Thursday, February 13, 2025

ಭಾವನಾತ್ಮಕವಾಗಿ ಕೆರಳಿಸಿ ಮೋಸ ಮಾಡುವ ಬಿಜೆಪಿ ತಂತ್ರಗಾರಿಕೆ: ಅಶ್ವನಿ ಕುಮಾರ್ ರೈ

ಬಂಟ್ವಾಳ: ಮತದಾರರನ್ನು ಭಾವನಾತ್ಮಕವಾಗಿ ಕೆರಳಿಸಿ ಅವರನ್ನು ಮೋಸ ಮಾಡುವ ಬಿಜೆಪಿಯವರ ತಂತ್ರಗಾರಿಕೆ ಈ ಬಾರಿಯ ಚುನಾವಣೆಯಲ್ಲಿ ನಡೆಯುವುದಿಲ್ಲ. ಮತದಾರರಿಗೆ ಮಂಕುಬೂದಿ ಎರಚುವ ಕಾಲ ಹೋಗಿದೆ. ಜನರ ಈ ಬಾರಿ ಬದಲಾವಣೆ ಬಯಸಿದ್ದ ರಾಹುಲ್ ಗಾಂಧಿ ಈ ದೇಶದ ಪ್ರಧಾನಿಯಾಗಲಿದ್ದಾರೆ ಎಂದು ಕೆಪಿಸಿಸಿ ಕಾರ್ಯದರ್ಶಿ, ಹಿರಿಯ ನೋಟರಿ ನ್ಯಾಯವಾದಿ ಎ.ಅಶ್ವನಿ ಕುಮಾರ್ ರೈ ಅವರು ನುಡಿದರು.
ಬಿ.ಸಿ.ರೋಡಿನಲ್ಲಿ ಬುಧವಾರ ಕಾಂಗ್ರೆಸ್ ಅಭ್ಯರ್ಥಿ ಮಿಥುನ್ ರೈ ಪರ ಮತಯಾಚನೆ ರೋಡ್ ಶೋ ನಡೆಸಿ ಮಾತನಾಡಿದ ಅವರು, ಕಳೆದ ಬಾರಿ ಮೋದಿ ಸರಕಾರ ನೀಡಿರುವ ಆಶ್ವಾಸನೆಯನ್ನು ಮರೆತು, ಈ ಬಾರಿ ಕೇವಲ ಓಟ್ ಬ್ಯಾಂಕ್ ರಾಜಕೀಯ ಮಾಡುತ್ತಿದ್ದಾರೆ ಎಂದವರು ಆರೋಪಿಸಿದರು.


ನಳಿನ್ ಕುಮಾರ್ ಕಟೀಲ್ ಅವರು ಕಳೆದ ೨ ಅವಧಿಯಲ್ಲಿ ಮಾಡಿರುವ ಸಾಧನೆಯನ್ನು ಜನರು ನೋಡಿದ್ದಾರೆ. ಅತಂತ್ರ ಸ್ಥಿತಿಯಲ್ಲಿರುವ ಮಂಗಳೂರು ಫ್ಲೈಓವರ್, ಬಿ.ಸಿ.ರೋಡ್-ಸುರತ್ಕಲ್ ಚತುಷ್ಪಥ ಹೆದ್ದಾರಿ, ಬಿ.ಸಿ.ರೋಡ್ ಫ್ಲೈಓವರ್, ಹಾಸನ-ಬಿ.ಸಿ.ರೋಡ್ ಹೆದ್ದಾರಿ, ತೊಕ್ಕೊಟ್ಟು ನಗರ ಅಸ್ತವ್ಯಸ್ತಕ್ಕೆ ಉತ್ತರವಾದಿತ್ವ ಇಲ್ಲದಂತಾಗಿದೆ ಎಂದು ಟೀಕಿಸಿದರು.
ಮಂಗಳೂರು ಜಿಲ್ಲೆಯ ಸಮಸ್ಯೆ, ಇಲ್ಲಿನ ಜನರ ಬಹುಮುಖ್ಯ ಬೇಡಿಕೆಗಳನ್ನು ಕೇಂದ್ರ ಸರಕಾರಕ್ಕೆ ತಲುಪಿಸುವ ನಿಟ್ಟಿನಲ್ಲಿ ಮಿಥುನ್ ರೈ ಸಮರ್ಥ ಅಭ್ಯರ್ಥಿಯಾಗಿದ್ದು, ಜಿಲ್ಲೆಯ ಸಮಗ್ರ ಜನತೆ ಇಂದು ಮಿಥುನ್ ರೈ ಪರವಾಗಿ ಒಲವು ತೋರಿಸಿದ್ದಾರೆ ಎಂದವರು ಭರವಸೆ ನುಡಿದರು.
ಪ್ರಮುಖರಾದ ಸಂಜೀವ ಪೂಜಾರಿ, ರಾಮಕೃಷ್ಣ ಆಳ್ವ, ಸದಾಶಿವ ಬಂಗೇರ, ಚಿತ್ತರಂಜನ್ ಶೆಟ್ಟಿ, ಮಹಮ್ಮದ್ ನಂದರಬೆಟ್ಟು, ಲುಕ್ಮಾನ್ ಕೈಕಂಬ, ಬಿ.ಮೋಹನ್, ರಹೀಂ ಪಿ.ಎ., ಶೋಭಿತ್ ಪೂಂಜಾ, ಪ್ರವೀಣ್ ಸಜೀಪ, ಸ್ವೀವನ್ ಡಿಸೋಜ, ಮಹಮ್ಮದ್ ಶೆರೀಫ್ ಶಾಂತಿಅಂಗಡಿ, ಕರೀಂ ಬೊಳ್ಳಾಯಿ, ಸಮೀರ್ ಶಾಂತಿಅಂಗಡಿ ಈ ಸಂದರ್ಭದಲ್ಲಿ ಭಾಗವಹಿಸಿ ಮತಯಾಚನೆ ನಡೆಸಿದರು.

More from the blog

ಗ್ರಾಮ ಆಡಳಿತ ಅಧಿಕಾರಿಗಳ ಮುಷ್ಕರಕ್ಕೆ ಶಾಸಕ ರಾಜೇಶ್ ನಾಯ್ಕ್ ಬೆಂಬಲ

ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಅವರು ಗ್ರಾಮ ಆಡಳಿತ ಅಧಿಕಾರಿಗಳು ಸತತ ಮೂರನೇ ದಿನ ನಡೆಸುತ್ತಿರುವ ಅನಿರ್ದಿಷ್ಟಾವಧಿ ಮುಷ್ಕರಕ್ಕೆ ಬೆಂಬಲ ಸೂಚಿಸಿದ್ದಾರೆ. ಬಂಟ್ವಾಳ ತಾಲೂಕು ಆಡಳಿತ ಸೌಧದ ಮುಂಭಾಗ ಮುಷ್ಕರದ ಸ್ಥಳಕ್ಕೆ ಭೇಟಿ ನೀಡಿದ...

ಫೆ.15 ರಂದು ಕಮಲಾಶ್ರಯ ಮನೆಯ ಹಸ್ತಾಂತರ ಹಾಗೂ ಗೃಹಪ್ರವೇಶ

ಬಂಟ್ವಾಳ: ಬಿಜೆಪಿ ಮಹಾಶಕ್ತಿ ಕೇಂದ್ರ ಮಾಣಿ ಮತ್ತು ಬಿಜೆಪಿ ಶಕ್ತಿ ಕೇಂದ್ರ ಅನಂತಾಡಿ ಇದರ ಸಹಕಾರದಿಂದ ಅನಂತಾಡಿ ಗ್ರಾಮದ ಬಾಬನಕಟ್ಟೆ ಎಂಬಲ್ಲಿ ಬಲ್ಲು ಕೊರಗ ಇವರ ಕುಟುಂಬಕ್ಕೆ ನಿರ್ಮಿಸಲಾದ ನೂತನ ಮನೆಯನ್ನು ಫೆ.15...

ಬೇಲಿ ವಿವಾದ : ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡ ಶಾಸಕ ರಾಜೇಶ್ ನಾಯ್ಕ್

ಬಂಟ್ವಾಳ: ತಾ.ಪಂ.ಅಧಿಕಾರಿ ವರ್ಗ ಕಚೇರಿ ಮುಂಭಾಗದ ಜಾಗಕ್ಕೆ ಕಬ್ಬಿಣದ ರಾಡ್ ಅಳವಡಿಸಿ ಬೇಲಿ ಹಾಕಿದ ವಿಚಾರಕ್ಕೆ ಸಂಬಂಧಿಸಿದಂತೆ ಸಾರ್ವಜನಿಕ ದೂರಿನ ಹಿನ್ನೆಲೆಯಲ್ಲಿ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಅವರು ತಾ.ಪಂ.ಗೆ ಹಠಾತ್...

ವಿಟ್ಲ ಪಿಎಂ ಶ್ರೀ ಸರಕಾರಿ ಪ್ರೌಢ ಶಾಲೆಯಲ್ಲಿ ಮೆಟ್ರಿಕ್ ಮೇಳ

ವಿಟ್ಲ: ವಿಟ್ಲ ಪಿ ಎಂ ಶ್ರೀ ಸರಕಾರಿ ಪ್ರೌಢ ಶಾಲೆ (ಆರ್ ಎಂ ಎಸ್ ಎಂ)ವಿಟ್ಲ ಇದರ ಪ್ರಾಥಮಿಕ ಶಾಲಾ ವಿಭಾಗದಲ್ಲಿ ಬುಧವಾರ ಮೆಟ್ರಿಕ್ ಮೇಳ ಕಾರ್ಯಕ್ರಮ ನಡೆಯಿತು. ಮೆಟ್ರಿಕ್ ಮೇಳವನ್ನು ವಿಟ್ಲ ಪಟ್ಟಣ...