Saturday, July 12, 2025

ಮಹಿಳೆಯ ಕರಿಮಣಿ ಸುಲಿಗೆ ಮಾಡಿದ ಆರೋಪಿಗಳ ಬಂಧನ

ಬಂಟ್ವಾಳ: ಪಣೋಲಿಬೈಲು ಬಳಿ ದಾರಿ ಕೇಳುವ ನೆಪದಲ್ಲಿ ಮಹಿಳೆಯ ಕುತ್ತಿಗೆಯಿಂದ ಕರಿಮಣಿ ಸರ ಎಳೆದು ಪರಾರಿಯಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಟ್ವಾಳ ಪೊಲೀಸರು ಇಬ್ಬರು ಆರೋಪಗಳನ್ನು ಬಂಧಿಸಿದ್ದಾರೆ.

ಪುತ್ತೂರಿನ ಆರ್ಯಾಪು ವಲತ್ತಡ್ಕ‌ ನಿವಾಸಿ ರೋಹಿತ್(22) ಹಾಗೂ ಕುಂಜೂರುಪಂಜ ದೇವಸ್ಯ ನಿವಾಸಿ ಲೋಹಿತ್ ಪಿ.ಆರ್.(20) ಬಂಧಿತ ಆರೋಪಿಗಳು. ಆರೋಪಿಗಳು ಸೆ. 8ರಂದು ಬೈಕಿನಲ್ಲಿ ಬಂದು ದಾರಿ ಕೇಳುವ ನೆಪದಲ್ಲಿ ಸ್ಥಳೀಯ ನಿವಾಸಿ ವತ್ಸಲಾ ಅವರ ಕುತ್ತಿಗೆಯಿಂದ ಸರ ಎಳೆದು ಪರಾರಿಯಾಗಿದ್ದರು.

ಆರೋಪಿಗಳಿಂದ ಸುಲಿಗೆ ಮಾಡಿದ ಕರಿಮಣಿ ಸರ ಹಾಗೂ ಅಪಾಚಿ ಬೈಕ್ ಸೇರಿ ಒಟ್ಟು 1.35 ಲಕ್ಷ ರೂ.ಗಳ ಸೊತ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ. ಘಟನೆ ಕುರಿತು ಬಂಟ್ವಾಳ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಆರೋಪಿಗಳ ಪತ್ತೆಗೆ ಬಲೆ ಬೀಸಿದ್ದರು.

ದ.ಕ‌.ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಋಷಿಕೇಶ್ ಭಗವಾನ್ ಅವರ ನಿರ್ದೇಶನದಂತೆ ಎಡಿಶನಲ್ ಎಸ್ಪಿ ಡಾ.ಶಿವಕುಮಾರ್ ಗುಣಾರೆ ಅವರ ಮಾರ್ಗದರ್ಶನದಲ್ಲಿ ಬಂಟ್ವಾಳ ಡಿವೈಎಸ್ಪಿ ವೆಲೆಂಟೈನ್ ಡಿಸೋಜ ನೇತೃತ್ವದಲ್ಲಿ ಬಂಟ್ವಾಳ ಗ್ರಾಮಾಂತರ ಇನ್ಸ್‌ಪೆಕ್ಟರ್ ಟಿ.ಡಿ.ನಾಗರಾಜ್, ನಗರ ಸಬ್ ಇನ್ಸ್ ಪೆಕ್ಟರ್ ಅವಿನಾಶ್, ಅಪರಾಧ ಪತ್ತೆ ವಿಭಾಗದ ಸಬ್ ಇನ್ಸ್ ಪೆಕ್ಟರ್ ಕಲೈಮಾರ್, ಡಿವೈಎಸ್ಪಿ ತಂಡದ ಉದಯ ರೈ, ಪ್ರವೀಣ್ ಎಂ, ಪ್ರಶಾಂತ್, ಇರ್ಷಾದ್, ಕುಮಾರ್ ಎಚ್.ಕೆ., ನಗರ ಠಾಣಾ ಸಿಬಂದಿ ಜಗನ್ನಾಥ ಶೆಟ್ಟಿ, ಕೃಷ್ಣ ಕುಲಾಲ್, ಹೋಮ್ ಗಾರ್ಡ್ ಜಯಗಣೇಶ್ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದು, ದ.ಕ.ಜಿಲ್ಲಾ ಪೊಲೀಸ್ ಅಧೀಕ್ಷಕರು ಪ್ರಶಂಸೆ ವ್ಯಕ್ತಪಡಿಸಿದ್ದಾರೆ.

More from the blog

ಕುಂಜರ್ಕಳದ ತಡೆಗೋಡೆ, ಬಸ್ಸು ತಂಗುದಾಣ, ಹೈಮಾಸ್ಟ್ ದೀಪ ಉದ್ಘಾಟಿಸಿದ ಯು.ಟಿ.ಖಾದರ್..

ಬಂಟ್ವಾಳ: ಶಾಸಕರ ಅನುದಾನದಿಂದ ನಿರ್ಮಾಣಗೊಂಡ ಪುದು ಗ್ರಾಮದ ಕುಂಜರ್ಕಳದ ತಡೆಗೋಡೆ, ೧೦ನೇ ಮೈಲುಕಲ್ಲು ಬಳಿ ಬಸ್ಸು ತಂಗುದಾಣ ಹಾಗೂ ತ್ವಾಹಾ ಜುಮಾ ಮಸೀದಿ ಬಳಿ ಅನುಷ್ಠಾನಗೊಂಡ ಹೈಮಾಸ್ಟ್ ದೀಪವನ್ನು ಸ್ಪೀಕರ್ ಯು.ಟಿ.ಖಾದರ್ ಅವರು...

ಗುರು ಪೂರ್ಣಿಮೆಯ ಪ್ರಯುಕ್ತ ನಿವೃತ ಶಿಕ್ಷಕಿ ಲಕ್ಷ್ಮೀ ಅವರಿಗೆ ಗೌರವರ್ಪಣೆ 

ಬಂಟ್ವಾಳ : ಗುರು ಪೂರ್ಣಿಮೆಯ ಪ್ರಯುಕ್ತ ಸಜೀಪ ಮುನ್ನೂರು ಬಿಜೆಪಿ ಗ್ರಾಮ ಸಮಿತಿಯ 4ನೇ ವಾರ್ಡಿನ ಬೊಕ್ಕಸ ನಿವಾಸಿಯಾದ ನಿವೃತ ಶಿಕ್ಷಕಿಯಾದ ಮಾತೃ ವಾತ್ಸಲ್ಯದ ಲಕ್ಷ್ಮೀ ಟೀಚರ್ ಇವರಿಗೆ ಬಿಜೆಪಿ ಮುಖಂಡರು ಮಾಜಿ...

ಕೆಂಪುಕಲ್ಲು, ಮರಳು ಸಮಸ್ಯೆ : ಜು.14ಕ್ಕೆ ಬಂಟ್ವಾಳ ತಾಲೂಕು ಕೇಂದ್ರದಲ್ಲಿ ಪ್ರತಿಭಟನೆ..

ಬಂಟ್ವಾಳ :ಕಾಂಗ್ರೆಸ್ ನೇತೃತ್ವದ ಕರ್ನಾಟಕ ರಾಜ್ಯ ಸರ್ಕಾರದ ದುರಡಳಿತ ನೀತಿಯಿಂದಾಗಿ ದಕ್ಷಿಣ ಕನ್ನಡ ಜೆಲ್ಲೆಯಲ್ಲಿ ಕೆಂಪು ಕಲ್ಲು ಮತ್ತು ಮರಳು ಕ್ರತಕ ಅಭಾವ ಸ್ರಷ್ಟಿಸಿರುವುದರಿಂದ ತೀವ್ರ ಸಮಸ್ಯೆಯಿಂದ ಬಡವರು ನಿರ್ಮಿಸುತ್ತಿರುವ ಸಾವಿರಾರು ಮನೆಗಳು...

ಬ್ರಹ್ಮ ಶ್ರೀ ನಾರಾಯಣ ಗುರು ವಸತಿ ಶಾಲೆ : ನೂತನ ಕಟ್ಟಡಕ್ಕೆ ವಿದ್ಯಾರ್ಥಿಗಳನ್ನು ಸ್ಥಳಾಂತರಿಸಲು ಶಾಸಕ ರಾಜೇಶ್ ನಾಯ್ಕ್ ನಿರ್ದೇಶನ..

ಬಂಟ್ವಾಳ: ದ.ಕ.ಜಿಲ್ಲೆಗೆ ಮಂಜೂರಾಗಿರುವ ಏಕೈಕ ಬ್ರಹ್ಮ ಶ್ರೀ ನಾರಾಯಣ ಗುರು ವಸತಿ ಶಾಲೆಗೆ ನೂತನ ಸುಸಜ್ಜಿತ ‌ಕಟ್ಟಡ ನಿರ್ಮಾಣ ಕಾಮಗಾರಿ ಬಹುತೇಕ ಪೂರ್ಣಗೊಂಡಿದ್ದು,ವಿದ್ಯಾರ್ಥಿಗಳ ಅನುಕೂಲತೆಯ ದೃಷ್ಟಿಯಿಂದ ಶೀಘ್ರ ಹೊಸ ಕಟ್ಟಡಕ್ಕೆ ಸ್ಥಳಾಂತರಿಸುವಂತೆ ಬಂಟ್ವಾಳ...