Sunday, February 9, 2025

ಅಕ್ರಮ ಸ್ಫೋಟಕ ಸಹಿತ ಇಬ್ಬರ ಬಂಧನ

ಬಂಟ್ವಾಳ: ಅಕ್ರಮವಾಗಿ ಸ್ಫೋಟಕಗಳನ್ನು ಬಳಸಿ ಕಪ್ಪು ಕಲ್ಲುಗಳನ್ನು ಹೊಡೆಯುತ್ತಿದ್ದ ಬಾಲಪರಾಧಿ ಸಹಿತ ಇಬ್ಬರನ್ನು ಬಂಟ್ವಾಳ ನಗರ ಠಾಣಾ ಪೋಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದಾರೆ.

ಬಾಗಲಕೊಟೆ ನಿವಾಸಿ ಲಕ್ಷಣ್ ಅಂಬಾಣಿ ಮತ್ತು ಯುವಕ ಆರೋಪಿಗಳು. ಬಂಧಿತರಿಂದ ಸುಮಾರು ಐದು ಸಾವಿರ ರೂ. ಮೌಲ್ಯದ ಸ್ಫೋಟಕಗ ಸಾಮಾಗ್ರಿಗಳನ್ನು ವಶಪಡಿಸಿಕೊಂಡಿದ್ದಾರೆ.

ಬಂಟ್ವಾಳ ತಾಲೂಕಿನ ಸಜೀಪ ಮೂಡ ಗ್ರಾಮದ ಕುಚ್ಚಿಗುಡ್ಡೆ ಎಂಬಲ್ಲಿ ಅಕ್ರಮವಾಗಿ ಸ್ಫೋಟಕಗಳನ್ನು ಬಳಸಿಕೊಂಡು ಕಪ್ಪು ಕಲ್ಲುಗಳನ್ನು ಒಡೆಯುತ್ತಿದ್ದು ಸ್ಥಳೀಯ ನಿವಾಸಿಗಳಿಗೆ ತೊಂದರೆ ಉಂಟಾಗುತ್ತಿತ್ತು. ಹಾಗಾಗಿ ಖಚಿತ ಮಾಹಿತಿ ಮೇರೆಗೆ ಬಂಟ್ವಾಳ ನಗರ ಠಾಣಾ ಎಸ್ ಐ ಚಂದ್ರಶೇಖರ್ ದಾಳಿ ನಡೆಸಿ ಇಬ್ಬರನ್ನು ಬಂಧಿಸಿದ್ದಾರೆ.‌ ಉಳಿದಂತೆ ಈ ಅಕ್ರಮ ಕಾಮಗಾರಿಯ ಹಿಂದೆ ಇರುವ ವ್ಯಕ್ತಿಗಳ ಮಾಹಿತಿ ಕಲೆಹಾಕುತ್ತಿದ್ದು ಶೀಘ್ರವಾಗಿ ಬಂಧನ ಮಾಡುವುದಾಗಿಯೂ ತಿಳಿಸಿದ್ದಾರೆ.
ಕಾರ್ಯಚರಣೆ ಯಲ್ಲಿ ಎ.ಎಸ್.ಐಗಳಾದ ಶಿವರಾಮ, ಜಿನ್ನಪ್ಪ, ಎಚ್.ಸಿ.ಸುಜು ಪಾಲ್ಗೊಂಡಿದ್ದರು. ‌

More from the blog

ದೆಹಲಿಯಲ್ಲಿ ಬಿಜೆಪಿ ಭರ್ಜರಿ ಜಯಭೇರಿ…. ಸಿದ್ದಕಟ್ಟೆ ಪೇಟೆಯಲ್ಲಿ ಬಿಜೆಪಿ ಕಾರ್ಯಕರ್ತರಿಂದ ಪಟಾಕಿ ಸಿಡಿಸಿ ಸಂಭ್ರಮಾಚರಣೆ*

  ದೆಹಲಿ ವಿಧಾನ ಸಭೆಗೆ ನಡೆದ ಚುನಾವಣೆ ಯಲ್ಲಿ ಭಾರತೀಯ ಜನತಾ ಪಕ್ಷ 70 ಸ್ಥಾನ ಗಳಲ್ಲಿ ಬರೋಬ್ಬರಿ 48 ಸ್ಥಾನ ಗಳನ್ನು ಗೆಲ್ಲುವ ಮೂಲಕ ಭರ್ಜರಿ ಜಯಭೇರಿ ಗಳಿಸುವುದರೊಂದಿಗೆ ಪ್ರಧಾನಿ ನರೇಂದ್ರ ಮೋದಿಯವರ...

ಜುಗಾರಿ ಅಡ್ಡೆಗೆ ದಾಳಿ: ಹತ್ತು ಜನರ ಬಂಧನ

ಬಂಟ್ವಾಳ: ಹಣ ಪಣಕ್ಕಿಟ್ಟು ಜುಗಾರಿ ಆಟ ಆಡುತ್ತಿದ್ದ ಅಡ್ಡೆಗೆ ದಾಳಿ ನಡೆಸಿದ ಬಂಟ್ವಾಳ ಗ್ರಾಮಾಂತರ ಪೋಲೀಸ್ ಇನ್ಸ್ ಪೆಕ್ಟರ್ ಶಿವಕುಮಾರ್ ನೇತ್ರತ್ವದ ತಂಡ ಆಟದಲ್ಲಿ ನಿರತರಾಗಿದ್ದ 10 ಮಂದಿ ಆರೋಪಿಗಳನ್ನು ಹಾಗೂ ಸಾವಿರಾರು...

ಮಾರ್ಬಲ್ ಲಾರಿ ಪಲ್ಟಿ

ಬಂಟ್ವಾಳ: ಮಾರ್ಬಲ್ ಲೋಡ್ ಲಾರಿಯೊಂದು ತಾಂತ್ರಿಕ ದೋಷದಿಂದ ರಸ್ತೆಯ ವಿಭಾಜಕ್ಕೆ ಡಿಕ್ಕಿ ಹೊಡೆದು ಪಲ್ಟಿಯಾದ ಘಟನೆ ರಾಷ್ಟ್ರೀಯ ಮಂಗಳೂರು- ಬೆಂಗಳೂರು ರಸ್ತೆಯ ತುಂಬೆ ಸಮೀಪದ ರಾಮಲ್ ಕಟ್ಟೆ ಎಂಬಲ್ಲಿ ಪಲ್ಟಿಯಾಗಿದೆ. ಘಟನೆಯಿಂದ ಯಾವುದೇ ಅಪಾಯ...

ಗಣಿ ಇಲಾಖೆ ಅಧಿಕಾರಿ ವಿರುದ್ಧ ಕ್ರಮಕ್ಕೆ ಸೂಚನೆ

ಬಂಟ್ವಾಳ : ಬಂಟ್ವಾಳದಲ್ಲಿ ಫೆ. 5 ರಂದು ನಡೆದ ಜನತಾದರ್ಶನಕ್ಕೆ ಗೈರು ಹಾಜರಾದ ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಅಧಿಕಾರಿ ವಿರುದ್ಧ ಕ್ರಮ ಕೈಗೊಳ್ಳಲು ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್...