಚನೆ..

ಪೊಳಲಿ: ಶ್ರೀ ಮೃತ್ಯುಂಜಯೇಶ್ವರ ಶಿವ ಕ್ಷೇತ್ರಗಂಜಿಮಠ ಪುನರುತ್ಥಾನ ಶ್ರೀ ಮೃತ್ಯುಂಜಯೇಶ್ವರ ಶಿವ ಕ್ಷೇತ್ರ ಪುನರ್ ನಿರ್ಮಾಣದ ಅಷ್ಟಮಂಗಳ ಪ್ರಶ್ನಾ ಚಿಂತನೆಯಲ್ಲಿ ಕಂಡು ಬಂದAತೆ ಜು.೮ರಂದು ಮಂಗಳವಾರ ಶ್ರೀ ಕ್ಷೇತ್ರ ಪೊಳಲಿ ಸಾವಿರ ಸೀಮೆಯ...

Protest : ಎಸ್.ಡಿ.ಪಿ‌.ಐ. ಪಕ್ಷದ ವತಿಯಿಂದ ಕೈಕಂಬದ ಬಳಿ ಬೃಹತ್ ಪ್ರತಿಭಟನೆ..

ಬಂಟ್ವಾಳ: ಅಬ್ದುಲ್ ರಹಿಮಾನ್ ಮತ್ತು ಅಶ್ರಫ್ ವಯನಾಡು ಕೊಲೆ ಕೃತ್ಯದ ಪ್ರಮುಖ ಆರೋಪಿಗಳ ಬಂಧನದ ವಿಳಂಬ ಮತ್ತು ಪರಿಹಾರ ಘೋಷಿಸಿದ ಸರಕಾರದ ನಡೆಯನ್ನು ಖಂಡಿಸಿ, ನ್ಯಾಯ ಮರೀಚಿಕೆ...ಹುಸಿಯಾದ ಭರವಸೆ ಎಂಬ ಘೋಷ ವಾಕ್ಯದಲ್ಲಿ...