Thursday, February 13, 2025

ದನ ಕಳ್ಳತನ ನಾಲ್ವರು ಆರೋಪಿಗಳ ಬಂಧನ: ಗ್ರಾಮಾಂತರ ಎಸ್.ಐ.ಪ್ರಸನ್ನ ನೇತ್ರತ್ವದಲ್ಲಿ ಕಾರ್ಯಚರಣೆ

ಬಂಟ್ವಾಳ, ಎ. ೩೦: ಬಂಟ್ವಾಳ ತಾಲೂಕಿನಾದ್ಯಂತ ವರದಿಯಾಗಿರುವ ದನ ಕಳವು ಪ್ರಕರಣಗಳನ್ನು ಭೇದಿಸಿದ ಬಂಟ್ವಾಳ ಪೊಲೀಸರು ನಾಲ್ವರು ಆರೋಪಿಗಳನ್ನು ಮಂಗಳವಾರ ಬಂಧಿಸಿದ್ದಾರೆ.


ಬಂಟ್ವಾಳ ತಾಲೂಕಿನ ಪುದು ಗ್ರಾಮದ ನಿವಾಸಿಗಳಾದ ಇಮ್ರಾನ್ ಯಾನೆ ಕುಟ್ಟ ಇಮ್ರಾನ್ (೩೧),
ಜೈನುದ್ದೀನ್ (೨೨), ಹಿದಾಯುತುಲ್ಲಾ (೨೪), ಫಾರೂಕ್ ಯಾನೆ ಮಲಿಕ್ (೨೯) ಬಂಧಿತ ಆರೋಪಿಗಳು.
ಪ್ರಕರಣಗಳಲ್ಲಿ ಕೃತ್ಯಕ್ಕೆ ಬಳಸಿದ ಮಾರುತಿ ರಿಡ್ಜ್ ಕಾರು, ವಿವಿಧ ಪ್ರಕರಣಗಳಲ್ಲಿ ಕಳವು ಮಾಡಿದಂತಹ ೪ ದನಗಳು ವಶಪಡಿಸಿಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಆರೋಪಿಗಳು ಅಮೆಮಾರ್ ಮತ್ತು ಕುಂಪನಮಜಲು ಪ್ರದೇಶಕ್ಕೆ ಸೇರಿದ್ದು, ಇವರ ಮೇಲೆ ಬಂಟ್ವಾಳ ಗ್ರಾಮಾಂತರ, ಬಂಟ್ವಾಳ ನಗರ, ವಿಟ್ಲ, ಪೂಂಜಾಲಕಟ್ಟೆ, ವಾಮಂಜೂರು, ಕಾವೂರು, ಕೋಣಾಜೆ, ಉಳ್ಳಾಲ, ಸೋಮವಾರ ಪೇಟೆ, ಕುಶಾಲನಗರ, ಸಕಲೇಶಪುರ, ಬಜಪೆ, ಮಡಿಕೇರಿ, ಶನಿವಾರ ಸಂತೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ದನ ಕಳವು, ಹಲ್ಲೆ, ದೊಂಬಿ, ಪ್ರಕರಣಗಳು ದಾಖಲಾಗಿರುತ್ತವೆ ಎಂದು ಪೊಲೀದರು ತಿಳಿಸಿದ್ದಾರೆ.
ಆರೋಪಿಗಳನ್ನು ನ್ಯಾಯಾಲಯದ ಮುಂದೆ ಹಾಜರುಪಡಿಸಿದ್ದು, ನ್ಯಾಯಾಲಯವು ಆರೋಪಿತರಿಗೆ ನ್ಯಾಯಾಂಗ ಬಂಧನ ವಿಧಿಸಿರುತ್ತದೆ ಎಂದು ಪೊಲೀಸರು ತಿಳಿಸಿದ್ದಾರೆ.
ಬಂಟ್ವಾಳ ವೃತ್ತ ನಿರೀಕ್ಷಕ ಶರಣ ಗೌಡ, ಎಸ್ಸೈ ಪ್ರಸನ್ನ, ಪಿಎಸ್ಸೈಗಳಾದ ವಿನೋದ್, ಜಂಬುರಾಜ್ ಮಹಾಜನ್, ಹೆಡ್‌ಕಾನ್ ಸ್ಟೆಬಲ್‌ಗಳಾದ ಸುರೇಶ್, ಜನಾರ್ದನ, ಮಾದವ ಗೌಡ, ರಾಧಾಕೃಷ್ಣ, ಪಿಸಿಗಳಾದ ನಝೀರ್, ಮನೋಜ್, ಸುಬ್ರಹ್ಮಣ್ಯ, ವಿಶಾಲಾಕ್ಷಿ ಅವರು ಈ ಪ್ರಕರಣವನ್ನು ಭೇದಿಸಲು ಯಶಸ್ವಿಯಾಗಿದ್ದಾರೆ.

More from the blog

ಗ್ರಾಮ ಆಡಳಿತ ಅಧಿಕಾರಿಗಳ ಮುಷ್ಕರಕ್ಕೆ ಶಾಸಕ ರಾಜೇಶ್ ನಾಯ್ಕ್ ಬೆಂಬಲ

ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಅವರು ಗ್ರಾಮ ಆಡಳಿತ ಅಧಿಕಾರಿಗಳು ಸತತ ಮೂರನೇ ದಿನ ನಡೆಸುತ್ತಿರುವ ಅನಿರ್ದಿಷ್ಟಾವಧಿ ಮುಷ್ಕರಕ್ಕೆ ಬೆಂಬಲ ಸೂಚಿಸಿದ್ದಾರೆ. ಬಂಟ್ವಾಳ ತಾಲೂಕು ಆಡಳಿತ ಸೌಧದ ಮುಂಭಾಗ ಮುಷ್ಕರದ ಸ್ಥಳಕ್ಕೆ ಭೇಟಿ ನೀಡಿದ...

ಫೆ.15 ರಂದು ಕಮಲಾಶ್ರಯ ಮನೆಯ ಹಸ್ತಾಂತರ ಹಾಗೂ ಗೃಹಪ್ರವೇಶ

ಬಂಟ್ವಾಳ: ಬಿಜೆಪಿ ಮಹಾಶಕ್ತಿ ಕೇಂದ್ರ ಮಾಣಿ ಮತ್ತು ಬಿಜೆಪಿ ಶಕ್ತಿ ಕೇಂದ್ರ ಅನಂತಾಡಿ ಇದರ ಸಹಕಾರದಿಂದ ಅನಂತಾಡಿ ಗ್ರಾಮದ ಬಾಬನಕಟ್ಟೆ ಎಂಬಲ್ಲಿ ಬಲ್ಲು ಕೊರಗ ಇವರ ಕುಟುಂಬಕ್ಕೆ ನಿರ್ಮಿಸಲಾದ ನೂತನ ಮನೆಯನ್ನು ಫೆ.15...

ಬೇಲಿ ವಿವಾದ : ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡ ಶಾಸಕ ರಾಜೇಶ್ ನಾಯ್ಕ್

ಬಂಟ್ವಾಳ: ತಾ.ಪಂ.ಅಧಿಕಾರಿ ವರ್ಗ ಕಚೇರಿ ಮುಂಭಾಗದ ಜಾಗಕ್ಕೆ ಕಬ್ಬಿಣದ ರಾಡ್ ಅಳವಡಿಸಿ ಬೇಲಿ ಹಾಕಿದ ವಿಚಾರಕ್ಕೆ ಸಂಬಂಧಿಸಿದಂತೆ ಸಾರ್ವಜನಿಕ ದೂರಿನ ಹಿನ್ನೆಲೆಯಲ್ಲಿ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಅವರು ತಾ.ಪಂ.ಗೆ ಹಠಾತ್...

ವಿಟ್ಲ ಪಿಎಂ ಶ್ರೀ ಸರಕಾರಿ ಪ್ರೌಢ ಶಾಲೆಯಲ್ಲಿ ಮೆಟ್ರಿಕ್ ಮೇಳ

ವಿಟ್ಲ: ವಿಟ್ಲ ಪಿ ಎಂ ಶ್ರೀ ಸರಕಾರಿ ಪ್ರೌಢ ಶಾಲೆ (ಆರ್ ಎಂ ಎಸ್ ಎಂ)ವಿಟ್ಲ ಇದರ ಪ್ರಾಥಮಿಕ ಶಾಲಾ ವಿಭಾಗದಲ್ಲಿ ಬುಧವಾರ ಮೆಟ್ರಿಕ್ ಮೇಳ ಕಾರ್ಯಕ್ರಮ ನಡೆಯಿತು. ಮೆಟ್ರಿಕ್ ಮೇಳವನ್ನು ವಿಟ್ಲ ಪಟ್ಟಣ...