Friday, June 27, 2025

ಕೆಪಿಸಿಸಿ ಕಾರ್ಯದರ್ಶಿ ಎ. ಅಶ್ವನಿ ಕುಮಾರ್ ರೈಯಿಂದ ಕಾಂಗ್ರೆಸ್ ಬೂತ್ ಭೇಟಿ; ಪರಿಶೀಲನೆ

ಬಂಟ್ವಾಳ: ಬಂಟ್ವಾಳ ವಿಧಾನ ಸಭಾ ವ್ಯಾಪ್ತಿಯ ಕಾಂಗ್ರೆಸ್ ಬೂತ್ ಗಳಿಗೆ ಕೆಪಿಸಿಸಿ ಕಾರ್ಯದರ್ಶಿ, ಹಿರಿಯ ನ್ಯಾಯವಾದಿ ಎ. ಅಶ್ವನಿ ಕುಮಾರ್ ರೈ ಇಂದು ಭೇಟಿ ನೀಡಿದರು.
ಪಕ್ಷದ ಸ್ಥಳೀಯ ಮುಖಂಡರು ಮತ್ತು ಕಾರ್ಯಕರ್ತರೊಂದಿಗೆ
ಚರ್ಚಿಸಿ ಮತದಾನ ಪ್ರಕ್ರಿಯೆಯನ್ನು ಅವಲೋಕನ ನಡೆಸಿದರು.


ಬಂಟ್ವಾಳ ಪುರಸಭಾಧಿಕಾರಿಗಳು ವ್ಯಾಪ್ತಿಯ ಪಲ್ಲಮಜಲು, ಪರ್ಲಿಯಾ, ನಂದರಬೆಟ್ಟು, ಶಾಂತಿಯಂಗಡಿ ಮತ್ತಿತರ ಕಡೆಗಳ ಮತಕಟ್ಟೆ ವ್ಯಾಪ್ತಿಯಲ್ಲಿರುವ ಪಕ್ಷದ ಬೂತ್ ಗಳಿಗೆ ಭೇಟಿ ನೀಡಿ, ಪರಿಶೀಲನೆ ನಡೆಸಿದರು.
ಕ್ಷೇತ್ರ ವ್ಯಾಪ್ತಿಯ ಗ್ರಾಮೀಣ ಪ್ರದೇಶಗಳಿಗೂ ಈ ಸಂದರ್ಭ ಭೇಟಿ ಪಕ್ಷದ ಮುಖಂಡರೊಂದಿಗೆ ಮಾತನಾಡಿದರು. ಸ್ಥಳೀಯ ಗ್ರಾಮ ಪಂಚಾಯಿತಿ ಸದಸ್ಯರು, ತಾಲೂಕು ಪಂಚಾಯಿತಿ ಸದಸ್ಯರು, ಪುರಸಭಾ ಸದಸ್ಯರು ಈ ಸಂದರ್ಭದಲ್ಲಿ ಹಾಜರಿದ್ದರು.
ಮತ ಚಲಾಯಿಸಲು ಪ್ರೋತ್ಸಾಹಿಸಿ:
ಬಂಟ್ವಾಳ, ಬಿ.ಮೂಡ ಗ್ರಾಮದ ಅಜ್ಜಿಬೆಟ್ಟು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಕುಟುಂಬದ ಸದಸ್ಯರೊಂದಿಗೆ ಮತ ಚಲಾಯಿಸಿ ಮಾಧ್ಯಮದೊಂದಿಗೆ ಮಾತನಾಡಿದ ಅವರು,
ಮತದಾನ ಪ್ರತಿಯೊಬ್ಬ ನಾಗರಿಕರ ಹಕ್ಕು. ಈ ಹಕ್ಕು ಚಲಾಯಿಸುವ ಜತೆಗೆ ಇನ್ನೊಬ್ಬರನ್ನು ಮತ ಚಲಾಯಿಸುವಂತೆ ಪ್ರೋತ್ಸಾಹಿಸುವ ನಾಗರಿಕರ ಕರ್ತವ್ಯವಾಗಿದೆ ಎಂದು ಪ್ರತಿಕ್ರಿಯಿಸಿದರು.
ಪ್ರಜ್ಞಾವಂತ ಅಭ್ಯರ್ಥಿಗಳನ್ನು ಲೋಕ ಸಭೆಗೆ ಚುನಾಯಿಸುವ ಈ ಚುನಾವಣೆ ಅತ್ಯಂತ ಮಹತ್ವದಾಗಿದ್ದು, ಜನರು ಈ ಬಾರಿ ಮಹತ್ವ ನಿರ್ಧಾರವನ್ನು ತೆಗೆದುಕೊಳ್ಳುವ ಮೂಲಕ ಬದಲಾವಣೆ ಬಯಸಿದ್ದಾರೆ ಎಂದು ಮಾಧ್ಯಮದೊಂದಿಗೆ ಪ್ರತಿಕ್ರಿಯಿಸಿದರು.

More from the blog

5 ವರ್ಷದ ಮಗುವಿನ ಚಿಕಿತ್ಸೆಗೆ ಸಂಗಬೆಟ್ಟು ಗ್ರಾ. ಪಂ ವತಿಯಿಂದ ಸಹಾಯಧನದ ಚೆಕ್ ಹಸ್ತಾಂತರ.. 

ಬಂಟ್ವಾಳ : ತಾಲೂಕಿನ ಕರ್ಪೆ ಗ್ರಾಮದ ಕುಟ್ಟಿಕಳ ನಿವಾಸಿ ಹಿರಣ್ಯಾಕ್ಷ ಶಾಂತಿ ಹಾಗೂ ಸೌಮ್ಯ ದಂಪತಿಗಳ 5 ವರ್ಷದ ಪುಟ್ಟ ಹೆಣ್ಣು ಮಗು ಮನಸ್ವಿಳಿಗೆ ಅರೋಗ್ಯದಲ್ಲಿ ರಕ್ತದ ಕ್ಯಾನ್ಸರ್ ಇರುವುದರಿಂದ ಅರೋಗ್ಯದ ವೆಚ್ಚಕ್ಕಾಗಿ...

Old Bridge : ಮಂಗಳೂರು ಎನ್.ಐ.ಟಿ.ಕೆ ಸಂಸ್ಥೆ ಅಧಿಕಾರಿಗಳಿಂದ ಪಾಣೆಮಂಗಳೂರು ಹಳೆ ಸೇತುವೆಯ ಸಾಮರ್ಥ್ಯ ಪರೀಕ್ಷೆ

ಬಂಟ್ವಾಳ: ಬ್ರಿಟಿಷ್ ಕಾಲದ ಪಾಣೆಮಂಗಳೂರು ಸೇತುವೆಯ ಸಾಮರ್ಥ್ಯ ಪರೀಕ್ಷೆ ನಡೆಸುವ ಉದ್ದೇಶದಿಂದ ಮಂಗಳೂರು ಎನ್.ಐ.ಟಿ.ಕೆ ಸಂಸ್ಥೆಯಿಂದ ಇಬ್ಬರು ಅಧಿಕಾರಿಗಳು ಆಗಮಿಸಿ, ಜಿಲ್ಲಾಧಿಕಾರಿ ಅವರಿಗೆ ವರದಿ ನೀಡಿದ್ದಾರೆ. ಹಳೆ ಸೇತುವೆ ಬಗ್ಗೆ ಸ್ಥಳ ವೀಕ್ಷಣೆಗೆ ಏನ್...

ಕುದ್ರೋಳಿಯಲ್ಲಿ ವಿಶ್ವಶಾಂತಿಗಾಗಿ ಶತ ಸೀಯಾಳಾಭಿಷೇಕ..

ಮಂಗಳೂರು: ಜಗತ್ತಿನಾದ್ಯಂತ ಯುದ್ಧದ ಕಾರ್ಮೋಡ ಆವರಿಸಿರುವುದರಿಂದ ವಿಶ್ವ ಶಾಂತಿಗಾಗಿ ಶ್ರೀ ಕುದ್ರೋಳಿ ಶ್ರೀ ಗೋಕರ್ಣನಾಥ ದೇವಸ್ಥಾನ ಆಡಳಿತ ಮತ್ತು ಅಭಿವೃದ್ಧಿ ಸಮಿತಿ ನೇತೃತ್ವದಲ್ಲಿ ಗುರುವಾರ ಬೆಳಗ್ಗೆ ಶತ ಸೀಯಾಳಾಭಿಷೇಕ, ಮಹಾರುದ್ರಾಭಿಷೇಕ ಮತ್ತು ವಿಶೇಷ...

Bantwal : ಮಾದಕ ದ್ರವ್ಯ ಮುಕ್ತ ಸಮಾಜಕ್ಕಾಗಿ” ಅಭಿಯಾನ – 2025 ಕಾರ್ಯಕ್ರಮ..

ಬಂಟ್ವಾಳ: ದ.ಕ.ಜಿಲ್ಲಾ ಪೋಲೀಸ್ ಇಲಾಖೆ, ಬಂಟ್ವಾಳ ವೃತ್ತದ ಪೋಲೀಸ್ ಠಾಣೆಯ ಹಾಗೂ ಶಿಕ್ಷಣ ಇಲಾಖೆ, ರೋಟರಿ ಕ್ಲಬ್ ಬಂಟ್ವಾಳ ಲೊರೆಟ್ಟೊ ಹಿಲ್ಸ್, ಬಂಟ್ವಾಳ ಟೌನ್ ಮೊಡಂಕಾಪು ಇವರ ಸಂಯುಕ್ತ ಆಶ್ರಯದಲ್ಲಿ " ಮಾದಕ...